Breaking News

Daily Archives: ಸೆಪ್ಟೆಂಬರ್ 17, 2021

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ: ಮೀಸಲಾತಿ ನಾಶದ ಹುನ್ನಾರ ಎಂದ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸಭಾತ್ಯಾಗದ ಮಧ್ಯೆಯೂ ಇಂದು ವಿಧಾನಸಭೆಯಲ್ಲಿ ಇಂದು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯರ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರಗೊಂಡಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದಾರೆ. ಸರಣಿ ಟ್ವೀಟ್​​ಗಳನ್ನು ಮಾಡುವ ಮೂಲಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿಯಾಗಿದೆ. ಈಗ ಕ್ಷೇತ್ರಗಳ ಪುನರ್ ವಿಂಗಡನೆಗೆ ಆಯೋಗ ರಚನೆ ಮಾಡಿ, ಮೀಸಲಾತಿಯನ್ನು ನಾಶಮಾಡುವ ಹುನ್ನಾರ ಮಾಡಿದೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ರಾಜ್ಯ …

Read More »

ಮಾಧುಸ್ವಾಮಿ ಕೊಟ್ಟ CD ನೋಡಿ ಗಾಬರಿಯಾದೆ -ಪರಿಷತ್ ಕಲಾಪ

ಬೆಂಗಳೂರು: ಪರಿಷತ್ ಕಲಾಪದ ವೇಳೆ ಇಂದು CD ವಿಚಾರ ಪ್ರಸ್ತಾಪವಾಯಿತು. ಕಲಾಪದ ವೇಳೆ ಹಾಸ್ಯ ಚಟಾಕಿ ಹಾರಿಸಿದ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ, ‘CD ನೋಡಿ ಗಾಬರಿಯಾದೆ’ ಅನ್ನೋ ಮೂಲಕ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದರು. ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಗೆ ಶ್ರೀಕಂಠೇಗೌಡ ಪ್ರಶ್ನೆ ಕೇಳಿದ್ದರು. ಪ್ರಶ್ನೆಗೆ ಸಂಬಂಧಿಸಿದ ಮಾಹಿತಿಯನ್ನ ಸಚಿವರು ಸಿಡಿಯಲ್ಲಿ ನೀಡಿದ್ದರು. ಈ ಸಿಡಿ ನೋಡಿ ನನಗೆ ಗಾಬರಿ ಆಯ್ತು ಅಂತಾ ಶ್ರೀಕಂಠೇಗೌಡ ಹಾಸ್ಯ ಚಟಾಕಿ ಹಾರಿಸಿ, ಆ ಸಿಡಿಯನ್ನ …

Read More »

ಮತ್ತೆ ಗಾಳಿಪಟ-2 ಹಾರಾಟ.. ಸೆ. 18ರಿಂದ ಚಿತ್ರೀಕರಣ

ನ‌ಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಮತ್ತು ನಿರ್ದೇಶಕ ಯೋಗರಾಜ ಭ‌ಟ್‌ ಕಾಂಬಿನೇಶನ್‌ ನಲ್ಲಿ ಮೂಡಿ ಬರುತ್ತಿರುವ “ಗಾಳಿಪಟ-2′ ಚಿತ್ರದ ಚಿತ್ರೀಕರಣಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಕೋವಿಡ್‌ ಎರಡನೇ ಅಲೆಯ ಲಾಕ್‌ಡೌನ್‌ನಿಂದ ‌ “ಗಾಳಿಪಟ-2′ ಚಿತ್ರದ‌ ಚಿತ್ರೀಕರಣ ಚಟುವಟಿಕೆಗಳು ‌ಸ್ಥಗಿತಗೊಂಡಿದ್ದು, ಈಗ ಪರಿಸ್ಥಿತಿ ನಿಧಾನ‌ವಾಗಿ ಸುಧಾರಿಸುತ್ತಿರುವುದರಿಂದ ಮತ್ತೆ ಶೂಟಿಂಗ್‌ ಶುರು ಮಾಡ‌ಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ಯೋಗ‌ರಾಜ್‌ ಭಟ್‌, “ಈಗಾಗಲೇ ಮುಕ್ಕಾಲು ಭಾಗ ಶೂಟಿಂಗ್‌ ಪೂರ್ಣಗೊಂಡಿದೆ. …

Read More »

ವಿಮಾನದ ಟಿಕೆಟ್ ಗಿಂತ ಈ ಬಸ್ ಗಳ ಟಿಕೆಟ್ ದರ ಜಾಸ್ತಿ: ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಿದ ರಮೇಶ್ ಕುಮಾರ್

ಬೆಂಗಳೂರು : ಬಸ್‍ಗಳ ಟಿಕೆಟ್ ದರ ಹೆಚ್ಚಿಸುವವರಿಗೆ ಜನರ ಬವಣೆ ಗೊತ್ತಿಲ್ಲ. ವಿಮಾನದ ಟಿಕೆಟ್‍ಗಿಂತ ಈ ಬಸ್‍ಗಳ ಟಿಕೆಟ್ ದರ ಜಾಸ್ತಿ ಇದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ, ಸಿದ್ದರಾಮಯ್ಯ ಕಾಲದಿಂದಲೂ ಬಸ್ ಟಿಕೆಟ್ ದರ ಹೆಚ್ಚು ಮಾಡಿಕೊಂಡು ಬರುತ್ತಿದ್ದಾರೆ. ಟಿಕೆಟ್ ದರ ಹೆಚ್ಚಿಸೋರಿಗೆ ಜನರ ಬವಣೆ ಗೊತ್ತಿಲ್ಲ. ಹಬ್ಬದ ವೇಳೆ ಜನ ಊರುಗಳಿಗೆ …

Read More »

ವಿಧಾನಸೌಧದ ಗೇಟ್ ನಂಬರ್ 2ರಲ್ಲಿ ರಸ್ತೆ ಕುಸಿತ

ಬೆಂಗಳೂರು : ವಿಧಾನಸೌಧದ ಗೇಟ್ ನಂಬರ್ 2ರಲ್ಲಿ ಡಾಂಬರು ಹಾಕಿದ ರಸ್ತೆಯಲ್ಲಿ ಕುಸಿತ ಉಂಟಾಗಿದೆ. ಬಸ್, ಕಾರು ಸೇರಿದಂತೆ ವಾಹನಗಳು ನಿರಂತರವಾಗಿ ಸಂಚರಿಸುವ ರಸ್ತೆಯಲ್ಲಿ ಸುಮಾರು 10 ಅಡಿ ಅಗಲ, 10 ಅಡಿ ಆಳದ ರಂಧ್ರ ಸೃಷ್ಟಿಯಾಗಿದೆ.   ಭೂಮಿ ಕುಸಿಯುವಾಗಲೇ ಕಾರೊಂದು ಸ್ವಲ್ಪ ಅಂತರದಲ್ಲಿ ಭೂ ಕುಸಿತದ ಪ್ರಮಾದಿಂದ ಪಾರಾಗಿದೆ. ಡಾಬರು ರಸ್ತೆಯಲ್ಲಿ ಕುಸಿತ ಉಂಟಾಗಿರುವುದು ವಿಧಾನಸೌಧದ ಬಳಿ ನೆರೆದವರಲ್ಲಿ ಆತಂಕ ಮೂಡಿಸಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Read More »

ಕ್ಷೀರಭಾಗ್ಯ ಯೋಜನೆ ಹಾಲಿನಪುಡಿ ಅಕ್ರಮ ಸಾಗಾಟ, ಗ್ರಾಮಸ್ಥರಿಂದ ಓರ್ವನ ಸೆರೆ..

    ಆಂಕರ್: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.   ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ …

Read More »

– ಹೊಸೂರು ರಸ್ತೆಯಲ್ಲಿ ಲಾರಿಗೆ ಆಂಬುಲೆನ್ಸ್ ಡಿಕ್ಕಿ; ಮೂವರು ಸಾವು, ನಾಲ್ವರಿಗೆ ಗಂಭೀರ ಗಾಯ

– ಮುಂಬೈನ ಕಲ್ಯಾಣ್​ನಿಂದ ಚೆನ್ನೈಗೆ ಹೋಗುತ್ತಿದ್ದ ಆಂಬುಲೆನ್ಸ್ವೊಂದು ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾಗಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ನಾಲ್ವರ ಸ್ಥಿತಿ ಗಂಭೀರವಿದೆ. ಆನೇಕಲ್: ಕಳೆದೊಂದು ತಿಂಗಳಿನಿಂದ ಎಲ್ಲಿ ನೋಡಿದರೂ ಅಪಘಾತಗಳದ್ದೇ ಸುದ್ದಿ. ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ಯಮರಾಜ ಬೇಟೆಗೆ ನಿಂತಿರುವಂತಿದೆ. ಮೊನ್ನೆಯಷ್ಟೇ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓರ್ ಮೇಲೆ ಆದ ಅಪಘಾತದಿಂದ ಜನ ಹೊರ ಬಂದಿಲ್ಲ, ಅಷ್ಟರಲ್ಲೇ ಇಂದು ಗುರುವಾರ ಬೆಳಿಗ್ಗೆ ನಡೆದ ಭೀಕರ …

Read More »

ಮನೆಯಲ್ಲಿಯೇ ಡ್ರಗ್ಸ್‌ ತಯಾರಿ, ನ್ಯೂಜಿಲೆಂಡ್‌ ಸೇರಿ ವಿದೇಶಗಳಿಗೆ ಸರಬರಾಜು – ಸಿಸಿಬಿ ಬಲೆಗೆ ಬಿದ್ದ ನೈಜೀರಿಯಾ ಪ್ರಜೆ

ಬೆಂಗಳೂರು:ಮನೆಯಲ್ಲಿಯೇ ಡ್ರಗ್ಸ್‌ (ಮಾದಕವಸ್ತು) ತಯಾರಿ ಮಾಡಿ ನ್ಯೂಜಿಲೆಂಡ್‌ ಸೇರಿ ವಿದೇಶಗಳಿಗೆ ಸರಬರಾಜು ಮಾಡುತ್ತಿದ್ದ ಜಾಲವೊಂದನ್ನು ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಈ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ಮೂಲದ ಡೇವಿಡ್‌ ಜೊಹೊ ಮಲ್ವೆ ಎಂಬಾತನನ್ನು ಬಂಧಿಸಿರುವ ಸಿಸಿಬಿ ಮಾದಕವಸ್ತು ನಿಗ್ರಹ ಘಟಕ ಆರೋಪಿ ಬಳಿಯಿಂದ ಐದು ಕೋಟಿ ರೂ. ಮೌಲ್ಯದ ಕ್ರಿಸ್ಟೆಲ್‌, ಎಂಡಿಎಂಎ ಡ್ರಗ್ಸ್‌, ಹಾಗೂ ಈ ಡ್ರಗ್ಸ್‌ ತಯಾರಿಕೆಗೆ ಬಳಸಲಾಗುತ್ತಿದ್ದ ರಸಾಯನಿಕ ವಸ್ತುಗಳು ಹಾಗೂ ಇತರೆ ಪರಿಕರಗಳನ್ನು ಜಪ್ತಿ …

Read More »

ಡೇಟಿಂಗ್‌ ಆ್ಯಪ್ ಸುಂದರಿ ಬೀಸಿದ ಮೋಹಕ ಬಲೆಗೆ ಬಿದ್ದ ಚಾಲಕ- ಹಣ ಕಳೆದುಕೊಂಡು ಕಕ್ಕಾಬಿಕ್ಕಿ!

ಬೆಂಗಳೂರು: ಡೇಟಿಂಗ್  ವೆಬ್ ಸೈಟ್ ನಲ್ಲಿ ಪರಿಯಚಯವಾದ ಯುವತಿಯೊಬ್ಬಳನ್ನು ನಂಬಿ ಚಾಲಕನೊಬ್ಬ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುಂದರಿ ಬೀಸಿದ ಮೋಹದ ಬಲೆಗೆ ಬಿದ್ದ ಚಾಲಕ ಆಕೆ ಹೇಳಿದ ಬಣ್ಣದ ಮಾತುಗಳನ್ನು ನಂಬಿದ್ದಾನೆ. ಅಷ್ಟೇ ಅಲ್ಲದೆ ಆಕೆಯ ಸನಿಹ ಸೇರಲು ಹರಸಾಹಸಪಟ್ಟು ಆಕೆ ಹೇಳಿದಂತೆ ಹಣ ನೀಡಿ ಕಳೆದುಕೊಂಡು ಇದೀಗ ಆಕೆ ಹೇಳಿದ ಜೀವ ಬೆದರಿಕೆ ಕೇಳಿ ಕಕ್ಕಾಬಿಕ್ಕಿಯಾಗಿದ್ದಾನೆ. ಯಲಹಂಕ ಉಪನಗರದ ನಿವಾಸಿ ಮನೋಹರ್‌  (ಹೆಸರು ಬದಲಿಸಲಾಗಿದೆ) ವೃತ್ತಿಯಲ್ಲಿ …

Read More »

ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ

        ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …

Read More »