Breaking News
Home / 2021 / ಆಗಷ್ಟ್ / 10 (page 3)

Daily Archives: ಆಗಷ್ಟ್ 10, 2021

ಇನ್ನು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿಗಿಲ್ಲ ಜಾಗ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕದಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆದೇಶವನ್ನೂ ಹೊರಡಿಸಲಾಗಿದೆ. ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು ಹಾಕದಂತೆ ತಾಕೀತು ಮಾಡಲಾಗಿದ್ದು, ಅನಗತ್ಯ ಖರ್ಚು ವೆಚ್ಚ ಮಾಡಂದಂತೆ ಸೂಚನೆ ನೀಡಲಾಗಿದೆ. ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ …

Read More »

ನೀರಜ್ ಚೋಪ್ರಾ ಜೀವನಾಧಾರಿತ ಚಿತ್ರದಲ್ಲಿ ಅಕ್ಷಯ್ ಕುಮಾರ್?

ಮುಂಬೈ: ಟೋಕಿಯೊ ಒಲಿಂಪಿಕ್ಸ್‌ನ ಜಾವೆಲಿನ್ ಥ್ರೋದಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತದ ನೀರಜ್ ಚೋಪ್ರಾ, ತಾರೆಯಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಹಿಂದೊಮ್ಮೆ ಸಂದರ್ಶನದಲ್ಲಿ ತಮ್ಮ ಜೀವನಾಧಾರಿತ ಚಿತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಲು ಬಯಸುವುದಾಗಿ ನೀರಜ್ ಚೋಪ್ರಾ ಹೇಳಿಕೆ ನೀಡಿದ್ದರು. ಈಗ ಇದಕ್ಕೆ ಸಮಾನವಾದ ಹೇಳಿಕೆಯನ್ನು ಅಕ್ಷಯ್ ಕುಮಾರ್ ನೀಡಿದ್ದಾರೆ.   ‘ನನ್ನ ಜೀವನಾಧಾರಿತ ಚಿತ್ರ ಮಾಡುವುದಾದರೆ ನೀರಜ್ ಚೋಪ್ರಾ ನಟಿಸಲಿ’ …

Read More »

ನನ್ನ ವಿಡಿಯೋ, ಫೋಟೋ ನೋಡಿ ಶಿಲ್ಪಾ ಶೆಟ್ಟಿ ಮೆಚ್ಚಿದ್ದರು’: ಶೆರ್ಲಿನ್ ಚೋಪ್ರಾ

ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಬಂಧನ ಆಗಿದೆ. ಈ ಕೇಸ್‌ನಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪಾತ್ರ ಇರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ. ರಾಜ್ ಕುಂದ್ರಾ ಆಪ್ ಅಥವಾ ಸಂಸ್ಥೆಗೂ ಶಿಲ್ಪಾ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಪ್ರಾಥಮಿಕ ತನಿಖೆ ವೇಳೆ ಸ್ಪಷ್ಟಪಡಿಸಿದ್ದರು. ಆದರೆ, ರಾಜ್ ಕುಂದ್ರಾ ಪತ್ನಿಗೆ ಈಗಲೇ ಕ್ಲೀನ್ ಚಿಟ್ ಕೊಡಲು ಸಾಧ್ಯವಿಲ್ಲ ಎಂದು ಸಹ ಹೇಳಿದ್ದರು. ಅಶ್ಲೀಲ ವಿಡಿಯೋ …

Read More »

ಬಿಜೆಪಿ ಸರ್ಕಾರ ಇನ್ನೂ ಭದ್ರವಾಗಿಲ್ಲ ದ್ವೇಷದ ರಾಜಕಾರಣ ಮಾಡುತ್ತಿದೆ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿಕಾರಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಳು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಅವರ ಸಾಧನೆ ಶೂನ್ಯವಾಗಿದೆ. ನಮ್ಮ ಸರ್ಕಾರವಿದ್ದಾಗಿನ ಯೋಜನೆಗಳ ಹೆಸರು ಹಾಗೂ ಪ್ಲೇಟ್ ಬದಲಾವಣೆ ಮಾಡುವ ಮೂಲಕ ಅದು ನನ್ನ ಸಾಧನೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. …

Read More »

ಬೊಮ್ಮಾಯಿ ಅವರ ಸಂಪುಟದಲ್ಲಿ ಕಚ್ಚಾಟ ಬಿಜೆಪಿ ಸರ್ಕಾರವು ಪೂರ್ಣಾವಧಿ ಅಧಿಕಾರ ನಡೆಸಲಾರದು: ಧ್ರುವನಾರಾಯಣ

ರಾಯಚೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ, ಹಲವು ಗೊಂದಲ, ಅಸಮಾಧಾನ, ಆಂತರಿಕ ಕಚ್ಚಾಟ ನಡೆಯುತ್ತಿರುದರಿಂದ ಬಿಜೆಪಿ ಸರ್ಕಾರವು ಪೂರ್ಣಾವಧಿ ಅಧಿಕಾರ ನಡೆಸಲಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು. ಸೋಮವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ, ಹಳೆ ಮೈಸೂರು ಭಾಗಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡಿಲ್ಲ. ಭ್ರಷ್ಟಾಚಾರ ಆರೋಪ …

Read More »

ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ‌ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ ಅವರು ನೂತನವಾಗಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ನೆರೆ ಹಾನಿ ವೀಕ್ಷಣೆ ಮಾಡಿ ಪರಿಹಾರ ಘೋಷಣೆ ಮಾಡುತ್ತಾರೆ ಮಾಡುತ್ತಾರೆ …

Read More »

ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 18ರಿಂದ 20ರಷ್ಟು ಹೆಚ್ಚಿಸುವ ಪ್ರಸ್ತಾವ?: ಶ್ರೀರಾಮುಲು

ಚಿತ್ರದುರ್ಗ: ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 18ರಿಂದ 20ರಷ್ಟು ಹೆಚ್ಚಿಸುವ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದೇನೆ. ಈ ಸಂಬಂಧ ಮಂಗಳವಾರ ಅಧಿಕಾರಿಗಳ ಸಭೆ ಕರೆದಿದ್ದು, ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಜನರಿಗೆ ಹೊರೆಯಾಗಲು ಬಿಡುವುದಿಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರದಲ್ಲಿ ಕೊವಿಡ್ 3ನೇ ಅಲೆ ತಡೆ ಮತ್ತು ಮಳೆ ಹಾನಿ ಪರಿಹಾರ ಬಗ್ಗೆ ಸೋಮವಾರ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. …

Read More »

ಮುಖಚಂಡಿಯ ಎಸ್​ಎಸ್​ಎಲ್​ಸಿ ಸಾಧಕಿಗೆ ಹೃದಯ ಕಾಯಿಲೆ: ಸಚಿವ ಗೋವಿಂದ ಕಾರಜೋಳ ಸ್ಪಂದನೆ

ಬಾಗಲಕೋಟೆ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ತಾಲ್ಲೂಕಿನ ಮುಖಚಂಡಿ ತಾಂಡಾದ ದುರ್ಗಾದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಬಸಪ್ಪ ಹುಡೇದ ಅವರಿಗೆ ಹೃದಯ ಸಂಬಂಧಿ ಇರುವ ಕಾಯಿಲೆ ದೃಢಪಟ್ಟ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ವಿದ್ಯಾರ್ಥಿನಿಯು 625ಕ್ಕೆ 625 ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಸಂತಸದಿಂದ ಅಭಿನಂದಿಸಿದರು. ಆ ಬಾಲಕಿಗೆ ಹೃದಯ ಸಂಬಂಧಿ ರೋಗವಿರುವ ಬಗ್ಗೆ ತಿಳಿದ ಕೂಡಲೇ ಬಾಲಕಿಯ ಪೋಷಕರೊಂದಿಗೆ ಮಾತನಾಡಿದರು. …

Read More »

ಅಯ್ಯೋ ಮಗನೇ ಬೇಡ ಬೇಡ ಅಂದ್ರೂ ಸಿನಿಮಾ ಫೀಲ್ಡ್​ಗೆ ಹೋಗಿ ಅಲ್ಲೇ ಕೊನೆಯುಸಿರೆದು ಬಿಟ್ಟಲ್ಲೋ

ರಾಮನಗರ: ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಹೈಟೆನ್ಷನ್​ ವಿದ್ಯುತ್​ ತಂತಿ ತಗುಲಿ ಸೋಮವಾರ ಫೈಟರ್​ ವಿವೇಕ್​(35) ಮೃತಪಟ್ಟಿದ್ದಾನೆ. ಈತ ಹೆತ್ತಮ್ಮನ ಮಾತು ಕೇಳಿದ್ದರೆ ಇಷ್ಟು ಬೇಗ ಸಾಯುತ್ತಿರಲಿಲ್ಲವೇನೋ… ಮಗನ ಸಾವಿನ ಸುದ್ದಿ ಕೇಳಿ ವಿವೇಕ್​ರ ತಾಯಿ ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆ ಬಳಿ ಆಕ್ರಂದಿಸುತ್ತಿದ್ದ ದೃಶ್ಯ ನೋಡಿದ್ರೆ ಎಂಥವರ ಮನದಲ್ಲೂ ಈ ಪ್ರಶ್ನೆ ಮೂಡುತ್ತಿತ್ತು. ‘ನಾನು ನಿನ್ನೆ ದೇವಸ್ಥಾನಕ್ಕೆ ಹೋಗಿ ರಾತ್ರಿ ಮನೆಗೆ …

Read More »

ಚಿತ್ರತಂಡದ ಮೇಲೆ ನಾಯಕ ಅಜಯ್ ರಾವ್ ಗಂಭೀರ ಆರೋಪ: ನ್ಯಾಯ ಸಿಗುವವರೆಗೂ ಶೂಟಿಂಗ್‌ಗೆ ಹೋಗದಿರಲು ನಿರ್ಧಾರ

ಸ್ಯಾಂಡಲ್‌ವುಡ್ ಕೃಷ್ಣ ಅಜಯ್ ರಾವ್ ನಾಯಕನಾಗಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿರುವ ಸಿನಿಮಾ ಲವ್ ಯೂ ರಚ್ಚು. ಇಂದು ಬಿಡದಿಯಲ್ಲಿ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿ ವಿವೇಕ್ ಎಂಬ ಸಾಹಸ ಕಲಾವಿದ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಯಕ ಕೃಷ್ಣ ಅಜಯ್ ರಾವ್, ವಿವೇಕ್ ಸಾವಿಗೆ ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಚಿತ್ರೀಕರಣಕ್ಕೆ ಹೋಗುವುದಿಲ್ಲ ಎಂದು ನಿರ್ಧಾರ ಮಾಡಿದ್ದಾರೆ. 2017ರ ನವೆಂಬರ್ ತಿಂಗಳಲ್ಲಿ ಮಾಸ್ತಿಗುಡಿ …

Read More »