Breaking News

Daily Archives: ಸೆಪ್ಟೆಂಬರ್ 21, 2021

ನಾನು ಐದಾರು ಜನರ ತಲೆ ತೆಗಿಯಬೇಕಿದೆ. ಇದಕ್ಕೆ ಅನುಮತಿ ಕೊಡ್ಸಿ: ರಮೇಶ್‌ ಕುಮಾರ್‌

ಬೆಂಗಳೂರು: ನಾನು ಐದಾರು ಜನರ ತಲೆ ತೆಗಿಯಬೇಕಿದೆ. ಇದಕ್ಕೆ ಅನುಮತಿ ಕೊಡ್ಸಿ ಎಂದು ಸ್ಪೀಕರ್‌ಗೆ ಶ್ರಿನಿವಾಸಪುರ ಶಾಸಕ ರಮೇಶ್‌ ಕುಮಾರ್‌ ಮನವಿ ಮಾಡಿದರು. ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಹಂಪ್ಸ್​ ಹಾಕಿರುವ ಬಗ್ಗೆ ಸೋಮವಾರ ವಿಧಾನಸಭೆ ಕಲಾಪದಲ್ಲಿ ಪ್ರಸ್ತಾಪಿಸಿದ ರಮೇಶ್​ ಕುಮಾರ್​, ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ 52 ಕಿಲೋ ಮೀಟರ್‌ಗೆ 47 ಸ್ಪೀಡ್‌ ಹಂಪ್ಸ್‌ ಹಾಕಲಾಗಿದೆ. ಈ ಬಗ್ಗೆ ಒಂದೇ ವರ್ಷದಲ್ಲಿ 2ನೇ ಬಾರಿ ಪ್ರಶ್ನೆ ಮಾಡುತ್ತಿದ್ದೇನೆ. ಈ ರೋಡ್‌ಗೆ ವಾರಸುದಾರರು ಯಾರು? …

Read More »

‘ಮೋದಿ ಅಲೆ ಭ್ರಮೆ’ ಬಗ್ಗೆ ಬಿಎಸ್‌ವೈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ

ಬೆಂಗಳೂರು, ಸೆಪ್ಟೆಂಬರ್‌ 20: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲೆಯ ವಿಚಾರವಾಗಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ನೀಡಿರುವ ಹೇಳಿಕೆಯು ಹಲವಾರು ಕರ್ನಾಟಕ ಬಿಜೆಪಿ ನಾಯಕರು ಹಾಗೂ ಕೇಂದ್ರ ಬಿಜೆಪಿ ನಾಯಕರು ಅಸಮಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಯಾವ ರೀತಿಯಲ್ಲಿ ಗಟ್ಟಿಗೊಳಿಸುವುದು …

Read More »

ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ರಿವರ್ಸ್ ಆಪರೇಷನ್​ನದ್ದೇ ಚರ್ಚೆ.. ಯಾಕೆ.?

ಕಾಂಗ್ರೆಸ್ ರಿವರ್ಸ್ ಆಪರೇಷನ್ ವಿಚಾರ ಸದ್ಯ BJP ನಾಯಕರ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆ ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಕಸರತ್ತು ಆರಂಭಿಸಿದೆ ಎನ್ನಲಾಗಿದೆ. ನೆನ್ನೆ ದಾವಣಗೆರೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ, ಪ್ರಮುಖ ರಾಜ್ಯ ನಾಯಕರು ಭಾಗಿಯಾಗಿದ್ದರು. ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಹಸ್ತ ಸಿದ್ದತೆ ವಿಚಾರ ಸದ್ದು ಮಾಡಿದೆ. ಅಷ್ಟಕ್ಕೂ ರಾಜ್ಯ ಬಿಜೆಪಿ ನಾಯಕರಿಗೇಕೆ ರಿವರ್ಸ್ ಆಪರೇಷನ್ ಭೀತಿ ಅನ್ನೋದನ್ನ ನೋಡೋದಾದ್ರೆ.. ಆಡಳಿತ ಪಕ್ಷದ ಶಾಸಕರು ಪಕ್ಷಾಂತರ …

Read More »

ತಾವನುಭವಿಸಿದ ನೋವುಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮಿಲಿಂದ್‌ ಸೋಮನ್‌ ಪತ್ನಿ

ಫಿಟ್ನೆಸ್‌ಗೆ ಮತ್ತೊಂದು ಹೆಸರಾಗಿರುವ ಮಿಲಿಂದ್ ಸೋಮನ್‌ರ ಪತ್ನಿ ಅಂಕಿತಾ ಕನ್ವರ್‌ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಜೀವನದ ಕಹಿ ಕಾಲಘಟ್ಟವೊಂದರ ಬಗ್ಗೆ ಹೇಳಿಕೊಂಡಿದ್ದಾರೆ. ಮಗುವಾಗಿದ್ದ ವೇಳೆ ತಾವು ಬಹಳ ಚಿತ್ರಹಿಂಸೆ ಅನುಭವಿಸಿದ್ದು, ಜನರಿಂದ ಮೋಸ ಹೋಗಿದ್ದಲ್ಲದೇ ತಮ್ಮ ತಂದೆ ಹಾಗೂ ಮಾಜಿ ಪ್ರಿಯಕರನನ್ನು ಕಳೆದುಕೊಂಡಿದ್ದಾಗಿ ತಿಳಿಸಿದ್ದಾರೆ.   “ಮಗುವಾಗಿ ಚಿತ್ರಹಿಂಸೆ ಅನುಭವಿಸಿ, ಹಾಸ್ಟೆಲ್‌ಗಳಲ್ಲಿ ಬೆಳೆದು, ವಿದೇಶದ ನಗರಗಳಲ್ಲಿ ಒಬ್ಬಳೇ ಬದುಕಿ, ನಾನು ನಂಬಿದ ಜನರಿಂದಲೇ ಮೋಸ ಹೋಗಿದ್ದೇನೆ. ಒಬ್ಬ ಸಹೋದರನನ್ನು …

Read More »

ಬೆಂಗಳೂರಿನ ದುರಂತ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಮತ್ತೊಂದು ಕುಟುಂಬ ಆತ್ಮಹತ್ಯೆ!

ದಾವಣಗೆರೆ: ಬೆಂಗಳೂರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಇಂತಹದ್ದೇ ಮತ್ತೊಂದು ದುರಂತ ದಾವಣಗೆರೆಯಲ್ಲಿ ಸಂಭವಿಸಿದೆ. ದಾವಣಗೆರೆಯ ಭಾರತ್ ಕಾಲನಿ ನಿವಾಸಿಗಳಾದ ಕೃಷ್ಣ ನಾಯಕ(35), ಇವರ ಪತ್ನಿ ಸುಮಾ(30), ಮಗು ಧ್ರುವ(6) ಮೃತ ದುರ್ದೈವಿಗಳು. ಈ ದುರ್ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕೃಷ್ಣ ನಾಯಕ ಲಾರಿ ಚಾಲಕನಾಗಿದ್ದ. ಇವರ ಪತ್ನಿ ಸುಮಾಗೆ ಹಲವು ದಿನಗಳಿಂದ ಅನಾರೋಗ್ಯ ಕಾಡುತ್ತಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ನಿರಂತರ ಅಲೆದಾಡುತ್ತಿದ್ದ ಕುಟುಂಬಕ್ಕೆ ಆರ್ಥಿಕ …

Read More »

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಅವರು

ಗೋಕಾಕ : ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು. ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಹೋಮ-ಹವನ ನೆರವೇರಿಸಿದರು. ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಮಾಡಿದ್ದಾಗಿ ಅವರು ತಿಳಿಸಿದ್ದಾರೆ. ಕಳೆದ ಎರಡು …

Read More »