Breaking News

Daily Archives: ಆಗಷ್ಟ್ 30, 2021

ಕೇರಳದಲ್ಲಿ ಮಹಾಮಾರಿ ಕೊರೊನಾ ಆತಂಕ : 24 ಗಂಟೆಯಲ್ಲಿ19,622 ಪ್ರಕರಣಗಳು ಪತ್ತೆ

ತಿರುವನಂತಪುರಂ : ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 1,17,216 ಕೊರೊನಾ ಪರೀಕ್ಷೆಗಳು ನಡೆದಿದ್ದು, ಬಳಿಕ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿದೆ.   ಈ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ 19,622 ಪ್ರಕರಣಗಳು ವರದಿಯಾಗಿದೆ. ಸದ್ಯ ಕೇರಳದಲ್ಲಿ ಪಾಸಿಟಿವಿಟಿ ರೇಟ್ ಶೇಕಡಾ 16.74 ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನೂ., ಕೇರಳದಲ್ಲಿ 123 ಹೊಸ ಸಾವುಗಳು ವರದಿಯಾಗಿವೆ, ಸಾವಿನ ಸಂಖ್ಯೆ 20673 …

Read More »

ಕುರಿ ಸಂತೆ ಎಫೆಕ್ಟ್; ಕಿಲೋಮೀಟರ್​​ಗಟ್ಟಲೆ ಟ್ರಾಫಿಕ್ ಜಾಮ್.. ಪರದಾಡಿದ ಆಯಂಬುಲೆನ್ಸ್

ರಾಯಚೂರು: ಎಪಿಎಂಸಿ ಮತ್ತು ಪೊಲೀಸ್​ ಇಲಾಖೆಯ ನಿರ್ಲಕ್ಷ್ಯಕ್ಕೆ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಆಯಂಬುಲೆನ್ಸ್ ಸಾಗಲು ಪರದಾಡಿದ ಘಟನೆ ಜಿಲ್ಲೆಯ ಜಿಲ್ಲೆಯ ಸಿಂಧನೂರಿನ ಕುಷ್ಟಗಿ ಮುಖ್ಯ ಹೆದ್ದಾರಿಯಲ್ಲಿ ನಡೆದಿದೆ.     ಸಿಂಧನೂರು ಪಟ್ಟಣದ ಹೊರ ವಲಯದಲ್ಲಿ ಪ್ರತಿ ಸೋಮವಾರ ಕುರಿ ಸಂತೆ ನಡೆಯುತ್ತದೆ. ಕುರಿ ಸಂತೆ ಹಿನ್ನೆಲೆ ಅಪಾರ ಪ್ರಮಾಣದಲ್ಲಿ ಕುರಿ ವ್ಯಾಪಾರಸ್ಥರು, ಗ್ರಾಹಕರು ಸ್ಥಳದಲ್ಲಿ ಜಮಾಯಿಸುತ್ತಾರೆ. ಪರಿಣಾಮ ಸಂತೆಯ ದಿನ ಇಡೀ ರಸ್ತೆ ಒಂದು ಕಿಲೋ …

Read More »

ವಿಜಯಪುರ ಅತ್ಯಾಚಾರಿ ಆತ್ಮಹತ್ಯೆ: ನಾಲ್ವರು ಪೊಲೀಸರ ಅಮಾನತು

ವಿಜಯಪುರ, ಆಗಸ್ಟ್ 30: ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿ ಪೊಲೀಸ್​ ಠಾಣೆ ಶೌಚಾಲಯದಲ್ಲೇ ನೇಣಿಗೆ ಶರಣಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಂದಗಿ ಠಾಣೆಯ ನಾಲ್ವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಆರೋಪದ ಮೇರೆಗೆ ಪೊಲೀಸರ ಅಮಾನತು ಮಾಡಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ನಿಯಮದ ಪ್ರಕಾರ ಕ್ರಮ ಕೈಗೊಂಡಿದ್ದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಬ್‌ ಇನ್ಸ್‌ಪೆಕ್ಟರ್ ಸಂಗಮೇಶ್ ಹೊಸಮನಿ, …

Read More »

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಧ್ವನಿ ಎತ್ತಿದ RTI ಕಾರ್ಯಕರ್ತನ ಮೇಲೆ ಹಲ್ಲೆ

ಬೆಂಗಳೂರು: ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಅರ್ಜಿ ಸಲ್ಲಿಸಿದ್ದ RTI ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸರ್ಜಾಪುರದ ಸೋಂಪುರ ಬಳಿ ನಡೆದಿದೆ. ಮಾಡ್ರನ್ ಸ್ಪೇಸ್ ಕಂಪನಿಯ ಯತೀಶ್ ಮತ್ತು ಮಂಜುನಾಥ್ ಅಕ್ರಮ ಕಟ್ಟಡ ಕಾಮಗಾರಿ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ರು. ಅರ್ಜಿ ಪರಿಶೀಲಿಸಿ ಎಚ್ಚೆತ್ತುಕೊಂಡ ಅಧಿಕಾರಿಗಳು, ಡ್ರೀಮ್ಸ್ ಇನ್ ಪ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಸಂಬಂಧಿಸಿದ ಸೋಂಪುರದ ಸರ್ವೆ …

Read More »

ಶೂ ಹಾಕಿಕೊಂಡೇ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದ ಸಚಿವ ಪ್ರಭು ಚೌಹಾಣ್

ಹಾವೇರಿ:ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಎಡವಟ್ಟು ಮಾಡಿಕೊಂಡಿದ್ದಾರೆ.ದೇಗುಲದ ಒಳಗೇ ಶೂ ಹಾಕಿಕೊಂಡು ದೇವರ ದರ್ಶನ ಪಡೆದಿದ್ದಾರೆ.ಹಾವೇರಿ‌ ಜಿಲ್ಲೆಯ ಶಿಗ್ಗಾವಿಯ ಬಂಕಾಪುರ ಪಟ್ಟಣದಲ್ಲಿ ನಡೆದಿರುವ ಘಟನೆ . ಬಂಕಾಪುರದ ಪ್ರಸಿದ್ಧ ನಗರೇಶ್ವರ ದೇವಾಲಯದ ಒಳಗೆ ಶೂ ಹಾಕಿಕೊಂಡು ಹೋಗಿ ದೇವರ ದರ್ಶನ ಪಡೆದ ಚೌಹಾಣ್ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಮುಖ್ಯಮಂತ್ರಿಯವರ ಆದೇಶದ ಮೇರೆಗೆ ಜಿಲ್ಲೆಯು ಪ್ರವಾಸ ಕೈಗೊಂಡಿರುವ ಪಶು ಸಂಗೋಪನೆ ಸಚಿವರಾದ ಪ್ರಭು ಚೌಹಾಣ್ ರವರು ಹಾವೇರಿ ಪ್ರವಾಸದಲ್ಲಿ ಇದ್ದಾರೆ. ಈ ಮಧ್ಯೆ …

Read More »

ನಿಂತಿದ್ದ ಲಾರಿಗೆ ಪೊಲೀಸ್​ ಜೀಪ್​ ಡಿಕ್ಕಿ: ಡಿಎಸ್ಪಿ ಗೆ ಗಂಭೀರ ಗಾಯ

ಯಾದಗಿರಿ: ನಿಂತ ಲಾರಿಗೆ ಹಿಂಬದಿಯಿಂದ ಪೊಲೀಸ್​ ಜೀಪ್​ ಡಿಕ್ಕಿ ಹೊಡೆದ ಪರಿಣಾಮ ಜೀಪ್​ನಲ್ಲಿದ್ದ ಡಿಎಸ್ಪಿ ಗಂಭೀರವಾಗಿ ಗಾಯಗೊಂಡ ಘಟನೆ ಶಹಾಪುರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.   ಬೆಳಗಿನ ಜಾವ ಘಟನೆ ನಡೆದಿದೆ ಎನ್ನಲಾಗಿದ್ದು, ನೈಟ್ ರೌಂಡ್ಸ್ ನಲ್ಲಿದ್ದ ಸುರಪುರ ಡಿಎಸ್ಪಿ ವೆಂಕಟೇಶ ಉಗಿಬಂಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದಂತೆ ಪೊಲೀಸ್ ವಾಹನದಲ್ಲಿದ್ದ ಕಾರು ಚಾಲಕ ಹಾಗೂ ಪೊಲೀಸ್ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡ ಡಿಎಸ್ಪಿ ಯನ್ನು ಕಲಬುರಗಿ …

Read More »

ಪಕ್ಷದಿಂದ 34 ಮಂದಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​​

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಹೋದ ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್​ ಪಕ್ಷದಿಂದ ಉಚ್ಛಾಟಿಸಿದೆ. ಪಾಲಿಕೆ ಚುನಾವಣೆಯಲ್ಲಿ ಪಕ್ಷದ ನಾಯಕರ ಮನವೊಲಿಕೆಗೂ ಮಣಿಯದೇ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 34 ಜನರನ್ನು ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿದ್ದು, ನಗರದ ಮೊದಲ ಪ್ರಜೆಯಾಗಲು ಮೂರು ಪಕ್ಷಗಳು ತೀವ್ರ ಜಟಾಪಟಿ ನಡೆಸುತ್ತಿವೆ.

Read More »

ಹುಣಸೂರು: ಮರದ ದಿಮ್ಮಿ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಡಿಕ್ಕಿ, ಬಸ್‌ ಚಾಲಕನಿಗೆ ಗಂಭೀರ ಗಾಯ

ಹುಣಸೂರು: ರಸ್ತೆ ಪಕ್ಕದಲ್ಲಿ ನಿಂತಿದ್ದ ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದ್ದು, ಬಸ್‌ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಲ್ಬೆಟ್ಟ ಬಳಿ ನಡೆದಿದೆ. ಬಸ್‌ ಚಾಲಕ ಎಚ್‌.ಬಿ.ಮಹದೇವ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿ ಹುಣಸೂರಿನ ಕಡೆ ಹೊರಟಿತ್ತು. ಈ ವೇಳೆ ಕಲ್ಬೆಟ್ಟದ ಬಳಿ ನಿಂತಿತ್ತು. ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ …

Read More »

ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಒತ್ತಾಯ; ಶೆಟ್ಟರ್ ಮನೆಮುಂದೆ ಶ್ರೀರಾಮ ಸೇನೆ ಪ್ರತಿಭಟನೆ

ಹುಬ್ಬಳ್ಳಿ: ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಒತ್ತಾಯಿಸಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆ ಮುಂದೆ ಶ್ರೀರಾಮ ಸೇನೆ ಪ್ರತಿಭಟನೆ ನಡೆಸಿದೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಇಲ್ಲದ ಕೋವಿಡ್ ನಿಯಮ ಗಣೇಶನಿಗೆ ಯಾಕೆ ಎಂದು ಮುತಾಲಿಕ್ ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ರ್ಯಾಲಿಗಳಲ್ಲಿ ಕೋವಿಡ್ ನಿಯಮಗಳೇ ಇಲ್ಲ. ಆದ್ರೆ ಗಣೇಶನಿಗೆ ಮಾತ್ರ ನಿಯಮ ಪಾಲನೆ ಇದೆ. ಇಂದು ಸಿಎಂ ಜೊತೆಗಿನ …

Read More »

ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ!

ಬೆಂಗಳೂರು, ಆ. 30: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ತಾಂತ್ರಿಕ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಸೋಮವಾರ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದರು. ನಂತರ ಮಾತನಾಡಿದ ನಾಗೇಶ್, ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಬೇಕೇ …

Read More »