Daily Archives: ಸೆಪ್ಟೆಂಬರ್ 21, 2021

ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯ – ರಣಭೀಕರ ಪ್ರವಾಹಕ್ಕೂ ನಲುಗದ ಶಿವಲಿಂಗ, ನಂದಿ ವಿಗ್ರಹ

ಚಿಕ್ಕೋಡಿ(ಬೆಳಗಾವಿ): ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯವೊಂದು ನಡೆದಿದೆ. ರಣಭೀಕರ ಪ್ರವಾಹಕ್ಕೂ ಶಿವಲಿಂಗ ಹಾಗೂ ನಂದಿ ವಿಗ್ರಹ ನಲುಗದೆ ಜನರಲ್ಲಿ ಅಚ್ಚರಿ ಮೂಡಿಸಿವೆ. ಹೌದು. ಕೃಷ್ಣಾ ನದಿ ತೀರ ಉಕ್ಕಿ ಹರಿದ ಪರಿಣಾಮ 2019 ಹಾಗೂ 2021ರಲ್ಲಿ ರಣ ಭೀಕರ ಪ್ರವಾಹ ಬಂದಿತ್ತು. ರಕ್ಕಸ ಪ್ರವಾಹಕ್ಕೆ ನದಿ ತೀರದ ಜನರ ಬದುಕು ಅಕ್ಷರಶಃ ನಲುಗಿ ಹೋಗುವುದರ ಜೊತೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಅಷ್ಟೇ ಅಲ್ಲದೇ ಪ್ರವಾಹಕ್ಕೆ ಸಿಲುಕಿ ಸೇತುವೆಗಳು, ಸಾವಿರಾರು …

Read More »

ಮಗಳ ಹುಟ್ಟುಹಬ್ಬಕ್ಕೆ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದ ತಂದೆ

ಹುಬ್ಬಳ್ಳಿ: ಮಗಳ ಹುಟ್ಟುಹಬ್ಬವನ್ನು ವಿನೂತನವಾಗಿ ಅಚರಿಸಿದ ತಂದೆ, ರಸ್ತೆ ಸುರಕ್ಷತೆಯ ಜಾಗೃತಿಯನ್ನು ಮೂಡಿಸಿ ಬೈಕ್ ಸವಾರರಿಗೆ ಹೆಲ್ಮೆಟ್ ವಿತರಿಸಿದ್ದಾರೆ. ನಗರದ ಯುವ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಹೆಬಸೂರು ತಮ್ಮ ಮಗಳು ಅಶ್ವಿಕಾಮಾನ್ಯಾ ಹೆಬಸೂರ ಎರಡನೇ ವರ್ಷದ ಹುಟ್ಟುಹಬ್ಬ ಆಚರಿಸಿದ್ದಾರೆ. ಇದರ ಅಂಗವಾಗಿ ಸಾರ್ವಜನಿಕರಿಗೆ ಹೆಲ್ಮೆಟ್ ವಿತರಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ಇರುವುದರಿಂದ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು ಸಂಭವಿಸುತ್ತವೆ. ಹೀಗಾಗಿ ರಸ್ತೆ ಸುರಕ್ಷತೆ ಹಾಗೂ ಹೆಲ್ಮೆಟ್ ಜಾಗೃತಿ ಮೂಡಿಸಿದ್ದಾರೆ. ನಗರದ ಚೆನ್ನಮ್ಮ …

Read More »

ಮರಾಠಿ ಪುಂಡಾಟಿಕೆಯನ್ನು ಸಮರ್ಥವಾಗಿ ಎದುರಿಸಿ ಎದುರೇಟು ಕೊಟ್ಟ ಲಕ್ಷ್ಮಿ ನಿಪ್ಪಾಣಿಕರ, ಅವರಿಗೆ ಸನ್ಮಾನ..

ಬೆಳಗಾವಿಯಲ್ಲಿ ಕಳೆದ ರವಿವಾರರಾತ್ರಿ ಮಹಾರಾಷ್ಟ್ರ ಏಕೀಕರಣಸಮಿತಿಯ ಕಾರ್ಯಕರ್ತರು ಮರಾಠಿನಾಮಫಲಕಕ್ಕೆ ಆಗ್ರಹಿಸಿ ನಡೆಸಿದಪುಂಡಾಟಿಕೆಯನ್ನು ಸಮರ್ಥವಾಗಿ ಎದುರಿಸಿ ಎದುರೇಟು ಕೊಟ್ಟ ಬೆಳಗಾವಿಮಹಾನಗರ ಪಾಲಿಕೆಯಉಪಾಯುಕ್ತರಾದ ಶ್ರೀಮತಿಲಕ್ಷ್ಮೀನಿಪ್ಪಾಣಿಕರಹಾಗೂ ಕನ್ನಡ ಬಳಕೆಯಲ್ಲಿಬದ್ಧತೆ ಪ್ರದರ್ಶಿಸಿದ ಆಯುಕ್ತರಾದಶ್ರೀ ರುದ್ರೇಶ ಘಾಳಿ ಅವರನ್ನು ಕನ್ನಡ ಪರಸಂಘಟನೆಗಳ ಮುಖಂಡರು ಮಂಗಳವಾರಮುಂಜಾನೆ ಪಾಲಿಕೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.   ಬೆಳಗಾವಿ ಜಿಲ್ಲಾಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಅಧ್ಯಕ್ಷ ಅಶೋಕ ಚಂದರಗಿ,ಕರ್ನಾಟಕರಕ್ಷಣಾ ವೇದಿಕೆಯರಾಜ್ಯ ಸಂಚಾಲಕಮಹಾದೇವ ತಳವಾರ,ಜಿಲ್ಲಾಧ್ಯಕ್ಷದೀಪಕ ಗುಡಗನಟ್ಟಿ,ಮೈನೋದ್ದೀನ್ಮಕಾನದಾರ,ಕಿರಣಮಾಳನ್ನವರ,ಸಾಗರ ಬೋರಗಲ್ಲ,ವಿರೇಂದ್ರ ಗೋಬರಿ,ವಿಶಾಲ ತಿಗಡಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More »

ಶೀಘ್ರದಲ್ಲೇ ಥಿಯೇಟರ್ ಗಳಲ್ಲಿ ಶೇ.100 ಸೀಟು ಭರ್ತಿಗೆ ಅನುಮತಿ ಸಾಧ್ಯತೆ

ಬೆಂಗಳೂರು: ಚಿತ್ರ ಮಂದಿರಗಳಲ್ಲಿ ಶೇ.100 ರಷ್ಟು ಸೀಟು ಭರ್ತಿಗೆ ಮನವಿ ಮಾಡಿ ಕನ್ನಡ ಚಿತ್ರರಂಗದ ನಿರ್ಮಾಪಕರು ಇಂದು ಆರೋಗ್ಯ ಸಚಿವ ಕೆ.ಸುಧಾಕರ್ ಗೆ ಮನವಿ ಮಾಡಿದರು. ಸದ್ಯದ ಪರಿಸ್ಥಿತಿಯಲ್ಲಿ ನಿರ್ಮಾಪಕರಿಗೆ ತುಂಬಾ ಸಮಸ್ಯೆಗಳಾಗುತ್ತಿವೆ. ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ದೊಡ್ಡ ನಟರ ಸಿನಿಮಾಗಳು ಪ್ರದರ್ಶನಕ್ಕೆ ಸಿದ್ಧವಾಗಿವೆ. ಆದರೆ, ಶೇ.50ರಷ್ಟು ಮಾತ್ರ ಸೀಟು ಭರ್ತಿಗೆ ಅವಕಾಶ ನೀಡಿರುವುದರಿಂದ ಸಮಸ್ಯೆಯಾಗುತ್ತಿದೆ. ದೊಡ್ಡ ನಟರ ಸಿನಿಮಾಗಳಿಗೆ ಹೆಚ್ಚು ಹಣಹಾಕಿ ಚಿತ್ರ ಬಿಡುಗಡೆ ಮಾಡಲಾಗದೆ …

Read More »

ರಾಜ್ಯ ಸಚಿವ ಸಂಪುಟ ಸಭೆ: ಸಾರಿಗೆ ನೌಕರರ ಮೇಲಿನ ಪ್ರಕರಣ ಹಿಂದೆಗೆ‌ತ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರ ಮೇಲೆ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ವಾಪಸ್‌ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು, ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ಸಾಧಕ – ಬಾಧಕಗಳ ಕುರಿತು ಚರ್ಚಿಸಿದ್ದೇನೆ. ಮುಷ್ಕರ ಸಮಯದಲ್ಲಿ ಕೆಲವರು ಅಮಾನತಾಗಿದ್ದಾರೆ, ಮತ್ತೆ ಕೆಲವರು ವರ್ಗಾವಣೆಯಾಗಿ 6 ಸಾವಿರ ನೌಕರರು ತೊಂದರೆಗೆೆ ಸಿಲುಕಿದ್ದರು. 4 ಸಾವಿರ ನೌಕರರ ಮೇಲೆ ತೆಗೆದುಕೊಂಡಿದ್ದ ಕ್ರಮವನ್ನು …

Read More »

ತುಮಕೂರಿನ ಕ್ಯಾತ್ಸಂದ್ರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ

ತುಮಕೂರು: ಲಾಡ್ಜ್ ಒಂದರ ಸುರಂಗದಲ್ಲಿ ಅಡಗಿ ಕುಳಿತು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ತುಮಕೂರಿನ ಕ್ಯಾತ್ಸಂದ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ತುಮಕೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ರಾಶಿ ರಾಶಿ ಕಾಂಡೋಮ್ ಗಳು ಬಿದ್ದಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಖಚಿತ ಮಾಹಿತಿ ಆಧಾರದ ಮೇಲೆ ತುಮಕೂರಿನ ಕ್ಯಾತ್ಸಂದ್ರದ ಲಾಡ್ಜ್ ಒಂದರ ಮೇಲೆ ಪೊಲೀಸರೊಂದಿಗೆ ದಾಳಿ ನಡೆಸಿದ್ದು, …

Read More »

ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು

ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಬಾಣತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಓಡಿ ಬಂದ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಹೆರಿಗೆ ವಿಭಾಗದಲ್ಲಿದ್ದ ನೂರಾರು ಬಾಣಂತಿಯರು ಅಪಾಯದ ಮುನ್ಸೂಚನೆ ಅರಿತು ತಮ್ಮ ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಹೊರಗೆ ಓಡಿ ಬಂದಿದ್ದಾರೆ ಅಷ್ಟೋತ್ತಿಗೆ ಬೆಂಕಿ ಹೆರಿಗೆ ವಿಭಾಗವನ್ನು ಆವರಿಸಿಕೊಂಡಿದೆ. …

Read More »

ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ

ಬೆಂಗಳೂರು: ಸಿಎಂ‌ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಶಾಸಕರು ಹಾಗೂ ಸಚಿವರು ಭಾಗಿಯಾಗಿದ್ದರು.   ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಅತ್ಯಾಚಾರ ಪ್ರಕರಣದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ.   …

Read More »

ತುಮಕೂರಲ್ಲಿ ಕಾಂಡೋಮ್​ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್​.. ಲಾಡ್ಜ್​ನಲ್ಲಿ ವೇಶ್ಯಾವಾಟಿಕೆ ದಂಧೆ, ಐವರ ಬಂಧನ

ತುಮಕೂರು: ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್​ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗವೊಂದನ್ನು ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುರಂಗದೊಳಗೆ ಇಬ್ಬರು ಮಹಿಳೆ ಹಾಗೂ ಓರ್ವ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಡಗಿಕೊಂಡಿದ್ದರು ಎಂದು ತಿಳಿದುಬಂದಿದೆ. ಇತ್ತೀಚೆಗೆ ಈ ಲಾಡ್ಜ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್‌ಗಳು ಪತ್ತೆ ಆಗಿದ್ದವು. ವಿಷಯ ತಿಳಿದು ತನಿಖೆ …

Read More »

ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore Rain) ಒಂದು ಗಂಟೆ ಮಳೆ ಸುರಿದರೂ ಜನಜೀವನ ಅಸ್ತವ್ಯಸ್ತವಾಗಿ ಬಿಡುತ್ತದೆ. ಚರಂಡಿ ವ್ಯವಸ್ಥೆ, ರಾಜಕಾಲುವೆಗಳ ಅವ್ಯವಸ್ಥೆ, ತಗ್ಗು ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಿರುವುದು ಹೀಗೆ ನಾನಾ ಕಾರಣಗಳಿಂದ ಮಳೆಗಾಲದಲ್ಲಿ ಬೆಂಗಳೂರಿಗರಿಗೆ ನರಕ ದರ್ಶನವಾಗುತ್ತಲೇ ಇರುತ್ತದೆ. ಇಂದಿನಿಂದ ಸೆ. 25ರವರೆಗೂ ಬೆಂಗಳೂರಿನಲ್ಲಿ ಮತ್ತೆ ಮಳೆ (Heavy Rain in Bengaluru) ಜೋರಾಗಲಿದ್ದು, ಇಂದಿನಿಂದ 5 ದಿನ ಗುಡುಗು- ಮಿಂಚು (Bengaluru Rains) ಸಹಿತ ಭಾರೀ ಮಳೆಯಾಗಲಿದೆ. …

Read More »