Breaking News

Monthly Archives: ಜುಲೈ 2021

ಸಿಎಂ ಬಿಎಸ್​ವೈ ಕಡೆಯಿಂದ ಕೊಡಲಾದ ಲಕೋಟೆ​ಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..

ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರನ್ನು ಸ್ವಾಮೀಜಿಗಳನೇಕರು ಭೇಟಿಯಾಗಿ, ಬೆಂಬಲ ಸೂಚಿಸಿದ್ದ ಸಂದರ್ಭದ ದೃಶ್ಯಾವಳಿಯೊಂದು ಬಹಳಷ್ಟು ಕಡೆ ಹರಿದಾಡಿತ್ತು. ಸಿಎಂ ಭೇಟಿ ವೇಳೆ ಎಲ್ಲ ಸ್ವಾಮೀಜಿಗಳಿಗೂ ಒಂದು ಲಕೋಟೆ ಕೊಡಲಾಗಿದ್ದು, ಆ ಬಗ್ಗೆ ಹಲವರು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದರಿಂದ ಆ ವಿಡಿಯೋ ಸಾಕಷ್ಟು ಹಂಚಿಕೆ ಆಗಿತ್ತು. ಇದೀಗ ಆ ಕುರಿತು ಸ್ವಾಮೀಜಿಯೊಬ್ಬರು ಮಾತನಾಡಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮ್ಮೇಳನದಲ್ಲಿ ದಿಂಗಾಲೇಶ್ವರ …

Read More »

ಸಿಎಂ ಹುದ್ದೆ ಖಾಲಿ ಇಲ್ಲ : ಸಚಿವ ಜಗದೀಶ ಶೆಟ್ಟರ

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಯಾವುದೇ ಸೂಚನೆ ಬಂದಿಲ್ಲ. ಸಿಎಂ ಹುದ್ದೆ ಖಾಲಿ ಇಲ್ಲ. ಸದ್ಯ ಈ ವಿಷಯ ಅಪ್ರಸ್ತುತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿಂದು (ಜು.25) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ಯಾವ ನಿರ್ಧಾರ ಏನೆಂಬುದು ನಮಗೆ ಗೊತ್ತಿಲ್ಲ ಮತ್ತು ಈ ಬಗ್ಗೆ ಯಡಿಯೂರಪ್ಪ ಅವರಿಗೂ ಅವರಿಂದ ಸೂಚನೆ ಬಂದಂತಿಲ್ಲ. ಅವರ ಸೂಚನೆಯಂತೆ ನಡೆದುಕೊಳ್ಳುವೆ …

Read More »

ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿ: ‘ಮನೆ ಕಳೆದು ಕೊಂಡವರಿಗೆ ತಕ್ಷಣ ₹10 ಸಾವಿರ ಪರಿಹಾರ ಪಾವತಿ ನೀಡಬೇಕು. ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯ ಕುರಿತು ಸಮೀಕ್ಷೆ ನಡೆಸಲಾಗುವುದು ಹಾಗೂ ತೊಂದರೆಗೊಳದವರಿಗೆ ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಪ್ರವಾಹ ಹಾಗೂ ಅತಿವೃಷ್ಟಿ ಪರಿಶೀಲನೆಗಾಗಿ ಶನಿವಾರ ಶಿಗ್ಗಾವಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ದೊಡ್ಡ ಪ್ರಮಾಣದ ಮಳೆ ಕಾರಣ ಜಿಲ್ಲೆಯ …

Read More »

ಪ್ರವಾಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಸಿಎಂ ಯಡಿಯೂರಪ್ಪ ಭರವಸೆ

ಬೆಳಗಾವಿ: ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಅವರು ರವಿವಾರ ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭೇಟಿ ನೀಡಿದ ಅವರು, ಪ್ರವಾಹದಿಂದ ಬಾಧಿತರಾಗಿರುವ ಕೆಲವು ಸ್ಥಳಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ …

Read More »

ಬೆಂಗಳೂರು; ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರ ದುರ್ಮರಣ

ಬೆಂಗಳೂರು: ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಭದ್ರಪ್ಪ ಲೇಔಟ್ನಲ್ಲಿ ಸಂಭವಿಸಿದೆ. ಓರ್ವ ಪುರುಷ(30) ಮತ್ತು ಓರ್ವ ಮಹಿಳೆ(40) ಮೃತ ಪಟ್ಟಿದ್ದಾರೆ. ರೈಲು ಬರುವುದು ಗಮನಿಸದೆ ಹಳಿ ದಾಟಲು ಯತ್ನಿಸಿದ್ದು ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಬೈಯಪ್ಪನ ಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ನಲ್ಲಿ ಘಟನೆ ನಡೆದಿದೆ. ಸದ್ಯ ಎರಡು ಮೃತದೇಹಗಳನ್ನು ಬೋರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು ಪೊಲೀಸರು …

Read More »

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜಕೀಯ ಅನಿಶ್ಚಿತತೆ ಇದೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರ ಆಡಳಿತ, ಜನರಿಗೆ ಕೊಟ್ಟ ಕೊಡುಗೆ ಎಂದರು. ಇನ್ನು ಬಿಎಸ್​ವೈಗೆ ಹೈಕಮಾಂಡ್​ನಿಂದ ಸಂದೇಶ ಬರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಇವತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಊರಲ್ಲಿಲ್ಲ ಅಂತ ಪರೋಕ್ಷವಾಗಿ ಇಂದು ಸಿಎಂ ಬದಲಾಗಲ್ಲವೆಂದು ಡಿ.ಕೆ.ಶಿವಕುಮಾರ್ ಹೇಳಿದರು. ಕೊವಿಡ್ ಸ್ಥಿತಿ ಬಗ್ಗೆ ನಮ್ಮ ತಂಡ ಅಧ್ಯಯನ ವರದಿ ನೀಡಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ಕೂಡ ಮಾಡಿಲ್ಲ. ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಾವು ಸಮರ್ಥವಾಗಿ ಕೊವಿಡ್ ನಿರ್ವಹಣೆ ಮಾಡಿದ್ದೇವೆ. ಎರಡೂವರೆ ಕೋಟಿ ಜನರಿಗೆ ನಾವು ಸಹಾಯ ಮಾಡಿದ್ದೇವೆ. ಆಕ್ಸಿಜನ್ ಕೊರತೆಯಿಂದ ಯಾರೂ ಮೃತಪಟ್ಟಿಲ್ಲ ಅಂತಾರೆ. ಕೇಂದ್ರದ ಸಚಿವರೇ ಸಂಸತ್ನಲ್ಲಿ ಹೀಗೆ ಉತ್ತರ ಕೊಡುತ್ತಾರೆ. ಆದರೆ ಇಲ್ಲಿ ಮೃತರ ಕುಟುಂಬಕ್ಕೆ ಸಿಎಂ ಏಕೆ ಪರಿಹಾರ ಕೊಟ್ಟರು? ಎಂದು ಕೆಪಿಸಿಸಿ ಅಧ್ಯಕ್ಷ ಪ್ರಶ್ನಿಸಿದ್ದಾರೆ. ಕಳೆದ ವರ್ಷ ಮನೆ ಕಳೆದುಕೊಂಡವರಿಗೇ ಪರಿಹಾರ ಸಿಕ್ಕಿಲ್ಲ. ಪರಿಹಾರ ನೀಡಿಲ್ಲ ಎಂದ ಮೇಲೆ ಸರ್ಕಾರ ಏಕೆ ನಡೆಸಬೇಕು. ಬಿಜೆಪಿಗೆ ಜನರ ಸೇವೆ ಮಾಡಲು ಆಗಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನೆರೆ ವೇಳೆ ಹಿಂದೆ ಪ್ರಧಾನಿಗಳು ಬೇರೆ ರಾಜ್ಯಕ್ಕೆ ಹೋಗಿದ್ರು. ಆದರೆ ನಮ್ಮ ರಾಜ್ಯಕ್ಕೆ ಮಾತ್ರ ಪ್ರಧಾನಿ ಮೋದಿ ಬರಲಿಲ್ಲ. ಪ್ರಧಾನಿಯಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜಕೀಯ ಅನಿಶ್ಚಿತತೆ ಇದೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರ ಆಡಳಿತ, ಜನರಿಗೆ ಕೊಟ್ಟ ಕೊಡುಗೆ ಎಂದರು. ಇನ್ನು ಬಿಎಸ್​ವೈಗೆ ಹೈಕಮಾಂಡ್​ನಿಂದ ಸಂದೇಶ ಬರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಇವತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಊರಲ್ಲಿಲ್ಲ ಅಂತ ಪರೋಕ್ಷವಾಗಿ ಇಂದು ಸಿಎಂ ಬದಲಾಗಲ್ಲವೆಂದು ಡಿ.ಕೆ.ಶಿವಕುಮಾರ್ ಹೇಳಿದರು. ಕೊವಿಡ್ ಸ್ಥಿತಿ ಬಗ್ಗೆ ನಮ್ಮ ತಂಡ ಅಧ್ಯಯನ ವರದಿ …

Read More »

ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ

ಬೆಂಗಳೂರು: ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ ಎಂದು ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮಾವೇಶದಲ್ಲಿ ಹೇಳಿಕೆ ನೀಡಿರುವ ಶ್ರೀಗಳು, ಧರ್ಮವನ್ನ ಕಾಪಾಡಲು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಮಾಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಯೋಗಿಗಳನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ. “ರಾಜ್ಯದಲ್ಲಿ ಹಲವಾರು ಜಾತಿ ವ್ಯವಸ್ಥೆ ಇದೆ. ಆ ಜಾತಿಯಲ್ಲಿ ಮಠಾಧೀಶರು ಕೂಡ ಇದ್ದಾರೆ. ಯಾವುದೇ …

Read More »

BJP ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ: ಮಧು ಬಂಗಾರಪ್ಪ ವಾಗ್ದಾಳಿ

ಕೊಪ್ಪಳ : ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ಬದಲಾವಣೆ ಸುದ್ದಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಇದೇ ಸಂದರ್ಭದಲ್ಲೇ ಬಿಜೆಪಿ ಅಂದ್ರೇ ಬ್ಯುಸಿನೆಸ್ ಜನತಾ ಪಾರ್ಟಿ ಎಂಬುದಾಗಿ ಮಾಜಿ ಶಾಸಕ ಮಧುಬಂಗಾರಪ್ಪ ( Madhu Bangarappa ) ಆರೋಪಿಸಿದ್ದಾರೆ.   ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜನಪರ ಕೆಲಸ ಮಾಡುವ ಸರ್ಕಾರ ಅಂದ್ರೇ ಅದು ಕಾಂಗ್ರೆಸ್ ಪಕ್ಷ(Congress Party )ವಾಗಿದೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ …

Read More »

ರಾಜೀನಾಮೆ ನೀಡುವವರೆಗೂ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್‌ನಿಂದ ಮೊಟ್ಟೆ ಕೊಡುವ ಅಭಿಯಾನ!

ಬೆಂಗಳೂರು,: “ರಾಜ್ಯದಲ್ಲಿ ಅಪೌಷ್ಠಿಕತೆ ನೀಗಿಸಲು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುವ ಮೊಟ್ಟೆಯಲ್ಲೂ ದುಡ್ಡು ಮಾಡಲು ಅಮಾನವೀಯ ಹೆಜ್ಜೆ ಇಟ್ಟುವ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಪ್ರಕರಣದ ತನಿಖೆಯಾಗಬೇಕು’ ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕಿಯರು ಜಂಟಿ ಸುದ್ದಿಗೋಷ್ಠಿ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿದರು. ಮಾಜಿ ಸಚಿವೆ ಉಮಾಶ್ರೀ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ …

Read More »

ಮೊಟ್ಟೆಗೆ ಟೆಂಡರ್ ಕರೆದಿಲ್ಲ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು,

ಬೆಂಗಳೂರು, ಜು. 24: “ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ” ಎಂದು ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಹೊರಡಿಸಿರುವ ಅವರು, “ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …

Read More »