Breaking News

Daily Archives: ಸೆಪ್ಟೆಂಬರ್ 14, 2021

ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 25 ವರ್ಷದ ಮೊಹ್ಮದಶಾಯಿದ ಅಬ್ದುಲಹಮೀದ ಮುಲ್ಲಾ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಆರೋಪಿ ಬೆಳಗಾವಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತನಿಂದ ನಾಲ್ಕು ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ ಹಿರೇಮಠ, ಪಿಎಸ್ ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು …

Read More »

ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಜ್ವರ, ಕೆಮ್ಮು, ನೆಗಡಿ ಸಮಸ್ಯೆ; ಮಕ್ಕಳ ತಜ್ಞರ ಜೊತೆ ಸಭೆ

ಮಹಾಮಾರಿ ಕೊರೊನಾ ಮೂರನೇ ಅಲೆ ಭೀತಿ ನಡುವೆ ಹೇಗೋ ಶಾಲೆಗಳು ಆರಂಭವಾಗಿವೆ. ಮಕ್ಕಳೆಲ್ಲ ಮತ್ತೆ ಹೊರಗಡೆ ಕಾಲಿಡ್ತಿವೆ. ಆದ್ರೆ ಈಗ ಬೆಂಗಳೂರಿನ ಬಹುತೇಕ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಸಮಸ್ಯೆ ಕಂಡು ಬರುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಜ್ವರ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿಸಿದರೆ ಕೊರೊನಾ ಲಕ್ಷಣಗಳಿದ್ದರೂ ಮಕ್ಕಳಿಗೆ ಕೊವಿಡ್ ನೆಗೆಟಿವ್ ವರದಿ ಬರುತ್ತಿದೆ. ಕೆಲವು ಮಕ್ಕಳ ರಕ್ತ ಪರೀಕ್ಷೆ ನಡೆಸಿದಾಗ …

Read More »

ಬೆಂಗಳೂರಿನಲ್ಲಿ ಡ್ರಗ್ಸ್​ ಮಾರುತ್ತಿದ್ದ ಮೂವರನ್ನು ಬಂಧಿಸಿದ ಸಿಸಿಬಿ ಪೊಲೀಸ

ಬೆಂಗಳೂರು: ಬೆಂಗಳೂರಿನಲ್ಲಿ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆಗಳನ್ನು ಡೀಲಿಂಗ್ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ವಿದೇಶಿ ಪ್ರಜೆಗಳಾಗಿದ್ದು, ಓರ್ವ ನೆರೆಯ ಕೇರಳ ರಾಜ್ಯದವನಾಗಿದ್ದಾನೆ. ಆರೋಪಿಗಳು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ, ಎಕ್ಸ್‌ಟಸಿ ಮಾತ್ರೆ ಜಪ್ತಿ ಮಾಡಲಾಗಿದ್ದು, ಆ …

Read More »

ಕರ್ನಾಟಕ ಟಿಇಟಿ ಫಲಿತಾಂಶ ಬಿಡುಗಡೆ: 45,074 ಅಭ್ಯರ್ಥಿಗಳಿಗೆ ಅರ್ಹತೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‌ಟಿಇಟಿ-2021)ಯ ಫಲಿತಾಂಶ ಬಿಡುಗಡೆ ಮಾಡಿದೆ. ವಿವಿಧ ತರಗತಿಗಳ ಬೋಧಕರಿಗೆ ನಡೆಸಲಾಗುವ ಪತ್ರಿಕೆ 1 ಹಾಗೂ 2 ರಲ್ಲಿ ಒಟ್ಟಾರೆಯಾಗಿ 2,31,886 ಅಭ್ಯರ್ಥಿಗಳು ಹಾಜರಾಗಿದ್ದರು. ಈ ಪೈಕಿ 45,074 ಜನರು ಅರ್ಹತೆ ಪಡೆದಿದ್ದು, ಶೇ.19 ಉತ್ತೀರ್ಣತೆ ದಾಖಲಾಗಿದೆ. ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿದ್ದ 2,02,991 ಅಭ್ಯರ್ಥಿಗಳ ಪೈಕಿ 7,980 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರು, ಶೇ.3.93 ಫಲಿತಾಂಶ ದಾಖಲಾಗಿತ್ತು. ಈ ಬಾರಿ ಶೇ.15 ರಷ್ಟು …

Read More »

ದಸರಾ ಬಳಿಕ ಪ್ರಾಥಮಿಕ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಪಿಯುಸಿ, ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ (6ರಿಂದ 12ನೇ ತರಗತಿ) ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಸುಸೂತ್ರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೂ ದಸರಾ ಬಳಿಕ ಭೌತಿಕ ತರಗತಿ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಆರಂಭಿಸಿದೆ. ಸರಕಾರ ಹಾಗೂ ಕೊರೊನಾ ತಾಂತ್ರಿಕ ತಜ್ಞರ ಸಮಿತಿಯ ಅಭಿಪ್ರಾಯ ಹಾಗೂ ಒಪ್ಪಿಗೆ ಪಡೆದೇ ಭೌತಿಕ ತರಗತಿಗಳನ್ನು ಆರಂಭಿಸಬೇಕು. ಈಗಾಗಲೇ ನಡೆಯುತ್ತಿರುವ ಭೌತಿಕ ತರಗತಿಗಳಿಗೆ ವಿದ್ಯಾರ್ಥಿಗಳು, ಪಾಲಕ, …

Read More »

ಸಾರಿಗೆ ನೌಕರರಿಗೆ ಸಿಹಿ ಸುದ್ದಿ?

ಬೆಂಗಳೂರು: ಸಾರಿಗೆ ಮುಷ್ಕರದಿಂದ ಅಮಾನತು, ವಜಾ, ವರ್ಗಾವಣೆ ಮುಂತಾದವುಗಳಿಂದ ಅತಂತ್ರರಾಗಿರುವ ಸಾವಿರಾರು ನೌಕರರ ಬಗ್ಗೆ ಸಹಾನುಭೂತಿ ತೋರಿರುವ ಸರಕಾರ, ಶೀಘ್ರದಲ್ಲೇ ಈ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಸಾರಿಗೆ ನೌಕರರ ಹಿತಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಲ್ಕೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಚರ್ಚೆ ನಡೆಸಿ, ಮಾಹಿತಿ ಕಲೆಹಾಕಿದರು. ಈ ಸಂದರ್ಭದಲ್ಲಿ ನೌಕರರ ಅಮಾನತು, ವಜಾ ಬಗ್ಗೆಯೂ ಪ್ರಸ್ತಾಪವಾಗಿದ್ದು, ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಸೂಕ್ತ …

Read More »

ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ರೈತರಿಗೆ ಬೆಳೆ ವಿಮೆ ಸೌಲಭ್ಯಪಡೆದುಕೊಳ್ಳುವ ಪಾಠ ಹೇಳಿಕೊಡುವ ಮೂಲಕ ರೈತಾಪಿ ಸಮುದಾಯದ ಅಭಿವೃದ್ಧಿಗೆ ಮಾಜಿ ಸಚಿವ ಸಿ.ಎಂ. ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು , ಉದಾಸಿ ಆಗಲಿಕೆ ನನ್ನ ಪಾಲಿಗೆ ಬಹಳ ದೊಡ್ಡ ನಷ್ಟವಾಗಿದೆ. ತಂದೆ ಸಮಾನ ರಾಗಿದ್ದ ಉದಾಸಿ ನನ್ನ ರಾಜಕೀಯ ಜೀವನದ ಬೆಳವಣಿಗೆಯಲ್ಲೂ ಬಹಳ ಪ್ರಮುಖ …

Read More »

ಕೊಯ್ನಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ

ಚಿಕ್ಕೋಡಿ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಭಾನುವಾರ 10 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿದ್ದ ಕೊಯ್ನಾ ಆಡಳಿತ ಮಂಡಳಿ ಸದ್ಯ 40 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಏರಿಕೆಯಾಗಿದ್ದು, ಯಡೂರು – ಕಲ್ಲೋಳ ಸೇತುವೆ ಜಲಾವೃತಗೊಂಡಿದೆ. ಈಗಾಗಲೇ ಕೃಷ್ಣಾ ನದಿ …

Read More »

ದೊಣ್ಣೆಯಿಂದ ಹೊಡೆದು ಅಪ್ಪನನ್ನೇ ಕೊಂದ ಮಗ!

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳವಾಗಿದ್ದು, ದೊಣ್ಣೆಯಿಂದ ಹೊಡೆದು ಮಗನೇ ಅಪ್ಪನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ನಡೆದಿದೆ. ಕೊಲೆಯಾದವರನ್ನು ಕುಮಾರನಾಯ್ಕ (55) ಎಂದು ಗುರುತಿಸಲಾಗಿದೆ. ಇವರನ್ನು ಮಗ ಮಧು (28) ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಮಧು ತನ್ನ ತಂದೆಗೆ ದೊಣ್ಣೆಯಿಂದ ಹೊಡೆದಿದ್ದಾನೆ. ದೊಣ್ಣೆಯಿಂದ ಹೊಡೆದ ರಭಸಕ್ಕೆ ಕುಮಾರನಾಯ್ಕನ ಕಿವಿಯಲ್ಲಿ ರಕ್ತಸ್ರಾವ …

Read More »