Breaking News
Home / 2021 / ಜುಲೈ / 29 (page 4)

Daily Archives: ಜುಲೈ 29, 2021

ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಲು ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ :ಸಿದ್ದರಾಮಯ್ಯ

ಬೆಂಗಳೂರು: ಜವಾಬ್ದಾರಿಯುತ ಪ್ರತಿಪಕ್ಷವಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಲು ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಮಾಣ ವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಅವಕಾಶವನ್ನು ಸಂವಿಧಾನ ಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರಿಗೆ ಹಾರ್ದಿಕ ಅಭಿನಂದನೆಗಳು. ಕಳೆದ 2 ವರ್ಷಗಳಿಂದ …

Read More »

ನಾನೂ ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ಬೆಂಗಳೂರು: ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದು ಸ್ಮಾರ್ಟ್ ಆಗಿದ್ದೇನೆ. ಗಡ್ಡ ಬಿಟ್ಟಾಗ ಶಿವಾಜಿ ಆಗಿದ್ದೆ, ಈಗ ಬಸವಣ್ಣ ಆಗಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾನೂ ಎಂದೂ ಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ. ಈ …

Read More »

ಇಷ್ಟು ದಿನ‌ ನೀವು ಏನು ಮಾಡಿದ್ದೀರಿ? ಎಂಬುದು ನನಗೆ ಬೇಕಿಲ್ಲ. ಆಡಳಿತದಲ್ಲಿ ನಾನು ಏನು ಆದೇಶ ಮಾಡುತ್ತೇನೊ ಅದು ಜಾರಿ ಆಗಲೇ ಬೇಕು: ಬೊಮ್ಮಾಯಿ ಗರಂ! .

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಗಳ ಮಹತ್ವದ ಸಭೆ ನಡೆಸಿದ್ದಾರೆ. ನಂತರ ರಾಜ್ಯ ಸಚಿವ ಸಂಪುಟ ಸಭೆಯನ್ನೂ ಮಾಡಿದ್ದಾರೆ. ಆದರೆ ಅಧಿಕಾರಿಗಳ ಸಭೆಯಲ್ಲಿ ಮಹತ್ವದ ಸೂಚನೆಗಳನ್ನು ಕೊಡುವ ಮೂಲಕ ತಮ್ಮ ಮುಂದಿನ ಆಡಳಿತದ ಮುನ್ಸೂಚನೆಯನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ. ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. …

Read More »

ದಿನಕ್ಕೆ 70 ಸಾವಿರ ರೂಪಾಯಿ ಆಫರ್: ರಾಜ್​ ಕುಂದ್ರಾ ಕಂಪನಿ​ಯ ಕರಾಳತೆ ಬಿಚ್ಚಿಟ್ಟ ಮಾಡೆಲ್​!

ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ವಿತರಣೆ ಆರೋಪದಲ್ಲಿ ಉದ್ಯಮಿ ಹಾಗೂ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರ ಬಂಧನವು ಸದ್ಯದ ಮಟ್ಟಿಗೆ ಬಹು ಚರ್ಚಿತ ವಿಷಯವಾಗಿದೆ. ಕುಂದ್ರಾ ಬಂಧನವಾದಾಗಿನಿಂದ ಅವರ ಕುರಿತಾದ ಕರಾಳ ಸಂಗತಿಗಳು ಒಂದೊಂದಾಗಿ ಕಳಚಿ ಬೀಳುತ್ತಿವೆ. ಹಾಟ್​ಶಾಟ್ಸ್​ ಮತ್ತು ಇತರೆ ವೆಬ್​ಸೈಟ್​ಗಳಿಗಾಗಿ ಬೋಲ್ಡ್​ ಸಿನಿಮಾಗಳಲ್ಲಿ ನಟಿಸಿರುವ ಮಾಡೆಲ್​ ಜೊಯಾ ರಾಥೋಡ್ ಅವರು ರಾಜ್​​ ಕುಂದ್ರಾರಿಂದ ಆಫರ್​ ಸ್ವೀಕರಿಸಿದ್ದಾಗಿ ಮಾಧ್ಯಮವೊಂದಕ್ಕೆ ಬಹಿರಂಗಪಡಿಸಿದ್ದಾರೆ. ​ …

Read More »

ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ : ಆತಂಕದಲ್ಲಿ ರೈತರು

  ಗಂಗಾವತಿ : ಗಂಗಾವತಿ ತಾಲ್ಲೂಕಿನ ರಾಂಪುರ ಮಲ್ಲಾಪೂರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ ಕಂಡುಬಂದಿದೆ. ಆತಂಕದಲ್ಲಿ ರೈತರಿದ್ದಾರೆ. ಕಳೆದ ವರ್ಷ ಇದೇ ಜಾಗದ ಬಲಭಾಗದಲ್ಲಿ ಸೋರಿಕೆ ಕಂಡು ಬಂದಿತ್ತು ಆಗ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸಿಮೆಂಟ್ ಮೂಲಕ ಗ್ರೌಂಡಿಂಗ್ ಮಾಡಿ ಸೋರಿಕೆಯನ್ನು ತಡೆದಿದ್ದರು. ಜುಲೈ ಹದಿನೆಂಟ ರಂದು ಕಾಲುವೆಗೆ ನೀರು ಹರಿಸಲಾಗಿದ್ದು ಸದ್ಯ ಕಾಲುವೆಯಲ್ಲಿ 4ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಭರದಿಂದ …

Read More »

ಕಾಲೇಜುಗಳ ಪುನಾರಂಭ; ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ

ಬೆಂಗಳೂರು, – ಇಂದಿನಿಂದ ರಾಜ್ಯಾದ್ಯಂತ ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಆದರೆ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯೇ ಇತ್ತು. ಸೋಂಕಿನ ಭೀತಿಯ ಮಧ್ಯೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಲೇಜುಗಳನ್ನು ಆರಂಭ ಮಾಡಲಾಗಿದೆ. ಕಾಲೇಜುಗಳು ಆರಂಭವಾಗಿದ್ದರೂ, ವಿದ್ಯಾರ್ಥಿಗಳ ಹಾಜರಾತಿ ಅನೇಕ ಕಡೆಗಳಲ್ಲಿ ಶೇಕಡಾ 50 ರಿಂದ 70 ರಷ್ಟು ದಾಖಲಾಗಿದೆ. ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಮತ್ತು ತರಗತಿಗೆ ಹಾಜರಾಗಲು ಬಯಸದ …

Read More »

2 ದಿನಗಳಲ್ಲಿ ದೆಹಲಿಗೆ ಶೀಘ್ರವೇ ಸಂಪುಟ ರಚನೆ :.ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ, ಸಂಪುಟ ರಚನೆಯ ಕಸರತ್ತು ಶುರುವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ, ಕೆಲವರನ್ನು ಸಂಪುಟದಿಂದ ಕೈಬಿಟ್ಟು ಕ್ರಿಯಾಶೀಲ ಸಂಪುಟ ರಚನೆಯ ಸುಳಿವು ನೀಡಿದ್ದಾರೆ. ಒಂದೆರಡು ದಿನಗಳ ಬಳಿಕ ದೆಹಲಿಗೆ ಬರಲು ಹೈಕಮಾಂಡ್ ಸೂಚಿಸಿದ್ದು, ಆದಷ್ಟು ಶೀಘ್ರವೇ ಸಂಪುಟ ರಚನೆ ಮಾಡೋದಾಗಿ ಹೇಳಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಪಕ್ಷ ಬೇರೆ ಜವಾಬ್ದಾರಿ ನೀಡಿದರೆ ವಹಿಸಿಕೊಳ್ಳುವೆ. ಆದರೆ ಬೊಮ್ಮಾಯಿ ಸಂಪುಟ ಸೇರೋದಿಲ್ಲ ಅಂತ …

Read More »

ಅಪಹರಣವಾಗ್ತಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು!

ಹಾಸನ: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಅಪಹರಣ ಮಾಡುತ್ತಿದ್ದ ಕಿಡಿಗೇಡಿಗಳ ತಂಡದಿಂದ ಪೊಲೀಸರು ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ಆತನನ್ನು ರಕ್ಷಿಸಿದ ಘಟನೆ ಹಾಸನದ ಗೊರೂರಿನಲ್ಲಿ ನಡೆದಿದೆ. ಹಣಕಾಸಿನ ವಿಷಯ ಸಂಬಂಧ ಕಾಸರಗೋಡಿನ ಅನ್ವರ್(33) ಎಂಬ ಯುವಕನನ್ನು ಕಿಡಿಗೇಡಿಗಳ ತಂಡವೊಂದು ಕಿಡ್ನಾಪ್ ಮಾಡಿ ಹಾಸನಕ್ಕೆ ಎಂಟ್ರಿಯಾಗಿತ್ತು. ಈ ವೇಳೆ ಕಾರು ಗೊರೂರಿನ ಮೂಲಕ ಪಾಸ್ ಆಗುತ್ತಿರುವುದು ತಿಳಿದ ಪೊಲೀಸರು, ಅವರನ್ನು ಹಿಡಿಯುವ ಸಲುವಾಗಿಯೇ ಯಾರಿಗೂ ಅನುಮಾನ ಬಾರದಂತೆ …

Read More »

ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು. ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ …

Read More »

ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರು

ಬೆಳಗಾವಿ- ರಾಜ್ಯದ 30 ನೇಯ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಬೆಳಗಾವಿಯಲ್ಲಿ ಹೊಸ ರಾಜಕೀಯ ಬಿರುಗಾಳಿ ಬೀಸುತ್ತಿದೆ.ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರುವಾಗಿದೆ. ಹೊಸ ಸಿಎಂ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಜೊತೆಗೆ ಬುಡಾ,ಕಾಡಾ,ಅಲ್ಪಸಂಖ್ಯಾತರ ನಿಗಮ ಸೇರಿದಂತೆ ಎಲ್ಲ ನಿಗಮ ಮಂಡಳಿಗಳು ಯಡಿಯೂರಪ್ಪ …

Read More »