Breaking News
Home / 2021 / ಜುಲೈ / 30 (page 2)

Daily Archives: ಜುಲೈ 30, 2021

ಎಟಿಎಂ/ಡೆಬಿಟ್​ ಕಾರ್ಡ್ ಇಲ್ಲದೆಯೂ ಎಚ್​ಡಿಎಫ್​ಸಿ ಎಟಿಎಂನಲ್ಲಿ ಕ್ಯಾಶ್​ ವಿಥ್​ ಡ್ರಾ ಹೀಗೆ ಮಾಡಿ

ಬ್ಯಾಂಕ್​ ಗ್ರಾಹಕರು ಎಟಿಎಂ ಕಾರ್ಡ್​ ಅಥವಾ ಡೆಬಿಟ್ ಕಾರ್ಡ್ ಇಲ್ಲದಂತೆ ಆಟೋಮೆಟಿಕ್ ಟೆಲ್ಲರ್ ಮಶೀನ್​ಗಳಿಂದ (ಎಟಿಎಂ) ಹಣ ವಿಥ್​ಡ್ರಾ ಮಾಡುವುದಕ್ಕೆ ಸಾಧ್ಯವಾ? ಸಾಮಾನ್ಯವಾಗಿ ಸಾಧ್ಯವಿಲ್ಲ. ಆದರೆ ಎಚ್​ಡಿಎಫ್​ಸಿ ಬ್ಯಾಂಕ್ ತನ್ನ ಗ್ರಾಹಕರಿಗೆ ಇಂಥದ್ದೊಂದು ಅವಕಾಶ ನೀಡುತ್ತಿದೆ. ಡೆಬಿಟ್ ಅಥವಾ ಎಟಿಎಂ ಕಾರ್ಡ್ ಇಲ್ಲದೆಯೇ ಎಟಿಎಂನಿಂದ ಹಣ ವಿಥ್​ಡ್ರಾ ಮಾಡಬಹುದು. ಯಾವ ಗ್ರಾಹಕರು ಎಚ್​ಡಿಎಫ್​ಸಿ ಬ್ಯಾಂಕ್​ನಲ್ಲಿ ಉಳಿತಾಯ ಖಾತೆ ತೆರೆದಿರುತ್ತಾರೋ ಅಂಥವರು ದೇಶದಾದ್ಯಂತ ಇರುವ ಎಚ್​ಡಿಎಫ್​ಸಿ ಬ್ಯಾಂಕ್​ ಎಟಿಎಂಗಳಲ್ಲಿ ಈ ಸೌಲಭ್ಯ …

Read More »

ರೈಲ್ವೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್‌; IRCTC ಹೊಸ ಮಾರ್ಗಸೂಚಿ…

ನವದೆಹಲಿ, ಜುಲೈ 30: ರೈಲಿನಲ್ಲಿ ಪ್ರಯಾಣಿಸಲು ಆನ್‌ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವವರಿಗೆ IRCTC (ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ) ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿರುವುದಾಗಿ ತಿಳಿಸಿದೆ. ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು, ಈ ಹೊಸ ವಿಧಾನದಲ್ಲಿ ಕೇವಲ 50 ರಿಂದ 60 ಸೆಕೆಂಡುಗಳಲ್ಲಿ ಆನ್‌ಲೈನ್ ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಕೊರೊನಾ ಕಾರಣವಾಗಿ IRCTC …

Read More »

ಕೆರೆಗೆ ಉರುಳಿದ KSRTC ಬಸ್​​​-

ಶಿವಮೊಗ್ಗ: ಎದುರಿಗೆ ಬಂದ ಬೈಕ್​ ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್ಸೊಂದು ಕೆರೆಗೆ ಉರುಳಿರುವ ಘಟನೆ ಸಾಗರ ತಾಲೂಕಿನ ಉಳ್ಳೂರು ಕಾಸ್ಪಾಡಿ ಕ್ರಾಸ್ ನ ಬಳಿ ನಡೆದಿದೆ.     ಸಾಗರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಬೈಕೊಂದು ಎದುರಾಗಿದೆ. ಈ ಸಂದರ್ಭದಲ್ಲಿ ಬಸ್​ ಬೈಕ್​ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಕೆರೆಗೆ ಉರುಳಿದೆ. ಪರಿಣಾಮ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, …

Read More »

ಬೆಂಗಳೂರು ಏರ್​ಪೋರ್ಟ್​ಲ್ಲಿ ಆತಂಕ ಸೃಷ್ಟಿಸಿದ ನಕಲಿ ಗನ್​ಗಳು

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಮ್ಮಿ ಗನ್​ಗಳು ಕೆಲಹೊತ್ತು ಆತಂಕ ಸೃಷ್ಟಿ ಮಾಡಿದ ಘಟನೆ ನಿಲ್ದಾಣದ ಕಾರ್ಗೋ ಟರ್ಮಿನಲ್​ನಲ್ಲಿ ನಡೆದಿದೆ. ವಿದೇಶದಿಂದ ಬಂದ ಪಾರ್ಸಲ್ ಕಂಡು ಕೆಲ ಕಾಲ ನಿಲ್ದಾಣದ ಸಿಬ್ಬಂದಿಗಳು ಗಾಬರಿಗೊಳಗಾಗಿದ್ದಾರೆ. ನಿನ್ನೆ ಇಸ್ತಾಂಬುಲ್​ನಿಂದ ಕಾರ್ಗೋ ಟರ್ಮಿನಲ್​ಗೆ ಪಾರ್ಸ್​ಲ್​ ಬಂದಿದ್ದು, ಅದನ್ನು ವರ್ಗಾವಣೆ ಮಾಡುವ ವೇಳೆಯಲ್ಲಿ ಅನುಮಾನ ವ್ಯಕ್ತಪಡಿಸಿದ ಸಿಬ್ಬಂದಿಗಳು, ತಪಾಸಣೆ ನಡೆಸಿದಾಗ ಗನ್​ಗಳಿರುವುದು ಪತ್ತೆಯಾಗಿದೆ. ತಕ್ಷಣ ಗಾಬರಿಗೊಂಡ ಸಿಬ್ಬಂದಿಗಳು ಗನ್​ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ …

Read More »

ಸಿಎಂಗೂ ಮೊದಲೇ ದೆಹಲಿ ಸೇರಿರುವ ಸಚಿವಾಕಾಂಕ್ಷಿಗಳು; ಮಂತ್ರಿ ಸ್ಥಾನಕ್ಕಾಗಿ ಎಂ.ಪಿ.ಕುಮಾರಸ್ವಾಮಿ ನೇರ ಲಾಬಿ

ನವದೆಹಲಿ: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಸಿಎಂ ದೆಹಲಿ ಭೇಟಿಗೂ ಮೊದಲೇ ಸಚಿವಾಕಾಂಕ್ಷಿಗಳು ರಾಷ್ಟ್ರ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮಂತ್ರಿ ಸ್ಥಾನಕ್ಕಾಗಿ ನೇರವಾಗಿ ವರಿಷ್ಠರ ಬಳಿ ಲಾಬಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕುಮಾರಸ್ವಾಮಿ, ಈ ಹಿಂದೆ 17 ಶಾಸಕರಿಗೆ ಮಂತ್ರಿ ಸ್ಥಾನ ನೀಡಲೇಬೇಕು ಎಂಬ ಅನಿವಾರ್ಯ ಇತ್ತು ಹಾಗಾಗಿ ನಾವೆಲ್ಲ ತಾಳ್ಮೆಯಿಂದ ಇದ್ದೆವು. …

Read More »

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ | ಬೇಕಿತ್ತಾ ಈ ಸರ್ಕಾರ..?

ಸಂಕಷ್ಟದ ಪರಿಸ್ಥಿತಿಯಲ್ಲಿ ಕ್ಯಾಬಿನೆಟ್ ಕುಸ್ತಿ.. ನೆರೆಗೆ ಉತ್ತರ ತತ್ತರಿಸುತ್ತಿದ್ದರೂ ಯಾಕೀ ವಿಳಂಬ..? ಸುಮ್ನೆ ಟೈಂ ಪಾಸ್ ಗೆ ಸಿಎಂ ಆದ್ರಾ ಬಾಮ್ಮಾಯಿ ಸಾಹೇಬ್ರೆ..? ರಾಮೇಶ್ವರಕ್ಕೆ ಹೋದ್ರು ಶನೇಶ್ವರನ ಕಾಟ ತಪ್ಪಲಿಲ್ಲ ಎಂಬಂತೆ ಮುಖ್ಯಮಂತ್ರಿ ಬದಲಾದರೂ ರಾಜ್ಯದ ಜನರ ಹಣೆಬರಹ ಬದಲಾಗೋ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ಕಡೆ ಕೊರೊನಾ ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ. ಇನ್ನೊಂದೆಡೆ ಜಲಾಸುರ ಉತ್ತರ ಕರ್ನಾಟಕವನ್ನು ನುಂಗುತ್ತಾ ಬರುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿತ ಕಾಯಬೇಕಿದ್ದ …

Read More »

`ತೆನೆ’ ಇಳಿಸಿ `ಕೈ’ ಹಿಡಿದ ಮಧು ಬಂಗಾರಪ್ಪ..

ಹುಬ್ಬಳ್ಳಿ : ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಬಾವುಟ ಹಿಡಿದರು. ಅಲ್ಲದೆ ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ …

Read More »

ವಲಸಿಗರ ಕೈ ಬಿಟ್ರಾ ಬಿ.ಎಸ್.ಯಡಿಯೂರಪ್ಪ..?

ಚಾಮರಾಜನಗರ : ಕೇವಲ ಬಿ.ಎಸ್.ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದು ಸಚಿವರಾಗಿದ್ದ 17 ಮಂದಿ ಶಾಸಕರಿಗೆ ಬಿಎಸ್ ವೈ ಶಾಕ್ ನೀಡಿದ್ದಾರೆ. ಅವರಿಗೆ ಮತ್ತೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಸಿಎಂ ಬೊಮ್ಮಾಯಿ ಅವರಿಗೆ ಬಿಟ್ಟಿದ್ದು ಎಂದು ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ವೇಳೆ ಕಾಂಗ್ರೆಸ್ – ಜೆಡಿಎಸ್ ನಲ್ಲಿದ್ದ ಶಾಸಕರನ್ನು ಬಿಜೆಪಿಗೆ ಸೆಳೆದು ಸರ್ಕಾರ ರಚಿಸಿದ್ದ ಬಿಎಸ್ ವೈ ಕೊಟ್ಟ ಮಾತಿನಂತೆ ಅವರಿಗೆ ಸಚಿವ …

Read More »

ಸಂಪುಟ ರಚನೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ, ಸಲಹೆಯನ್ನು ನೀಡಲ್ಲ -ಬಿಎಸ್​ವೈ

ಚಾಮರಾಜನಗರ: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ತಮ್ಮ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಅಭಿಮಾನಿ ರವಿ ಮನೆಗೆ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆಯ ತಾಲೂಕಿನ ಬೊಮ್ಮಲಾಪುರಕ್ಕೆ ಭೇಟಿ ನೀಡಿದ ಬಿಎಸ್​​​ವೈ ಅವರು ಮೃತ ಅಭಿಮಾನಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಗಣೇಶ ಚತುರ್ಥಿಯ ನಂತರ ರಾಜ್ಯದ ತುಂಬ ಪ್ರವಾಸ ಮಾಡಲಿದ್ದೇನೆ ಎಂದಿದ್ದಾರೆ. ಪಕ್ಷವನ್ನು ಬಲ …

Read More »

ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ನೆಟ್‌ವರ್ಕ್ ಸೌಲಭ್ಯ ಕಲ್ಪಿಸುವಂತೆ ಆಗ್ರಹ

ಸಾಗರ: ತಾಲ್ಲೂಕಿನ ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮೊಬೈಲ್ ನೆಟ್‌ವರ್ಕ್ ಸೌಲಭ್ಯ ಕಲ್ಪಿಸಲು ಅಗತ್ಯವಿರುವ ವ್ಯವಸ್ಥೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು ಒತ್ತಾಯಿಸಿದ್ದಾರೆ. ತಾಲ್ಲೂಕಿನ ಕುದರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇರುವ ಕಾರಣ ಬುಧವಾರ ಜಿಯೋ ಕಂಪೆನಿ ಪ್ರತಿನಿಧಿಗಳೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾತನಾಡಿದರು. ನಾಡಿಗೆ ಬೆಳಕು ನೀಡಲು ಜಲ ವಿದ್ಯುತ್ …

Read More »