Breaking News
Home / 2021 / ಆಗಷ್ಟ್ / 09 (page 4)

Daily Archives: ಆಗಷ್ಟ್ 9, 2021

ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದಶಾಸಕ ಸತೀಶ್ ಜಾರಕಿಹೊಳಿ

ಗೋಕಾಕ: ರಾಜ್ಯ ಸರ್ಕಾರದ ಬಿಜೆಪಿ ನಾಯಕರಿಂದ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ …

Read More »

ಸಾರ್ವಜನಿಕ ಗಣೇಶೋತ್ಸವ ರದ್ದು ಮಾಡಬೇಡಿ

ಭಕ್ತಿ ಹಾಗೂ ಭಾವೈಕ್ಯತೆ ಹಿನ್ನೆಲೆಯಲ್ಲಿ ಬಾಲ ಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಸಾರ್ವಜನಿಕ ಗಣೇಶೋತ್ಸವ ಎಲ್ಲರ ಅಚ್ಚುಮೆಚ್ಚಿನ ಹಬ್ಬ. ಅಲ್ಲದೆ ಅದು ಶ್ರದ್ಧಾ ಭಾವನೆಗಳ ಜೊತೆಗೆ ಸಾಮಾಜಿಕ ಸುಧಾರಣೆಯ ಅಭಿಯಾನವೂ ಆಗಿದೆ. ದೇಶದಾದ್ಯಂತ ಅನೇಕ ಕಲಾವಿದರೂ, ಉದ್ಯಮ ರಂಗದವರೂ ಈ ಉತ್ಸವದ ಮೇಲೆ ಅವಲಂಬಿತರಾಗಿದ್ದಾರೆ. ಉದಯೋನ್ಮುಖ ಕಲಾವಿದರಿಗೆ ಪ್ರತಿಭೆ ಪ್ರದರ್ಶಿಸಲು ಈ ಉತ್ಸವವು ವೇದಿಕೆಯಾಗಿದೆ. ಕರೊನಾದಿಂದಾಗಿ ಈಗಾಗಲೇ ಹಲವಾರು ಉದ್ಯಮಗಳು ನೆಲಕಚ್ಚಿವೆ. ಕರೊನಾ ಸೋಂಕಿನ ಮೂರನೇ ಅಲೆ ಬರುವ …

Read More »

ಮುಂಬರುವ ೩ ವರ್ಷಗಳಲ್ಲಿ ಭಾರತದ ರಸ್ತೆಗಳು ಅಮೆರಿಕದ ರಸ್ತೆಗಳಂತೆ ಆಗಲಿವೆ ! – ಕೇಂದ್ರ ಸಚಿವ ನಿತಿನ ಗಡಕರಿ

 (ಗುಜರಾತ) – ಮುಂಬರುವ ೩ ವರ್ಷಗಳಲ್ಲಿ ಭಾರತದಲ್ಲಿ ಅಮೆರಿಕದ ರಸ್ತೆಗಳ ಗುಣಮಟ್ಟವಿರುವ ರಸ್ತೆಗಳು ಕಾಣಲು ಸಿಗಲಿವೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ ಗಡಕರಿ ಅವರು ಹೇಳಿದರು. ಅವರು ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಬನಾಸಕಾಂಠಾ ಜಿಲ್ಲೆಯ ದಿಸಾ ನಗರದಲ್ಲಿ ೩.೭೫ ಕಿ.ಮೀ. ಉದ್ದದ ನಾಲ್ಕು ಪಥದ ಮೇಲ್ಸೇತುವೆಯನ್ನು ಆನ್‌ಲೈನ್ ಮುಖಾಂತರ ಗಡಕರಿಯವರು ಉದ್ಘಾಟಿಸಿದರು. ದೇಶದಾದ್ಯಂತ ರಸ್ತೆ ನಿರ್ಮಾಣ ಕಾರ್ಯವು ಭರದಿಂದ ಸಾಗಿದೆ. ಪ್ರಸ್ತುತ, ಭಾರತದಲ್ಲಿ ಪ್ರತಿದಿನ …

Read More »

ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆಯನ್ನು (Bigg Boss Finale) ಕಿಚ್ಚ ಸುದೀಪ್​ ಅವರು ತುಂಬಾ ಲವಲವಿಕೆಯಿಂದ ನಡೆಸಿಕೊಟ್ಟಿದ್ದಾರೆ. ಯಾರು ವಿನ್ನರ್​ ಎಂಬುದನ್ನು ತಿಳಿಸುವುದರ ಜೊತೆಗೆ ಹಲವು ವಿಚಾರಗಳು ಈ ವೇದಿಕೆಯಲ್ಲಿ ಚರ್ಚೆ ಆಗಿವೆ. ಹತ್ತು ಹಲವು ತಮಾಷೆಯ ಮಾತುಗಳ ಮೂಲಕ ಇಡೀ ವಾತಾವರಣವನ್ನು ಸುದೀಪ್​ ರಂಗಾಗಿಸಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ಅರವಿಂದ್​ ಕೆಪಿ ಅವರ ಮದುವೆ ಬಗ್ಗೆ ಒಂದು ಪ್ರಶ್ನೆ ಎದುರಾಯಿತು. ಅದಕ್ಕೆ ಸಂಬಂಧಪಟ್ಟಂತೆ …

Read More »

ಬೆಳಗಾವಿಯ ಸುವರ್ಣ ಸೌಧಕ್ಕೆ ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

  ಬೆಳಗಾವಿಯ: ಸುವರ್ಣ ಸೌಧಕ್ಕೆಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ.ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ತೀರ್ಮಾನಿಸಿದ್ದೇನೆ” ಇಂದು ರವಿವಾರ ಸಂಜೆಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿತಮ್ಮನ್ನು ಭೆಟ್ಟಿಯಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯನಿಯೋಗಕ್ಕೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಈ ಭರವಸೆನೀಡಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರ,ಗಡಿ ಸಂರಕ್ಷಣಾ ಆಯೋಗ,ಸುವರ್ಣ ಸೌಧಕ್ಕೆ ಪ್ರಮುಖ ಕಚೇರಿಗಳ ಸ್ಥಳಾಂತರ ಹಾಗೂಮುಂಬಯಿ ಕರ್ನಾಟಕಕ್ಕೆ ಕಿತ್ತೂರುಕರ್ನಾಟಕ ಎಂದು ಮರು ನಾಮಕರಣಮಾಡುವ ಕುರಿತು ನಿಯೋಗವು ಬೊಮ್ಮಾಯಿ ಅವರೊಂದಿಗೆ ಚರ್ಚಿಸಿತು. …

Read More »

ಕನ್ನಡದ ಬಿಗ್ ಬಾಸ್ ಸೀಸನ್ 8ರ ವಿನ್ನರ್ ಮಂಜು ಪಾವಗಡ

ಬೆಂಗಳೂರು: ಕಲರ್ಸ್ ವಾಹಿನಿಯ ಮಜಾಭಾರತ ಕಾರ್ಯಕ್ರಮದ ಮೂಲಕ ಬೆಳಕಿಗೆ ಬಂದ ಹಾಸ್ಯ ಕಲಾವಿದ ಮಂಜು ಪಾವಗಡ 120 ದಿನಗಳ ಕಾಲ ನಡೆದ ಕನ್ನಡದ ಬಿಗ್ ಬಾಸ್ ಸೀಸನ್ 8ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಬಿಗ್​ಬಾಸ್ ಇತಿಹಾಸದಲ್ಲೇ ಅತಿ ಹೆಚ್ಚು 45 ಲಕ್ಷಕ್ಕೂ ಹೆಚ್ಚು ಮತಗಳಿಸಿದ ಮಂಜು ವಿಜೇತರೆಂದು ಭಾನುವಾರ ನಡೆದ ಫಿನಾಲೆಯಲ್ಲಿ ನಿರೂಪಕ ‘ಕಿಚ್ಚ’ ಸುದೀಪ್ ಘೋಷಣೆ ಮಾಡಿದರು. ಅಂತಾರಾಷ್ಟ್ರೀಯ ಖ್ಯಾತಿಯ ಬೈಕ್ ರೇಸರ್ ಉಡುಪಿಯ ಅರವಿಂದ್ ಕೆಪಿ 43 …

Read More »