Breaking News

Monthly Archives: ಜುಲೈ 2021

ಸಿಎಂ ಪದಗ್ರಹಣ ವೇಳೆ ಗೈರು: ಇಂದು ದಿಢೀರ್​ ಸುದ್ದಿಗೋಷ್ಠಿ ನಡೆಸಿ ಶ್ರೀರಾಮುಲು ಹೇಳಿದ್ದೇನು?

ಬಳ್ಳಾರಿ: ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಪದಗ್ರಹಣ ಮಾಡಿದ ಕಾರ್ಯಕ್ರಮಕ್ಕೆ ಶೀರಾಮುಲು ಗೈರು ಎದ್ದು ಕಾಣುತ್ತಿತ್ತು. ಡಿಸಿಎಂ ಸ್ಥಾನದ ವಿಚಾರವಾಗಿ ಅಸಮಾಧನ ಏರ್ಪಟ್ಟಿದ್ದು, ಶ್ರೀರಾಮುಲು ಮುನಿಸಿಕೊಂಡಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಎರಡು ದಿನದಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಶ್ರೀರಾಮುಲು ಇಂದು ಸುದ್ದಿಗೋಷ್ಠಿ ನಡೆಸಿ ಎಲ್ಲ ಊಹಾಪೋಹಕ್ಕೂ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಬಳ್ಳಾರಿಯಲ್ಲಿ ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಶ್ರೀರಾಮುಲು, ಬಹಳ ದಿನದಿಂದ ನಿಗದಿಯಾಗಿದ್ದ ಪೂಜೆಯಲ್ಲಿ ಭಾಗಿಯಾಗಿದ್ದೆ. ನನಗೆ ಯಾವುದೇ ಮುನಿಸಿಲ್ಲ. …

Read More »

ಮಹದಾಯಿ ಯೋಜನೆಗೆ ಮೊದಲ ಆದ್ಯತೆ ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಜು.29- ಮಹದಾಯಿ ಯೋಜನೆಗೆ ಮೊದಲ ಆದ್ಯತೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ ನೀಡುತ್ತೇನೆ. ಏನು ಮಾಡಬೇಕು ಎಂದು ನನಗೆ ಬಹಳ ಸ್ಪಷ್ಟತೆ ಇದೆ. ಗೆಜೆಟ್ ನೋಟಿಫಿಕೇಷನ್ ಸಿಕ್ಕ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಸಚಿವರಾದ …

Read More »

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು!

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಘಟನೆ ನಡೆಯುವಾಗ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ. ಘಟನೆಯ ವಿವರ: ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವರಾಮ್ ಹೆಬ್ಬಾರ್ ಇದ್ದರು. ವಿಮಾನ ನಿಲ್ದಾಣದಿಂದ …

Read More »

ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ; ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ ಶಿಕ್ಷಣ ಇಲ್ಲಿಯೇ ಮುಗಿದಿದೆ‌. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ‌ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿ ಶ್ರಮಿಸುತ್ತೇನೆ. ಹುಬ್ಬಳ್ಳಿ-ಧಾರವಾಡದ …

Read More »

ಸಿಎಂ ಬೊಮ್ಮಾಯಿ ನಿವಾಸದ ಎದುರೇ ಬೈಕ್ ವ್ಹೀಲಿಂಗ್​ ಮಾಡ್ತಿದ್ದ ಪುಂಡರ ಬಂಧನ

ಬೆಂಗಳೂರು: ನೂತನ ಸಿಎಂ ಬಸವರಾಜ್​ ಬೊಮ್ಮಾಯಿಯವರ ಆರ್. ಟಿ ನಗರದ ಮನೆ ಸುತ್ತಮುತ್ತ ಬೈಕ್​ ವ್ಹೀಲಿಂಗ್​ ಮಾಡುವ ಪುಂಡರ ಹಾವಳಿ ಹೆಚ್ಚಾಗಿದೆ. ಸಿಎಂ ಮನೆ ಮುಂದೆ ವ್ಹೀಲಿಂಗ್​ ಮಾಡುತ್ತಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದು ಬೈಕ್​ಗಳನ್ನ ಸೀಜ್​ ಮಾಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮನೆ ಸುತ್ತಮುತ್ತ ಪೊಲೀಸ್​ರ ದಂಡೆ ಇದ್ದರು ಕ್ಯಾರೆ ಎನ್ನದ ಪುಂಡರ ಗುಂಪು ವ್ಹೀಲಿಂಗ್ ಮಾಡುತ್ತಿದ್ದರು. ಡಿಯೋ, ಌಕ್ಟಿವಾ ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಗ್ಯಾಂಗ್​ನ್ನು …

Read More »

ಮಳೆ ಕಡಿಮೆಯಾದ್ರು ತಗ್ಗದ ಕೃಷ್ಣೆಯ ಅಬ್ಬರ -ನಡುಗಡ್ಡೆಯಲ್ಲಿ ಸಿಲುಕಿದ್ದ 54 ಮಂದಿಯ ರಕ್ಷಣೆ

ಬೆಳಗಾವಿ: ಕಳೆದ ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಕೃಷ್ಣಾ ನದಿಯಲ್ಲಿ ಪ್ರವಾಹ ತಗ್ಗಿಲ್ಲ. ಪರಿಣಾಮ ಜಿಲ್ಲೆಯ ಕೆಲವು ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಅಥಣಿ ತಾಲೂಕಿನ ಸವದಿ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ್ದ 54 ಜನರನ್ನು ಎಸ್​ಡಿಆರ್​ಎಫ್​ ತಂಡ ರಕ್ಷಣೆ ಮಾಡಿದೆ. ಕಾರ್ಯಾಚರಣೆ ನಡೆಸಿದ ಎಸ್​ಡಿಆರ್​ಎಫ್ ತಂಡ ನಡುಗಡ್ಡೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದ್ದಾರೆ. #KarnatakaRains UPDATE28/7/21🔸Water-logging/flooding 🔸Belagavi …

Read More »

ಗ್ರಾಮದ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದವನಿಗೆ ಬಿಗ್ ಶಾಕ್

ಮಂಡ್ಯ: ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ಯುವಕನ ಮೇಲೆ ಹಲ್ಲೆ ನಡೆಸಿ 30 ಸಾವಿರ ರೂ. ದೋಚಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ನೇಹಿತರಿಂದಲೇ ಹನಿಟ್ರ್ಯಾಪ್ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಗಿರೀಶ್ ಎಂಬಾತ ಮಂಡ್ಯ ಸಮೀಪದ ಕೊತ್ತತ್ತಿ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ವೇಳೆ ರವಿಚಂದ್ರ, ಕಾರ್ತಿಕ್, ಕಿರಣ್, ಮಂಜು ದಾಳಿ ಮಾಡಿ ಹಲ್ಲೆ ನಡೆಸಿದ್ದು, ಹಣ ಕಸಿದುಕೊಂಡು …

Read More »

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ. 11.25 ರಿಂದ ಶೇ.21.50 ಕ್ಕೆ ಹೆಚ್ಚಳ

ಬೆಂಗಳೂರು: ಸಾರಿಗೆ ಇಲಾಖೆ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಶೇಕಡ 11.25 ರಿಂದ ಶೇಕಡ 21.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸಾರಿಗೆ ಇಲಾಖೆ 4 ನಿಗಮಗಳ ನೌಕರರ ಡಿಎ ಹೆಚ್ಚಳ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

Read More »

ಯಾವ ಖಾತೆ ಕೊಟ್ಟರೂ ಸಹ ಸಮರ್ಥವಾಗಿ ನಿಭಾಯಿಸುತ್ತೇನೆ: ಶಾಸಕ ರೇಣುಕಾಚಾರ್ಯ ಹೇಳಿಕೆ

ಬೆಂಗಳೂರು:ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ್ರೆ ತಪ್ಪೇನಿಲ್ಲ, ಈಗಲೂ ಯಡಿಯೂರಪ್ಪನವರೇ ನಮ್ಮ ನಾಯಕ ಎಂದು ಎದೆತಟ್ಟಿ ಹೇಳುತ್ತೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು. ಆರ್.ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ, ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಆರು ಶಾಸಕರಿದ್ದು, ಜಿಲ್ಲೆಯನ್ನು ಕಡೆಗಣಿಸದಂತೆ ಮನವಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನಮ್ಮ ಜಿಲ್ಲೆಗೆ ಒಂದು ಸಚಿವ …

Read More »

ಮಂತ್ರಿ ಸ್ಥಾನಕ್ಕಾಗಿ ಲಾಬಿ; ಹೈಕಮಾಂಡ್ ಭೇಟಿಗೆ ದೆಹಲಿಗೆ ದೌಡಾಯಿಸಿದ ಹಿರಿಯ ಸಚಿವರು; ಕುತೂಹಲ ಮೂಡಿಸಿದ ಉಮೇಶ್ ಕತ್ತಿ ನಡೆ

ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪುವ ಭೀತಿ ಎದುರಾಗಿದ್ದು, ದೆಹಲಿಗೆ ದೌಡಾಯಿಸಿದ್ದಾರೆ. ವರಿಷ್ಠರ ಮೂಲಕ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಹೈಕಮಾಂಡ್ ಭೇಟಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ನವದೆಹಲಿಯಲ್ಲಿ ಮಾತನಾಡಿದ ಉಮೇಶ್ ಕತ್ತಿ, ಸಿಎಂ ಬೊಮ್ಮಾಯಿ ನನ್ನನ್ನು ಬಿಟ್ಟು ಸಂಪುಟ ರಚನೆ ಮಾಡಲ್ಲ ಎಂಬ ನಂಬಿಕೆಯಿದೆ. ನಾನು ಈಗಗಾಲೆ 4 …

Read More »