Breaking News
Home / 2021 / ಆಗಷ್ಟ್ / 03 (page 3)

Daily Archives: ಆಗಷ್ಟ್ 3, 2021

ಶರಾವತಿಗೆ ಕೆಪಿಸಿಯಿಂದ ಬಾಗಿನ ಅರ್ಪಣೆ

ಕಾರ್ಗಲ್: ನಾಡಿಗೆ ಬೆಳಕು ನೀಡಲು ಲಿಂಗನಮಕ್ಕಿ ಅಣೆಕಟ್ಟೆಯ ಒಡಲಿನಲ್ಲಿ ಭರ್ತಿಯಾಗುವ ಶರಾವತಿಗೆ ಸೋಮವಾರ ಕೆಪಿಸಿ ಇಲಾಖೆಯ ಪರವಾಗಿ ಬಾಗಿನ ಸಮರ್ಪಿಸಲಾಗುತ್ತಿದೆ ಎಂದು ಕೆಪಿಸಿ ಮುಖ್ಯ ಎಂಜಿನಿಯರ್ ನಾರಾಯಣ ಗಜಕೋಶ್ ತಿಳಿಸಿದರು. ಇಲ್ಲಿಗೆ ಸಮೀಪದ ಲಿಂಗನಮಕ್ಕಿ ಜಲಾಶಯದಲ್ಲಿ ಸೋಮವಾರ ಶರಾವತಿ ನದಿಗೆ ಬಾಗಿನ ಸಮರ್ಪಿಸಿ ಅವರು ಮಾತನಾಡಿದರು. ‘ಸಮುದ್ರ ಮಟ್ಟದಿಂದ ಗರಿಷ್ಠ 1,819 ಅಡಿ ಎತ್ತರದವರೆಗೂ ಜಲಸಂಗ್ರಹ ಸಾಮರ್ಥ್ಯವಿರುವ ಲಿಂಗನಮಕ್ಕಿ ಜಲಾಶಯದಲ್ಲಿ, 1,795 ಅಡಿ ನೀರು ಭರ್ತಿಯಾದಾಗ ಜಲಾಶಯದ ಅರ್ಧ ಭಾಗ …

Read More »

ಕಾಫಿ ವ್ಯಾಪಾರದಲ್ಲಿ 1 ಕೋಟಿ ನಷ್ಟ: ಚಿಕ್ಕಮಗಳೂರಿನ ವ್ಯಾಪಾರಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಬೆಂಗಳೂರು: ಕಾಫಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದ ಕಾರಣ ಶಾಕೀರ್ ಅಹ್ಮದ್(28) ಎಂಬ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಖಾಸಗಿ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 1 ಕೋಟಿಗೂ ಹೆಚ್ಚು ನಷ್ಟ ಅನುಭವಿಸಿದ್ದ ಶಾಕೀರ್ ಅಹ್ಮದ್ ಜುಲೈ 13ರಿಂದ ನಾಪತ್ತೆಯಾಗಿದ್ದಾರೆಂದು ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜುಲೈ 29ರಿಂದ ವಜ್ರೇಶ್ವರಿ ಲಾಡ್ಜ್ನಲ್ಲಿ ತಂಗಿದ್ದ ಶಾಕೀರ್, ಇಂದು ಮಧ್ಯಾಹ್ನ ಊಟಕ್ಕೆ ಹೊರ ಬರದಿದ್ದಾಗ ಲಾಡ್ಜ್ ಸಿಬ್ಬಂದಿ …

Read More »

ಹೆಂಡತಿಯೊಂದಿಗೆ ಜಗಳವಾಡಿ, ಕುತ್ತಿಗೆಗೆ ಇರಿದು ಕೊಂದ ಗಂಡ..

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚೂರಿಯಿಂದ ಪತ್ನಿಯ ಕುತ್ತಿಗೆಗೆ ಇರಿದು ಹತ್ಯೆ ಮಾಡಿದ ಪತಿಯನ್ನು ಚಂದ್ರ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಚಂದ್ರ ಲೇಔಟ್‌ನ ಗಂಗೊಂಡನಹಳ್ಳಿ ನಿವಾಸಿ ಸೈಯದ್ ಶಕೀರ್ (25) ಬಂಧಿತ. ಆತನ ಪತ್ನಿ ಬೇಬಿ ಆಯೇಷಾ (20) ಹತ್ಯೆಯಾದ ಮಹಿಳೆ. ಆರೋಪಿ ಸೈಯದ್​ ಕೆಲ ವರ್ಷಗಳ ಹಿಂದೆ ಆಯೇಷಾಳನ್ನು ವಿವಾಹವಾಗಿದ್ದ. ದಂಪತಿಗೆ 3 ಹಾಗೂ 5 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಇವರು ಕೋಲಾರದ ಬಾಗೆಪಲ್ಲಿಯಿಂದ ಕೆಲ ಸಮಯದ …

Read More »

ಚಿತ್ರದುರ್ಗ: ಅತ್ಯಾಚಾರ ಪ್ರಕರಣದ ಬಗ್ಗೆ ವದಂತಿ ಹಬ್ಬಿಸಿ ಜೈಲು ಸೇರಿದ ಯುವಕ

ಚಿತ್ರದುರ್ಗ: ತಾಲ್ಲೂಕಿನ ಭರಮಸಾಗರ ಠಾಣೆಯ ವ್ಯಾಪ್ತಿಯ 13 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿಸಿ ಗೊಂದಲ ಸೃಷ್ಟಿಸಿದ ಆರೋಪದ ಮೇರೆಗೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರಾಜೇಂದ್ರನಗರದ ನಿವಾಸಿ ಎಸ್‌.ದರ್ಶನ್‌ (21) ಬಂಧಿತ ಆರೋಪಿ. ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ‘ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವ ಸಿಕ್ಕಿಬಿದ್ದ. ಆದರೆ, ಅವನಿಗೆ ₹ 10 ಸಾವಿರ ದಂಡ ಹಾಗೂ ಎರಡು …

Read More »

ಸಚಿವರ ಪಟ್ಟಿ ಫೈನಲ್: ನಾಳೆ ಪ್ರಮಾಣವಚನ ಸ್ವೀಕಾರ; ಸಂಪುಟಕ್ಕೆ 20-24 ಮಂತ್ರಿಗಳ ಸೇರ್ಪಡೆ..

ರಾಜ್ಯದ ಮುಖ್ಯಮಂತ್ರಿಯಾದ ದಿನದಿಂದ ಬಸವರಾಜ ಬೊಮ್ಮಾಯಿ ಅವರಿಗೆ ಕಬ್ಬಿಣದ ಕಡಲೆಯಾಗಿ ಕಾಡುತ್ತಿದ್ದ ಸಂಪುಟ ವಿಸ್ತರಣೆಗೆ ಕಡೆಗೂ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಬುಧವಾರ 20ರಿಂದ 24 ಸಚಿವರು ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತ ಎಂದು ಪಕ್ಷದ ಉನ್ನತ ಮೂಲಗಳಿಂದ ಗೊತ್ತಾಗಿದೆ. ಸೋಮವಾರ ರಾತ್ರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ …

Read More »

ಆತ್ಮಹತ್ಯಾ ತಡೆ ಸಹಾಯವಾಣಿ ‘ಸಹಾಯ್‌’ಗೆ ಕರೆಗಳ ಹೆಚ್ಚಳ

ಘಟನೆ 1: 2020ರ ಏಪ್ರಿಲ್‌-ಮೇ ತಿಂಗಳಲ್ಲಿ ಕೋವಿಡ್‌ ಲಾಕ್‌ಡೌನ್ ಆದ ಸಂದರ್ಭ. ವಿಮಾನ, ರೈಲು ಸೇವೆಗಳೆಲ್ಲ ಬಂದ್‌ ಆಗಿದ್ದವು. ಆಗ ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರ ಫ್ಲ್ಯಾಟ್‌ನಲ್ಲಿ ಇದ್ದು ಓದುತ್ತಿದ್ದ ಯುವಕನೊಬ್ಬನಿಗೆ ಎಲ್ಲೂ ಓಡಾಡಲಾಗದ ಸನ್ನಿವೇಶ ಜುಗುಪ್ಸೆ ತರಿಸಿತು. ಮನಸ್ಸಿನಲ್ಲಿ ಆತ್ಮಹತ್ಯೆಯ ಆಲೋಚನೆ ಸುಳಿಯಿತು. ನವದೆಹಲಿಯಲ್ಲಿದ್ದ ತಂದೆ-ತಾಯಿಗೆ ಕರೆ ಮಾಡಿದ ಆತ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ ಮಾಡಿರುವುದಾಗಿ ಹೇಳಿದ. ತಕ್ಷಣ ಆತನ ತಂದೆ-ತಾಯಿ ‘ಸಹಾಯ್‌’ ಹೆಲ್ಪ್‌ಲೈನ್‌ (08025497777)ಗೆ ಕರೆ ಮಾಡಿ ವಿಷಯ …

Read More »

ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ

ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಮಾನಿಯೊಬ್ಬರು ದೀರ್ಘದಂಡ ನಮಸ್ಕಾರ ಸಲ್ಲಿಸಿದರು. ಇಲ್ಲಿನ ಶ್ರೀ ಸಿದ್ಧಾರೂಢ ದೇವಸ್ಥಾನದಲ್ಲಿ ಬೆಲ್ಲದ ಅಭಿಮಾನಿ ರಾಘು ಹಿರೇಗೌಡರ ಎನ್ನವವರು ದೀರ್ಘ ದಂಡ ನಮಸ್ಕಾರ ಸೇವೆ ಸಲ್ಲಿಸಿದರು. ನಂತರ ವಿಶೇಷ ಪೂಜೆ ಸಲ್ಲಿಸಿ ಬೆಲ್ಲದ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥನೆ ಮಾಡಿದರು. ಅರವಿಂದ ಬೆಲ್ಲದ ಅವರು ಈ ಭಾಗದ ಅಭಿವೃದ್ಧಿಗೆ ಸೂಕ್ತ ವ್ಯಕ್ತಿಯಾಗಿದ್ದಾರೆ. ವಿಶೇಷ ಹಾಗೂ ವಿನೂತನ …

Read More »

ಕೆಲಸದ ಆಮಿಷವೊಡ್ಡಿ ಕರೆಸಿಕೊಂಡ ಭೂಪ; ಹಣ ದೋಚಿ ಪರಾರಿಯಾದ ಖದೀಮ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆಯೇ ಕೆಲಸ ಕಳೆದುಕೊಂಡು ಹಲವರು ಸಂಕಷ್ಟಕ್ಕೀಡಾಗಿದ್ದರೆ ಇನ್ನು ಹಲವರು ಕೆಲಸದ ಆಮಿಷವೊಡ್ಡಿ, ವಂಚನೆ ಮಾಡುವುದನ್ನೇ ಕಾಯಕವನ್ನಾಗಿಸಿಕೊಳ್ಳುತ್ತಿದ್ದಾರೆ. ಇಂಥದ್ದೇ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ಹೇಳಿ ಯುವಕನನ್ನು ಕರೆಸಿಕೊಂಡ ಖದೀಮನೊಬ್ಬ, ಆತನ ಬಳಿ ಇದ್ದ ಹಣ, ಎಟಿಎಂ, ಮೊಬೈಲ್, ಉಂಗುರಗಳನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾಜಿ ನಗರದಲ್ಲಿರುವ ಬಂಧನ್ ಬ್ಯಾಂಕ್ ಹೆಸರಲ್ಲಿ ರಾಜನ್ …

Read More »

ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪಗೆ ಮನವಿ

ಬೆಂಗಳೂರು : ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡಬೇಕೆಂದು ಮುನವಳ್ಳಿ ಬೆಂಬಲಿಗರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಗೆ ಎರಡು ಸಲ ಅನ್ಯಾಯ ಆಗಿದೆ. ಈ ಸಲ ಅನ್ಯಾಯ ಆಗದಂತೆ ಕ್ರಮವಹಿಸುವಂತೆ ವೀರಶೈವ ಲಿಂಗಾಯತರ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವಕಾಶ ನೀಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದ ಬಳಿ : ಪರಣ್ಣ ಮುನವಳ್ಳಿ ಬೆಂಬಲಿಗರು ಘೋಷಣೆ …

Read More »

ಡಿಸಿಪಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆ

ಬೆಂಗಳೂರು, ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಇಂದು ಎಲ್ಲಾ ವಿಭಾಗದ ಡಿಸಿಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಕೋವಿಡ್ ನಿಯಮ ಪಾಲಿಸದೆ ಜನರು ಮಾರುಕಟ್ಟೆ, ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತೆಗೆದುಕೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಆಯುಕ್ತರು ಚರ್ಚಿಸಿದರು. ರಾಜಧಾನಿ ಬೆಂಗಳೂರಿಗೆ ಮತ್ತೆ ಕೊರೊನಾ …

Read More »