Breaking News
Home / 2021 / ಆಗಷ್ಟ್ / 11 (page 2)

Daily Archives: ಆಗಷ್ಟ್ 11, 2021

ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ

ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …

Read More »

ಹಳಿಯಾಳದಲ್ಲಿ ಫುಟ್ ಪಾತ್ ಮೇಲೆ ಇರುವ ಅಂಗಡಿಗಳ ತೆರವು ಕಾರ್ಯಾಚರಣೆ

ಹಳಿಯಾಳ: ಪಟ್ಟಣದ ಬಸ್ ನಿಲ್ದಾಣದ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ವ್ಯಾಪಾರಿಗಳು ತಮ್ಮ ಮಳಿಗೆಗಳ ಎದುರು ರಸ್ತೆ ಹಾಗೂ ಗಟಾರ ಅತಿಕ್ರಮಿಸಿ ನಿರ್ಮಿಸಿದ್ದ ಗುಡುಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ಪೋಲಿಸ್ ಬಿಗಿ ಬಂದೋಬಸ್ತನಲ್ಲಿ ನಡೆಯಿತು. ಕೆಎಸ್ ಆರ್ ಟಿಸಿ ಕಂಪೌಂಡ್‍ಗೆ ತಾಗಿ ನಿರ್ಮಿಸಲಾದ ವ್ಯಾಪಾರ ಮಳಿಗೆಗಳನ್ನು ಪಡೆದ ವ್ಯಾಪಾರಸ್ಥರು ಎದುರಿನ ಚರಂಡಿ ಹಾಗೂ ಫುಟ್ ಪಾತ್ ಅತಿಕ್ರಮಿಸಿಕೊಂಡು ಗೂಡಂಗಡಿಗಳನ್ನು ಇಟ್ಟು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ಸಂಚಾರಕ್ಕೆ ಸಾಕಷ್ಟು ತೊಂದರೆ ಆಗುತ್ತಿದ್ದ ಬಗ್ಗೆ ಬಂದ …

Read More »

ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡಿ

ಬೆಂಗಳೂರು : ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ವಿದ್ಯುತ್ ನಿರ್ವಹಣೆಯನ್ನು ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದರು.‌ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆ ಇನ್ನು ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ …

Read More »

ಸರ್ಕಾರದ ಹೂ ನಿಷೇಧ ಆದೇಶಕ್ಕೆ ಹೂ ಮಾರಾಟಗಾರರ ಪ್ರತಿಭಟನೆ

ಬೆಂಗಳೂರು, – ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ನಾಳೆ (ಗುರುವಾರ) ಬೃಹತ್ ಪ್ರತಿಭಟನೆಯನ್ನು …

Read More »

ಸರ್ಕಾರಕ್ಕೆ ಬದ್ಧತೆ ಇದ್ರೆ ಮೇಕೆದಾಟು ಯೋಜನೆ ಜಾರಿಗೊಳಿಸಲಿ: ಸಿದ್ದರಾಮಯ್ಯ

ಮೈಸೂರು : ಬಿಜೆಪಿ ಸರ್ಕಾರಕ್ಕೆ ಬದ್ಧತೆ ಇದ್ದರೆ ತಕ್ಷಣ ಮೇಕೆದಾಟು ಆಣೆಕಟ್ಟು ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಪತ್ರ ಬರೆಯುವುದನ್ನು ಬಿಟ್ಟು, ಕೇಂದ್ರ ಜಲ ನ್ಯಾಯಮಂಡಳಿ ಬಳಿ ಹೋಗಿ ಅನುಮತಿ ಪಡೆದು, ನಂತರ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕೆಂದು ಆಗ್ರಹಿಸಿದರು. ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ …

Read More »

ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ : ಸಿದ್ದು

ಮೈಸೂರು : ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ, ನಿಮ್ಮಲ್ಲಿ ಉತ್ತಮ ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯವಾಗಿರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಜೊತೆಗೆ ಕೆಲಸ ಮಾಡುವ ಉತ್ಸಾಹ ಇದ್ದರೆ ಸಾಕು ಎಂದು ಹೇಳಿದರು, ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ …

Read More »

ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ.

ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ …

Read More »

ಈರುಳ್ಳಿಗೆ ಕಾಡುತ್ತಿರುವ ಕೊಳೆರೋಗದಿಂದ ಮಣ್ಣಲ್ಲಿ ಮಣ್ಣಾಗುತ್ತಿರುವ ರೈತನ ಕಣ್ಣೀರು..!

ಕಲಾದಗಿ: ಈರುಳ್ಳಿ ಬೆಳೆ ಕೊಳೆರೋಗಕ್ಕೆ ಹಳದಿ ಬಣ್ಣಕ್ಕೆ ಬಾಡಿ ಹೊಲದಲ್ಲಿಯೇ ಕೊಳೆಯುತ್ತಿರುವ ಬೆಳೆಯನ್ನು ರೈತ ನೇಗಿಲು ಹೊಡೆದು ಮಣ್ಣಲ್ಲಿ ಮುಚ್ಚುತ್ತಿದ್ದು ಈ ವೇಳೆ ಬೆಳೆಯೊಂದಿಗೆ ರೈತನ ಕಣ್ಣೀರದಾರೆಯೂ ಮಣ್ಣಲ್ಲಿ ಸೇರಿ ಮಣ್ಣಾಗುತ್ತಿದೆ..! ಹೌದು ಕಲಾದಗಿ ಹೊಬಳಿ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಈರುಳ್ಳಿ ಬೆಳೆಯನ್ನು ಬೆಳೆದು ಕೃಷಿ ಜೀವನ ನಡೆಸುತ್ತಾರೆ, ಮೇ ತಿಂಗಳಕೊನೆ ವಾರ ಇಲ್ಲವೇ ಜೂನ್ ತಿಂಗಳ ಮೊದಲೆರಡು ವಾರದಲ್ಲಿ ಬಿತ್ತನೆ ಮಾಡಿ ಹುಲುಸು ಬೆಳೆಗೆ ಹಗಲು ರಾತ್ರಿ ಶ್ರಮ …

Read More »

ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ.: ಈಶ್ವರಪ್ಪ

 : ಮುಖ್ಯಮಂತ್ರಿ ಪದವಿ ಹೋದ ಮೇಲೆ ಸಿದ್ದರಾಮಯ್ಯ ಅವರಿಗೆ ನಿತ್ಯ ಕೆಟ್ಟ ಕನಸು ಬೀಳುತ್ತಿವೆ. ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕೆಟ್ಟ ಕನಸು ಬೀಳುತ್ತಿವೆ. ಆದರೆ ಈ ಕನಸು ನನಸಾಗಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರಿಯಾಗಿ ಆಡಳಿತ ಮಾಡಿದ್ದರೆ ಮತ್ತೆ ಅಧಿಕಾರಕ್ಕೆ ಅವರೇ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷ ಮೊದಲೇ …

Read More »

ಡಿಕೆಶಿ-ಜಮೀರ್ ಅಹ್ಮದ್ ಗೆ ‘ಭಲೇ ಜೋಡಿ’ ಎಂದ ಬಿಜೆಪಿ: ಯಾಕೆ ಗೊತ್ತಾ..?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಗೆ ಭಲೇ ಜೋಡಿ ಅಂತಾ ಬಿಜೆಪಿ ವ್ಯಂಗ್ಯವಾಡಿದೆ. ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ನಡೆಸಿದ ಬಳಿಕ ಅವರನ್ನು ಭೇಟಿಯಾಗಿದ್ದ ಡಿಕೆಶಿ ಧೈರ್ಯ ತುಂಬಿದ್ದರು. ಶಾಸಕ ಜಮೀರ್ ಅಹ್ಮದ್ ಆಸ್ತಿ ಮೇಲೆ ಇಡಿ ದಾಳಿ ಯಾಕೆ ನಡೆದಿದೆ ಎಂದು ಚರ್ಚಿಸಿದ್ದೇನೆ. ಅವರಿಗೆ ಕೆಲವೊಂದು ಮಾರ್ಗದರ್ಶನ ನೀಡಿದ್ದೇನೆ ಅಂತಾ ಡಿಕೆಶಿ ಹೇಳಿದ್ದರು. ಈ ವಿಚಾರವಾಗಿ ಬುಧವಾರ …

Read More »