Breaking News
Home / 2021 / ಆಗಷ್ಟ್ / 24 (page 2)

Daily Archives: ಆಗಷ್ಟ್ 24, 2021

ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದ್ದಾನೆ ‘ಕೋಟಿಗೊಬ್ಬ-3’

ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಈ ಚಿತ್ರ ಅಕ್ಟೋಬರ್ 14 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿದುಬಂದಿದೆ. ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿದ್ದು, ಅಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದೆ. ಮಾರ್ಚ್‌ನಲ್ಲಿ ಆಡಿಯೋ ಬಿಡುಗಡೆ ಮಾಡಲು ನಿರ್ಧರಿಸಿದ್ದ ಚಿತ್ರತಂಡ ಏಪ್ರಿಲ್ ಕೊನೆಯ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲಾನ್ …

Read More »

‘ಮಾದಕ’ ನಟಿಯರಿಗೆ ಮತ್ತೆ ಸಂಕಷ್ಟ , ಡ್ರಗ್ಸ್ ಸೇವನೆ ದೃಢ

ಬೆಂಗಳೂರು, ಆ.24- ಸ್ಯಾಂಡಲ್‍ವುಡ್ ನಟಿಯರಾದ ಸಂಜನಾ ಮತ್ತು ರಾಗಿಣಿ ಅವರುಗಳು ಡ್ರಗ್ಸ್ ಸೇವನೆ ಮಾಡಿರುವುದು ಎಫ್‍ಎಸ್‍ಎಲ್ ವರದಿಯಿಂದ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಇಬ್ಬರು ನಟಿಯರು ಡ್ರಗ್ಸ್ ಸೇವಿಸಿದ್ದಾರೆಯೇ ಎಂಬ ಬಗ್ಗೆ ತಿಳಿಯಲು ಇವರಿಬ್ಬರ ತಲೆ ಕೂದಲನ್ನು ಹೈದರಾಬಾದ್‍ನ ಎಫ್‍ಎಸ್‍ಎಲ್‍ಗೆ ಸಿಸಿಬಿ ಪೊಲೀಸರು ಕಳುಹಿಸಿದ್ದರು. ಇದೀಗ ಅದರ ವರದಿ ಸಿಸಿಬಿ ಕೈ ಸೇರಿದ್ದು, ವರದಿಯಲ್ಲಿ ಈ ಇಬ್ಬರು ನಟಿಯರಲ್ಲದೆ ಇನ್ನೂ ಹಲವರು ಡ್ರಗ್ಸ್ ಸೇವನೆ ಮಾಡಿರುವುದು ಉಲ್ಲೇಖಿಸಲಾಗಿದೆ ಎಂದು ಗೊತ್ತಾಗಿದೆ. …

Read More »

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು : ಓರ್ವನ ಶವಪತ್ತೆ, ಮತ್ತೋರ್ವನ ಮೃತದೇಹಕ್ಕೆ ಹುಡುಕಾಟ

ಗೋಕಾಕ : ಘಟಪ್ರಭಾ ಎಡದಂಡೆ ಕಾಲುವೆಗೆ ಕಾಲು ಜಾರಿ ಬಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾದ ಘಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಹುಬ್ಬರವಾಡಿ ಗ್ರಾಮದ ವಾಹನ ಚಾಲಕ ಅಶೋಕ ಶ್ರೀಶೈಲ ಡಬ್ಬನ್ನವರ (26), ಪಾಮಲದಿನ್ನಿ ಗ್ರಾಮದ ಕ್ಲೀನರ್ ನಾಗಪ್ಪ ಕಾಡಪ್ಪ ಅಂಗಡಿ (38) ಮೃತರು. ಕಾಲುವೆಯ ಪಕ್ಕದಲ್ಲಿ ಖಾಸಗಿ ಹಾಲಿನ ಡೈರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು. ಹಾಲಿನ ವಾಹನ ಚಾಲಕ ನೀರು ತರಲು …

Read More »

ಬೆಂಗಳೂರಿನಲ್ಲಿ ನಟ ‘ಅಮಿತಾಬ್ ಬಚ್ಚನ್’ ಕಾರ್ ಸೀಜ್!

ಬೆಂಗಳೂರು : ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹೆಸರಿನಲ್ಲಿ ನೊಂದಣಿಯಾಗಿದ್ದ ಕಾರನ್ನು ಬೆಂಗಳೂರಿನಲ್ಲಿ ಸೀಜ್ ಮಾಡಲಾಗಿದೆ. ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಹೆಸರಲ್ಲಿ ನೋಂದಣಿಯಾಗಿದ್ದ ಸೂಕ್ತ ದಾಖಲೆ ಇಲ್ಲದ ರೋಲ್ಸ್ ರಾಯ್ಸ್ ಕಾರನ್ನು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಅಮಿತಾಬ್ ಬಚ್ಚನ್ ಹೆಸರಲ್ಲಿ ನೋಂದಣಿ ಆಗಿದ್ದ ಕಾರನ್ನು ಬೆಂಗಳೂರಿನ ಯುಬಿ ಸಿಟಿಯಲ್ಲಿ ಸೀಜ್ ಮಾಡಲಾಗಿದೆ. MH 02, BB 2 ಸಂಖ್ಯೆಯ ರೋಲ್ಸ್ ರಾಯ್ಸ್ ಕಾರು …

Read More »

ಸರ್ಕಾರೀ ನೌಕರಿಗಾಗಿ ಐಐಟಿ ನಕಲಿ ಅಂಕಪಟ್ಟಿ ; ಎಂಜಿನಿಯರ್‌ ಬಂಧನ

ಬೆಂಗಳೂರು: ಅಸ್ಸಾಂನ ಗೌಹಾಟಿ ಐಐಟಿಯ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಸಲ್ಲಿಸಿ ಕೇಂದ್ರ ವಿದ್ಯುತ್ ಸಂಶೋಧನ ಸಂಸ್ಥೆ(ಸಿಪಿಆರ್‌ಐ)ಯಲ್ಲಿ ನೌಕರಿ ಗಿಟ್ಟಿಸಿಕೊಂಡಿದ್ದ ಇಂಜಿನಿಯರ್ ಒಬ್ಬರು ಸಿಂಧುತ್ವ ಪರೀಕ್ಷೆ ವೇಳೆ ಸಿಕ್ಕುಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯೂ ಬಿಇಎಲ್ ರಸ್ತೆಯ ನಿವಾಸಿಯಾದ ಮನೀಶ್ ಸಿಂಗ್ (26) ಎಂಬುವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. 2018ನೇ ಸಾಲಿನಲ್ಲಿ ಸಿಪಿಆರ್‌ಐ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗಕ್ಕೆ ಕರೆದಿದ್ದ ಇಂಜಿನೀಯರಿಂಗ್ ಅಧಿಕಾರಿ ಹುದ್ದೆಗೆ ಮನೀಶ್ ಸಿಂಗ್ ನೇಮಕಗೊಂಡಿದ್ದರು. ನೇಮಕಾತಿ ವೇಳೆ ಮನೀಶ್ ಸಲ್ಲಿಸಿದ್ದ …

Read More »

ಪ್ರಥಮ ವರ್ಷ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.!

ಬೆಂಗಳೂರು: ಪ್ರಥಮ ವರ್ಷಕ್ಕೆ ಪ್ರವೇಶ ಪಡೆದವರಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆಗಸ್ಟ್ 1 ರಿಂದ ಪ್ರಥಮ ವರ್ಷದ ಪದವಿ ತರಗತಿಗಳು ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತವಾಗಿ ಟ್ಯಾಬ್ ವಿತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. 2021 -22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್ ಗೆ …

Read More »

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರದಂದು ನಡೆಸಿದ ಸಿನಿಮೀಯ ಶೈಲಿ ಕಾರ್ಯಾಚರಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಸೋಮವಾರದಂದು ನಡೆಸಿದ ಸಿನಿಮೀಯ ಶೈಲಿ ಕಾರ್ಯಾಚರಣೆಯೊಂದರಲ್ಲಿ ಕಾಶ್ಮೀರದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಅಬ್ಬಾಸ್ ಶೇಖ್ ಹಾಗೂ ಅವನ ಸಹರನೊಬ್ಬನನ್ನು ಕೊಂದಿದ್ದಾರೆ. ಲಷ್ಕರ್-ಎ-ತೊಯ್ಬಾದ ಟಾಪ್ ಕಮಾಂಡರ್ ಅಗಿದ್ದ ಶೇಖ್ ಮತ್ತು ಅವನೊಂದಿಗಿದ್ದ ಮತ್ತೊಬ್ಬನನ್ನು ಮಫ್ತಿಯಲ್ಲಿದ್ದ ಪೊಲೀಸರು ಗುಂಡಿಟ್ಟು ಕೊಂದರು. ಕೇಂದ್ರಾಡಳಿತ ಪ್ರದೇಶ ರಾಜಧಾನಿಯ ಅಲೂಚಿ ಬಾಗ್ ಪ್ರದೇಶದಲ್ಲಿ ಸಾದಾ ಉಡುಪಿನಲ್ಲಿದ್ದ 10 ಜನ ಪೊಲೀಸರು ಉಗ್ರರನ್ನು ಸುತ್ತುವರಿದು ಕೊಂದು ಹಾಕಿದರು. ಕಾಶ್ಮೀರ ಪೊಲೀಸ್ …

Read More »

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇಂಧನ ದರ ಇಳಿಸಲು GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್, ವಿದ್ಯುತ್..?

ನವದೆಹಲಿ: ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ಹೊರೆ ಇಳಿಸಲು ಇವುಗಳನ್ನು GST ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ. ನೀತಿ ಆಯೋಗ ಶತಕದ ಗಡಿದಾಟಿದ ಇಂಧನ ದರ ಕಡಿಮೆ ಮಾಡಲು ಸರಕು ಮತ್ತು ಸೇವಾ ತೆರಿಗೆ(GST) ವ್ಯಾಪ್ತಿಗೆ ತರಲು ಚಿಂತನೆ ನಡೆಸಿದೆ. ಈಗಾಗಲೇ ಶತಕದ ಗಡಿ ದಾಟಿರುವ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿಮೆ ಮಾಡಲು ಜಿಎಸ್ಟಿ ವ್ಯಾಪ್ತಿಗೆ ತರಲು ಪ್ರಸ್ತಾವನೆ ಸಲ್ಲಿಸಲಾಗಿದೆ. ವಿದ್ಯುತ್ ಕೂಡ ಜಿಎಸ್ಟಿ ವ್ಯಾಪ್ತಿಗೆ ತರಲು …

Read More »

ಸಾಲಮನ್ನಾ ಮಾಡಿದ್ದಕ್ಕೆ ನನಗೇನು ಫಲ ಕೊಟ್ಟಿದ್ದೀರಿ?: ಎಚ್‌.ಡಿ.ಕುಮಾರಸ್ವಾಮಿ

ಹಿರೇಕೆರೂರು: ‘ನಾನು ₹25 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಕ್ಕೆ, ನನಗೇನು ಫಲ ಕೊಟ್ಟಿದ್ದೀರಿ? ಜನತೆ ಜೊತೆ ಚೆಲ್ಲಾಟ ಆಡುವ ಸರ್ಕಾರ ‌ತರಬೇಡಿ, ಒಮ್ಮೆ ನನಗೆ ಸಂಪೂರ್ಣ ಬಹುಮತ ನೀಡಿ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.‌ಡಿ.ಕುಮಾರಸ್ವಾಮಿ ಮನವಿ ಮಾಡಿದರು. ಪಟ್ಟಣದ ಸರ್ವಜ್ಞ ವೃತ್ತದ ಸಮೀಪ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿ ಜಯಾನಂದ ಜಾವಣ್ಣನವರ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು. ಯೋಜನೆಗಳ ಹೆಸರಿನಲ್ಲಿ ಗುತ್ತಿಗೆದಾರರ ಬಳಿ …

Read More »

ಮಾಲ್ಡೀವ್ಸ್ ಪ್ರವಾಸದಿಂದ ಹಿಂದಿರುಗಿದ ಬಿಎಸ್ ಯಡಿಯೂರಪ್ಪ; 20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

20 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪ್ರತಿ ಜಿಲ್ಲೆಗೂ ಒಂದೊಂದು ದಿನ ಭೇಟಿ ಕೊಡುತ್ತೇನೆ. ಜಿಲ್ಲಾವಾರು ಬಿಜೆಪಿ ಕಾರ್ಯಕರ್ತರ ಸಭೆ ನಡೆಸುತ್ತೇನೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ ನಿರಾಳರಾಗಿದ್ದರು. ಕುಟುಂಬದೊಂದಿಗೆ ಸಮಯ ಕಳೆಯುವ ಯೋಚನೆಯಲ್ಲಿದ್ದರು. ಐದಾರು ದಿನಗಳ ಹಿಂದೆ …

Read More »