Breaking News

Monthly Archives: ಜುಲೈ 2021

ಕೇಂದ್ರ ಜಿಎಸ್‌ಟಿ ಪರಿಹಾರ ವಂಚಿಸಿರುವಾಗ ರಾಜ್ಯಗಳು ಸಂಭ್ರಮಿಸಬೇಕೆ?: H.D.K.

ಬೆಂಗಳೂರು: ಜಿಎಸ್‌ಟಿ ಜಾರಿಗೆ ಬಂದು 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. ಜಿಎಸ್‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯಕ್ಕೆ ₹9 ಸಾವಿರ ಕೋಟಿಯಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ …

Read More »

ಶ್ರೀರಾಮುಲು ಪಿಎ ಬಗ್ಗೆ, ವಿಜಯೇಂದ್ರ ಬಗ್ಗೆ ಮಾತಾಡೋದು ನನ್ನ ಲೆವೆಲ್ ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರು ಬಳಸಿ ಹಲವರಿಗೆ ವಂಚನೆ ಎಸಗಿದ್ದ ಆರೋಪದ ಮೇಲೆ ಸಚಿವ ಶ್ರೀರಾಮುಲು ಪಿಎ ರಾಜಣ್ಣರನ್ನು ಸಿಸಿಬಿ ಪೊಲೀಸರು ರಾತ್ರಿಯಿಡೀ ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರು ಶ್ರೀರಾಮುಲು, ವಿಜಯೇಂದ್ರ ವಿಚಾರವಾಗಿ ನಾನು ಮಾತಾಡೋದು ನನ್ನ ಲೆವೆಲ್​ ಅಲ್ಲ. ಪಿಎಗಳ ವ್ಯವಹಾರಕ್ಕೆ ನಾನು ಮಧ್ಯ ಪ್ರವೇಶ ಮಾಡೊಲ್ಲ. ಅದರ ಬಗ್ಗೆ ನಾನು ಕಾಮೆಂಟ್ ಕೂಡಾ ಮಾಡೊಲ್ಲ. …

Read More »

ಬಿಜೆಪಿಯಲ್ಲಿ ಏನೋ ಸಮಸ್ಯೆಯಿದೆ. ಇದು ಆಡಳಿತದ ಮೇಲೂ ದುಷ್ಪರಿಣಾಮ ಬೀರುತ್ತಿದೆ: R.V ದೇಶಪಾಂಡೆ

ಶಿರಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹಾಗೂ ಮಾಜಿ ಸಿ.ಎಂ ಸಿದ್ದರಾಮಯ್ಯ ಕೂಡಿಕೊಂಡೇ ಹೋಗುತ್ತಿದ್ದಾರೆ. ಅವರ ನಡುವೆ ಬಿರುಕಿದೆ ಎನ್ನುವುದು ಸುಳ್ಳು, ಕೆಲ ಮಾಧ್ಯಮಗಳ ಸೃಷ್ಟಿ. ಪಕ್ಷದ ನಾಯಕರೆಲ್ಲಾ ಒಗ್ಗಟಿಟಿನಿಂದ ಕೆಲಸ ಮಾಡುತ್ತಿದ್ದೇವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಹೇಳಿದರು. ನಗರದ ಪೂಗ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಂಡು ಹಿರಿಯ ವೈದ್ಯರಾದ ಡಾ. ರಾಜಾರಾಮ ದೊಡ್ಡೂರು, ಡಾ.ಕೆ.ಬಿ.ಪವಾರ್, ಹಿರಿಯ ಪತ್ರಕರ್ತ …

Read More »

ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!

ಅರ್ಚಕನಿಂದ ಶೌಚಾಲಯವನ್ನು ಅಧಿಕಾರಿಯೊಬ್ಬರು ಶುಚಿ ಮಾಡಿಸಿದ ಘಟನೆ ಕೋಲಾರದ ಐತಿಹಾಸಿಕ ಬಂಗಾರು ತಿರುಪತಿ ದೇವಸ್ಥಾನದಲ್ಲಿ ನಡೆದಿದ್ದು, ಈ ಫೋಟೊಗಳು ಇದೀಗ ವೈರಲ್ ಆಗಿದೆ. ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ‌ ಬಂಗಾರು ತಿರುಪತಿ ದೇಗುಲ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ರಹ್ಮಣಿ ಎಂಬುವವರು ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣಪ್ಪ ಅವರಿಂದ ದೇವಾಲಯದ ಪ್ರಾಂಗಣ ಮತ್ತು ಶೌಚಾಲಯ ಶುಚಿಗೊಳಿಸಿದ್ದಾರೆ. ಅಂಗಳ ಗ್ರಾಮದ ದೇಗುಲವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡ್ತಿರುವ ಲಕ್ಷ್ಮೀನಾರಾಯಣ ಬಂಗಾರು ತಿರುಪತಿ ದೇಗುಲಕ್ಕೆ ಹೂಗಳನ್ನ ತಂದು …

Read More »

ಫೋನ್‌ ಕದ್ದಾಲಿಕೆ: ಪೊಲೀಸರಿಗೆ ಅರ್ಚಕರ ನಂಬರ್‌ ನೀಡಿದ್ದ ಅರವಿಂದ್‌ ಬೆಲ್ಲದ್‌?

ಬೆಂಗಳೂರು: ಫೋನ್‌ ಕದ್ದಾಲಿಕೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಅವರು ಈ ಹಿಂದೆ ಪೊಲೀಸರಿಗೆ ನೀಡಿದ ನಂಬರ್‌ ಹೈದಾರಾಬಾದ್‌ ಮೂಲದ ಅರ್ಚಕರದ್ದು ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬುಧವಾರ ಶೇಷಾದ್ರಿಪುರಂ ಎಸಿಪಿ ಕಚೇರಿಗೆ ಆಗಮಿಸಿದ ಶಾಸಕರನ್ನು ಎಸಿಪಿ ಪೃಥ್ವಿ ಅವರು ಸುಮಾರು ಒಂದು ಗಂಟೆ ವಿಚಾರಣೆ ನಡೆಸಿದ್ದು, ಕೆಲವೊಂದು ಮಾಹಿತಿ ಪಡೆದು ಕೊಂಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ “ಕೆಲ ದಿನಗಳಹಿಂದೆ ಯುವರಾಜ ಸ್ವಾಮಿ ಎಂಬ …

Read More »

ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!

ಚಿತ್ರದುರ್ಗ: ಅಪಘಾತಕ್ಕೀಡಾಗಿ ಮೃತಪಟ್ಟ ತಂಗಿಯ ಶವವನ್ನ ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗಮಧ್ಯೆ ದುರಂತ ಅಂತ್ಯ ಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನ ರಾಮು ಮುದ್ದಿಗೌಡರ್(56) ಮತ್ತು ಇವರ ಸಹೋದರಿ ರೇಣುಕಾ ಮೃತರು. ಮೂರು ದಿನದ ಹಿಂದೆ ರೇಣುಕಾಗೆ ಅಪಘಾತವಾಗಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಮು ಕರೆದೊಯ್ದಿದ್ದರು. ಚಿಕಿತ್ಸೆ ಫಲಿಸದೆ ರೇಣುಕಾ ಗುರುವಾರ ಮೃತಪಟ್ಟಿದ್ದರು. ಮೃತದೇಹವನ್ನು ಆಂಬುಲೆನ್ಸ್​ನಲ್ಲಿ …

Read More »

ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಏನು ಆಗುವುದಿಲ್ಲ: ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ 20 -25 ಪರ್ಸೆಂಟ್ ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ವಿಜಯೇಂದ್ರ ಡಿ ಪ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ. ಸರ್ಕಾರದಲ್ಲಿ ಲಂಚ ನಡೆಯುತ್ತಿರುವುದು ಸತ್ಯ. ಯಡಿಯೂರಪ್ಪನವರ ಮಗ ಹಾಗು ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದು ಕೊಳ್ಳುತ್ತಿದ್ದಾರೆ. ಯಡಿಯೂರಪ್ಪನವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ. …

Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ‌ ಬಂದ ವ್ಯಕ್ತಿಯಿಂದ ಸುಮಾರು ₹20.89 ಲಕ್ಷ ಮೌಲ್ಯ ಅಕ್ರಮ ಚಿನ್ನ ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ವಿಮಾನ‌ ನಿಲ್ದಾಣಕ್ಕೆ ಬಂದಿದ್ದಾನೆ. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. …

Read More »

ಕರ್ನಾಟಕ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುತ್ತೆ: ಜಗದೀಶ್ ಶೆಟ್ಟರ್

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತೀ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ.1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತಾ ದಾಪುಗಾಲು ಇಡುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಬೆಂಗಳೂರು ನಗರದಲ್ಲಿ ಲಘು …

Read More »

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!!

ಕಿತ್ತೂರು ತಾಲೂಕಿನ ವೈದ್ಯರಿಗೆ Thermos ವಿತರಿಸಿ ವೈದ್ಯರ ಸೇವೆಯನ್ನು ಗುಣಗಾನ ಮಾಡಿದ ಪೆಂಡಾಲ್ ಗುತ್ತಿಗೆದಾರ ಪಕ್ಕಿರಪ್ಪ ಮುರಗೋಡ..!! ಕಿತ್ತೂರು :ಗುರುವಾರ ದಂದು ಕಿತ್ತೂರು ಪಟ್ಟಣದಲ್ಲಿರುವ ಕಲ್ಮಠ ಸಭಾಭವನದಲ್ಲಿ ವೈದ್ಯರ ದಿನಾಚರಣೆ ನಿಮಿತ್ಯ ಸತ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ರಾಜಗುರು ಸಂಸ್ಥಾನ ಕಲ್ಮಠದ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಿತ್ತೂರು ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ತಾಲೂಕಿನ ಗಣ್ಯ ವ್ಯಕ್ತಿಗಳು ಮತ್ತು ಪೆಂಡಾಲ್ ಗುತ್ತಿಗೆದಾರರು ಆದ ಪಕ್ಕಿರಪ್ಪ …

Read More »