Breaking News
Home / 2021 / ಜುಲೈ / 30 (page 3)

Daily Archives: ಜುಲೈ 30, 2021

ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ: ಇವತ್ತೇ ಫೈನಲ್ ಆಗುತ್ತಾ ಸಚಿವ ಸಂಪುಟ?

ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ. ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ …

Read More »

133 ವರ್ಷ ಹಳೆಯ ಕನ್ನಡ ಶಾಲೆಯನ್ನ ದತ್ತು ಪಡೆದ ಕಿಚ್ಚಸುದೀಪ್​ ತಂಡ

ಶಿವಮೊಗ್ಗ: ಜಿಲ್ಲೆಯ ಸುಮಾರು 133 ವರ್ಷ ಹಳೆಯ ಕನ್ನಡ ಶಾಲೆಯನ್ನ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ದತ್ತು ಪಡೆದಿದೆ. ಈ ಬಗ್ಗೆ ಶಿವಮೊಗ್ಗ ಕ್ಷೇತ್ರಶಿಕ್ಷಣಾಧಿಕಾರಿಗಳು ಅನುಮೋದನೆ ನೀಡಿದ್ದಾರೆ. ನಗರದ ಬಿಹೆಚ್​ ರಸ್ತೆಯಲ್ಲಿರುವ ಸರ್ಕಾರಿ ಶಾಲೆಯನ್ನ ಕಿಚ್ಚಸುದೀಪ್​ ತಂಡ ದತ್ತು ಪಡೆದಿದ್ದು, ಶಾಲೆಯನ್ನ ಅಭಿವೃದ್ಧಿ ಪಡಿಸಲು ಪಣ ತೊಟ್ಟಿದೆ. ಈಗಾಗಲೇ ನೂರಾರು ಶಾಲೆಗಳನ್ನ ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸುವ ಕೆಲಸವನ್ನ ಈ ಕಿಚ್ಚ ಸುದೀಪ್​ ಚಾರಿಟಬಲ್​ಟ್ರಸ್ಟ್​ ಮಾಡುತ್ತಿದ್ದು, ಈ ಕಾರ್ಯಕ್ಕೆ ಅಪಾರ …

Read More »

ಗದಗ ಜಿಲ್ಲೆಯಲ್ಲಿ ‘ಸಲ್ಮಾನ್ ಖಾನ್’ಗ್ರಾಮ ಕೇಳಿದ್ದೀರಾ? ಇಲ್ಲಿ ಮದುವೆಯಾಗಲು ಕ್ಯೂನಲ್ಲಿ ನಿಂತಿದ್ದಾರೆ ಯುವಕರು!

ಗದಗ:ಜಿಲ್ಲೆಯ ರೋಣ ತಾಲ್ಲೂಕಿನ ಸಣ್ಣ ಹಳ್ಳಿಯಿದು, ಈ ಹಳ್ಳಿ ಗದಗ ಪಟ್ಟಣದಿಂದ 59 ಕಿಲೋ ಮೀಟರ್ ದೂರದಲ್ಲಿದೆ. ಸಲ್ಮಾನ್ ಖಾನ್ ಗ್ರಾಮ ಎಂಬ ಹೆಸರು ಈ ಗ್ರಾಮಕ್ಕೆ ಬಂದಿದೆ, ಅರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಗೂ ಈ ಗ್ರಾಮಕ್ಕೂ ಏನು ಸಂಬಂಧ ಎಂದುಕೊಂಡಿರಾ? ಈ ಗ್ರಾಮದಲ್ಲಿ ಯಾರೂ ನಟರಿಲ್ಲ, ಬದಲಿಗೆ ಹಲವು ಯುವಕರು, ಪುರುಷರು ಮದುವೆಯಾಗಲು ಸೂಕ್ತ ಹೆಣ್ಣು ಸಿಗದೆ ಬ್ರಹ್ಮಚಾರಿಗಳಾಗಿಯೇ ಉಳಿದಿದ್ದಾರೆ. ಕಳೆದ 10 ವರ್ಷಗಳಿಂದ ಗ್ರಾಮದಲ್ಲಿ …

Read More »

ಮೇರಿ ಕೋಮ್ ಎಂಬ ‘ಫೈಟಿಂಗ್ ಸ್ಪಿರಿಟ್’ಗೆ ವಿದಾಯ

ಇಂದು ನೂರಾರು ರಾಜಕೀಯ ಸುದ್ದಿಗಳ ನಡುವೆ ಇದೊಂದು ಸುದ್ದಿ ಪ್ರಾಮುಖ್ಯತೆ ಪಡೆಯಲೇ ಇಲ್ಲ! ಬಾಕ್ಸಿಂಗ್ ಲೆಜೆಂಡ್ ಮೇರಿ ಕೋಮ್ ಒಲಿಂಪಿಕ್ಸ್ ಕೂಟದ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಂದು ಕೊಲಂಬಿಯಾದ ವೇಲೆಂಶಿಯ ಎಂಬ ಬಾಕ್ಸರ್ ಗೆ ಭಾರೀ ಫೈಟ್ ಕೊಟ್ಟು 3-2 ಅಂಕಗಳಿಂದ ಸೋತು ರಿಂಗ್ಸ್ ನಿಂದ ನಿರ್ಗಮಿಸುವಾಗ ಆಕೆಯ ಕಣ್ಣಂಚಿನಲ್ಲಿ ಜಿನುಗಿದ ಕಣ್ಣೀರು ಯಾವುದೇ ಮಾಧ್ಯಮಕ್ಕೆ ಕೂಡ TRP ಕಂಟೆಂಟ್ ಆಗಿಲ್ಲ. ಇನ್ನು ಮುಂದೆ ಮೇರಿ ಕೋಮ್ ಬಾಕ್ಸಿಂಗ್ …

Read More »

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಬಜಪೆ: ಎಷ್ಟು ಪ್ರಯತ್ನ ಪಟ್ಟರೂ ಆಧಾರ್‌ ಕಾರ್ಡ್‌ ಪಡೆಯಲು ಸಾಧ್ಯವಾಗದೆ ಇಲ್ಲೊಬ್ಬ ವಿಶೇಷ ಚೇತನ ಯುವತಿ ಸರಕಾರದ ಸವಲತ್ತುಗಳಿಂದ ವಂಚಿತರಾಗಿದ್ದಾರೆ. ಮಂಗಳೂರು ತಾಲೂಕು ಎಕ್ಕಾರು ಗ್ರಾಮ ಪಂಚಾಯತ್‌ನ ತೆಂಕ ಎಕ್ಕಾರು ಪಲ್ಲದ ಕೋಡಿ ಮುರ ಮನೆಯ ಪದ್ಮನಾಭ ಗೌಡ – ಮೀನಾಕ್ಷಿ ದಂಪತಿಯ ಪುತ್ರಿ ಧನ್ಯಶ್ರೀ (23) ಸಂತ್ರಸ್ತ ಯುವತಿ. ಕೂಲಿ ಕಾರ್ಮಿಕ ದಂಪತಿಗೆ ನಾಲ್ವರು ಮಕ್ಕಳು. ಧನ್ಯಶ್ರೀ ಹುಟ್ಟಿನಿಂದ ಅಂಗವೈಕಲ್ಯ ಮತ್ತು ಮಧ್ಯಮ ಬುದ್ಧಿ ಮಾಂದ್ಯತೆಯಿಂದ ಬಳಲುತ್ತಿದ್ದಾರೆ. ದಿನಗೂಲಿ …

Read More »

ಬಿಜೆಪಿ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ; ಕಾಂಗ್ರೆಸ್​ನಿಂದ BSY ಆಡಳಿತ ವೈಫಲ್ಯಗಳ ಬಗ್ಗೆ ಪುಸ್ತಕ ರಿಲೀಸ್

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ನಡೆಸಿದ 2 ವರ್ಷಗಳ ಆಡಳಿತ ವೈಫಲ್ಯ ಕುರಿತ ಪುಸ್ತಕವನ್ನ ಮಾಜಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ.. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 2 ವರ್ಷ ಪೂರೈಸಿ, ಸಂಭ್ರಮದ ದಿನ ಆಚರಿಸಿ ರಾಜೀನಾಮೆ ನೀಡಿದ್ರು. ಸಂಕಷ್ಟದ ಸಮಯದಲ್ಲಿ ರಾಜ್ಯವನ್ನು ಅಭಿವೃದ್ಧಿ ಪತದತ್ತ ತೆಗೆದುಕೊಂಡು ಹೋಗಿದ್ದೀವಿ ಅಂದ್ರು. ಯಡಿಯೂರಪ್ಪ ನಿರ್ಗಮಿಸಿದ್ದಾರೆ, ಬಸವರಾಜು ಬೊಮ್ಮಾಯಿಗೆ ಅಭಿನಂದಿಸಿ, ಶುಭವಾಗಲಿ ಎಂದು ಹಾರೈಸುವೆ. ಶಶಿಕಲಾ ಜೊಲ್ಲೆಯವರ ರಾಜೀನಾಮೆ ಪಡೆಯಲಿಲ್ಲ ಈ …

Read More »

ಮತ್ತೆ ಏರುಗತಿಯಲ್ಲಿ ಕೋವಿಡ್ ಪ್ರಕರಣಗಳು: ಸ್ವಯಂ ರಕ್ಷಣೆ ಅನಿವಾರ್ಯ

ನಮ್ಮ ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ಸಹಿತ ದೇಶದ ಹಲವೆಡೆ ಕೊರೊನಾ ಪ್ರಕರಣಗಳು ಕಳೆದ ಕೆಲವು ದಿನಗಳಿಂದೀಚೆಗೆ ಹೆಚ್ಚುತ್ತಲೇ ಸಾಗಿದೆ. ಕೊರೊನಾ ಮೊದಲನೇ ಅಲೆ ವೇಳೆ ಸಾಂಕ್ರಾಮಿಕದ ನಿಯಂತ್ರ ಣದಲ್ಲಿ ದೇಶ ಮಾತ್ರವಲ್ಲದೆ ವಿಶ್ವ ಆರೋಗ್ಯ ಸಂಸ್ಥೆಯ ಗಮನ ಸೆಳೆದಿದ್ದ ಕೇರಳ ಎರಡನೇ ಅಲೆಯನ್ನು ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫ‌ಲ ವಾಗಿರುವುದು ತೀವ್ರ ಅಚ್ಚರಿಯುಂಟು ಮಾಡಿದೆ. ದೇಶಾದ್ಯಂತ ಕೊರೊನಾ ಎರಡನೇ ಅಲೆ ವ್ಯಾಪಿಸಲಾರಂಭಿಸಿದಾಗಿನಿಂದಲೂ ಕೇರಳದಲ್ಲಿ ಸೋಂಕಿನ ಹರಡುವಿಕೆ ತೀವ್ರಗತಿಯಲ್ಲಿತ್ತು. ಸೋಂಕಿನ ಪ್ರಸರಣಕ್ಕೆ …

Read More »

ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ಕೊಡಿಸಲು ಸಿಎಂ ಜತೆ ಚರ್ಚೆ: ಬಿಎಸ್‌ವೈ

ಬೆಂಗಳೂರು: ವಲಸಿಗ ರಿಂದಲೇ ಬಿಜೆಪಿ ಸರಕಾರ ಬಂದಿದ್ದು, ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಜತೆ ಮಾತನಾಡುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ಆರೆಸ್ಸೆಸ್‌ ಕಚೇರಿಗೆ ಭೇಟಿ ನೀಡಿ, ಮುಖಂಡ ಮುಕುಂದ್‌ ಅವರನ್ನು ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸಚಿವ ಸಂಪುಟ ರಚನೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವರಿಷ್ಠರಿಗೆ ಬಿಟ್ಟಿದ್ದು, ವಲಸಿಗರ ವಿಷಯ …

Read More »

ಭ್ರಷ್ಟಾಚಾರವೇ ಸರಕಾರದ ಸಾಧನೆ: ಸಿದ್ದು

“ಆಪರೇಷನ್‌ ಕಮಲ’ ಎಂಬ ಅನೈತಿಕ ಮಾರ್ಗದಿಂದ ಅಧಿಕಾರಕ್ಕೇರಿದ ರಾಜ್ಯ ಬಿಜೆಪಿ ಸರಕಾರವು ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷಗಳನ್ನು ಪೂರೈಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ “ಜನಪೀಡಕ ಸರಕಾರ’ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಅವರು, ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರಕಾರ ಇದ್ದರೆ ಸ್ವರ್ಗವನ್ನೇ ಸೃಷ್ಟಿಸುತ್ತೇವೆ ಎಂದು ಜನರನ್ನು ನಂಬಿಸಿ ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂದು ಟೀಕಿಸಿದರು. ಕೊರೊನಾ ಸಂಬಂಧಿ ಸಲಕರಣೆ …

Read More »

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-

ಬೆಂಗಳೂರು: ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು ಸೇರ್ಪಡೆಯಾಗುತ್ತಾರೆ, ಯಾರ್ಯಾರಿಗೆ ಈ ಬಾರಿ ಸಚಿವ ಸ್ಥಾನ ಒಲಿಯುತ್ತದೆ ಎಂದು. ಜಾತಿ, ಪ್ರದೇಶವಾರು ಪ್ರಾತಿನಿಧ್ಯವನ್ನು ನೋಡಿಕೊಂಡು ಶಾಸಕರಿಗೆ ಹಿಂದಿನ ಬಿ ಎಸ್ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಮಣೆ ಹಾಕಲಾಗಿದ್ದು, ಅವರಲ್ಲಿ ಹಲವರಿಗೆ ಈ ಬಾರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವುದು ಸಂಶಯವಾಗಿದೆ. …

Read More »