Breaking News

Daily Archives: ಅಕ್ಟೋಬರ್ 23, 2021

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹುಬ್ಬಳ್ಳಿ: ಜೆಡಿಎಸ್ ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ. ಬಿಜೆಪಿ ಬಿ ಟೀಂ ಅಥವಾ ಒಳ ಒಪ್ಪಂದ ಎನ್ನುವ ಸುಳ್ಳು ಆರೋಪಗಳನ್ನು ಬಿಟ್ಟರೆ ನಮ್ಮ ಹಾಗೂ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಅವರಿಗೆ ಬೇರೆ ವಿಚಾರಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಶನಿವಾರ ಇಲ್ಲಿನ ಕಿತ್ತೂರು ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮಾತನಾಡಲು ಬೇರೆ ಯಾವುದೇ ವಿಚಾರಗಳು ಇಲ್ಲ. ಹೀಗಾಗಿ …

Read More »

ಭಗತ್‌ಸಿಂಗ್‌ 114ನೇ ಜಯಂತ್ಯುತ್ಸವದ ಅಂಗವಾಗಿ ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ

ಗದಗ : ಭಗತ್‌ಸಿಂಗ್‌ ಅವರ 114ನೇ ಜಯಂತ್ಯುತ್ಸವದ ಅಂಗವಾಗಿ ನಗರದ ಭಗತ್‌ ಸಿಂಗ್‌ ಅಭಿಮಾನಿ ಬಳಗವು ನೆವೆಂಬರ್‌ 1ರಂದು ಸ್ವಾತಂತ್ರ್ಯೋತ್ಸವ ಸಂಭ್ರಮ, ಕನ್ನಡ ರಾಜ್ಯೋತ್ಸವ, ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ ಹಾಗೂ ಆಂಬುಲೆನ್ಸ್‌ ಸೇವೆಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಳಗದ ಅಧ್ಯಕ್ಷ ಶಿವಕುಮಾರ ತಡಕೋಡ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಭಗತ್‌ ಸಿಂಗ್‌ ಅಭಿಮಾನಿ ಬಳಗವು ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಲಿಷ್ಠ …

Read More »

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ:ಬೊಮ್ಮಾಯಿ

ಹುಬ್ಬಳ್ಳಿ –  ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ  ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ  ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು.  ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ  …

Read More »

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

ಪಣಜಿ: ಗೋವಾಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ಆರ್ ಟಿಪಿಸಿಆರ್ ತಪಾಸಣೆ ಕಡ್ಡಾಯವಾಗಿದ್ದು ತಪಾಸಣೆಗಾಗಿ 3200 ರೂ ಶುಲ್ಕ ವಿಧಿಸಲಾಗುತ್ತಿದ್ದು ,ಇದಕ್ಕಾಗಿ ಖಾಸಗಿ ಸಂಸ್ಥೆಯೊಂದಕ್ಕೆ ಸರಕಾರ ಗುತ್ತಿಗೆ ನೀಡಿದೆ. ಗೋವಾದಲ್ಲಿ ಪ್ರವಾಸಿ ಸೀಜನ್ ಆರಂಭಗೊಂಡಿದ್ದು ವಿದೇಶಗಳಿಂದ ಪ್ರವಾಸಿಗರ ಆಗಮನ ಆರಂಭವಾಗಿದೆ . ಈಗಾಗಲೇ ಬೋಟ್‍ಗಳ ಮೂಲಕ ಮತ್ತು ಚಾರ್ಟರ್ ವಿಮಾನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಗೋವಾಕ್ಕೆ ಆಗಮಿಸುವ ದೇಶಿಯ ಪ್ರವಾಸಿಗರಿಗೆ ಕೋವಿಡ್ ಎಂಟಿಜನ್ ನೆಗೆಟಿವ್ ತಪಾಸಣೆ ಅಥವಾ ಕೋವಿಡ್ …

Read More »

ಒಂದೇ ವೇದಿಕೆಯಲ್ಲಿ ಸತ್ಯ ಗೊತ್ತಾಗಲಿ: ಸಿಎಂಗೆ ಸಿದ್ದರಾಮಯ್ಯ ಸವಾಲು

ಅಕ್ಕಿಆಲೂರ: ‘ಮಿಸ್ಟರ್ ಬಸವರಾಜ್ ಬೊಮ್ಮಾಯಿ ಒಂದೇ ವೇದಿಕೆಗೆ ನೀವೂ ಬನ್ನಿ, ನಾನೂ ಬರುತ್ತೇನೆ. ಹಾನಗಲ್ ಕ್ಷೇತ್ರದಲ್ಲಿ ನನ್ನ ಸರ್ಕಾರ ಇದ್ದಾಗ ಎಷ್ಟು ಕೆಲಸ ಆಗಿವೆ? ಎಷ್ಟು ಅನುದಾನ ಕೊಟ್ಟಿದ್ದೇನೆ ಎನ್ನುವುದನ್ನೆಲ್ಲಾ ಹೇಳುತ್ತೇನೆ. ನಿಮ್ಮ ಕೊಡುಗೆ ಏನು ಎನ್ನುವುದನ್ನು ನೀವೂ ಹೇಳಿ. ಜನರಿಗೆ ಸತ್ಯ ಗೊತ್ತಾಗಲಿ’ ಎಂದು ಶಾಸಕ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು. ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ನರೇಗಲ್, ಆಡೂರು, ಅಕ್ಕಿಆಲೂರು ಮತ್ತು ಹಿರೂರು ಗ್ರಾಮಗಳಲ್ಲಿ ಶುಕ್ರವಾರ ನಡೆದ …

Read More »

ಸಿದ್ದರಾಮಯ್ಯ, ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ? : ಬಿಜೆಪಿ ಪ್ರಶ್ನೆ

ಬೆಂಗಳೂರು :ನಿಮಗೂ 2 ಡೋಸ್ ಲಸಿಕೆ ಸಿಕ್ಕಿದೆಯಲ್ಲವೇ ಎಂದು ರಾಜ್ಯ ಬಿಜೆಪಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿ ಶುಕ್ರವಾರ ಟ್ವೀಟ್ ಮಾಡಿದೆ. ನೂರು ಕೋಟಿ ಲಸಿಕೆ ಪೂರ್ಣಗೊಳಿಸಿದ ಬಳಿಕ ಟೀಕಿಸಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಗಳನ್ನು ಮಾಡಿದೆ. ‘ವಿವಿಧ ದೇಶಗಳು ವಿತರಿಸಿದ ಲಸಿಕೆ ಪ್ರಮಾಣ ಅಮೆರಿಕಾ – 41.01ಕೋಟಿ ಜಪಾನ್ – 18.21ಕೋಟಿ ಜರ್ಮನಿ – 11.12ಕೋಟಿ ರಷ್ಯಾ – 9.98ಕೋಟಿ ಬ್ರಿಟನ್ – …

Read More »

ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಮಾಡಿದ ರಮೇಶ್​ ಜಾರಕಿಹೊಳಿ,

ಬೆಳಗಾವಿ: ಕಳೆದುಕೊಂಡ ಮಂತ್ರಿಗಿರಿಯನ್ನು ಮತ್ತೆ ಪಡೆಯಲು ಹರಸಾಹಸ ಪಡುತ್ತಿರುವ ಗೋಕಾಕ ಶಾಸಕ ಹಾಗೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಟೆಂಪಲ್​ ರನ್​ ಮುಂದುವರಿಸಿದ್ದಾರೆ. ಕಳೆದ ವಾರ ಪುತ್ರ ಅಮರನಾಥ ಸೇರಿದಂತೆ ಆಪ್ತರೊಂದಿಗೆ ಕೇದಾರನಾಥನ ದರ್ಶನ ಮಾಡಿದ್ದ ಜಾರಕಿಹೊಳಿ, ಇದೀಗ ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮಿ ದರ್ಶನ ಪಡೆದಿದ್ದಾರೆ. ನಿನ್ನೆ ಶುಕ್ರವಾರ ಹಿನ್ನೆಲೆಯಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದಹಾಗೆ ಕೊಲ್ಲಾಪುರ ಮಹಾಲಕ್ಷ್ಮಿ, ರಮೇಶ್ ಜಾರಕಿಹೊಳಿ ಅವರ ಮನೆದೇವರು. ಭೇಟಿ …

Read More »

ನಳಿನ್ ಕುಮಾರ್ ಕಟೀಲ್ ಗಂಡೊ ಹೆಣ್ಣೊ ಎಂಬ ಬಗ್ಗೆಯೇ ಅನುಮಾನವಾಗುತ್ತದೆ : ಬೆಳೂರು ಗೋಪಾಲಕೃಷ್ಣ ಕಿಡಿ

ಶಿವಮೊಗ್ಗ : ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಯಾವ ಅರ್ಹತೆಯೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇಲ್ಲ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೆಳೂರು ಗೋಪಾಲಕೃಷ್ಣ ಹರಿಹಾಯ್ದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಕಟೀಲ್ ವಿರುದ್ಧ ಕಟುವಾಗಿ ಟೀಕಿಸಿದ ಅವರು, ಈ ಕಟೀಲ್ ಗಂಡೊ ಹೆಣ್ಣೊ ಎಂಬ ಬಗ್ಗೆಯೇ ಅನುಮಾನವಾಗುತ್ತದೆ. ಬಿಜೆಪಿಯಲ್ಲಿಯೇ ಕೊಳೆತು ನಾರುವಷ್ಟು ವಿಷಯಗಳಿದ್ದರೂ ಕೂಡ ಕಾಂಗ್ರೇಸ್ ನಾಯಕರ ಬಗ್ಗೆ ತಮ್ಮ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ. ರೇಪ್ ಮಾಡಿದವರು ಸದನದಲ್ಲಿ ಬ್ಲೂ …

Read More »

ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚಟುವಟಿಕೆ ತಪ್ಪಿಸಲು ನೂತನ ತಂತ್ರಗಾರಿಕೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನೂತನ ತಂತ್ರಗಾರಿಕೆ ಬಳಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಪರಪ್ಪನ ಅಗ್ರಹಾರದಲ್ಲಿ ಖೈದಿಗಳಿಗೆ ಗಾಂಜಾ ಸಹಿತ ಎಲ್ಲಾ ವಸ್ತುಗಳೂ ಸಿಗುತ್ತಿವೆ. ಅಲ್ಲಿಂದಲೇ ಕರೆ ಮಾಡಿ ಸಾರ್ವಜನಿಕರಿಗೆ, ಉದ್ಯಮಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಇತ್ತು. ಹಾಗಾಗಿ ಪರಪ್ಪನ ಅಗ್ರಹಾರದಲ್ಲಿ ವಿಮಾನ ನಿಲ್ದಾಣಗಳಲ್ಲಿ ಇರುವಂತಹ ತಪಾಸಣಾ ವ್ಯವಸ್ಥೆ ಜಾರಿಗೆ ತರಲಾಗಿದೆ. ಅಲ್ಲಿನ ಸಿಬ್ಬಂದಿಗಳನ್ನೂ …

Read More »

ರಂಗೇರಿದ ಉಪ ಚುನಾವಣೆ ಪ್ರಚಾರ: ಹಾನಗಲ್‌ನಲ್ಲಿ ಡಿಕೆ ಶಿವಕುಮಾರ್ ಭರ್ಜರಿ ಮತಬೇಟೆ

ಹಾವೇರಿ, ಅಕ್ಟೋಬರ್ 22: ದಿನ ಕಳೆದಂತೆ ರಾಜ್ಯದಲ್ಲಿ ಉಪಚುನಾವಣೆಯ ಪ್ರಚಾರ ಭರದಿಂದ ಸಾಗಿದೆ. ಈ ಬಾರಿ ಗೆಲ್ಲಲ್ಲೇಬೇಕು ಎನ್ನುವ ದೃಢನಿರ್ಧಾರದೊಂದಿಗೆ ಮೂರು ಪಕ್ಷಗಳು ತೊಡೆತಟ್ಟಿ ಚುನಾವಣಾ ಕಣಕ್ಕಿಳಿದಿವೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾನಗಲ್‌ನ ನರೇಗಲ್‌ನಲ್ಲಿ ಪ್ರಚಾರದಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಗಳ ಬಗ್ಗೆ ಪ್ರಶ್ನೆ ಮಾಡಿದ ಬಿಜೆಪಿಗೆ ”ಕನಕಪುರದ ಬಂಡೆ” ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ನರೇಗಲ್‌ನಲ್ಲಿ ಪ್ರಚಾರದ ಭಾಗವಾಗಿ ಮಾತನಾಡಿದ ಡಿಕೆ ಶಿವಕುಮಾರ್,”ಆಡಳಿತಾವಧಿಯಲ್ಲಿ ಸಿದ್ದರಾಮಯ್ಯ ಅವರು …

Read More »