Breaking News
Home / 2021 / ಜುಲೈ / 28 (page 2)

Daily Archives: ಜುಲೈ 28, 2021

ಶುಭಾಶಯಗಳು ಮಾಮ” : ನೂತನ ಸಿಎಂ ಬೊಮ್ಮಾಯಿ ಗೆ ಅಭಿನಯ ಚಕ್ರವರ್ತಿಯ ಹಾರೈಕೆ

ಬೆಂಗಳೂರು : ರಾಜಭವನದ ಆವರಣದಲ್ಲಿ ಇಂದು(ಬುಧವಾರ, ಜುಲೈ 28) ನಡೆದ ಪ್ರಮಾಣ ವಚನ ಸರಳ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅವರಿಂದ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಸಿನಿ ಲೋಕದ ತಾರೆ, ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ತಿಳಿಸಿದ್ದಾರೆ. ತಮ್ಮ ಅಧಿಕೃತ …

Read More »

ಮಧ್ಯಂತರ ಚುನಾವಣೆ ಕನವರಿಕೆ: “ಕೈ” ಕೊಟ್ಟ ಲೆಕ್ಕಾಚಾರ

ಬೆಂಗಳೂರು:ಯಡಿಯೂರಪ್ಪ ನಿರ್ಗಮನ ಬೆನ್ನಲ್ಲೇ ಮಧ್ಯಂತರ ಚುನಾವಣೆ ಕನವರಿಕೆಯಲ್ಲಿದ್ದ ಕಾಂಗ್ರೆಸ್‌ಗೆ ಬಸವರಾಜ ಬೊಮ್ಮಾಯಿ ಆಯ್ಕೆ ಅನಿರೀಕ್ಷಿತವಾಗಿದ್ದು ಲೆಕ್ಕಾಚಾರ ತಪ್ಪಿದಂತಾಗಿದೆ. ಯಡಿಯೂರಪ್ಪ ಅವರು ಇಲ್ಲದೆ ಯಾರೇ ಮುಖ್ಯಮಂತ್ರಿಯಾದರೂ ಸರ್ಕಾರ ಹೆಚ್ಚು ದಿನ ಬಾಳುವುದಿಲ್ಲ. ಯಾವುದೇ ಸಂದರ್ಭದಲ್ಲಿ ಚುನಾವಣೆ ಎದುರಾಗಬಹುದು ಎಂದು ಕಾರ್ಯತಂತ್ರಕ್ಕೆ ಮುಂದಾಗಿದ್ದ ಕಾಂಗ್ರೆಸ್‌ ಸ್ವಲ್ಪ ಯೋಚಿಸುವಂತಾಗಿದೆ.   ವಲಸಿಗರಿಗೆ ಸಚಿವಗಿರಿ ಹಾಗೂ ಬಯಸಿದ ಖಾತೆ ಸಿಗದೆ ಅತೃಪ್ತಿ ಎದ್ದರೆ ಅವರನ್ನು ಮತ್ತೆ ಕಾಂಗ್ರೆಸ್‌ಗೆ ಕರೆ ತರುವಯೋಚನೆಮಾಡಲಾಗಿತ್ತು.ಆದರೆ, ಬಸವರಾಜ ಬೊಮ್ಮಾಯಿ ಆಯ್ಕೆಯಿಂದ ಘರ್‌ವಾಪ್ಸಿ …

Read More »

ಬಿ.ಎಸ್​.ಯಡಿಯೂರಪ್ಪ ಕೆಳಗಿಳಿದರು ಅದಕ್ಕೆ ಗಡ್ಡ ತೆಗೆದೆ; ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾನಾ ಬಗೆಯ ಚರ್ಚೆಗಳು ನಡೆದಿದ್ದು, ಅನೇಕ ಶಾಸಕರು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಅದರಲ್ಲೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬದಲಾವಣೆಗಾಗಿ ಗಡ್ಡ, ತಲೆ ಕೂದಲು ಬಿಟ್ಟಿದ್ದು, ಹರಕೆ ಹೊತ್ತಿದ್ದರು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿತ್ತು. ಈ ವಿಚಾರವಾಗಿ ಗಡ್ಡ ಬಿಟ್ಟಿರಲ್ಲಾ ಎಂದು ಕೇಳಿದ್ದ ಪ್ರಶ್ನೆಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ …

Read More »

ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಬಾರದು : ಬಸವನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.   ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿ.ಎಸ್.ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬದಲಾವಣೆ ಆಗುತ್ತೆ ನೋಡುತ್ತೀರಿ. ಬಿಜೆಪಿ ಶಾಸಕರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತಾರೆ. ಹೈಕಮಾಂಡ್ …

Read More »

ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ

ಬೆಂಗಳೂರು : ಇಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಪರಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ   ಈ ಕುರಿತಂತೆ ರಾಜಭವನದಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಮಾಜಿ ಸಚಿವ ಆರ್ ಅಶೋಕ್, ಇಂದು ಸಂಜೆ ನೂತನ ಸಿಎಂ ಆದಂತ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ …

Read More »

ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸಿಎಂ ಬದಲಾಗಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರಗೆ ಬಂದಿರೋದಕ್ಕೆ ಸಂತೋಷವಾಗಿದ್ದೇನೆ. ಮುಂದೆ ಪಕ್ಷದಲ್ಲಿ ಅಥವಾ ಸರ್ಕಾರದೊಳಗೆ ಕೆಲಸ ಮಾಡಬೇಕು ಎಂಬುದನ್ನ ಹೈಕಮಾಂಡ್ ನಿರ್ಧರಿಸಲಿದೆ. 17 ಜನರು ಪಕ್ಷ ಮತ್ತು ಯಡಿಯೂರಪ್ಪನವರನ್ನು ನಂಬಿಕೊಂಡು ಬಂದವರು. ಎಲ್ಲರನ್ನು ಪಕ್ಷ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದರು. ಬಸವರಾಜ ಬೊಮ್ಮಾಯಿ ಅವರನ್ನು …

Read More »

ಗಡ್ಡ ಬಿಟ್ಟಾಗ ಶಿವಾಜಿ, ಈಗ ಬಸವಣ್ಣ: ಶಾಸಕ ಯತ್ನಾಳ್

ಬೆಂಗಳೂರು: ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದು ಸ್ಮಾರ್ಟ್ ಆಗಿದ್ದೇನೆ. ಗಡ್ಡ ಬಿಟ್ಟಾಗ ಶಿವಾಜಿ ಆಗಿದ್ದೆ, ಈಗ ಬಸವಣ್ಣ ಆಗಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾನೂ ಎಂದೂ ಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ. ಈ …

Read More »

ರೈತರ ಮಕ್ಕಳಿಗೆ ಶಿಷ್ಯ ವೇತನ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿಗಳು ತಮ್ಮ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ ಜೊತೆ ಕಡತ ಪರಿಶೀಲನೆ ನಡೆಸಿದರು. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸರ್ಕಾರದ  ಹೊಸ ಯೋಜನೆಗಳನ್ನು ಘೋಷಣೆ ಮಾಡಿದರು ಸಿಎಂ …

Read More »

ನಿರಾಣಿ, ಬೆಲ್ಲದ್‍ಗೆ ಸಿಎಂ ಕುರ್ಚಿ ತಪ್ಪಿದ್ದು ಹೇಗೆ?

ಬೆಂಗಳೂರು: ಸಿಎಂ ರೇಸ್‍ನಲ್ಲಿದ್ದ ಬೆಲ್ಲದ್, ನಿರಾಣಿ ಪೈಕಿ ಒಬ್ಬರನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕ್ಲೈಮ್ಯಾಕ್ಸ್‍ನಲ್ಲಿ ಇವರಿಬ್ಬರಿಗೂ ಸಿಎಂ ಪಟ್ಟ ತಪ್ಪಿದ್ದು ಲಾಬಿ ಮಾಡದ ಬೊಮ್ಮಾಯಿ ಅವರಿಗೆ ಒಲಿದಿದೆ. ಮುಖ್ಯಮಂತ್ರಿ ರೇಸ್‍ನಲ್ಲಿದ್ದ ನಿರಾಣಿ ಮತ್ತು ಬೆಲ್ಲದ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಅಷ್ಟೇ ಅಲ್ಲದೇ ಇವರಿಬ್ಬರೂ ವಾರಣಾಸಿಗೆ ತೆರಳಿ ಗಂಗೆಯಲ್ಲಿ ಸ್ನಾನ ಮಾಡಿ ಕಾಶಿ ವಿಶ್ವನಾಥನ ದರ್ಶನ ಮಾಡಿದ್ದರು. ಹೀಗಾಗಿ ನಿರಾಣಿ ಮತ್ತು ಬೆಲ್ಲದ್ …

Read More »

ಆಗಸ್ಟ್ ತಿಂಗಳಲ್ಲಿ 12 ದಿನ ಬ್ಯಾಂಕ್ ಕಾರ್ಯ ನಿರ್ವಹಿಸಲ್ಲ ಏಕೆಂದ್ರೆ..

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ . ಭಾರತದಲ್ಲಿ ಬ್ಯಾಂಕ್ ರಜಾ ದಿನಗಳು ಆಯಾ ರಾಜ್ಯಗಳ ಮೇಲೂ ಅವಲಂಬನೆ ಆಗಿರುತ್ತದೆ . ಇನ್ನು ಭಾರತದ ವಿವಿಧ ಭಾಗಗಳಲ್ಲಿ ನಿರ್ಬಂಧಿತ ರಜಾಗಳು ಹಾಗೂ ಗೆಜೆಟೆಡ್ ರಜಾ ದಿನಗಳಿವೆ . ಗೆಜೆಟೆಡ್ ಅಥವಾ ಸಾರ್ವಜನಿಕ ರಜಾ ದಿನಗಳು ದೇಶದಾದ್ಯಂತ ಅನ್ವಯಿಸುತ್ತದೆ. ಬ್ಯಾಂಕ್ ಗಳು ಪ್ರತಿ ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ಹಾಗೂ …

Read More »