Breaking News
Home / 2021 / ಆಗಷ್ಟ್ / 06 (page 2)

Daily Archives: ಆಗಷ್ಟ್ 6, 2021

ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯ ಅಕ್ಕಿ ವಶ

ಚಿತ್ರದುರ್ಗ: ರಾಂಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಪೊದೆಯಲ್ಲಿ ಬಚ್ಚಿಟ್ಟಿದ್ದ 146 ಚೀಲ ಅನ್ನಭಾಗ್ಯದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ಬಳಿ ಅಕ್ಕಿ ಜಪ್ತಿ ಮಾಡಲಾಗಿದ್ದು, ಆರೋಪಿ ರಾಮು ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಂಪುರ ಪಿಎಸ್‌ಐ ಗಾದಿಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಲಕ್ಷಾಂತರ ಬೆಲೆ ಬಾಳುವ ಚಿನ್ನ, ನಗದು ಕಳವು ಇನ್ನು ಬೆಂಗಳೂರಿನ ಬಾಗಲಗುಂಟೆ ಬಳಿಯ ಕಲ್ಯಾಣನಗರದಲ್ಲಿ …

Read More »

ವಿಜಯಪುರ: ಕರ್ನಾಟಕ ವಿಕಾಸ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ವಿಫಲ‌ ಯತ್ನ

ವಿಜಯಪುರ: ಜಿಲ್ಲೆಯಲ್ಲಿ ಕಳ್ಳರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ‌ನಡೆಸಿದ ಘಟನೆ ಜರುಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶುಕ್ರವಾರ ಕೆವಿಜಿ ಬ್ಯಾಂಕ್ ಶಾಖೆ ಕಟ್ಟಡದ ಹಿಂಬದಿಯಿಂದ ಕಿಟಕಿ ಮುರಿದು ಕಳ್ಳರು ಒಳ ನುಗ್ಗಿದ್ದಾರೆ. ಬ್ಯಾಂಕ್ ಒಳಗೆ ಜಾಲಾಡಿ ಹಣ ಹಾಗೂ ಚಿನ್ನಕ್ಕಾಗಿ ತಡಕಾಡಿದರೂ ಏನೂ ಸಿಗದೇ ಕಳ್ಳರು ಕಾಲ್ಕಿತ್ತಿದ್ದಾರೆ. ಕಳ್ಳತನ ಮಾಡುವ ತಮ್ಮ‌ ಕೃತ್ಯದ ಕುರಿತು ಯಾವ ದಾಖಲೆಯೂ ಸಿಗದಂತೆ ಬ್ಯಾಂಕ್ ಗೆ ಅಳವಡಿಸಿದ್ದ …

Read More »

ಮೊಬೈಲ್ ಫೋನ್ ಸಾಗಿಸುತ್ತಿದ್ದ ಲಾರಿ ದರೋಡೆ; 6 ಕೋಟಿ ಮೌಲ್ಯದ ಎಂಐ ಫೋನ್ ಕಳ್ಳತನ

ಕೋಲಾರ: ಮೊಬೈಲ್ ಫೋನ್ ಸಾಗಿಸುತ್ತಿದ್ದ ಲಾರಿ ದರೋಡೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗ್ರಾಮ ದೇವರಾಯಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರೆ 75 ರಲ್ಲಿ ನಡೆದಿದೆ. ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ದರೋಡೆ ಆಗಿದೆ ಎಂದು ತಿಳಿದುಬಂದಿದೆ. ಎಂಐ ಕಂಪನಿಗೆ ಸೇರಿದ ಮೊಬೈಲ್ ಫೋನ್‌ಗಳ ದರೋಡೆ ಮಾಡಲಾಗಿದ್ದು, ಮೊಬೈಲ್​ನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಕೃತ್ಯ ನಡೆದಿದೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ …

Read More »

ದೀಪಿಕಾ ಪಡುಕೋಣೆ ಮಾಜಿ ಮ್ಯಾನೇಜರ್‌ಗೆ ಸಂಕಟ: ಬಂಧನ ಖಾಯಂ!

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ದೀಪಿಕಾ ಪಡುಕೋಣೆ ಮಾಜಿ ಮ್ಯಾನೇಜರ್‌ ಕರಿಶ್ಮಾ ಪ್ರಕಾಶ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಬಾಲಿವುಡ್ ಡ್ರಗ್ಸ್ ಪ್ರಕರಣದಲ್ಲಿ ಕರಿಶ್ಮಾ ಪ್ರಕಾಶ್ ಸಹ ಆರೋಪಿ ಆಗಿದ್ದು, ಬಂಧನದಿಂದ ಬಚಾವಾಗಲು ಕರಿಶ್ಮಾ ಪ್ರಕಾಶ್ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಕರಿಶ್ಮಾ ಪ್ರಕಾಶ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ರದ್ದು ಮಾಡಿದೆ. ಹೀಗಾಗಿ ಕರಿಶ್ಮಾಗೆ ಬಂಧನದ ಭೀತಿ ಹೆಚ್ಚಳವಾಗಿದೆ. ಕಳೆದ ಅಕ್ಟೋಬರ್‌ನಲ್ಲಿಯೇ ನಿರೀಕ್ಷಣಾ ಜಾಮೀನು ಕೋರಿ ಕರಿಶ್ಮಾ ಅರ್ಜಿ …

Read More »

ಹೊಂಬಾಳೆಯ 11ನೇ ಸಿನಿಮಾ ಘೋಷಣೆ: ಹೊಸ ಕಿಚ್ಚಿನೊಂದಿಗೆ ಬಂದ ರಿಷಬ್ ಶೆಟ್ಟಿ

ಕನ್ನಡದಲ್ಲಿ ಹಿಟ್ ಚಿತ್ರಗಳನ್ನು ನಿರ್ಮಿಸುತ್ತಾ ಬಂದಿರುವ ಹೊಂಬಾಳೆ ಫಿಲ್ಮ್ಸ್ ಇಂದು ಹೊಸ ಚಿತ್ರವನ್ನ ಘೋಷಿಸುವುದಾಗಿ ತಿಳಿಸಿತ್ತು, ಅದರಂತೆ ಚಿತ್ರದ ಹೆಸರು ಹಾಗೂ ತಂಡವನ್ನು ಘೋಷಿಸಿದ್ದು, ಅಭಿಮಾನಿಗಳಿಗೆ ಭರ್ಜರಿ ಸುದ್ದಿ ನೀಡಿದೆ. ತನ್ನ ಹನ್ನೊಂದನೇ ಚಿತ್ರದ ಮೊದಲ ಪೋಸ್ಟರ್​ಅನ್ನು ಬಿಡುಗಡೆಗೊಳಿಸಿರುವ ಹೊಂಬಾಳೆಯ ನೂತನ ಚಿತ್ರಕ್ಕೆ ನಾಯಕನಾಗಿ ರಿಷಬ್ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನೂ ರಿಷಬ್ ಶೆಟ್ಟಿ ಹೊತ್ತಿದ್ದು, ಚಿತ್ರಕ್ಕೆ ‘ಕಾಂತಾರ’ ಎಂದು ನಾಮಕರಣ ಮಾಡಲಾಗಿದೆ. ಪ್ರಸ್ತುತ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಅಡಿಯಲ್ಲಿ …

Read More »

ಹಿರಿಯ ನಾಗರಿಕರು, ವಿಕಲಚೇತನರಿಗೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್‌ ಬಿಡುಗಡೆ

ಎಲ್ಲೆಲ್ಲೂ ಎಲೆಕ್ಟ್ರಿಕ್ ವಾಹನಗಳದ್ದೇ ಭರಾಟೆಯಾಗಿರುವ ಈ ನಡುವೆ ನಾ ಮುಂದು ತಾ ಮುಂದು ಎಂಬಂತೆ ಕಂಪನಿಗಳು ಇವಿ ವಾಹನಗಳನ್ನು ಲಾಂಚ್‌ ಮಾಡುತ್ತಿವೆ. ಈ ಸಾಲಿಗೆ ತನ್ನದೊಂದು ವಾಹನ ಬಿಡುಗಡೆ ಮಾಡಿರುವ ಕೋಮಾಕಿ ಎಕ್ಸ್‌ಜಿಟಿ-ಎಕ್ಸ್‌5 ಹೆಸರಿನಲ್ಲಿ ಹಿರಿಯರಿಗೆ ಹಾಗೂ ವಿಕಲಚೇತನರಿಗೆಂದು ವಿಶೇಷ ಸ್ಕೂಟರ್‌ ಹೊರತಂದಿದೆ. ಈ ಸ್ಕೂಟರ್‌ನ ಅಧಿಕೃತ ಲಾಂಚ್‌ ಮುನ್ನ 1000ಕ್ಕೂ ಹೆಚ್ಚು ಗ್ರಾಹಕರಿಗೆ ಮಾರಾಟ ಮಾಡಲಾಗಿದೆ. ತನ್ನ ಅಧಿಕೃತ ಜಾಲತಾಣದಲ್ಲಿ ಉಚಿತವಾಗಿ ಬುಕ್ ಮಾಡಬಲ್ಲ ಈ ಸ್ಕೂಟರ್‌ ಭಾರತದಲ್ಲಿರುವ …

Read More »

ಬೆಳಗಾವಿ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿ

ಬೆಂಗಳೂರು – ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಜ್ಞರ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ …

Read More »

ನಾನು ರಾಜಕೀಯ ಸೇರುವುದು ಸತ್ಯಕ್ಕೆ ದೂರವಾದ ಸಂಗತಿ: ರವಿ ಡಿ. ಚನ್ನಣ್ಣವರ್

ನವದೆಹಲಿ: ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಭರವಸೆ ಎಂಬ ಪುಸ್ತಕವನ್ನು ಬರೆಯುತ್ತಿದ್ದು, ಇದರ ಪ್ರಯುಕ್ತ ಇತ್ತೀಚೆಗೆ ನನ್ನ ಇತ್ತೀಚಿನ ರಜೆ ದಿನಗಳಲ್ಲಿ ನನ್ನ ಹಳೆಯ ಸ್ನೇಹಿತರ ಮನೆಗಳನ್ನು ದೇವಸ್ಥಾನಗಳನ್ನು, ಶ್ರೀ ಮಠಗಳನ್ನು ಭೇಟಿಯಾಗಿ ಮಾಹಿತಿ ಕಲೆಹಾಕುತ್ತಿದ್ದೇನೆ. ಆ ಸಂದರ್ಭದ ವಿವಿಧ ಫೋಟೋಗಳನ್ನು ಉಪಯೋಗಿಸಿಕೊಂಡು ಕೆಲವು ಮಾಧ್ಯಮಗಳು ವಿಶೇಷವಾದ ಅರ್ಥವನ್ನು ಕಲ್ಪಸಿ ಬಿತ್ತರಿಸುತ್ತಿವೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. …

Read More »

ರಾಜೀವ್ ಗಾಂಧಿ ಖೇಲ್ ರತ್ನ ಅಲ್ಲ ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ

ನವದೆಹಲಿ: ದೇಶದಲ್ಲಿ ಕ್ರೀಡಾ ಪಟುಗಳಿಗೆ ನೀಡುವ ಅತ್ಯುನ್ನತ ಪುರಸ್ಕಾರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಾವಣೆಯಾಗಿದೆ. ಇನ್ನು ಮುಂದೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿಯೆಂದು ಮರುನಾಮಕರಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ. ದೇಶದಾದ್ಯಂತ ಹಲವು ಜನ ನನಗೆ ಇನ್ನು ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಅವರ ಹೆಸರಿನಲ್ಲಿ ನೀಡಿ ಎಂದು ಮನವಿ ಸಲ್ಲಿಸಿದ್ದರು. ಅವರ …

Read More »

ವೈನ್‌ಶಾಪ್ ಮುಚ್ಚಿಸಿ – ಜನಜಾಗೃತಿ ವೇದಿಕೆ ಆಗ್ರಹ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ, ಕಣಿಯೂರು ಗ್ರಾಮದ, ಪದ್ಮುಂಜ ವೃತ್ತದ ಬಳಿ ಕೊಲ್ಲಾಜೆ ಕಾಂಪ್ಲೆಕ್ಸ್ನಲ್ಲಿ ತೆರೆಯಲಾದ ವೈನ್‌ಶಾಪ್/ಬಾರ್‌ಎಂಡ್ ರೆಸ್ಟೋರೆಂಟ್‌ನ್ನು ಕೂಡಲೇ ಮುಚ್ಚಿಸುವಂತೆ ಜನಜಾಗೃತಿ ವೇದಿಕೆಯು ತಹಶೀಲ್ದಾರ ಮಹೇಜ್‌ಜೆ. ರವರಿಗೆ ಮನವಿ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಮೂಲಕ ಜನಜಾಗೃತಿ ವೇದಿಕೆಯ ಪ್ರಾಯೋಜಕತ್ವದಲ್ಲಿ ಸಾವಿರಾರು ಮದ್ಯವರ್ಜನ ಶಿಬಿರಗಳನ್ನು ಬೆಳ್ತಂಗಡಿ ತಾಲೂಕಿನಲ್ಲಿಯೇ ನಡೆಸುತ್ತಿದ್ದು, ಇದರಲ್ಲಿ ಪಾನಮುಕ್ತರಾದವರು ಮರು ವ್ಯಸನಕ್ಕೆ ಬಲಿ ಬೀಳಲು ವೈನ್‌ಶಾಪ್ ಕಾರಣವಾಗುತ್ತದೆ. ಹಳ್ಳಿಯ ಅಭಿವೃದ್ಧಿಯ ದೃಷ್ಟಿಯಿಂದ ಮಹಿಳೆಯರು ಮತ್ತು …

Read More »