Breaking News
Home / 2021 / ಸೆಪ್ಟೆಂಬರ್ (page 3)

Monthly Archives: ಸೆಪ್ಟೆಂಬರ್ 2021

ಸಿಎಂ ಮಮತಾಗೆ ಅಳಿವು-ಉಳಿವಿನ ಪ್ರಶ್ನೆಯಾದ ಬೈಎಲೆಕ್ಷನ್

ನವದೆಹಲಿ, ಸೆ.30- ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹುದ್ದೆಯ ಅಳಿವು ಉಳಿವನ್ನು ನಿರ್ಧರಿಸುವ ಭವಾನಿಪುರ ಸೇರಿದಂತೆ ಒಟ್ಟು ನಾಲ್ಕು ವಿಧಾನ ಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆದಿದೆ. ಪಶ್ಚಿಮಬಂಗಾಳದ ಭವಾನಿಪುರ, ಸಂಸೆರ್ಗಂಜ್, ಜಂಗಿಪುರ್ ಕ್ಷೇತ್ರಗಳು ಒಡಿಸಾ ರಾಜ್ಯದ ಪುರಿ ಜಿಲ್ಲೆಯ ಪಿಪಿಲಿ ವಿಧಾನಸಭಾಕ್ಷೇತ್ರಕ್ಕೆ ಉಪಚುನಾವಣೆಗಳು ನಡೆದಿವೆ. ಬೆಳಗ್ಗೆ ಏಳರಿಂದ ಸಂಜೆ ಆರು ಗಂಟೆಯವರೆಗೂ ಮತದಾನ ನಡೆದಿದೆ. ಬೆಳಗ್ಗೆ ಮತದಾನದಲ್ಲಿ ಉತ್ಸಾಹ ಕಂಡು ಬಂದಿದ್ದು, ಜನ ಸಾಲುಗಟ್ಟಿ ಮತ …

Read More »

2 ಎ ಮೀಸಲಾತಿ ನೀಡದಿದ್ದರೆ ಅ.1ರಿಂದ ಮತ್ತೆ ಹೋರಾಟ ಆರಂಭ: ಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ: ರಾಜ್ಯ ಸರ್ಕಾರ ಅ.1 ರೊಳಗೆ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2 ಎ ಮೀಸಲಾತಿ ಸೌಲಭ್ಯ ಒದಗಿಸುವ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದಲ್ಲಿ ಅಂದಿನಿಂದಲೇ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 1 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್‌ರವರ ಜನ್ಮದಿನದ …

Read More »

ಮಹಿಳೆಯ ಮೇಲೆ ದಾಳಿ ಮಾಡಿದ ಚಿರತೆ, ಮುಂದೇನಾಯ್ತು : ಭಯಾನಕ Video Viral

ಮುಂಬೈ : ಮುಂಬೈನಲ್ಲಿ ಮಧ್ಯ ವಯಸ್ಕ ಮಹಿಳೆ ಮೇಲೆ ಹೊಂಚು ಹಾಕಿಕೊಂಡಿದ್ದ ಚಿರತೆಯೊಂದು ದಾಳಿ ಮಾಡಿದ್ದು, ಮಹಿಳೆ ತನ್ನ ವಾಕಿಂಗ್ ಸ್ಟಿಕ್ ನಿಂದ ಚಿರತೆಯೊಂದಿಗೆ ಹೋರಾಡಿದ್ದು, ಚಿರತೆ ಅಲ್ಲಿಂದ ಕಾಲ್ಕಿತ್ತ ಘಟನೆ ನಡೆದಿದೆ. ಮುಂಬೈನ ಆರೆಯಲ್ಲಿ ಚಿರತೆ ಮಹಿಳೆ ಮೇಲೆ ದಾಳಿ ಮಾಡಲು ಹೊರಟಿತ್ತು. ಮೂರು ದಿನಗಳಲ್ಲಿ ಅದೇ ಪ್ರದೇಶದಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ಈ ಮಹಿಳೆ ಚಿರತೆಯನ್ನು ಎಷ್ಟು ಧೈರ್ಯದಿಂದ ಎದುರಿಸಿದಳು ಎಂಬುದನ್ನು ದೃಶ್ಯಾವಳಿಗಳು ತೋರಿಸುತ್ತವೆ. ಸದ್ಯ …

Read More »

ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ: ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ಎಂ.ಪಿ.ರೇಣುಕಾಚಾರ್ಯ ಮತ್ತು ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಮಾಡಿದೆ. ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಬ್ಬರೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನು ಮತ್ತೆ ನೇಮಕ ಮಾಡಲಾಗಿದೆ.   ತಕ್ಷಣದಿಂದ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದವರೆಗೆ ಇಬ್ಬರನ್ನೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ, ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲು ಸರ್ಕಾರ ಆದೇಶಿಸಿದೆ.  

Read More »

ಬೆಳಗಾವಿ ಮಹಾನಗರ ಪೊಲೀಸರು ಇಂದಿನಿಂದ ವಿನೂತನ ಕಾರ್ಯಕ್ರಮ

ಬೆಳಗಾವಿ ಮಹಾನಗರ ಪೊಲೀಸರು ಇಂದಿನಿಂದ ವಿನೂತನ ಕಾರ್ಯಕ್ರಮವೊಂದನ್ನು ಹಾಕಿಕೊಂಡಿದ್ದಾರೆ. *ಜನಸ್ನೆಹಿ ಪೊಲೀಸ್* ಕಾರ್ಯಕ್ರಮದ ಅಡಿಯಲ್ಲಿ ಇವತ್ತಿನಿಂದ ಬೆಳಗಾವಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಎಲ್ಲ ಅಧಿಕಾರಿಗಳು ಕಾಲ್ನಡಿಗೆ ಗಸ್ತು ನಡೆಯಲಿದ್ದಾರೆ. ಅವರವರ ಠಾಣೆಯ ಬೀಟ್ ಪ್ರದೇಶಗಳಲ್ಲಿ ಬೀಟ್ ಸಿಬ್ಬಂದಿ ಹಾಗೂ ಇನ್ನಿತರ ಪೊಲೀಸ್ ಸಿಬ್ಬಂದಿಯೊಂದಿಗೆ *ಪ್ರತಿದಿನ ಸಾಯಂಕಾಲ 7 ಗಂಟೆಯಿಂದ 9 ಗಂಟೆವರೆಗೆ *ಕಾಲ್ನಡಿಗೆ ಗಸ್ತು* ನಡೆಸಲಿದ್ದಾರೆ.   ತನ್ಮೂಲಕ   ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕರ ಸಹಕಾರ ಕೋರಲಿದ್ದಾರೆ. ಈ ಕಾರ್ಯಾಚರಣೆಯು ಇನ್ನು …

Read More »

ಕಾಂಗ್ರೆಸ್ ಸಭೆಯಲ್ಲಿ ಜಟಾಪಟಿಗೆ ಬಿದ್ದು ಘೋಷಣೆ ಕೂಗಿದ ಕಾರ್ಯಕರ್ತರು

ಶಿರಸಿ: ಕಾಂಗ್ರೆಸ್ ಸಭೆಯಲ್ಲಿ ಆರ್.ವಿ.ದೇಶಪಾಂಡೆ ಹಾಗೂ ಘೋಟ್ನೇಕರ್ ಬೆಂಬಲಿಗರು ಗೊಂದಲ ಸೃಷ್ಟಿಸಿದ ಘಟನೆ ಶಿರಸಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಅಂಬೇಡ್ಕರ್ ಭವನದಲ್ಲಿ ಕಾಂಗ್ರೆಸ್​ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸಭೆಯಲ್ಲಿ ಘೋಟ್ನೇಕರ್ ಹಾಗೂ ಆರ್.ವಿ.ದೇಶಪಾಂಡೆ ಬೆಂಬಲಿಗರ ನಡುವೆ ಜಯಘೋಷದ ಗೊಂದಲ ಏರ್ಪಟ್ಟಿತು. ಭಾಷಣದ ವೇಳೆ ಹಳಿಯಾಳದ ರಾಜಕೀಯ ಸ್ಥಿತಿ ವಿವರಿಸಿ ದೇಶಪಾಂಡೆ ಹಾಗೂ ಬ್ಲಾಕ್ ಅಧ್ಯಕ್ಷರ ವಿರುದ್ಧ ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ …

Read More »

ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.

  ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.   ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …

Read More »

ವಿದ್ಯುತ್ ಬಿಲ್ ವಸೂಲಿಗೆ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು

ತುಮಕೂರು: ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಗ್ರಾಮಸ್ಥರು ಕಲ್ಲು, ದೊಣ್ಣೆಗಳಿಂದ ಹೊಡೆದ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ವಿದ್ಯುತ್ ಬಿಲ್ ವಸೂಲಿಗಾಗಿ ಶಾಖಾಧಿಕಾರಿ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಲ್ಲು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗ್ರಾಮಸ್ಥರು ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಲೈನ್ ಮ್ಯಾನ್​ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುಗಳೆಲ್ಲರನ್ನೂ ಶಿರಾ …

Read More »

ಕೆಎಂಎಫ್ ಸಂಸ್ಥೆ ಇಡೀ ದೇಶದಲ್ಲಿ ನಂಬರ್ 1 ಸಂಸ್ಥೆಯಾಗಬೇಕು: ಸಿಎಂ ಬೊಮ್ಮಾಯಿ

ಬೆಂಗಳೂರು, ಸೆ. 29: “ಹಾಲು ಮತ್ತು ಸಕ್ಕರೆಯ ಉಪ ಉತ್ಪನ್ನಗಳು ಬಹಳಷ್ಟಿವೆ. ಕೆಎಂಎಫ್‌ನ ಉತ್ಪನ್ನಗಳು ಕೂಡ ಉತ್ತಮವಾಗಿವೆ. ಹೀಗಾಗಿ ತನ್ನ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸುವಂತೆ” ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಬುಧವಾರ ಕರ್ನಾಟಕ ಹಾಲು ಮಹಾಮಂಡಲದ ನೂತನ ಯೋಜನೆಗಳಿಗೆ ಚಾಲನೆ ನೀಡಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ”ಹಾಲಿನ‌ ಉಪ ಉತ್ಪನ್ನಗಳ ಮಾರುಕಟ್ಟೆಯನ್ನು ಪರಿಣಾಮಕಾರಿಯಾಗಿ ವಿಸ್ತರಣೆ ಮಾಡಬೇಕು. ಈ ಉತ್ಪನ್ನಗಳಿಗೆ ಹೆಚ್ಚಿನ …

Read More »

ಹಾಲು ಉತ್ಪಾದಕರಿಗಾಗಿ ಬ್ಯಾಂಕ್‌: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಬೆಂಗಳೂರು: ಹಾಲು ಉತ್ಪಾದಕರ ಅಭಿವೃದ್ಧಿ – ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್‌ ತೆರೆಯಬೇಕು. ಇದಕ್ಕೆ ಸರಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌)ಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿ, ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು. ಹಾಲು ಉತ್ಪಾದಕರನ್ನು ಆರ್ಥಿಕವಾಗಿ ಸಶಕ್ತ ಗೊಳಿಸಲು ಮತ್ತು ಮಹಾಮಂಡಳಿ ಹಾಗೂ ಒಕ್ಕೂಟಗಳನ್ನು …

Read More »