Breaking News

Daily Archives: ಸೆಪ್ಟೆಂಬರ್ 5, 2021

ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಕಳ್ಳ

ಹುಬ್ಬಳ್ಳಿ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿ ತನ್ನ ಮನೆತನದ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ಪಟ್ಟಣದ ಮಂಗೇಶ ಕೆರೆ ದಂಡೆಯ ಬಳಿ ನಡೆದಿದೆ. ಹನುಮಂತ ಈಶ್ವರಪ್ಪ ಧಾರವಾಡ ಮೃತನಾಗಿದ್ದಾನೆ. ಈತ ಕಲಘಟಗಿ ಪಟ್ಟಣದ ನಿವಾಸಿಯಾಗಿದ್ದಾನೆ. ಹನುಮಂತ ಹಾಗೂ ಆತನ ಗೆಳೆಯ ಮಲ್ಲಯ್ಯ ಹೆಬ್ಬಳ್ಳಿಮಠ ಜೊತೆಗೆ ಸೇರಿ ಅಂದಾಜು 2500 ಖಾಲಿ ಗೋಣಿ ಚೀಲಗಳನ್ನು ಆಗಸ್ಟ್ 28 ರಂದು ಕಳ್ಳತನ ಮಾಡಿ ಹುಬ್ಬಳ್ಳಿ ಎಪಿಎಂಸಿಯಲ್ಲಿ ಮಾರಿದ್ದರು. ಈ ಕುರಿತು …

Read More »

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

  ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂದೇಶ ನೀಡಿರುವ ಅವರು, ಶಿಕ್ಷಕರಿಂದ ಮಾತ್ರ ಈ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವೆಂದು ಹೇಳಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ …

Read More »

5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿರುವ ರಾಜ್ಯ ಸರ್ಕಾರ ಸರಳವಾಗಿ ಗಣೇಶ ಹಬ್ಬ ಆಚರಿಸುವಂತೆ ಸೂಚನೆ ನೀಡಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ಈಬಾರಿ 5 ದಿನಗಳ ಕಾಲ ಸರಳವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ಷತ್ತುಗಳನ್ನು ವಿಧಿಸಲಾಗಿದೆ ಎಂದರು.   ಹೊಸ ಗೈಡ್ ಲೈನ್: * ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಜಿಲ್ಲಾಡಳಿತದ ಅನುಮತಿ ಕಡ್ಡಾಯ …

Read More »

ಶಾಸಕ ಮಹಾಂತೇಶ ದೊಡ್ದಗೌಡರ ದಂಪತಿಗೆ ಹೂ ಮಳೆ: ಪೊಲೀಸರಿಗೆ ಶೋಕಾಸ್ ನೋಟಿಸ್ ಜಾರಿ

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಪತ್ನಿಗೆ ಹೂಮಳೆಗೈದ ಪೋಲಿಸ್ ಅಧಿಕಾರಿಗಳಿಗೆ ಶೋಕಾಸ್​ ನೋಟಿಸ್ ಜಾರಿ ಮಾಡಲಾಗಿದೆ. ನಿನ್ನೆ ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ್ದರು. ಈ ಕುರಿತು ನ್ಯೂಸ್​ಫಸ್ಟ್​ ವರದಿ ಬಿತ್ತರಿಸಿತ್ತು. ಘಟನೆ ಕುರಿತು ಶಾಸಕ ಮಹಾಂತೇಶ ದೊಡ್ಡಗೌಡರ​​ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗುವದರ ಜೊತೆಗೆ ಪೋಲಿಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ …

Read More »

ಅಂಗನವಾಡಿ ಸಹಾಯಕಿ ಪತಿಯಿಂದ ಆಹಾರ ಧಾನ್ಯ ಕಳ್ಳಸಾಗಾಟ

ತುಮಕೂರು: ಅಂಗನವಾಡಿ ಆಹಾರ ಸಾಮಾಗ್ರಿಗಳ ಕಳ್ಳಸಾಗಾಟ ಮಾಡುತ್ತಿದ್ದ ಅಂಗನವಾಡಿ ಸಹಾಯಕಿ ಪತಿ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ತಿಪಟೂರು ತಾಲ್ಲೂಕಿನ ಹುಚ್ಚನಹಳ್ಳಿ ಗ್ರಾಮ ಅಂಗನವಾಡಿ ಸಹಾಯಕಿ ಚೈತ್ರಾ ಪತಿ ಅಶೋಕ್ ಆಹಾರ ಧಾನ್ಯಗಳ ಕಳವು ಮಾಡುತ್ತಿದ್ದ. ಇಂದು ಆಹಾರ ಧಾನ್ಯಗಳನ್ನು ಕಳವು ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮಕ್ಕಳಿಗಾಗಿ ನೀಡಿದ್ದ ತೊಗರಿಬೇಳೆ, ಕಡ್ಲೆಬೀಜ, ಕಡ್ಲೆಬೇಳೆ, ಹಾಲಿನ ಪಾಕೇಟ್, ಸಕ್ಕರೆಯನ್ನು ಬೈಕ್ ನಲ್ಲಿ ಸಾಗಿಸುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ.

Read More »

ಮೈಸೂರು ಆಯ್ತು, ಇದೀಗ ಕಲಬುರಗಿಯಲ್ಲಿ ಪೈಶಾಚಿಕ ಕೃತ್ಯ -ಡ್ರಾಪ್ ಕೊಡೋ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಮೊನ್ನೆ ಮೊನ್ನೆಯಷ್ಟೇ ಮೈಸೂರು ಆಯ್ತು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಒಂಟಿ ಮಹಿಳೆಯ ಮೇಲೆ ಕಾಮ ಪಿಶಾಚಿ ಒಬ್ಬ ಅತ್ಯಾಚಾರವೆಸಗಿರೋ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡ್ರಾಪ್ ಕೊಡೋ ನೆಪದಲ್ಲಿ ಒಂಟಿ ಮಹಿಳೆ ಮೇಲೆ ಪೈಶಾಚಿಕ ಕೃತ್ಯ ಎಸಗಿದ ಆರೋಪಿ ನಾಗರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ..? ಕಳೆದ ಮೇ 24ರಂದು ಸರ್ಕಾರ ಲಾಕ್​​ಡೌನ್ ಘೋಷಿಸಿತ್ತು. ಈ ಹಿನ್ನೆಲೆ ಸಾರಿಗೆ ಸಂಚಾರ ಸ್ಥಗಿತಗೊಂಡಿತ್ತು. ಸರ್ಕಾರಿ ಕಚೇರಿಯಲ್ಲಿ ಕಂಪ್ಯೂಟರ್ …

Read More »

ಸ್ಯಾಂಡಲ್​ವುಡ್​ಗೆ ಬಿಗ್​ ಶಾಕ್​: ರೌಡಿಸಂ ಪ್ರೇರಕ ದೃಶ್ಯಗಳಿಗೆ ಬ್ರೇಕ್​ ಹಾಕಲು ಪೊಲೀಸ್​ ಇಲಾಖೆ ಚಿಂತನೆ

ಬೆಂಗಳೂರು : ಇನ್ಮುಂದೆ ‘ಮಚ್ಚು ಹಿಡಿದೊವ್ನು ನಾನು,ಲಾಂಗ್ ಕೊಟ್ಟವ್ನು ನಾನು, ಮಚ್ಚು ಹಿಡಿಯೊಕೆ ಹೇಳ್ಕೊಟ್ಟಿದ್ದೇ ನಾನು’ ಅಂತ ಖಡಕ್​ ಡೈಲಾಗ್ ಹೊಡ್ದು, ಸಿನಿ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳೊ ರೌಡಿಸಂ ಪ್ರೇರಕ ದೃಶ್ಯಾವಳಿಗಳಿರುವ ಸಿನಿಮಾಗಳಿಗೆ ಪೊಲೀಸ್​ ಇಲಾಖೆ ಶಾಕ್​ ನೀಡಲು ಸಜ್ಜಾಗಿದೆ. ಹೌದು, ಇತ್ತೀಚಿಗೆ ರೌಡಿಸಂ ಆಧಾರಿತ ಸಿನಿಮಾಗಳು, ಆರೋಪಿಗಳಿಗೆ ಪ್ರೇರಣೆಯಾಗುತ್ತಿವೆ ಎಂಬ ಹಿನ್ನೆಲೆಯಲ್ಲಿ ಕೆಲ ರೌಡಿಸಂ ಎಳೆ ಹೊಂದಿರುವ, ಮತ್ತು ರೌಡಿಸಂ ಪ್ರೇರೆಪಿಸುವ ಸಿನಿಮಾಗಳಿಗೆ ಬ್ರೇಕ್​ ಹಾಕಲು ಪೊಲೀಸ್​ ಇಲಾಖೆ …

Read More »

ಶಿಕ್ಷಕರಿಗಾಗಿ ದೇವಸ್ಥಾನವನ್ನೇ ಕಟ್ಟಿಸಿದ ಗ್ರಾಮಸ್ಥರು -ಮನೆ ಮನೆಗೆ ತೆರಳಿ ಅಕ್ಷರ ಕ್ರಾಂತಿ ಮಾಡಿದ್ದ ಮಾಸ್ಟರ್

ಐತಿಹಾಸಿಕಸ್ಥಳಗಳು, ಸ್ವಾತಂತ್ರ್ಯ ಹೋರಾಟಗಾರರು, ಅನೇಕ ಸಾಹಿತಿಗಳು, ಕವಿಪುಂಗವರನ್ನು ಕೊಟ್ಟಂತಹ ಜಿಲ್ಲೆ ವಿಜಯಪುರ. ಇದೀಗ, ಈ ಜಿಲ್ಲೆಯು ಕಲ್ಲನ್ನು ಕೆತ್ತಿ ಸುಂದರ ಶಿಲ್ಪಿಯನ್ನಾಗಿಸೋ ಶಕ್ತಿ ಇರೋ ಶಿಕ್ಷಕರನ್ನು ಸಹ ನೀಡಿದೆ. ಗುರುಬ್ರಹ್ಮ, ಗುರುವಿಷ್ಣು, ಗುರುದೇವೋ ಮಹೇಶ್ವರ, ಗುರುಸಾಕ್ಷಾತ್ ಪರಬ್ರಹ್ಮ, ತಸ್ಮೈಶ್ರೀ ಗುರುವೇ ನಮಃ ಎಂಬ ಮಾತು, ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಅಕ್ಷರಶಃ ನಿಜವಾಗಿದೆ. ಗುಮ್ಮಟನಗರಿ ಜನರು ಶಿಕ್ಷಕರ ಮೇಲಿನ ಅಪಾರ ಪ್ರೀತಿಯಿಂದಾಗಿ, ರೇವಣಸಿದ್ದಪ್ಪ ಮಾಸ್ತರಿಗಾಗಿ ಒಂದು ಗುಡಿಯನ್ನೇ ನಿರ್ಮಿಸಿದ್ದಾರೆ. ಇಂದಿಗೂ …

Read More »

ಹಾರ, ತುರಾಯಿ ನಿಷೇಧದ ಆದೇಶ ಉಲ್ಲಂಘಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದ ಆದೇಶವನ್ನು ಸ್ವತಃ ಉಲ್ಲಂಘಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದರು. ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ಬೆಲೆಯ ಉಡುಗೊರೆ ನೀಡುವುದನ್ನು ನಿಷೇಧಿಸಿ ಮುಖ್ಯಮಂತ್ರಿಯವರು ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಹಾರ, ತುರಾಯಿ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು …

Read More »

ಇಂದು ಸಿಎಂ ನೇತೃತ್ವದ ಮಹತ್ವ ಸಭೆ: ಸಾರ್ವಜನಿಕ ಗಣೇಶೋತ್ಸವಕ್ಕೆ ಸಿಗುತ್ತಾ ಅನುಮತಿ?

ರಾಜ್ಯದ ಎಲ್ಲ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಗಣೇಶ ಹಬ್ಬ ಆಚರಿಸಲು ಉತ್ಸುಕವಾಗಿವೆ. ಆದ್ರೆ ಇನ್ನೂ ಕೂಡ ಸರ್ಕಾರದಿಂದ ಅನುಮತಿ ದೊರೆತಿಲ್ಲ. ಹಬ್ಬಕ್ಕೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದ್ದು, ಬಳಿಕ ಸಿಎಂ ಬೊಮ್ಮಾಯಿ ಘೋಷಣೆ ಮಾಡುವ …

Read More »