ವಿಜಯನಗರ: ರಾಜ್ಯದ ನೂತನ ಜಿಲ್ಲೆಯಾಗಿ ವಿಜಯನಗರ ಅಧಿಕೃತವಾಗಿ ಇಂದು ಉದ್ಘಾಟನೆಯಾಗಿದೆ. ಜಿಲ್ಲಾ ಕೇಂದ್ರ ಹೊಸಪೇಟೆಯ ಮುನಿಸಿಪಲ್ ಕ್ರೀಡಾಂಗಣದಲ್ಲಿ ರಚಿಸಿದ್ದ ಭವ್ಯ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ವೈ ಅಧಿಕೃತವಾಗಿ ಜಿಲ್ಲೆಯ ಉದ್ಘಾಟನೆಯನ್ನು ಮಾಡಿದ್ದಾರೆ. ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಆನಂದ್ ಸಿಂಗ್ ಹಠವಾದಿ. ಅವರು ಒಂದು ಕೆಲಸ ಹಿಡಿದರೆ ಮಾಡದೇ ಬಿಡಲ್ಲ. ಅವರು ಉಡದ ಹಾಗೆ ಕೆಲಸ ಮುಗಿಯುವವರೆಗೂ ಬಿಡಲ್ಲ. ನೂತನ ಜಿಲ್ಲೆಯ ಅಭಿವೃದ್ಧಿಗೆ ಇಡೀ …
Read More »Daily Archives: ಅಕ್ಟೋಬರ್ 3, 2021
ಎರಡು ಉಪಚುನಾವಣೆಯಲ್ಲಿ ಬಿಜೆಪಿ ಧೂಳಿಪಟ ಖಚಿತ: ಎಸ್ಆರ್ ಪಾಟೀಲ್
ಬಾಗಲಕೋಟೆ: ಸಿಂಧಗಿ, ಹಾನಗಲ್ ಎರಡು ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಬಿಜೆಪಿ ಧೂಳಿಪಟವಾಗಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಎಸ್ಆರ್ ಪಾಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತೆ, ಬಿಜೆಪಿ ಸೋಲುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ ವಿಚಾರವಾಗಿ ಭಿನ್ನಾಭಿಪ್ರಾಯ ಶುರುವಾಗಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಾನಗಲ್ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ನಮ್ಮ ಪಕ್ಷದಲ್ಲಿ ಒಮ್ಮತದಿಂದ …
Read More »ಬೆಳಗಾವಿ ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ : ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ರನಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಲಾಯಿತು. ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ, ಹುಟ್ಟುಹಬ್ಬದ ಆಚರಣೆಯಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಜನ ಪಾಲ್ಗೊಂಡಿದ್ದರು. ಅಷ್ಟೇ …
Read More »ಸಂಜಯ್ ಪಾಟೀಲ್, ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು
ಬೆಳಗಾವಿ; ಮಾಜಿ ಶಾಸಕ, ಬಿಜೆಪಿ ನಾಯಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿರುವ ಅವಹೆಳನಕಾರಿ ಹೇಳಿಕೆಯನ್ನು ಇಡೀ ಪಂಚಮಸಾಲಿ ಸಮಾಜ ಖಂಡಿಸುತ್ತದೆ, ತಕ್ಷಣ ಸಂಜಯ್ ಪಾಟೀಲ್ ಕ್ಷಮೆಯಾಚಿಸಬೇಕು ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಅವಹೇಳಕಾರಿ, ಅಸಹನೀಯ ಶಬ್ದ ಬಳಸಿ ಅವಮಾನಿಸಿರುವುದನ್ನು ಇಡೀ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಇಂತಹ ಹೇಳಿಕೆ ಪುನರಾವರ್ತನೆಯಾದರೆ …
Read More »ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ಮಮತಾ ಬ್ಯಾನರ್ಜಿ 84,709 ಮತಗಳನ್ನು ಪಡೆದಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಿಯಾಂಕಾ ತಿಬ್ರೇವಾಲ್ 26,320, ಸಿಪಿಎಂನ ಶ್ರೀಜಿಬ್ ಬಿಸ್ವಾಸ್ 4,201 ಮತಗಳನ್ನು ಪಡೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಸುವೇಂಧು ಅಧಿಕಾರಿಯ ವಿರುದ್ಧ ಸೋತಿದ್ದರು. ಮಂತ್ರಿಸ್ಥಾನವನ್ನು ಪಡೆದವರು 6 ತಿಂಗಳ ಒಳಗಡೆ ಚುನಾಯಿತರಾಗಬೇಕು. ಹೀಗಾಗಿ ಉಪಚುನಾವಣೆಯಲ್ಲಿ ಮಮತಾ …
Read More »ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ, ಐದಕ್ಕೇರಿದ ಸಾವಿನ ಸಂಖ್ಯೆ
ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಇತ್ತೀಚಿಗೆ ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ ಬೆನ್ನಲ್ಲೆ ಮತ್ತೇ ಮೂರು ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆ 5 ಕ್ಕೇರಿದೆ. ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿ ಬೇಧಿ ಚಿಕಿತ್ಸೆಗಾಗಿ ಬಳ್ಳಾರಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಾವನೂರು ಬಸಮ್ಮ, ಲಕ್ಷ್ಮಮ್ಮ, ಅಂಗೂರುಗಟ್ಟಿ ಗೋಣೆಪ್ಪ ಎಂಬಾತರು ಅಸುನೀಗಿದ್ದಾರೆ. ಜೊತೆಗೆ ಮೊನ್ನೆ ಬಂಧುಗಳ ಮನೆಗೆ ಭೇಟಿ ನೀಡಿದ ಮಹಾದೇವಪ್ಪ ಹೆಳ್ಳಪ್ಪ ಎಂಬುವವರು ಕೂಡ …
Read More »ಹೈವೇಯಲ್ಲಿ ದರೋಡೆಗಿಳಿದಿದ್ದ ಡಕಾಯಿತರಿಗೆ ಗೂಸಾ ನೀಡಿದ ಗ್ರಾಮಸ್ಥರು
ಬೆಂಗಳೂರು: ಕಾಡಿನಲ್ಲಿ ಟೆಂಟ್ ಹಾಕಿ ಹೆದ್ದಾರಿಯಲ್ಲಿ ಪ್ರಯಾಣಿಸುವ ಸವಾರರ ದರೋಡೆಗಿಳಿದಿದ್ದ ಡಕಾಯಿತರಿಗೆ ಗ್ರಾಮಸ್ಥರು ಗೂಸಾ ನೀಡಿದ ಘಟನೆ ನಗರದ ಹೊರವಲಯದ ಬೆಂಗಳೂರು-ಶಿವಮೊಗ್ಗ ಹೈವೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗಗಳಲ್ಲಿ ಹೋಗುವ ಪ್ರಯಾಣಿಕರನ್ನ ಟಾರ್ಗೆಟ್ ಮಾಡ್ತಿದ್ದ ಗ್ಯಾಂಗ್ ವಾಹನಗಳನ್ನು ಅಡ್ಡಗಟ್ಟಿ ಕಾರಿನ ಗ್ಲಾಸ್ ಗಳನ್ನ ಒಡೆದು ದರೋಡೆ ಮಾಡುತ್ತಿದ್ದರೆಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದರು ಎನ್ನಲಾಗಿದೆ. ಕಳ್ಳರು ಗುಬ್ಬಿ ಫಾರೆಸ್ಟ್ ನಲ್ಲಿ ಟೆಂಟ್ …
Read More »ತುಳಿತಕೊಳ್ಳಪಟ್ಟ ದಲಿತ ಸಮುದಾಯದ ಸ್ವಾಭಿಮಾನದ ಬದುಕಿಗಾಗಿ ಕಾರ್ಯ ನಿರ್ವಹಿಸುವ ಮಹದಾಸೆ ನಿರೀಕ್ಷಿಸಲು ಸಾಧ್ಯ: ಅಶೋಕ ಪೂಜಾರಿ
ಗೋಕಾಕ : 3, ಸ್ವಾತಂತ್ರ್ಯ ಭಾರತದ ಸಂವಿಧಾನ ಶಿಲ್ಪಿ ಡಾ,ಬಾಬಾಸಾಹೇಬ ಅಂಬೇಡ್ಕರ್ ಅವರ ಪರ್ವ ಕಾಲದಲ್ಲಿ ನಾವಿದ್ದೇವೆ. ಸ್ವಾತಂತ್ರ್ಯ ಮತ್ತು ಸಮಾನತೆ ಬದುಕು ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾದ ನ್ಯಾಯ ಸಮ್ಮತ ಆಡಳಿತ ವ್ಯವಸ್ಥೆ, ಸ್ತ್ರೀ ಸ್ವಾತಂತ್ರ್ಯ ಸಮಗ್ರ ಶಿಕ್ಷಣ, ಎಲ್ಲರಿಗೂ ಸಮ ಬಾಳು ಮತ್ತು ಸಮಪಾಲು ಮುಂತಾದ ಉದಾತ್ತ ದ್ಧ್ಯೆಯಗಳೊಂದಿಗೆ ಸಾಂದರ್ಭಿಕ ತಿದ್ದುಪಡಿಗಳ ಅವಕಾಶಗಳೊಂದಿಗೆ ರಚಿಸಲ್ಪಟ್ಟಿರುವ ದೇಶದ ಸಂವಿಧಾನ ಭಾರತೀಯರ ಧರ್ಮ ಗ್ರಂಥವಗಬೇಕೆಂದು ಪ್ರೋ ಎ. ವಾಯ. ಪಂಗಣ್ಣವರ …
Read More »ಶ್ವಾನದ ತಲೆಗೆ ಸಿಲುಕಿದ ಪ್ಲಾಸ್ಟಿಕ್ ಬಾಟಲಿ ; ಅಗ್ನಿಶಾಮಕ ಸಿಬಂದಿಯಿಂದ ರಕ್ಷಣೆ
ತೆಕ್ಕಟ್ಟೆ : ಕಳೆದ ಮೂರು ದಿನಗಳಿಂದ ಶ್ವಾನದ ತಲೆಗೆ ಆಕಸ್ಮಿಕವಾಗಿ ಪ್ಲಾಸ್ಟಿಕ್ ಬಾಟಲಿ ಸಿಲುಕಿ ಪರದಾಡುತ್ತಿದ್ದು, ಕುಂದಾಪುರ ಅಗ್ನಿಶಾಮಕ ದಳದ ಸಿಬಂದಿಗಳ ಸಮಯ ಪ್ರಜ್ಞೆಯಿಂದಾಗಿ ರಕ್ಷಿಸಿದ ಘಟನೆ ಅ.2 ರಂದು ಸಂಭವಿಸಿದೆ. ಘಟನೆ : ಹಿರಿಯ ಪರಿಸರವಾದಿ ಕೊರ್ಗಿ ವಿಠಲ್ ಶೆಟ್ಟಿ ಅವರು ಅ.2 ರಂದು ತಮ್ಮ 76ನೇ ಹುಟ್ಟು ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕೋಣಿ ಮಾನಸ ಜ್ಯೋತಿಯ ವಿಶೇಷ ಚೇತನ ಮಕ್ಕಳಿಗಾಗಿ ಹಣ್ಣು ಹಂಪಲು ವಿತರಣೆಗೆಂದು ತೆರಳಿದ ಸಂದರ್ಭದಲ್ಲಿ …
Read More »ವಿದ್ಯುತ್ ಅವಘಡ: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸಾವು
ಚಿಕ್ಕೋಡಿ: ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ. ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಮಳೆ ಸುರಿದ ಹಿನ್ನಲೆ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ …
Read More »