Breaking News
Home / 2021 / ಆಗಷ್ಟ್ (page 12)

Monthly Archives: ಆಗಷ್ಟ್ 2021

ಅಧಿವೇಶನಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ, : ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಮಂಗಳೂರು: ಸೆಪ್ಟೆಂಬರ್13 ರಿಂದ 24 ರವರೆಗೆ ವಿಧಾನಸಭಾ ಅಧಿವೇಶನ (Karnataka Assembly session 2021) ನಡೆಯಲಿದ್ದು, ಈ ಅಧಿವೇಶನದಲ್ಲಿ ಯಾರೂ ನನ್ನ ಬಳಿ ರಜೆ ಕೇಳುವ ಸ್ಥಿತಿ ಬರಬಾರದು. ಎಲ್ಲಾ ಶಾಸಕರು ಮತ್ತು ಸಚಿವರು ಕಡ್ಡಾಯವಾಗಿ ಪೂರ್ಣಪ್ರಮಾಣದಲ್ಲಿ ಅಧಿವೇಶನದಲ್ಲಿ ಹಾಜರಿರಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Speaker Vishweshwar Hegde Kageri) ಸೂಚನೆ ನೀಡಿದರು. ಮಂಗಳೂರಿನಲ್ಲಿ ಈಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಜನಪ್ರತಿನಿಧಿಗಳ ಸಂಪೂರ್ಣ ಹಾಜರಾತಿಯ ಅಗತ್ಯತೆ …

Read More »

ರಾಜ್ಯದಾದ್ಯಂತ ಸಂಚರಿಸಲು ಕೋಟಿ ರೂಪಾಯಿಯ ಕಾರು ಖರೀದಿಸಿದ ಬಿಎಸ್‌ವೈ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೊಸ ಟೊಯೊಟಾ ವೆಲ್‌ಫೈರ್‌ ಕಾರನ್ನು ಖರೀದಿ ಮಾಡಿದ್ದು, ತೆರಿಗೆ ಸೇರಿ ಇದರ ಮೌಲ್ಯ ₹1 ಕೋಟಿ ಎಂದು ಮೂಲಗಳು ಹೇಳಿವೆ. ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರು ಬಳಸುತ್ತಿದ್ದರು. ಈಗ ಹೆಚ್ಚು ದೂರ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ಈ ಕಾರು ಖರೀದಿ ಮಾಡಿದ್ದಾರೆ. ಇದರ ಮೂಲ ಬೆಲೆ ₹87 ಲಕ್ಷ. ಈಗಾಗಲೇ ನೋಂದಣಿ ಮಾಡಿಸಿದ್ದು, ಶುಕ್ರವಾರ ಶಿವಮೊಗ್ಗಕ್ಕೆ ಇದೇ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ. ಹಿರಿಯ ಸಚಿವರೊಬ್ಬರ ಬಳಿ …

Read More »

2019 ರಿಂದ 2021 ನಡುವೆ ಕರ್ನಾಟಕದಲ್ಲಿ 1,168 ಅತ್ಯಾಚಾರ ಕೇಸ್ ದಾಖಲು..!

ಬೆಂಗಳೂರು,ಆ.27-ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಬೆನ್ನಲ್ಲೇ ಆತಂಕದ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಜನವರಿಯಿಂದ ಮೇ 2021ರವರೆಗೆ ಸುಮಾರು 1, 168 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಪ್ರತಿದಿನ ಸರಾಸರಿ ಒಂದು ಅತ್ಯಾಚಾರ ಘಟನೆ ನಡೆಯುತ್ತಿದೆ. 22 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಹೆಚ್ಚು ಭೀತಿ ಹುಟ್ಟಿಸಿವೆ. ರಾಜ್ಯದ ಪೊಲೀಸರಿಂದ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ಮಾಹಿತಿ ಲಭ್ಯವಾಗಿದ್ದು, ಪ್ರಸಕ್ತ …

Read More »

ಪೊಲೀಸರಿಗೆ ಸಿಎಂ ಎಚ್ಚರಿಕೆ

ಬೆಂಗಳೂರು,ಆ.27- ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸುದ್ದಿಯಾಗುತ್ತಿದ್ದು, ತಪ್ಪಿತಸ್ಥ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್, ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಕಾರ್ಯ ವೈಖರಿಗೆ ಸಿಎಂ ತರಾಟೆ …

Read More »

ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

ಬೆಂಗಳೂರು, ಆ.27- ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 530 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವೃತ್ತಿಪರ ಕೋರ್ಸ್‍ಗಳು ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯಲಿ ರುವ ಈ ಪರೀಕ್ಷೆಗೆ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ನಾಳೆ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ …

Read More »

ಈ ಸರ್ಕಾರದಲ್ಲಿ ಹೆಣ್ಮಕ್ಕಳಾಗಲೀ, ಗಂಡು ಮಕ್ಕಳಾಗಲೀ ಸೇಫ್ ಅಲ್ಲ: ಡಿ.ಕೆ.ಶಿ

ಬೆಂಗಳೂರು: ಈ ಸರ್ಕಾರದಲ್ಲಿ ಹೆಣ್ಮಕ್ಕಳಾಗಲೀ, ಗಂಡು ಮಕ್ಕಳಾಗಲೀ ಸೇಫ್ ಅಲ್ಲ. ಇದಕ್ಕೆ ಮೈಸೂರು ಪ್ರಕರಣವೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರು ಗ್ಯಾಂಗ್ ರೇಪ್ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿ ನೋಡಿ ಪಾಪ ಗೃಹ ಸಚಿವರು ಹೊಸದಾಗಿ ಮಂತ್ರಿಯಾಗಿದ್ದಾರೆ. ಅವರ ಮೇಲೇನೆ ಮಾತನಾಡುವಂಥದ್ದಲ್ಲ. ಒಂದು ಸರ್ಕಾರ ಕಾರಣವಾಗುತ್ತದೆ. ಓರ್ವ ಗೃಹ ಸಚಿವ ಮಾತ್ರ ಅಲ್ಲ ಎಂದಿದ್ದಾರೆ.ನಾನು ಅವರ ಬಗ್ಗೆ ಕಾಮೆಂಟ್ ಮಾಡಲ್ಲ. …

Read More »

ಆ ಹುಡುಗಿ ಕತ್ತಲಲ್ಲಿ ಹೋಗಲೇ ಬಾರದಿತ್ತು ಎಂದವರಿಗೆ ಉತ್ತರಿಸಿದ ಇಂದ್ರಜಿತ್ ಲಂಕೇಶ್

ಮೈಸೂರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಅನೇಕರು ಹುಡುಗಿಯದ್ದೇ ತಪ್ಪು ಎಂಬಂತೆ ಮಾತನಾಡಿದ್ದಾರೆ. ಆಕೆಗೆ ಕತ್ತಲಲ್ಲಿ ಹೋಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ತಲೆ ಎತ್ತಿದ್ದ ಡ್ರಗ್ಸ್​ ಪ್ರಕರಣದಲ್ಲಿ ಹಲವು ಆರೋಪ ಮಾಡಿ ಸುದ್ದಿಯಾಗಿದ್ದ ಅವರು, ಇತ್ತೀಚಿಗಿನ ದರ್ಶನ್​ ಪ್ರಕರಣದಲ್ಲಿ ಕೆಲ ಆರೋಪ ಮಾಡಿ ಗಮನ ಸೆಳೆದಿದ್ದರು. ಈಗ ಮೈಸೂರಿನಲ್ಲಿ ನಡೆದ ಗ್ಯಾಂಗ್​ ರೇಪ್​ ವಿಚಾರವಾಗಿ ಅವರು ಮಾತನಾಡಿದ್ದಾರೆ. ಮೈಸೂರಲ್ಲಿ …

Read More »

ಪೊಲೀಸ್​ ಇಲಾಖೆಯ ಕಣ್ಣು ಕೆಂಪಾಗಿಸಿದ ಬಚ್ಚನ್​ ಬಾಡಿಗಾರ್ಡ್​ ವಾರ್ಷಿಕ ಆದಾಯ: ದಿಢೀರ್​ ವರ್ಗಾವಣೆ..!

ಮುಂಬೈ: ವಾರ್ಷಿಕ ಆದಾಯ ಬರೋಬ್ಬರಿ ಒಂದೂವರೆ ಕೋಟಿ ರೂ. ಇದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಬಾಲಿವುಡ್​ ಹಿರಿಯ ನಟ ಅಮಿತಾಭ್​​ ಬಚ್ಚನ್​ ಅವರ ಪೊಲೀಸ್​ ಬಾಡಿಗಾರ್ಡ್​ ಜೀತೇಂದ್ರ ಶಿಂಧೆ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವಿಭಾಗೀಯ ತನಿಖೆಗೂ ಸಹ ಆದೇಶಿಸಲಾಗಿದೆ. ಕಾನ್ಸ್​ಟೇಬಲ್​ ಆಗಿರುವ ಶಿಂಧೆ ಅವರನ್ನು ಮುಂಬೈ ಪೊಲೀಸ್​ ಇಲಾಖೆ ಬಚ್ಚನ್​ ಅವರ ಬಾಡಿಗಾರ್ಡ್​ ಆಗಿ ನೇಮಿಸಿತ್ತು. ಅನೇಕ ವರ್ಷಗಳಿಂದ ಬಿಗ್​ಬಿ ಅವರ ಅಂಗರಕ್ಷಕರಾಗಿ ಸೇವೆ ಸಲ್ಲಿಸಿರುವ ಶಿಂಧೆ ವಿರುದ್ಧ …

Read More »

ಗ್ಯಾಂಗ್ ರೇಪ್: ಸಭೆ ನಡೆಸದೇ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದ ಗೃಹ ಸಚಿವ

ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್‌ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್‌ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ …

Read More »

ಗಣೇಶ ಹಬ್ಬದ ಬಳಿಕ ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಗಣೇಶ ಹಬ್ಬದ ಬಳಿಕ ಎಲ್ಲರೂ ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ. ನಾನೊಬ್ಬನೇ ರಾಜ್ಯ ಪ್ರವಾಸ ಮಾಡುವ ಪ್ರಶ್ನೆಯಿಲ್ಲ. ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವ ಜಿಲ್ಲೆಗಳಿಗೆ ಹೋಗಬೇಕು ಎಂದು ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ಬಳಿಕ ಶಿವಮೊಗ್ಗ, ಶಿಕಾರಿಪುರಕ್ಕೆ ಹೋಗುತ್ತಿದ್ದೇನೆ. ವಾಪಸ್ ಬಂದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಇತರ ಮುಖಂಡರ ಜೊತೆ ಚರ್ಚೆ ರಾಜ್ಯ …

Read More »