Daily Archives: ಆಗಷ್ಟ್ 17, 2021

ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಆನಂದ್ ಸಿಂಗ್ ಗೆ ಟಾಂಗ್ ನೀಡಿದ ಗೋವಿಂದ ಕಾರಜೋಳ

ಕೊಪ್ಪಳ: ತುಂಗಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಘಳಿಗೆಯಲ್ಲಿ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು. ಡ್ಯಾಂ ಜಲಾಶಯದ ತಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿ, ತುಂಗಭದ್ರಾ ಎಲ್ಲೆಡೆಯೂ ಮಳೆ ಚೆನ್ನಾಗಿ ಆಗುತ್ತಿವೆ. ಹಾಗಾಗಿ ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಅವಧಿ ಮೊದಲೇ ತುಂಬಿದೆ. ಇದರಿಂದ ಲಕ್ಷಾಂತರ ರೈತರು ಖುಷಿಯಲ್ಲಿದ್ದಾರೆ. ಹಾಗಾಗಿ ಎಲ್ಲ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುತ್ತಿದೆ ಎಂದರು. ಆಲಮಟ್ಟಿ …

Read More »

ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು-ನೀರು ಬಿಡಲು ಬಿಜೆಪಿ ತೀರ್ಮಾನ!

ಬೆಂಗಳೂರು: ಪಕ್ಷ ಸಂಘಟನೆ ಬಲಪಡಿಸುವುದು, ಗುಂಪುಗಾರಿಕೆ, ಜಾತಿಯತೆ ಆರ್ಭಟ ತಡೆಯುವ ಉದ್ದೇಶದಿಂದ ಇನ್ನು ಮುಂದೆ ಉಪ ಮುಖ್ಯಮಂತ್ರಿ ಹುದ್ದೆ ಪರಿಕಲ್ಪನೆಗೆ ಎಳ್ಳು- ನೀರು ಬಿಡಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರ ಕಾಲದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿತ್ತು. ಪಕ್ಷದ ಸಂಘಟನೆ ಗಿಂತಲೂ ಹೆಚ್ಚಾಗಿ, ಯಡಿಯೂರಪ್ಪ ಅವರನ್ನು ನಿಯಂತ್ರಣ ಮಾಡುವ ಉದ್ದೇಶವೇ ಇದರಲ್ಲಿ ಅಡಗಿತ್ತು ಎಂಬುದು ಬಿಜೆಪಿಯ ಮೂಲಗಳಿಂದಲೇ ಸ್ಪಷ್ಟವಾಗಿದೆ. ಯಡಿಯೂರಪ್ಪ ಅವರ …

Read More »

ಉಲ್ಟಾ ಮಚ್ಚೆ ಹೇಳಿಕೆ ನಿಜವಾಗಲಿ; ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಹೇಳುತ್ತಾರೆ ಅದು ಉಲ್ಟಾ ಆಗುತ್ತೆ, ಅವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ ಎಂದಿದ್ದಾರೆ. ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಚಿವರಾಗಲಿ ಎಂದು ಹಾರೈಸುತ್ತೇನೆ. ಆ ಮೂಲಕ ನನ್ನ ನಾಲಿಗೆ ಮೇಲೆ ಉಲ್ಟಾ …

Read More »

ಆಫ್ಘಾನ್​​ನಿಂದ ತಾಯ್ನಾಡಿಗೆ 120 ಮಂದಿ ಭಾರತೀಯರು- ರಣಾಂಗಣದಂತಾದ ಅಫ್ಘಾನಿಸ್ತಾನದಿಂದ ರಕ್ಷಣೆಯೇ ರೋಚಕ

ಅಫ್ಘಾನಿಸ್ತಾನವನ್ನ ಇದೀಗ ತಾಲಿಬಾನಿಗಳು ವಶಪಡಿಸಿಕೊಂಡು ತಮ್ಮದೇ ಸರ್ಕಾರ ರಚಿಸಲು ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಮಾನವ ಹಕ್ಕುಗಳಿಗೆ ಮಾರಕವಾದ ಸಿದ್ಧಾಂತಗಳನ್ನ ನಂಬಿರುವ ತಾಲಿಬಾನಿಗಳು ಅಫ್ಘಾನಿಸ್ತಾನದ ಜನರನ್ನ ಹಿಂಸಿಸಲು ಮುಂದಾಗಬಹುದು ಎಂಬ ಆತಂಕ ಜಗತ್ತಿನಾದ್ಯಂತ ಮನೆಮಾಡಿದೆ. ಈ ಮಧ್ಯೆ ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಒಬ್ಬರ ಮಾತುಗಳು ಎಂಥವರ ಹೃದಯವನ್ನೂ ಹಿಂಡುವಂತಿದೆ.   : ಸರ್ಕಾರಿ ಅಧಿಕಾರಿಗಳಿಗೆ ‘ಸಾರ್ವತ್ರಿಕ ಕ್ಷಮಾದಾನ’ ಕೋರಿದ ತಾಲಿಬಾನಿಗಳು   ತಾಲಿಬಾನಿಗಳು ನನ್ನನ್ನು ಕೊಲ್ತಾರೆ, ನಮ್ಮ ಕುಟುಂಬವನ್ನು ಕೊಲ್ತಾರೆ.. …

Read More »

ಏನೇ ಮಾಡಿದರೂ ನೇರವಾಗಿ ಮಾಡುತ್ತೇನೆ; ಸ್ಪೀಕರ್ ಭೇಟಿ ಅವಶ್ಯಕತೆಯಿಲ್ಲ; ಆನಂದ್ ಸಿಂಗ್

ಕಾರವಾರ: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಡುವ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ತಮ್ಮ ಮುಂದಿನ ನಡೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ನಾನು ಮಾತಿನ ಮೇಲೆ ನಿಲ್ಲುವ ವ್ಯಕ್ತಿ. ಕೆಲವರ ಟೀಕೆಗಳಿಗೆ ಪ್ರತಿಕ್ರಿಯಿಸಲು ಇಚ್ಛಿಸಲ್ಲ. ನನ್ನ ಆತ್ಮಸಾಕ್ಷಿಗೆ ನಾನು ಉತ್ತರ ಕೊಡಬೇಕಾಗಿದೆ ಎಂದು ಹೇಳಿದರು. ಇಂದು ಸ್ಪೀಕರ್ ಕಾಗೇರಿ …

Read More »

ಇನ್ನು 4 ದಿನಗಳಲ್ಲಿ ಎಲ್ಲವೂ ನಿರ್ಧಾರ; ಶಾಸಕ ಶ್ರೀಮಂತ ಪಾಟೀಲ್

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ. ನಾನು ಕೆಳಗೆ ಬರೋದಿಲ್ಲ. ಮೇಲಿನ ಸ್ಥಾನ ಕೊಟ್ಟರೆ ನಿಭಾಯಿಸುವೆ. ಅದು ಪಕ್ಷಕ್ಕೂ ಸರಿ ಅಲ್ಲ, ನನಗೂ ಸರಿಯಲ್ಲ ಅಂತ ಬೆಳಗಾವಿಯಲ್ಲಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಹೇಳಿದ್ದಾರೆ. ಇನ್ನು ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ, ಸಾಕಷ್ಟು ಸಮಯವಿದೆ, ಸಚಿವ ಸ್ಥಾನ ಕೊಡಬಹುದು. ಮರಾಠಾ ಸಮುದಾಯದವರು ಬೇಸರ ಮಾಡಿಕೊಳ್ಳಬೇಡಿ. 4 ದಿನದಲ್ಲಿ …

Read More »

ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಕೊರೊ

ಮಂಗಳೂರು ಹೊರವಲಯದ ಸುರತ್ಕಲ್‌ನ ರಹೇಜಾ ಅಪಾರ್ಟ್‌ಮೆಂಟ್‌ನಲ್ಲಿ ರಮೇಶ್‌ ಹಾಗೂ ಗುಣಾ ದಂಪತಿಗಳ ಆತ್ಮಹತ್ಯೆ ಪ್ರಕರಣ ಆತಂಕವನ್ನು ಮೂಡಿಸಿತ್ತು. ಡೆತ್‌ನೋಟ್‌ ನಲ್ಲಿ ಕೊರೊನಾ ಹಾಗೂ ಬ್ಲ್ಯಾಕ್‌ ಫಂಗಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಮೃತದೇಹದ ಪರೀಕ್ಷೆಯನ್ನು ನಡೆಸಲಾಗಿದ್ದು, ಕೊರೊನಾ ನೆಗೆಟಿವ್‌ ವರದಿ ಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪಡುಬಿದ್ರಿ ಮೂಲದ ರಮೇಶ್‌ ಸುವರ್ಣ ಹಾಗೂ ಗುಣಾ ಆರ್.‌ ಸುವರ್ಣ ದಂಪತಿ ಮನೆಯವರಿಗೆ ಕೊರೊನಾ ಸೋಂಕು …

Read More »

ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.   ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.   ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. …

Read More »

ಕಾಡಾಪೂರ ಗ್ರಾಮದಲ್ಲಿ ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಅಂಕಲಿ ಗ್ರಾಮದಲ್ಲಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ

    ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರಯ ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರಂತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಧ್ಯಕ್ಷರಾದ ಕೆ. ಶಿವಾನಂದ ಆರೋಪಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆಯ …

Read More »

ರಾಜ್ಯದಲ್ಲಿ 3,000 ವೈದ್ಯರು, 7,000 ನರ್ಸ್, 7,000 ಗ್ರೂಪ್ ಡಿ. ಸಿಬ್ಬಂದಿ ನೇಮಕ : ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 3ನೇ ಅಲೆ ಮಾತ್ರವಲ್ಲ ಭವಿಷ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ತುರ್ತು ಸಂದರ್ಭ ಬಂದರೂ ಸಶಕ್ತವಾಗಿ ಎದುರಿಸಲು ಸಾಧ್ಯವಾಗುವಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು. ಇದೇ ನಿಟ್ಟಿನಲ್ಲಿ 3,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 2,000 ಮಂದಿ ತಜ್ಞ …

Read More »