Breaking News
Home / 2021 / ಆಗಷ್ಟ್ (page 70)

Monthly Archives: ಆಗಷ್ಟ್ 2021

ಸಿಎಂ ಆದ 24 ಗಂಟೆಯೊಳಗೆ ದೇವೇಗೌಡರ ಮನೆಗೇಕೆ ಹೋಗಬೇಕಿತ್ತು? -ಗುಡುಗಿದ ಬಿಜೆಪಿ ಶಾಸಕ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು? ಎಂದು ಶಾಸಕ ಪ್ರೀತಂಗೌಡ ಗುಡುಗಿದ್ದಾರೆ. ನೂರು ಮೀಟರ್ ಓಡೋಕೆ ಬಂದಿಲ್ಲ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಯಡಿಯೂರಪ್ಪ ಅವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ನಾನು ನೂರು ಮೀಟರ್ ಓಡಲಿಕ್ಕೆ ಬಂದಿಲ್ಲ, ಮ್ಯಾರಥಾನ್‌ ಓಡಲು ಬಂದಿದ್ದೇನೆ. ಯಾರ ಹತ್ತಿರನೂ ಮಂತ್ರಿ ಮಾಡಿ ಎಂದು ಕೇಳಿಲ್ಲ. ಮಂತ್ರಿ ಮಾಡಿಲ್ಲ ಅನ್ನೋದ್ಕಿಂತ ನಾನು ಕೇಳಿಲ್ಲ. …

Read More »

ಗದಗ: ಎರಡು ಎಕರೆ ಜಮೀನಿನಲ್ಲಿ ಭರ್ಜರಿ ಗುಲಾಬಿ ಹೂವು ಬೆಳೆದ ಉಪನ್ಯಾಸಕ; ಲಕ್ಷ ಲಕ್ಷ ರೂಪಾಯಿ ಸಂಪಾದನೆ

ಗದಗ: ಅವರು ಅತಿಥಿ ಉಪನ್ಯಾಸಕ ವೃತ್ತಿ ಮಾಡುತ್ತಿದ್ದರು. ಆದರೆ ಈ ಉಪನ್ಯಾಸಕ ವೃತ್ತಿಯಿಂದ ಅವರ ಹೊಟ್ಟೆ ತುಂಬುತ್ತಿರಲಿಲ್ಲ. ಹೀಗಾಗಿ ಬದುಕು ಸಾಗಿಸಲು ಏನಾದರು ಮಾಡಬೇಕು ಎಂದು ಯೋಚಿಸುತ್ತಿದ್ದಾಗ ಮೊಬೈಲ್​ನಲ್ಲಿ ಅವರಿಗೆ ಮುಂದಿನ ಜೀವನದ ದಾರಿ ಸಿಕ್ಕಿದೆ. ಅಂದು ಯೂಟ್ಯೂಬ್​ನಲ್ಲಿ ಗುಲಾಬಿ ಕೃಷಿ ( Agriculture) ಹೇಗೆ ಮಾಡುತ್ತಾರೆ ಎಂದು ಮಾಹಿತಿ ಪಡೆದಿದ್ದ ಅತಿಥಿ ಉಪನ್ಯಾಸಕ, ತಮ್ಮ ಜೀವನದಲ್ಲಿ ಅದೇ ಮಾರ್ಗ ಅನುಸರಿಸಿ, ಭರ್ಜರಿ ಗುಲಾಬಿ ಹೂ (Rose) ಬೆಳೆದು, ಹೂವಿನಂತ …

Read More »

ಸಾಹುಕಾರರ ಅನ್ನದಾನ ಕಾರ್ಯಕ್ರಮ ಇಂದು ಗೋಕಾಕ ತಾಲೂಕಿನ ಖನಗಾವ ಗ್ರಾಮದಲ್ಲಿ…

ಗೋಕಾಕ: ಪ್ರತಿ ಶನಿವಾರ ದಂತೆ ಈ ಒಂದು ವಾರ ಕೂಡ ನಮ್ಮ ಸಂತೋಷ್ ಜಾರಕಿಹೊಳಿ ಅವರ ತಂಡ ಇಂದು ಗೋಕಾಕ ತಾಲೂಕಿನ ಮತ್ತೊಂದು ಹಳ್ಳಿಗೆ ಅನ್ನ ಪ್ರಸಾದ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿ ಕೊಂಡಿತ್ತು ಇಂದು ಗೋಕಾಕ ತಾಲೂಕಿನ ಖನಗಾವಿ ಕನ್ನಮ್ಮ ದೇವಸ್ಥಾನದಲ್ಲಿ ಈ ಒಂದು ಅನ್ನ ಸಂತರ್ಪಣೆ ನಡೆಯಿತು. ಇದು ಗೋಕಾಕ ತಾಲೂಕಿನ ಮೂವತ್ತೆರಡನೆಯ ಹಳ್ಳಿ ಇದು ವರೆಗೆ ಮೂವತ್ತಕ್ಕೂ ಹೆಚ್ಚಿನ ಹಳ್ಳಿ ಗಳಲ್ಲಿ ಈ ಒಂದು ಕಾರ್ಯಕ್ರಮ …

Read More »

ಸಿಎಂ ಬೊಮ್ಮಾಯಿರನ್ನು ಭೇಟಿ ಮಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್

ಬೆಂಗಳೂರು :ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಆರ್.ಟಿ.ನಗರದ ಸಿಎಂ ನಿವಾಸಕ್ಕೆ ಪುತ್ರ ಯುವರಾಜ್ ಕುಮಾರ್ ಜೊತೆ ಭೇಟಿ ನೀಡಿದ ರಾಘವೇಂದ್ರ ರಾಜ್ ಕುಮಾರ್, ಸಿಎಂಗೆ ಶುಭ ಹಾರೈಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರು ನಮ್ಮ ಕುಟುಂಬ ಸ್ನೇಹಿತರು. ಬೊಮ್ಮಾಯಿಯವರ ಮದುವೆಗೆ ಅಪ್ಪಾಜಿಯವರು ಹೋಗಿದ್ದರು. ಆಗಿನಿಂದಲೂ ನಮ್ಮ ಕುಟುಂಬಕ್ಕೆ ಅವರ ಪರಿಚಯವಿದೆ. ಅವರು ಸಿಎಂ ಆಗಿರುವ ಹಿನ್ನೆಲೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfwe) ಹಿನ್ನೆಲೆ ನಿನ್ನೆ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಗತ್ಯ ವಸ್ತುಗಳ‌ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ತರಕಾರಿ, ಹೂವು ಹಣ್ಣು, ಹಾಲು, ಮದ್ಯದಂಗಡಿ, ದಿನಸಿ ಅಂಗಡಿ ತೆರೆಯಬಹುದಾಗಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2ಗಂಟೆ ವರೆಗೆ ಮಾತ್ರ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಿದ್ದು, ಉಳಿದಂತೆ ಎಲ್ಲಾ …

Read More »

ಗಡಿಭಾಗಗಳಲ್ಲಿ ದಿಢೀರ್ ಕರ್ಫ್ಯೂ: ತರಕಾರಿಗಳನ್ನು ರಸ್ತೆಗೆ ಎಸೆದು ವ್ಯಾಪಾರಸ್ಥರ ಆಕ್ರೋಶ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ರೈತರು ಹಾಗು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಲಾಕ್​ಡೌನ್​ ಸಡಲಿಕೆ ನಂತರ ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳುವುದರೊಳಗೆ ಮತ್ತೆ ಕರ್ಫ್ಯೂ ಜಾರಿಯಾಗಿದ್ದರಿಂದ ರೈತರು ಮತ್ತು ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ತಳ್ಳಿದೆ. ಮಧ್ಯಾಹ್ನ 2 ಗಂಟೆಯವರೆಗೂ ತರಕಾರಿ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಇದ್ದರೂ ಮಾರ್ಕೆಟ್​ಗೆ ಜನ ಬರುತ್ತಿಲ್ಲ ಎಂದು ಗೋಳಾಡುತ್ತಿರುವ ವ್ಯಾಪಾರಸ್ಥರು, ದಿಢೀರ್​ ಕರ್ಫ್ಯೂನಿಂದ ವಹಿವಾಟು ಬಂದ್​ ಆಗಿದೆ ಎನ್ನುತ್ತಿದ್ದಾರೆ. ಇನ್ನು ಕಲಬುರಗಿ …

Read More »

ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ

ಬೆಂಗಳೂರು: ಅಡ್ಡಾದಿಡ್ಡಿ ಆಟೋ ಚಲಾಯಿಸಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ. ಆಟೋ ಚಾಲಕ ಸೇರಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್ (28) ಮತ್ತು ರಾಹುಲ್( 21) ಮೃತ ದುರ್ದೈವಿಗಳು. ಇನ್ನು ಆಟೋದಲ್ಲಿದ್ದ ವಾಸಪ್ಪ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ಪ್ರಯಾಣಿಕರನ್ನ ಕೂರಿಸಿಕೊಂಡು …

Read More »

ಕಾರ್ ಪಲ್ಟಿ ಸಚಿವ ಹೆಬ್ಬಾರ್ ಸಭೆಗೆ ತೆರಳುವಾಗ ಭೀಕರ ಅಪಘಾತ;

ಕಾರವಾರ; ಕಾರ್ ಪಲ್ಟಿಯಾಗಿ ಲೋಕೊಪಯೋಗಿ ಇಲಾಖೆ ಇಂಜಿನಿಯರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲಾದಲ್ಲಿ ನಡೆದಿದೆ.           ಸಿದ್ದಾಪುರದ ಲೋಕೊಪಯೋಗಿ ಇಲಾಖೆ ಎಇಇ ಮುದುಕಣ್ಣವರ್ ( 58 ) ಮೃತಪಟ್ಟವರು. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅವರ ಸಭೆಗೆ ಶಿರಸಿ ಸಿದ್ದಾಪುರ ಮತ್ತು ಮುಂಡಗೋಡದ ಲೋಕೊಪಯೋಗಿ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಬರುತ್ತಿದ್ದರು. ಈ ವೇಳೆ ಅಂಕೋಲಾ …

Read More »

ಅತೃಪ್ತರಿಗೆ ಮತ್ತೆ ಜಾರಕಿಹೊಳಿ ನೇತೃತ್ವ; ಬೆಲ್ಲದ್ ಸಾಥ್, ತಡರಾತ್ರಿ ಮೀಟಿಂಗ್!

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಹಿಸಿಕೊಂಡಿದ್ದಾರೆ. ವಲಸಿಗ ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ್‌ಕುಮಠಳ್ಳಿ, ವಿಧಾನ ಪರಿಷತ್‌ ಸದಸ್ಯರಾಜುಗೌಡ,ಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್‌ ಅವರು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ತಡ ರಾತ್ರಿ ಸಭೆ ನಡೆಸಿದ್ದಾರೆ. ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಚರ್ಚೆ ನಡೆಸಿದ್ದಾರೆ …

Read More »

‘ಇಂದಿರಾ ಕ್ಯಾಂಟೀನ್’ ಹೆಸರು ಬದಲಾವಣೆ ಮಾಡುವಂತೆ ಸಿಎಂ ಬಳಿ ಕೇಳಿಕೊಂಡ ಸಿಟಿ ರವಿ

ಬೆಂಗಳೂರು: ಕೇಂದ್ರ ಸರ್ಕಾರ ‘ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ’ಯ ಹೆಸರನ್ನು ಬದಲಿಸಿ ‘ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ’ ಎಂದು ಘೋಷಣೆ ಮಾಡಿರುವ ಬೆನ್ನಲ್ಲೇ, ‘ಕರ್ನಾಟಕದಲ್ಲೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಸಿಟಿ ರವಿ ಅವರು ಇಂದು ಟ್ವೀಟ್ ಮಾಡಿದ್ದು, ‘ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು …

Read More »