Breaking News

Monthly Archives: ಆಗಷ್ಟ್ 2021

10 ದಿನ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಸಿದ್ದರಾಮಯ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಸ್ಟ್ 21ರಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಹತ್ತು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಕಳೆದ ಒಂದು ವರ್ಷದಿಂದ ಹಲವು ಬಾರಿ ಜಿಂದಾಲ್ ಪ್ರಕೃತಿ ಚಿಕಿತ್ಸೆಗೆ ಹೋಗಲು ನಿರ್ಧರಿಸಿದ್ದರೂ ನಾನಾ ಕಾರಣಗಳಿಂದ ಹೋಗಲು ಸಾಧ್ಯವಾಗಿಲ್ಲ. ಕೊರೊನಾ ಸೋಂಕು, ಚುನಾವಣಾ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳಲ್ಲೇ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಈಗ ಪ್ರಕೃತಿ ಚಿಕಿತ್ಸೆ ಮೊರೆ ಹೋಗಲು ಮುಂದಾಗಿದ್ದಾರೆ. ಪೋಸ್ಟ್ ಕೋವಿಡ್ ಸಮಸ್ಯೆಯಿಂದ …

Read More »

ವಾಲ್ಮೀಕಿ ಜಯಂತಿಯೊಳಗೆ ಶೇ. 7.5 ಮೀಸಲಾತಿ ಘೋಷಣೆ ಮಾಡ್ತೀವಿ; ಸಿಎಂ ಬೊಮ್ಮಾಯಿ

ಬೆಂಗಳೂರು (ಆ.19): ವಾಲ್ಮೀಕಿ ಜಯಂತ್ಯೋತ್ಸವದ ಒಳಗಾಗಿ ಪರಿಶಿಷ್ಟ ವರ್ಗಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ನಾನೇ ಹಲವು ಸಭೆಗಳಲ್ಲಿ ಭಾಗಿಯಾಗಿ ಕೆಲಸ ಮಾಡಿದ್ದೀನಿ. ಆದ್ದರಿಂದ ಮುತುವರ್ಜಿ ವಹಿಸಿ ಕೆಲಸ ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದ ನಿಯೋಗದ …

Read More »

ಲೇಡಿ ಪೊಲೀಸ್​ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು

ಬೆಂಗಳೂರು, ಆ. 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜನತಾ ದರ್ಶನ ನಡೆಸಿದ ವೇಳೆ ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗಮನ ಸೆಳೆಯಿತು. ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೊಮ್ಮಾಯಿ ಅವರು ಜನತಾ ದರ್ಶನ ನಡೆಸಿ ಸಾರ್ವುಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಹಿಳೆಯೊಬ್ಬರು ಸಿಎಂಗೆ ಅಹವಾಲು ಸಲ್ಲಿಸಲು ಸಾಕಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಿಎಂ ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡತೊಡಗಿದಾಗ ಆ ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಮುಖ …

Read More »

ಈ ಬಾರಿಯೂ ಬೆಳಗಾವಿಯಲ್ಲಿ ಅಧಿವೇಶನ ನಡೆಯಲ್ಲ ಬೆಂಗಳೂರಿನಲ್ಲಿಯೇ ನಡೆಯಲಿದೆ

ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದ್ದು 10 ದಿನಗಳ ಕಾಲ ಮುಂಗಾರು ಅಧಿವೇಶ ನಡೆಯಲಿದೆ. ಸೆ.13ರಿಂದ ಸೆ.24ರ ವರೆಗೆ ವಿಧಾನಮಂಡಲ ಅಧಿವೇಶ ನಡೆಸಲಾಗುವುದು ಎಂದು ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಈ ಬಾರಿ ಬೆಂಗಳೂರಿನಲ್ಲಿಯೇ ಹತ್ತುದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದರು. ಸಂಪುಟ ಉಪಸಮಿತಿ ರಚನೆಗೆ ಕ್ಯಾಬಿನೇಟ್ …

Read More »

ಜೈಲಿನಿಂದ ಬಿಡುಗಡೆ ಆದವನಿಗೆ ಯುದ್ದ ಗೆದ್ದು ಬಂದವರ ರೀತಿ ಅದ್ಧೂರಿ ಸ್ವಾಗತ, ಸನ್ಮಾನ; ವಿಡಿಯೋ ವೈರಲ್

ಜೈಲಿನಿಂದ ಬಿಡುಗಡೆ ಆದವನಿಗೆ ಅದ್ಧೂರಿ ಸ್ವಾಗತ ಮಾಡಿ ಕರೆಸಿಕೊಂಡಿರುವ ಘಟನೆ ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೈಲಿನಿಂದ ಬಿಡುಗಡೆಯಾದ ರಾಜು ದೇಸಾಯಿಗೆ ಅದ್ಧೂರಿ ಸ್ವಾಗತ ಮಾಡಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಗ್ರಾಮಕ್ಕೆ ಕರೆಸಿಕೊಳ್ಳಲಾಗಿದೆ. ಬಾಗಲಕೋಟೆ: ಜೈಲಿನಿಂದ ಬಿಡುಗಡೆ ಆದವನಿಗೆ ಅದ್ಧೂರಿ ಸ್ವಾಗತ ಮಾಡಿ ಕರೆಸಿಕೊಂಡಿರುವ ಘಟನೆ ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೈಲಿನಿಂದ ಬಿಡುಗಡೆಯಾದ ರಾಜು ದೇಸಾಯಿಗೆ ಅದ್ಧೂರಿ ಸ್ವಾಗತ ಮಾಡಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ …

Read More »

ಮನೆಯ ಮಂಚದ ಕೆಳಗಿತ್ತು ಮೃತದೇಹ, ಶಂಕೆ ಮೂಡಿಸಿದ ಅನುಮಾನಾಸ್ಪದ ಸಾವು

ಮೈಸೂರು: ಬಂಚಳ್ಳಿ ಹುಂಡಿ ಗ್ರಾಮದಲ್ಲಿ ಮನೆಯಲ್ಲೇ ವೃದ್ಧೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. 65 ವರ್ಷದ ದೇವಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬಂಚಳ್ಳಿ ಹುಂಡಿ ಗ್ರಾಮದಲ್ಲಿ ದೇವಮ್ಮ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹ ಮನೆಯ ಮಂಚದ ಕೆಳಗೆ ಪತ್ತೆಯಾಗಿದೆ. ಆಸ್ತಿಗಾಗಿ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ನಂಜನಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ED ದಾಳಿ ಕೇಸ್; ಶಾಸಕ ಜಮೀರ್ ವಿರುದ್ಧ ಮಹತ್ವ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶ್ರೀಲಂಕಾ ಕ್ಯಾಸಿನೋ ನಂಟು ಹಾಗೂ ಐಎಂಎ ವ್ಯವಹಾರದ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಜಮೀರ್ ಅಹ್ಮದ್ ತನ್ನ ಶಿಷ್ಯ ಶೇಖ್ ಫಾಸಿಲ್ ಜೊತೆ ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸಿದ್ದರು ಎನ್ನಲಾಗಿದೆ. ಇಬ್ಬರೂ ಪಾರ್ಟನರ್ ಶಿಪ್ ವ್ಯವಹಾರದಲ್ಲಿ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕಿದ್ದಾರೆ. …

Read More »

ಕುಡಚಿ ಪೋಲಿಸರ ನವರಂಗಿ ಆಟ, ಎಗ್ಗಿಲ್ಲದೇ ನಡೆಯುತ್ತಿದೆ ಮಟ್ಕಾ ಓಟ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ರಮ ಮಟ್ಕಾ ದಂಧೆ ಎಗ್ಗಿಲ್ಲದೆ ಸಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಗೋಕಾಕ್, ರಾಯಬಾಗ, ಘಟಪ್ರಭಾ, ಮೂಡಲಗಿ, ಕುಡಚಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಮಟಕಾ ಹಾವಳಿ ಮಿತಿ ಮೀರಿದೆ. ಈ ಮಟ್ಕಾ ದಂಧೆಗೆ ಬೀಟ್ ಪೊಲೀಸರ ಮುಖಾಂತರ ಪಿಎಸ್ಐ ಲೆವೆಲ್ ಅಧಿಕಾರಿಗಳು ಬುಕ್ಕಿಗಳ ಸಂಗ ಬೆಳೆಸಿದ್ದು, ಎಂಜಲ ಕಾಸಿಗಾಗಿ ಪೊಲೀಸರ ಕರಿ ನೆರಳಲ್ಲೇ ಈ ಅಕ್ರಮ ಮಟ್ಕಾ ದಂಧೆ ನಡೆಯುತ್ತಿದೆ. ಇನ್ನು ರಾಯಬಾಗ ತಾಲೂಕಿನ …

Read More »

ಗೋವಾ ಗಡಿ ತೆರೆಯಲು ಆತುರು ಬೇಡ : ಕಾಂಗ್ರೆಸ್

ಪಣಜಿ : ಗೋವಾದಲ್ಲಿ ಕೋವಿಡ್ ಸೋಂಕಿತರು ಕಡಿಮೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗೋವಾ ಗಡಿಗಳನ್ನು ಓಪನ್ ಮಾಡಿ ಹೊರ ರಾಜ್ಯಗಳಿಂದ ಗೋವಾಕ್ಕೆ ಪ್ರವಾಸಿಗರು ಬರಮಾಡಿಕೊಳ್ಳಲು ಸರ್ಕಾರ ನೋಡುತ್ತಿದೆ. ಆದರೆ ಇದಕ್ಕೂ ಮುನ್ನ ಸರ್ಕಾರ ಗೋವಾದ ಎಲ್ಲಾ ಗಡಿಗಳಲ್ಲಿ ಸುಸಜ್ಜಿತ ಕೋವಿಡ್ ತಪಾಸಣಾ ಕೇಂದ್ರವನ್ನು ಸ್ಥಾಪನೆ ಮಾಡಬೇಕು, ನಂತರ ಗಡಿಗಳನ್ನು ತೆರೆಯಬೇಕು ಎಂದು ಗೋವಾ ಕಾಂಗ್ರೇಸ್ ಪಕ್ಷವು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗೆ ಮನವಿ ಮಾಡಿದೆ. ಕಾಂಗ್ರೇಸ್ ಪ್ರದೇಶ ಸಮೀತಿಯ ಉಪಾಧ್ಯಕ್ಷ ಹಾಗೂ …

Read More »

ರಾಹುಲ್‌ರನ್ನು ಮೊದಲು ನೋಡಿದ್ದು ನಾನೇ

ವಯನಾಡ್‌/ನವದೆಹಲಿ:ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರಿಗೆ ಜನ್ಮ ನೀಡುವಾಗ ಹೆರಿಗೆ ಮಾಡಿಸಿದ್ದ ನರ್ಸ್‌ ರಾಜಮ್ಮ ವವಾತಿಲ್‌ ಎಂಬುವರು ಅವರನ್ನು ಭೇಟಿಯಾಗಿದ್ದಾರೆ. ಜತೆಗೆ ಅವರಿಗೆ ಸಿಹಿ ಇರುವ ಬಾಕ್ಸ್‌ ನೀಡಿ, ತಾಯಿ ಸೋನಿಯಾ ಮತ್ತು ಕುಟುಂಬದ ಇತರ ಸದಸ್ಯರ ಆರೋಗ್ಯ ವಿಚಾರಿಸಿದ್ದಾರೆ.   ವಯನಾಡ್‌ ಸಂಸದರಾಗಿರುವ ರಾಹುಲ್‌ ಕ್ಷೇತ್ರ ಪ್ರವಾಸ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. “1970ರಲ್ಲಿ ನವದೆಹಲಿಯ ಹೋಲಿಸ್‌ ಫ್ಯಾಮಿಲಿ ಆಸ್ಪತ್ರೆಯಲ್ಲಿ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದೆ. …

Read More »