Daily Archives: ಆಗಷ್ಟ್ 6, 2021

ವಿಸ್ಕಿ ಬಾಟಲ್ ಕಾಣಿಸುತ್ತಿಲ್ಲ ಎಂದು ತನಿಖೆ ಆರಂಭ

ವಿಸ್ಕಿ ಬಾಟಲ್ ಕಾಣಿಸಲಿಲ್ಲ ಎಂದು ಯುಎಸ್ ತನಿಖೆಯು ಬಹಿರಂಗಪಡಿಸಿದೆ. ಖಜಾನೆ ಇಲಾಖೆಯ ಪ್ರಕಾರ, ವಿಸ್ಕಿಯ ಬೆಲೆ $ 5,800 (ರೂ. 4.30 ಲಕ್ಷ) ಮತ್ತು ಜಪಾನ್ ಸರ್ಕಾರವು ಆಗಿನ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊಗೆ 2019 ರಲ್ಲಿ ಉಡುಗೊರೆಯಾಗಿ ನೀಡಿತು. ಅಧಿಕೃತ ಅಂಕಿಅಂಶಗಳಲ್ಲಿ ಬಾಟಲ್ ಕಾಣಿಸದಿರುವುದಕ್ಕೆ ಅಧಿಕಾರಿಗಳು ಪ್ರಸ್ತುತ ಕಾಳಜಿ ವಹಿಸಿದ್ದಾರೆ. ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮತ್ತು ವಿಸ್ಕಿ ಬಾಟಲ್ ಕಾಣೆಯಾದ ಬಗ್ಗೆ ತನಿಖೆ ಆರಂಭಿಸಿದರು. ಪೊಂಪಿಯೊ …

Read More »

ಒಂದೇ ಬಾರಿ 300 ಬರ್ಗರ್‌ ಮತ್ತು 100 ಡ್ರಿಂಕ್ಸ್ ಆರ್ಡರ್‌ ಮಾಡಿದ ಗ್ರಾಹಕ

ಆಸ್ಟ್ರೇಲಿಯಾದಲ್ಲಿರುವ ಮ್ಯಾಕ್‌ಡೊನಾಲ್ಡ್ಸ್‌ ಸ್ಟೋರ್‌ ಒಂದರ ಸಿಬ್ಬಂದಿ ಒಮ್ಮೆಲೇ 3,400 ಡಾಲರ್‌ (1.86 ಲಕ್ಷ ರೂಪಾಯಿ) ಮೌಲ್ಯದ ಆರ್ಡರ್‌ ಬಂದಿದ್ದನ್ನು ನೋಡಿ ದಂಗು ಬಡಿದಿದ್ದಾರೆ. ಆರ್ಡರ್‌ನಲ್ಲಿ 300ಕ್ಕೂ ಹೆಚ್ಚು ಬರ್ಗರ್‌ಗಳು ಹಾಗೂ 100ಕ್ಕೂ ಹೆಚ್ಚು ಪಾನೀಯಗಳಿದ್ದು, ಜೊತೆಗೆ 20 ನಗೆಟ್‌ಗಳು, ಫ್ರೈಸ್‌ನ 69 ಪ್ಯಾಕ್‌ಗಳು, ವೆನಿಲ್ಲಾ ಕೋಕ್‌ ಹಾಗೂ ಚೀಸ್‌ಗಳನ್ನೂ ಸಹ ಹೇಳಲಾಗಿದೆ.   ಈ ಜಂಬೋ ಆರ್ಡರ್‌ನ ವಿವರಗಳನ್ನು ಮ್ಯಾಕ್‌ಡೊನಾಲ್ಡ್ಸ್‌ನ ಸಿಬ್ಬಂದಿಯಲ್ಲಿ ಒಬ್ಬರು ಫೇಸ್ಬುಕ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

Read More »

ಕಾನೂನು ಹೋರಾಟದಲ್ಲಿ ರಿಲಯನ್ಸ್‌ ವಿರುದ್ಧ ಅಮೆಜಾನ್‌ಗೆ ಜಯ

ನವದೆಹಲಿ: ಭಾರತದ ಆನ್‌ಲೈನ್‌ ವ್ಯಾಪಾರದ ಪ್ರತಿ ಸ್ಪರ್ಧಿಗಳಾದ ಮುಕೇಶ್‌ ಅಂಬಾನಿ ಮತ್ತು ಜೆಫ್ ಬೆಜೋಸ್‌ ನಡುವಿನ ಕಾನೂನು ಹೋರಾಟದಲ್ಲಿ ಜೆಫ್ ಗೆ ಜಯದಕ್ಕಿದೆ. ಫ್ಯೂಚರ್‌ ಗ್ರೂಪ್‌ನ ರಿಟೇಲ್‌ ಆಸ್ತಿಯನ್ನು ಖರೀದಿಸುವ 3.4 ಶತ ಕೋಟಿ ಡಾಲರ್‌ ಮೊತ್ತದ ಒಪ್ಪಂದವನ್ನು ರಿಲಯನ್ಸ್‌ ಕಂಪನಿ ಮುಂದುವರಿ ಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. ಇದರಿಂದಾಗಿ ಅಮೆಜಾನ್‌ಗೆ ದೊಡ್ಡ ಯಶಸ್ಸುಸಿಕ್ಕಂತಾಗಿದೆ. ತನ್ನ ಪಾಲುದಾರ ಸಂಸ್ಥೆ ಫ್ಯೂಚರ್‌ ಗ್ರೂಪ್‌ ವಿರುದ್ಧ ಅಮೆಜಾನ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ತನ್ನ ರಿಟೇಲ್‌ …

Read More »

ಖಾಲಿ ಜಾಗಗಳೇ ಇವರ ಟಾರ್ಗೆಟ್​; 600 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಿದ ಭೂಗಳ್ಳರ ಜಾಲ ಭೇದಿಸಿದ ಸಿಐಡಿ

ಬೆಂಗಳೂರು: ರಾಜಧಾನಿ ಅಥವಾ ಸುತ್ತಮುತ್ತ ನಿಮ್ಮ ಖಾಲಿ ಜಾಗ ಇದ್ದು ದೀರ್ಘ ಸಮಯದಿಂದ ಆ ಕಡೆ ಹೋಗಿರದಿದ್ದರೆ ಒಮ್ಮೆ ನೋಡಿಕೊಂಡು ಬನ್ನಿ. ಏಕೆಂದರೆ ವಾರಸುದಾರರು ಸುಳಿಯದ ಖಾಲಿ ಜಾಗಗಳನ್ನು ಗುರುತಿಸಿ ಅವುಗಳನ್ನು ಕಬಳಿಸುವ ಭೂಗಳ್ಳರ ಜಾಲವೊಂದಿದೆ. ಹೀಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಿರುವ ಭೂಗಳ್ಳರ ಜಾಲವೊಂದನ್ನು ಸಿಐಡಿ ಪೊಲೀಸರು ಭೇದಿಸಿದ್ದಾರೆ. ಕಂಪನಿಯೊಂದರ ಜಾಗವನ್ನು ಕಬಳಿಸಲು ಯತ್ನಿಸಿದ್ದ ಪ್ರಕರಣವನ್ನು ಭೇದಿಸಿರುವ ಸಿಐಡಿ ಪೊಲೀಸರು, ಭೂಗಳ್ಳರ ಜತೆ ಕೈಜೋಡಿಸಿದ್ದ ನಾಲ್ವರು ವಕೀಲರನ್ನೂ …

Read More »

ಆಸ್ತಿ ಗಳಿಕೆ ವಿಚಾರವಾಗಿ ಐಟಿ ಬದಲು ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಇಡಿ ಅಧಿಕಾರಿಗಳು ಐಎಂಎ ವಿಚಾರಕ್ಕೆ ದಾಳಿ ಮಾಡಿಲ್ಲ, ಆಸ್ತಿ ವಿಚಾರವಾಗಿ ದಾಳಿ ಮಾಡಿದ್ದಾರೆ ಎಂದು ನಮ್ಮ ಶಾಸಕರಾದ ಜಮೀರ್ ಅಹಮದ್ ಹೇಳಿದ್ದಾರೆ. ಆಸ್ತಿ ಗಳಿಕೆ ವಿಚಾರವಾಗಿ ಆದಾಯ ಇಲಾಖೆ (IT) ಬದಲು ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿರುವುದು ಅಚ್ಚರಿ ಮೂಡಿಸಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ದಾಳಿಗೂ …

Read More »

ಜಿಲ್ಲೆಯಲ್ಲಿ ಪ್ರವಾಹದಿಂದ 7,800 ಕೋಟಿ ರೂಪಾಯಿ ಹಾನಿ: ವಿವರ ನೀಡಿದ ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಪ್ರವಾಹದಿಂದ 7800 ಕೋಟಿ ರೂಪಾಯಿ ಹಾನಿ ಆಗಿದೆ ಎಂದು ನೆರೆಪರಿಹಾರ ಕಾಮಗಾರಿ, ಕೊವಿಡ್ ನಿರ್ವಹಣೆ ಪರಿಶೀಲನೆ ಸಭೆ ಬಳಿಕ ಇಂದು (ಆಗಸ್ಟ್ 6) ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಈ ಬಾರಿ 51 ಕಾಳಜಿ ಕೇಂದ್ರಗಳಲ್ಲಿ 38 ಸಾವಿರ ಜನ ಆಶ್ರಯ ಪಡೆದಿದ್ದಾರೆ. ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಜನರು, ಜಾನುವಾರುಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಎಂಟು ಹತ್ತು ದಿನ …

Read More »

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ವಿದೇಶಿ ಪ್ರಜೆ ಸೇರಿ ನಾಲ್ವರು ಬಂಧನ, ₹6 ಕೋಟಿ ಮೌಲ್ಯದ ಡ್ರಗ್ಸ್​ ವಶ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​ ವಶಕ್ಕೆ ಪಡೆದಿದ್ದಾರೆ. ಇನ್ನು, ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ವಿದೇಶಿ ಪ್ರಜೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. 15 ಕೆಜಿ ಹಶೀಶ್ ಎಣ್ಣೆ, 10 ಕೆಜಿ ಗಾಂಜಾ, ಎಕ್ಸ್​​ಟಸಿ ಮಾತ್ರೆ ಜಪ್ತಿ ಮಾಡಲಾಗಿದೆ. ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಿಂಗ್​​ ಪಿನ್​ ಈಗ ಸಿಸಿಬಿ ಪೊಲೀಸರ …

Read More »

ಕರ್ನಾಟಕ-ಮಹಾರಾಷ್ಟ್ರ ಜಲ ವಿವಾದ: ಮಾತುಕತೆ ಮೂಲಕ ಪರಿಹರಿಸಿಕೊಳ್ಳಲು ಪವಾರ್-ಬೊಮ್ಮಾಯಿ ಚರ್ಚೆ

ಬೆಂಗಳೂರು, ಆ. 6: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಿರಿಯ ರಾಜಕೀಯ ಮುತ್ಸದ್ದಿ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಶುಕ್ರವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉಭಯ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. `ಕರ್ನಾಟಕ ರಾಜ್ಯ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಇಬ್ಬರು ಮುಖಂಡರು ಸಮಾಲೋಚನೆ …

Read More »

ಆಗಸ್ಟ್ 23ರಿಂದ ಶಾಲಾ -ಕಾಲೇಜು ಆರಂಭ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಆಗಸ್ಟ್ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ತಿಳಿಸಿದರು. ಸಿಎಂ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿ ಕೋವಿಡ್‌ ನಿರ್ವಹಣೆ ಮತ್ತು ಶಾಲೆ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ …

Read More »

ಕೆಲಸ ಮಾಡುತ್ತಿದ್ದ ಅಂಗಡಿಯಿಂದಲೇ ಚಿನ್ನ ಕದ್ದು ಅಡವಿಟ್ಟ ಖದೀಮ ಈಗ ಪೊಲೀಸರ ಅತಿಥಿ

ಹುಣಸೂರು: ಐಷಾರಾಮಿ ಜೀವನಕ್ಕೆ ಮಾರು ಹೋಗಿದ್ದ ಯುವಕನೊರ್ವ ಕೆಲಸ ಮಾಡತ್ತಿದ್ದ ಚಿನ್ನಾಭರಣದ ಅಂಗಡಿಯಲ್ಲೇ ಚಿನ್ನಾಭರಣ ಕದ್ದು,ಅಡವಿಟ್ಟಿದ್ದ ಘಟನೆಯನ್ನು ಹುಣಸೂರು ನಗರ ಠಾಣೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಣಸೂರು ನಗರದ ಜೆಎಲ್‌ ಬಿ ರಸ್ತೆಯ ಪೃಥ್ವಿ ಜ್ಯುವಲರ್‍ಸ್ ಅಂಗಡಿಯಲ್ಲಿ ನಡೆದಿದ್ದು, ತಾಲೂಕಿನ ರತ್ನಪುರಿಯ ಶಿವರಾಮ್ ಎಂಬಾತನೇ ಅನ್ನ ಹಾಕಿದ ಮನೆಗೆ ಕನ್ನ ಹಾಕಿ ಬಂಧನಕ್ಕೊಳಗಾದಾತ. ಈತನಿಂದ ಸುಮಾರು 25 ಲಕ್ಷರೂ ಬೆಲೆ ಬಾಳುವ 503 ಗ್ರಾಂ.ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿ …

Read More »