Breaking News

Daily Archives: ಸೆಪ್ಟೆಂಬರ್ 25, 2021

ಸೋಮವಾರ ಭಾರತ್ ಬಂದ್: ಬೆಂಗಳೂರಲ್ಲಿ ರೈತರ ಪ್ರತಿಭಟನೆ ಹೇಗಿರುತ್ತೆ..?

ಬೆಂಗಳೂರು: ಸೆಪ್ಟೆಂಬರ್​ 27ರ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸುವ ಸಲುವಾಗಿ ಬಹುತೇಕ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿ ಭಾರತ ಬಂದ್​​ಗೆ ಬಹುತೇಕ ಸಂಘಟನೆಗಳ ಜೊತೆ ರೈತ ಸಂಘಟನೆಗಳ ಸಾಥ್ ಸಿಕ್ಕಿದೆ. ರೈತರೇ ಹೋರಾಟದ ಮುಂಚೂಣಿ ವಹಿಸಲಿದ್ದಾರೆ. ಕಾರ್ಮಿಕ ಸಂಘಟನೆಯೂ ಸಾಥ್ ನೀಡ್ತಿದೆ. ದಲಿತ ಸಮುದಾಯವೂ ಅಪಸ್ವರ ಎತ್ತಿಲ್ಲ ಬೇರೆ ಕಸುಬುಗಳ ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದಿದ್ದಾರೆ. …

Read More »

ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ: ಬರಿಗೈನಿಂದಲೇ ಚರಂಡಿ ಸ್ವಚ್ಛಗೊಳಿಸಿದ ಪೌರ ಕಾರ್ಮಿಕರು

ಮಂಡ್ಯ: ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ಕೂ ಮುನ್ನ ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ ತೋರಿರುವ ಘಟನೆ ವರದಿಯಾಗಿದೆ. ಬರಿಗೈನಿಂದಲೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛಗೊಳಿಸಿರುವ ಅಮಾನವೀಯ ದೃಶ್ಯ ಕಂಡುಬಂದಿದೆ. ಮೊನ್ನೆ ನಡೆದ ಪೌರ ಕಾರ್ಮಿಕರ ದಿನಾಚರಣೆ ದಿನವೇ ಕಾರ್ಮಿಕರಿಗೆ ಅಗೌರವ ಸೂಚಿಸಿಲಾಗಿದೆ. ಗ್ಲೌಸ್, ಗಮ್ ಬೂಟ್ ಇಲ್ಲದೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛ ಮಾಡಿದ್ದಾರೆ. ಪಿಡಿಓ ಅಧಿಕಾರಿ ಗ್ಲೌಸ್, ಬೂಟ್ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ. …

Read More »

ಭಾರತೀನಗರದಲ್ಲಿ ದುನಿಯಾವಿಜಯ್‌ಗೆ ಅದ್ಧೂರಿ ಸ್ವಾಗತ

ಭಾರತೀನಗರ: ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಭಾರತೀನಗರದಲ್ಲಿ ಚಿತ್ರನಟ ದುನಿಯಾ ವಿಜಯ್‌ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸಿಕ್ಕಿತು. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ಖಾಸಗೀ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದುನಿಯಾ ವಿಜಯ್ ಅವರನ್ನು ಭಾರತೀನಗರದ ಕಾಲೇಜ್ ಗೇಟ್‌ನಲ್ಲಿ ಅಭಿಮಾನಿಗಳು ಅಡ್ಡಗಟ್ಟಿ ಅದ್ದೂರಿಯಾಗಿ ಸ್ವಾಗತಿಸಿ ಜೈಕಾರ ಹಾಕಿದರು. ನಂತರ ಕಾರಿನಿಂದ ಇಳಿಯುವಂತೆ ಅಭಿಮಾನಿಗಳು ದುನಿಯಾವಿಜಯ್‌ಗೆ ಒತ್ತಡ ಹೇರಿದ ಮೇಲೆ ಕಾರಿನಿಂದ ಇಳಿದು ಅಭಿಮಾನಿಗಳತ್ತ ಕೈಬೀಸಿ ನಮಸ್ಕರಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೆರೆಕಾಣಲಿರುವ ಸಲಗ ಚಿತ್ರವನ್ನು ವೀಕ್ಷಿಸಿ …

Read More »

ಓದಿದ್ದು ಎಂಜಿನಿಯರಿಂಗ್; ಕನ್ನಡದಲ್ಲಿ ಪರೀಕ್ಷೆ ಬರೆದು ಯುಪಿಎಸ್ಸಿಯಲ್ಲಿ ಸಾಧನೆ ಮಾಡಿದ ಶ್ರೀನಿವಾಸ್

ಹುಬ್ಬಳ್ಳಿ(ಸೆ. 24): ಈತ ದ್ದು ಎಂಜಿನಿಯರಿಂಗ್ ಪದವಿ. ಆದ್ರೆ ಯುಪಿಎಸ್ಸಿ (UPSC ) ಯಲ್ಲಿ ಪರೀಕ್ಷೆ ಬರೆದದ್ದು ಮಾತ್ರ ಕನ್ನಡದಲ್ಲಿ. ಆಂಗ್ಲ ಮಾಧ್ಯಮದಲ್ಲಿ ದರೂ ಮಾತೃಭಾಷೆ ಕನ್ನಡವಾಗಿದ್ದರಿಂದ ಯುಪಿಎಸ್ಸಿಯಲ್ಲಿಯೂ ಅದೇ ಕನ್ನಡವನ್ನು ಐಚ್ಛಿಕ (kannada optional in upsc) ವಿಷಯವನ್ನಾಗಿಸಿಕೊಂಡು, ಐದನೇಯ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ. ಅಮೆರಿಕದಲ್ಲಿ ಲಕ್ಷಾಂತರ ರೂಪಾಯಿ ಸಂಬಳ ಬರೋ ನೌಕರಿ ಬಿಟ್ಟು ಬಂದು ಸಾಧನೆ ಮಾಡಿ ಅನೇಕರಿಗೆ ಸ್ಪೂರ್ತಿಯಾಗಿದ್ದಾರೆ. ಯು ಪಿ ಎಸ್ ಸಿ ಫಲಿತಾಂಶ …

Read More »

ರವೀಂದ್ರ ಕೌಶಿಕ್ ಇ-ಗ್ರಂಥಾಲಯ ಜಗತ್ತಿಗೆ ಮಾದರಿ ಗ್ರಂಥಾಲಯ: ಶಾಸಕ ಅಭಯ್ ಪಾಟೀಲ

ಬೆಳಗಾವಿ: ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ನೆನಪಿಸುವ ದೃಷ್ಟಿಯಿಂದ ಮರೆತು ಹೋಗಿದ್ದ ದೇಶ ಪ್ರೇಮಿ ರವೀಂದ್ರ ಕೌಶಿಕ್ ಅವರ ಹೆಸರನ್ನು ಇ- ಗ್ರಂಥಾಲಯಕ್ಕೆ ನಾಮಕರಣ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು. ರವೀಂದ್ರ ಕೌಶಿಕ್ ಇ ಲೈಬ್ರರಿ ಕುರಿತು ಮಾಹಿತಿ ನೀಡುತ್ತಿರುವ ಶಾಸಕ ಅಭಯ ಪಾಟೀಲನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ ರವೀಂದ್ರ ಕೌಶಿಕ್ ಇ-ಗ್ರಂಥಾಲಯದಲ್ಲಿ ಶನಿವಾರ (ಸೆ.25) ನಡೆದ ಪತ್ರಿಕಾಗೋಷ್ಠಿಯನ್ನ …

Read More »

ಯುಪಿಎಸ್ ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಶಾಕೀರ್ ಅಹ್ಮದ್ ಗೆ 583ನೇ ರ್ಯಾಂಕ್

ಬೆಳಗಾವಿ: ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರಾಮಾಪುರಸೈಟ್ ಗ್ರಾಮದ ಶಾಕೀರ್ ಅಹ್ಮದ್ 583ನೇ ರ್ಯಾಂಕ್ ಪಡೆದಿದ್ದಾರೆ. ಶಾಕೀರ್ ಅಹ್ಮದ್ ಅವರು 2014ರಲ್ಲಿ ಕೆಪಿಎಸ್‌ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದರು. ಮತ್ತೆ 2015ರಲ್ಲಿ ಕೆಪಿಎಸ್‌ ಸಿ ಪರೀಕ್ಷೆ ಬರೆದು ಹೆಚ್ಚಿನ ಅಂಕದೊಂದಿಗೆ ತೇರ್ಗಡೆಯಾಗಿ ಹುಬ್ಬಳ್ಳಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯುಪಿಎಸ್ ಸಿ …

Read More »

ಇಂದಿನಿಂದ 3 ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿಗೆ, ಬೆಳಗಾವಿಯಲ್ಲಿ ರೈತರ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ನೆರೆ ಸಂತ್ರಸ್ತ ರೈತರು, ಕಬ್ಬು ಬೆಳೆಗಾರರು ಇಂದಿನಿಂದ ಅಹೋರಾತ್ರಿ ಪ್ರತಿಭಟನೆಗೆ ತೀರ್ಮಾನಿಸಿದ್ದಾರೆ. ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆಗೆ ಕ್ರಮಕ್ಕೆ ಒತ್ತಾಯ, ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತರು ಧರಣಿ ನಡೆಸಲಿದ್ದಾರೆ. ರೈತ ಸಂಘ, ಹಸಿರು ಸೇನೆ …

Read More »

ವೈದ್ಯರ ಬದಲಿಗೆ ನರ್ಸ್​​​​ಗಳಿಂದ ಗರ್ಭಿಣಿ ಹೆರಿಗೆ; ನವಜಾತ ಗಂಡು ಮಗು ಸಾವು

ಬೆಂಗಳೂರು: ಗರ್ಭಿಣಿಗೆ ಡಾಕ್ಟರ್ ಬದಲು ನರ್ಸ್​ಗಳು ಹೆರಿಗೆ ಮಾಡಿಸಿದ್ದರಿಂದ ನವಜಾತ ಗಂಡು ಮಗು ಸಾವನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವಿರುದ್ಧ ಹೀಗೊಂದು ಆರೋಪ ಖುದ್ದು ಮಗು ಕಳೆದುಕೊಂಡ ತಾಯಿ ಪವಿತ್ರ ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. ಪಲ್ಲವಿ, ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚೆಕಪ್ ಮಾಡಿಸುತ್ತಿದ್ದರು. ಇನ್ನು ನಿನ್ನೆ ರಾತ್ರಿ 10.30ಕ್ಕೆ ಪವಿತ್ರಗೆ ಹೆರಿಗೆ ನೋವು ಕಾಣಿಸಿಕೊಂಡ ಈ ಹಿನ್ನೆಲೆ ಆಕೆಯನ್ನ ಆಸ್ಪತ್ರೆಗೆ …

Read More »

ಮನಸ್ಸಿದ್ದರೆ ವಯಸ್ಸಿನ ಹಂಗೇಕೆ? ಬಾಳ ಇಳಿ ಸಂಜೆಯಲ್ಲಿ ಜತೆಯಾದರು- ಮಗನೇ ಮಾಡಿಸಿದ ಅಪ್ಪನ ಮದುವೆ

ಸಾಂಗ್ಲಿ (ಮಹಾರಾಷ್ಟ್ರ): ಮದುವೆ ಎನ್ನುವುದು ಎಲ್ಲರಿಗೂ ದೇಹ ಸುಖವೇ ಆಗಬೇಕೆಂದಿಲ್ಲ. ಬಾಳಿನ ಇಳಿ ಸಂಜೆಯಲ್ಲಿ ಬದುಕಿಗೆ ಆಧಾರವಾಗಿ ಇರಲು ಸಾಧ್ಯವಾಗುವುದು ಗಂಡ-ಹೆಂಡತಿ ಎಂಬ ಜೋಡಿ ಇದ್ದಾಗಲೇ. ಆದರೆ ಪತಿ- ಪತ್ನಿ ತೀರಿ ಹೋದಾಗ ಅಥವಾ ವಿಚ್ಛೇದನ ಪಡೆದಾಗ ಮತ್ತೊಮ್ಮೆ ಮದುವೆಯಾಗುವವರಿಗೆ ಸ್ವಲ್ಪ ವಯಸ್ಸಾಗಿದ್ದರೆ ಎಷ್ಟೋ ಮಂದಿ ಅಂಥವರನ್ನು ವಿಚಿತ್ರ ದೃಷ್ಟಿಯಿಂದ ನೋಡುವುದು ಇಂದಿಗೂ ಉಂಟು. ಆದರೆ ಇವನ್ನೆಲ್ಲಾ ಮೀರಿ ಖುದ್ದು ಮಗನೇ ಮುಂದೆ ನಿಂತು 79 ವರ್ಷ ವಯಸ್ಸಿನ ತಮ್ಮ …

Read More »

ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು

ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.   ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್‍ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್‍ಗೆ …

Read More »