ರಾಮನಗರ: ತಾಲ್ಲೂಕಿನ ಜೋಗನದೊಡ್ಡಿ ಬಳಿ ʻಲವ್ ಯೂ ರಚ್ಚುʼ ಸಿನಿಮಾ ಶೂಟಿಂಗ್ ವೇಳೆ ಫೈಟರ್ವೊಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ನಡೆದಿದೆ. ಮೃತರನ್ನು ತಮಿಳುನಾಡು ಮೂಲದ ವಿವೇಕ್ ಎಂದು ಗುರುತಿಸಲಾಗಿದೆ. ಸಾಹಸ ದೃಶ್ಯ ಚಿತ್ರೀಕರಣ ವೇಳೆ ಫೈಟರ್ ವಿವೇಕ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ವಿದ್ಯುತ್ ತಂತಿಗೆ ರೋಪ್ ಸ್ಪರ್ಷಿಸಿದ್ದೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಲವ್ ಯೂ ರಚ್ಚು’ ಸಿನಿಮಾದಲ್ಲಿ …
Read More »Daily Archives: ಆಗಷ್ಟ್ 10, 2021
ಕಿಸಾನ್ ಸಮ್ಮಾನ್ ಯೋಜನೆಯಡಿ 51. 19 ಲಕ್ಷ ರೈತರಿಗೆ ₹ 1,023 ಕೋಟಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ : ಬಿ.ಸಿ. ಪಾಟೀಲ್
ಬೆಂಗಳೂರು: ಕಿಸಾನ್ ಸಮ್ಮಾನ್ ಯೋಜನೆಯಡಿ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ ₹ 1,023 ಕೋಟಿ ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರವರಿ 1, 2019ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ ₹ 6 ಸಾವಿರ ಆರ್ಥಿಕ ನೆರವನ್ನು …
Read More »