Breaking News
Home / 2021 / ಆಗಷ್ಟ್ (page 7)

Monthly Archives: ಆಗಷ್ಟ್ 2021

ಮತ ಕೇಳಲು ಯಾವ ಪಕ್ಷದ ಅಭ್ಯರ್ಥಿಯೂ ತಮ್ಮ ಗಲ್ಲಿಯಲ್ಲಿ ಬರುವಂತಿಲ್ಲ ವಾರ್ಡ್ ನಂ. 54ರ ರಹವಾಸಿಗಳ ಚುನಾವಣೆ ಬಹಿಷ್ಕರಿಸಿ, ಆಕ್ರೋಶ

ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂ. 54ರ ರಹವಾಸಿಗಳು ಚುನಾವಣೆ ಬಹಿಷ್ಕರಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 1995 ರಿಂದ ಇಲ್ಲಿನ ಚನ್ನಮ್ಮ ನಗರದ ಸ್ವಾಮಿನಾಥ್ ಕಾಲನಿ ಮತ್ತು ಸುತ್ತಲ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.1995ರಿಂದಲೂ ಮಹಾನಗರ ಪಾಲಿಕೆಗೆ ನಿಯಮಿತವಾಗಿ ತೆರಿಗೆ ಕಟ್ಟುತ್ತ ಬರಲಾಗುತ್ತಿದೆ. ಹೀಗಿದ್ದಾಗೂ ನೀರು, ವಿದ್ಯುತ್, ರಸ್ತೆ, ಒಳಚರಂಡಿ ಸೇರಿದಂತೆ ಯಾವ ಸೌಲಭ್ಯವನ್ನು ನೀಡಲು ಪಾಲಿಕೆ ಮುಂದಾಗಿಲ್ಲ ಎಂದು ನಾಗರಿಕರು …

Read More »

ಹುಬ್ಬಳ್ಳಿ- ಧಾರವಾಡ: ಇನ್ನೊಮ್ಮೆ ಅಧಿಕಾರ ಕೊಟ್ಟರೆ ಅರ್ಧಕ್ಕೆ ನಿಂತ ಕಾಮಗಾರಿ ಪೂರ್ಣ ಮಾಡ್ತೇವೆ: ಪ್ರಲ್ಹಾದ್ ಜೋಶಿ

ಸೆಪ್ಟಂಬರ್ 3 ರಂದು ಹುಬ್ಬಳ್ಳಿ- ಧಾರವಾಡ ಪಾಲಿಕೆ ಚುನಾವಣೆ ನಡೆಯಲಿದೆ. ಪಾಲಿಕೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್​​ರಿಂದ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಹುಬ್ಬಳ್ಳಿ: ಕಳೆದ ಬಾರಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ. ಇನ್ನೊಮ್ಮೆ ಅಧಿಕಾರ ಕೊಟ್ಟರೆ ಕಾಮಗಾರಿಗಳು ಪೂರ್ಣ ಆಗಲಿವೆ. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಪೂರ್ಣ ಮಾಡ್ತೇವೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ …

Read More »

ಹುಬ್ಬಳ್ಳಿ ಪಾಲಿಕೆ ಚುನಾವಣಾ ಪ್ರಚಾರದ ವೇಳೆ‌ ಸಚಿವ ಶ್ರೀರಾಮುಲುರವರಿಂದ ಕರೋನಾ ನಿಯಮ ಉಲ್ಲಂಘನೆ

ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಪಾಲಿಕೆ ಚುನಾವಣಾ ಪ್ರಚಾರ ರಂಗೇರಿದೆ. ರಾಜಕಾರಣಿಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.ಆಡಳಿತ ಪಕ್ಷದ ಸಚಿವ ಶ್ರೀರಾಮುಲು ತಮ್ಮ ಚುನಾವಣಾ ಪ್ರಚಾರದ ವೇಳೆ ಕರೋನ ನಿಯಮಗಳನ್ನು ಉಲ್ಲಂಘಿಸಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆದ ಪಾಲಿಕೆ ಚುನಾವಣಾ ಪ್ರಚಾರದ ವೇಳೆ ತಮ್ಮ ಅಭ್ಯರ್ಥಿಯ ಪರ ಬೃಹತ್ ಪ್ರಚಾರದ ಸಭೆ ವೇಳೆ ಕಿಕ್ಕಿರಿದು ಜನ ಸೇರಿದ್ದರು. ಕಾರ್ಯಕರ್ತರು ನಿಯಮ ಉಲ್ಲಂಘನೆ ಮಾಡಿ ಶ್ರೀರಾಮುಲುಗೆ ಬೃಹತ್ ಹೂವಿನ ಹಾರ ಹಾಕಿದ್ದಾರೆ.ನಿಯಮಗಳು ಕೇವಲ ಸಾಮಾನ್ಯ ಜನರಿಗಷ್ಟೇನಾ …

Read More »

ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿಗಳು

ಮೈಸೂರು : ರಾಜ್ಯದ ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದ್ದಂತ ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇಂತಹ ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಂತ ಸಂದರ್ಭದಲ್ಲಿ, ತಾವೇ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಎಂಬುದಾಗಿ ತಪ್ಪೊಪ್ಪಿಕೊಂಡಿದ್ದಾರೆ.   ಇಂದು ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳನ್ನು ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಹಣಕ್ಕೆ ಬೇಡಿಕೆ …

Read More »

ರೇಪ್ ಕೇಸ್ ಬಗ್ಗೆ ಮಾತಾಡದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಣ್ಣಲ್ಲವೇ?: ಹೆಚ್.ಎಂ. ರೇವಣ್ಣ ಆಕ್ರೋಶ

ಬೆಂಗಳೂರು : ಶೋಭಾ ಕರಂದ್ಲಾಜೆ ನಾನು ಕೇಂದ್ರ ಸಚಿವೆ ಮೈಸೂರು ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಲ್ಲ ಅಂತಾರೆ. ಸಚಿವೆ ಆದರೂ ಹೆಣ್ಣು ಹೆಣ್ಣೇ ಅಲ್ವಾ? ಅವರ ಮನೆಯಲ್ಲೇ ಆದರೆ ನಮ್ಮ ಮನೆಯಲ್ಲಿ ಆದರೆ ಹೀಗೆ ಮಾತಾಡೋದ? ಎಂದು ಮಾಜಿ ಸಚಿವ ಹೆಚ್.ಎಂ. ರೇವಣ್ಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದಾರೆ. ಸದಾಶಿವನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು ಅತ್ಯಾಚಾರ ನಡೆದಿದೆ ಅಂತಾರೆ. ಪೊಲೀಸರು ದರೋಡೆ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ 4 ಅಂಶಗಳ ಪ್ರಣಾಳಿಕೆ ಘೋಷಣೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ 4 ಅಂಶಗಳ ಪ್ರಣಾಳಿಕೆ ಘೋಷಣೆ ಮಾಡಿದೆ. ಉದ್ಯೋಗ ಸೃಷ್ಟಿ ಶೇ.50 ತೆರಿಗೆ ವಿನಾಯಿತಿ ಬೆಂಗಳೂರು ಮಟ್ಟದ ನಗರ ಸೌಲಭ್ಯ ನಗರದಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆ ಮುಕ್ತ ಆಡಳಿತ ವ್ಯವಸ್ಥೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಳಗಾವಿ ಮಹಾನಗರಪಾಲಿಕೆ ಚುನಾವಣೆಗೆ ಪಕ್ಷದ ಚಿನ್ಹೆಯ ಮೇಲೆ ಸ್ಪರ್ಧಿಸುವುದಾಗಿ ಮೊದಲು ಘೋಷಿಸಿದ್ದೇನೆ ನಾನು ಎಂದು ತಿಳಿಸಿದರು. ನಾವು ನೂರಾರು ಆಶ್ವಾಸನೆ ನೀಡುವುದಿಲ್ಲ. ಆದರೆ ಜನರಿಗೆ ನೆಮ್ಮದಿಯ …

Read More »

ಮಿಸ್ಟರ್‌ ಫರ್ಫೆಕ್ಟ್‌ ʼMS ಧೋನಿʼ ವಿಶ್ವದ 2ನೇ ಶ್ರೀಮಂತ ಕ್ರಿಕೆಟಿಗ : ತಿಂಗಳಿಗೆ ʼಮಾಹಿʼ ಗಳಿಸುವುದೆಷ್ಟು ಗೊತ್ತಾ?

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಆಗಸ್ಟ್ 2020ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ʼನಿಂದ ನಿವೃತ್ತರಾಗಿರಬಹುದು. ಆದ್ರೆ, ಇದು ಕ್ರಿಕೆಟಿಗನ ಜನಪ್ರಿಯತೆ, ಅಭಿಮಾನಿಗಳು, ಅನುಯಾಯಿಗಳ ಮೇಲೆ ಪರಿಣಾಮ ಬೀರಿಲ್ಲ. ಹಾಗಾಗಿನೇ ಇವ್ರು ಇನ್ನೂ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿ ಉಳಿದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಅನ್ನು ಮುನ್ನಡೆಸುತ್ತಿರುವ ಧೋನಿ, ಜಾಹೀರಾತುಗಳು ಮತ್ತು ಪ್ರೋಮೋಗಳನ್ನ ಒಳಗೊಂಡ ಲೀಗ್ʼನ ಫೇಸ್‌ ಆಗಿದ್ದಾರೆ. ಇನ್ನು ವಿಶ್ವದಾದ್ಯಂತ ಲೀಗ್ʼನ ಬೆಳವಣಿಗೆ ಮತ್ತು …

Read More »

ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ?

ಬೆಂಗಳೂರು, ಆ.28: ಸಂಭಾವ್ಯ ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಶನಿವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ಪೀಠವೂ, ಸೋಂಕು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ. ರಾಜ್ಯ ವ್ಯಾಪ್ತಿಯಲ್ಲಿ ಸಂಭಾವ್ಯ ಕೋವಿಡ್ ಮೂರನೆ ಅಲೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳೇನು. …

Read More »

ಕಾಂಗ್ರೆಸ್ ನ 60 ವರ್ಷದ ಆಡಳಿತ ದೇಶಕ್ಕೆ ಶಾಪವಾಗಿತ್ತು; ‘ಕೈ’ ನಾಯಕರಿಗೆ ಸಚಿವ ಶ್ರೀರಾಮುಲು ತಿರುಗೇಟು

ಗದಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಚಿವ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷದ ಆಡಳಿತ ಇಡೀ ದೇಶಕ್ಕೆ ಶಾಪವಾಗಿತ್ತು ಎಂದು ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಜನತೆಗೆ ಶಾಪವಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮುಲು, ಕಾಂಗ್ರೆಸ್ ನ 60 ವರ್ಷ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಶಾಪವಾಗಿತ್ತು. ಆ ಶಾಪದಿಂದ ಮುಕ್ತಿ ದೊರೆತು ದೇಶದಲ್ಲಿ ನರೇಂದ್ರ ಮೋದಿ ಸರ್ಕಾರ ಬಂದಿದೆ. ರಾಜ್ಯದಲ್ಲಿ …

Read More »

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಸಚಿವ ಈಶ್ವರಪ್ಪ ಭೇಟಿ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿನೋಬ ನಗರದಲ್ಲಿನ ನಿವಾಸಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಚರ್ಚಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿ ತವರು ಜಿಲ್ಲೆಗೆ ಬಂದಿರುವ ಯಡಿಯೂರಪ್ಪ ಅವರ ಜತೆ ಉಪಾಹಾರ ಸೇವಿಸುತ್ತಾ ಅರ್ಧ ತಾಸು ಮಾತುಕತೆ ನಡೆಸಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ತಮ್ಮ ಗಮನಕ್ಕೆ ತಾರದೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನೇರವಾಗಿ ಹಣ ಬಿಡುಗಡೆ ಮಾಡಿದ್ದಾರೆ ಎಂದು …

Read More »