Breaking News

Monthly Archives: ಸೆಪ್ಟೆಂಬರ್ 2021

ಚರ್ಚ್,‌ಮಸೀದಿ ಬಿಟ್ಟು ದೇವಸ್ಥಾನಗಳ ಮೇಲೆ ಯಾಕೆ ಅಧಿಕಾರಿಗಳ ಕಣ್ಣು : ರೇಣುಕಾಚಾರ್ಯ ಕಿಡಿ

ಬೆಂಗಳೂರು: ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯದಿಂದ ಸಾಕಷ್ಟು ಮಂದಿ ಬೇಸರ ವ್ಯಕ್ತಪಡಿಸಿದ್ದಾರೆ. ಸ್ವಪಕ್ಷದವರೇ ಈ ಕಾರ್ಯಕ್ಕೆ ವಿರೋಧಿಸಿದ್ದಾರೆ. ಇದೀಗ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕ ಎಂಪಿ ರೇಣುಕಾಚಾರ್ಯ, ಗುಡುಗಿದ್ದಾರೆ. ಚರ್ಚ್, ಮಸೀದಿ ಬಿಟ್ಟು ಯಾಕೆ ಅಧಿಕಾರಿಗಳು ಕೇವಲ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದಾರೆ ಎಂದು ಗುಡುಗಿದ್ದಾರೆ. ದೇವಸ್ಥಾನದ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ ಮಾಡೋದು ಸರಿಯಲ್ಲ. ಈಗಾಗಲೇ 1700 ದೇಗುಲ‌ನೆಲಸಮ ಮಾಡೋದಕ್ಕೆ ನೋಟಿಫಿಕೇಷನ್ ಬಂದಿದೆ. ನಮಗೆ ಚರ್ಚ್, ಮಸೀದಿ ಒಂದೇ. ಆದ್ರೆ …

Read More »

‘ನಿನಗೆ ಕನ್ನಡ ಪದಗಳು ಗೊತ್ತಾಗಲ್ಲ’: ದೇಶಪಾಂಡೆ ಕಿಚಾಯಿಸಿದ ಸಿದ್ದು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಆಸ್ಕರ್‌ ಪರ್ನಾಂಡಿಸ್‌ ಅವರ ನಿಧನದ ಸಂತಾಪ ಸೂಚಕದ ಮೇಲಿನ ಚರ್ಚೆ ವೇಳೆ ಆರ್.ವ್ಹಿ.ದೇಶಪಾಂಡೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಚಾಯಿಸಿದ್ದರೆ. ‘ನಿನ್ಗೆ ಅನೇಕ ಕನ್ನಡದ ಪದಗಳು ಗೊತ್ತಾಗಲ್ಲ ದೇಶಪಾಂಡೆ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಫರ್ನಾಂಡಿಸ್‌ ಅವರು ಕೇಂದ್ರದಲ್ಲಿ ಸರ್ಫೇಸ್‌ ಟ್ರಾನ್ಸ್‌ ಪೋರ್ಟ್‌ ಮಿನಿಸ್ಟರ್ ಇದ್ದರು ಎಂದು ಹೇಳಿದ್ದರು ಅದನ್ನ ನೆನಪಿಸಿಕೊಂಡ ಸಿದ್ದರಾಮಯ್ಯ, ಅದು ಕನ್ನಡದಲ್ಲಿ ಅದನ್ನು ‘ಭೂ ಸಾರಿಗೆ’ ಎಂದು ಹೇಳುತ್ತಾರೆ ಎಂದರು. …

Read More »

ಬೆಳಗ್ಗೆ ಎದ್ದು ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ದೇವಸ್ಥಾನ ಒಡೆಯುತ್ತಿದ್ದಾರೆ: ರೇವಣ್ಣ

ಬೆಂಗಳೂರು: ಬೆಳಗ್ಗೆ ಎದ್ದರೆ ನಾವು ಹಿಂದೂ ಹಿಂದೂ ಎನ್ನುವ ಬಿಜೆಪಿಯವರು ಇದೀಗ ಹಿಂದೂ ದೇವಸ್ಥಾನ ಒಡೆಯುತ್ತಿದ್ದಾರೆ ಎಂದು ಜೆಡಿಎಸ್ ನಾಯಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡಿನ ದೇವಸ್ಥಾನಕ್ಕೆ‌ ತನ್ನದೇ ‌ಇತಿಹಾಸ‌ವಿದೆ. ಪುರಾತನ ಕಾಲದಲ್ಲಿ‌ ದೇವಸ್ಥಾನ ನಿರ್ಮಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪಾಲನೆ ಬೇಡವೆಂದು ಹೇಳುತ್ತಿಲ್ಲ. ಆದರೆ ದೇವಸ್ಥಾನ ಸಮಿತಿ ಜೊತೆ ಚರ್ಚಿಸಬೇಕು. ಪರ್ಯಾಯ ದೇವಸ್ಥಾನ ನಿರ್ಮಿಸಿ ನಂತರ ತೆರವು ಮಾಡಲಿ ಎಂದರು. ಜೆಡಿಎಸ್ ಇಲ್ಲದೆ …

Read More »

ಅನ್ನಭಾಗ್ಯ ಪಡಿತರ ಅಕ್ಕಿ ವಿತರಣೆಯಲ್ಲಿ ವ್ಯತ್ಯಾಸ : ಅಧಿಕಾರಿಗಳಿಂದ ಲೆಕ್ಕ ಪರಿಶೀಲನೆ

ಗಂಗಾವತಿ : ಗಂಗಾವತಿ, ಕನಕಗಿರಿ, ಕಾರಟಗಿ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ವಿತರಣೆ ಲೆಕ್ಕದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪಂಜಾಬ್ ಎಫ್ಸಿಐ ಗೋಡೌನ್ ಸೇರಿದಂತೆ ಅಕ್ಕಿ ವಿತರಣೆ ಮಾಡುವ ಸ್ಥಳಗಳ ಮೇಲೆ ದಾಳಿ ಮಾಡಿ ಲೆಕ್ಕ ಪರಿಶೋಧನೆ ನಡೆಸಿದ ಪ್ರಕರಣ ಗಂಗಾವತಿ ನಗರದಲ್ಲಿ ಮಂಗಳವಾರ ಜರುಗಿದೆ. ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ …

Read More »

ಸ್ಯಾಂಡಲ್‌ವುಡ್‌ನ ಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ

ಸ್ಯಾಂಡಲ್‌ವುಡ್‌ನ ಬಹುಬೇಡಿಕೆಯ ಡೈಲಾಗ್ ರೈಟರ್ ಗುರು ಕಶ್ಯಪ್ ಹೃದಯಾಘಾತದಿಂದ ನಿಧನ ಹೊಂದಿದರು. ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್​ ಸೋಮವಾರ (ಸೆಪ್ಟಂಬರ್ 13) ರಾತ್ರಿ ನಿಧನರಾದರು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಗುರು ಕಶ್ಯಪ್ ಕೊನೆಯುಸಿರು ಎಳೆದರು ಎನ್ನುವ ಮಾಹಿತಿ ತಿಳಿದುಬಂದಿದೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಗುರು ಕಶ್ಯಪ್ ನಿಧನಕ್ಕೆ ಕನ್ನಡ ಚಿತ್ರರಂಗದ ಹಲವರು ಕಂಬನಿ ಮಿಡಿಯುತ್ತಿದ್ದಾರೆ. ಗಣೇಶ್​ ಅಭಿನಯದ ‘ಸುಂದರಾಂಗ ಜಾಣ’, ರಮೇಶ್​ ಅರವಿಂದ್​ ನಟನೆಯ …

Read More »

ಕರುನಾಡಿನ ಲಾಂಛನದಲ್ಲಿ ಕನ್ನಡವೇಕಿಲ್ಲ? ಸತ್ಯಮೇವ ಜಯತೆ ಹಿಂದಿಯಲ್ಲೇ ಇದೆ ಯಾಕೆ?

ದಾವಣಗೆರೆ: ಕರುನಾಡಿನಲ್ಲಿ ಕನ್ನಡವೇ ಆಡಳಿತ ಭಾಷೆ, ಎಲ್ಲ ವ್ಯವಹಾರಗಳು ಕನ್ನಡದಲ್ಲೇ ನಡೆಯಬೇಕು ಎಂಬುದು ಸರಕಾರದ ನಿಯಮ. ಆದರೆ ಕರುನಾಡಿನ ಲಾಂಛನದಲ್ಲೇ ಕನ್ನಡ ಮರೆಯಾಗಿರುವುದು ವಿಪರ್ಯಾಸ! ಇದು ವಿಚಿತ್ರವೆನಿಸಿದರೂ ಸತ್ಯ. ಆರು ದಶಕಗಳಿಂದ ನಮ್ಮ ಲಾಂಛನದಲ್ಲಿರುವ “ಸತ್ಯಮೇವ ಜಯತೇ’ ಹಿಂದಿಯಲ್ಲೇ ಇದೆ. ಕನ್ನಡ ಇಗೆ ಬದಲಾಯಿಸಿಲ್ಲ. ಹಿಂದಿ ಲಿಪಿಯಲ್ಲಿ “ಸತ್ಯಮೇವ ಜಯತೇ’ ಎಂದು ಬರೆದಿರುವ ಲಾಂಛನವನ್ನೇ ಇಂದು ಎಲ್ಲೆಡೆ ಬಳಕೆ ಮಾಡಲಾಗುತ್ತಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣಗಳ ಲಾಂಛನಗಳಲ್ಲಿ ಆಯಾ ರಾಜ್ಯ …

Read More »

ಬೆಳಗಾವಿಯ ಹೃದಯ ಭಾಗ ಪಾಂಗೂಳ ಗಲ್ಲಿಯಲ್ಲಿರುವ ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಅಶ್ವತ್ಥಾಮ ದೇವಾಲಯ ತೆರವಿಗೆ ಮುಂದಾಗಿರುವುದಾಗಿ ಜಿಲ್ಲಾಡಳಿತ

ಬೆಳಗಾವಿ: ದೇವಾಲಯಗಳ ತೆರವು ಕಾರ್ಯಾಚರಣೆಗೆ ಈಗಗಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕುಂದಾನಗರಿ ಬೆಳಗಾವಿಯಲ್ಲಿಯೂ ಜಿಲ್ಲಾಡಳಿತ ಹಲವು ದೇವಾಲಯಗಳ ತೆರವಿಗೆ ಸಿದ್ಧತೆ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.  ಬೆಳಗಾವಿಯ ಹೃದಯ ಭಾಗ ಪಾಂಗೂಳ ಗಲ್ಲಿಯಲ್ಲಿರುವ ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಅಶ್ವತ್ಥಾಮ ದೇವಾಲಯ ತೆರವಿಗೆ ಮುಂದಾಗಿರುವುದಾಗಿ ಜಿಲ್ಲಾಡಳಿತ ನೋಟೀಸ್ ಜಾರಿ ಮಾಡಿದೆ. ಈ ಸಾರ್ವಜನಿಕರು ಆಕ್ರೋಶ …

Read More »

ಸಾವಿನಲ್ಲೂ ನಾಲ್ವರ ಪ್ರಾಣ ಉಳಿಸಿ ಸಾರ್ಥಕತೆ ಮೆರೆದ ಹಾವೇರಿ ಯುವತಿ

ಹಾವೇರಿ: 20 ವರ್ಷದ ಯುವತಿಯೊಬ್ಬಳು ಹಲವರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆ ಮಹಾನ್​ ತಾಯಿ ಹೆಸರು ಕವನ ಮಳ್ಳಯ್ಯ ಹಿರೇಮಠ. ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಕವನ ಶಿಕಾರಿಪುರದ ಗಾಮೆಂಟ್ಸ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ …

Read More »

ಟಿಪ್ಪುಸುಲ್ತಾನ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಡಳಿತಕ್ಕೆ ಮನವಿ

ರಾಯಚೂರು: ನಗರದ ಟಿಪ್ಪುಸುಲ್ತಾನ್ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ವಾರ್ಡ್ ಸಂಖ್ಯೆ 7 ಹಾಗೂ 8ರ ನಿವಾಸಿಗಳು ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು. ಟಿಪ್ಪುಸುಲ್ತಾನ್ ರಸ್ತೆಯು ನಗರದ ನುಖ್ಯ ರಸ್ತೆಯಾಗಿದ್ದು, ವಿಸ್ತರಣೆ ಕಾರ್ಯ ಆರಂಭಿಸಿ ಒಂದು ವರ್ಷ ಗತಿಸಿದರೂ ಈವರೆಗೆ ಪೂರ್ಣಗೊಂಡಿಲ್ಲ. ಇದರಿಂದ ಅಂದ್ರೂನ್ ಕಿಲ್ಲಾ ಹಾಗೂ ಸ್ಥಳೀಯ ನಿವಾಸಿಗಳಿಗೆ ತೀವ್ರ ಸಮಸ್ಯೆಯಾಗಿದೆ. …

Read More »

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಕಾಮಗಾರಿ: ಈ ವಾಹನಗಳ ಸಂಚಾರಕ್ಕೆ ನಿರ್ಬಂಧ

ಬೆಂಗಳೂರು, ಸೆಪ್ಟೆಂಬರ್ 14: ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿ ಕಾಮಗಾರಿ ಶುರುವಾಗಲಿದ್ದು, ದ್ವಿಚಕ್ರ ವಾಹನ, ಆಟೋ ಹಾಗೂ ಟ್ರ್ಯಾಕ್ಟರ್‌ಗಳ ಓಡಾಟವನ್ನು ನಿಷೇಧಿಸಲಾಗಿದೆ. ಯೋಜನೆಗಾಗಿ ಒಟ್ಟು 8,172 ಕೋಟಿ ರೂ. ವ್ಯಯಿಸುತ್ತಿದ್ದು, 2022ರ ಅಕ್ಟೋಬರ್‌ನಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ನೀಡಲಾಗಿದೆ. ಈ ಕಾಮಗಾರಿ ಮುಗಿದಲ್ಲಿ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ ಈಗಿರುವ 3 ಗಂಟೆಗೆ ಬದಲಾಗಿ 90 ನಿಮಿಷಕ್ಕೆ ಇಳಿಯಲಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ದಶಪಥಗಳ ಹೆದ್ದಾರಿ ವಿಸ್ತರಣೆ …

Read More »