Breaking News

Daily Archives: ನವೆಂಬರ್ 19, 2021

ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಕಲಿ ಛಾಪಾ ಕಾಗದ ಸಿದ್ಧಪಡಿಸುತ್ತಿದ್ದ ಐವರು ಆರೋಪಿಗಳನ್ನು ಎಸ್‌ಐಟಿ ಪೊಲೀಸರು ಬಂಧಿಸಿದ್ದಾರೆ. ಹುಸೇನ್ ಮೋದಿ ಬಾಬು, ಸೀಮಾ, ನಯಾಜ್ ಅಹ್ಮದ್, ಶಬ್ಬೀರ್ ಅಹ್ಮದ್, ಹರೀಶ್​ನನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 63 ಲಕ್ಷ ರೂಪಾಯಿ ಮೌಲ್ಯದ ನಕಲಿ ಛಾಪಾ ಕಾಗದ (stamp papers) ವಶಕ್ಕೆ ಪಡೆದಿದ್ದಾರೆ. ಹೈಕೋರ್ಟ್ (High court) ಸೂಚನೆ ಮೇರೆಗೆ ರಚನೆಯಾಗಿದ್ದ ಎಸ್‌ಐಟಿ (SIT) ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆಸಿದ್ದು, ಐವರು ಆರೋಪಿಗಳನ್ನು ಸದ್ಯ ವಿಚಾರಣೆಗೊಳಪಡಿಸಲಾಗಿದೆ. ನಕಲಿ …

Read More »

ಕಲಘಟಗಿ: ಕೆಲಸದ ಒತ್ತಡ ತಾಳಲಾರದೇ ಅಧಿಕಾರಿ ಆತ್ಮಹತ್ಯೆ

ಕಲಘಟಗಿ: ಪಟ್ಟಣದ ಬಸ್ ನಿಲ್ದಾಣದ ಅಧಿಕಾರಿ ಹುಬ್ಬಳ್ಳಿಯ ಸುಭಾಷ ಬುಲಬುಲೆ (58) ಎಂಬುವವರು ಕೆಲಸದ ಒತ್ತಡ ತಾಳಲಾರದೆ ಪಾಸ್ ವಿತರಣೆ ಕೇಂದ್ರದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಇಬ್ಬರು ಪುತ್ರರು, ಪುತ್ರಿ ಇದ್ದಾರೆ.   ‘ಈಗ ವಿದ್ಯಾರ್ಥಿಗಳ ಪಾಸುಗಳನ್ನು ಕಂಪ್ಯೂಟರ್ ಮೂಲಕ ವಿತರಣೆ ಮಾಡುತ್ತಿದ್ದು ನಾನು ಕಂಪ್ಯೂಟರ್ ತರಬೇತಿ ಪಡೆದಿಲ್ಲದ ಕಾರಣ ಪಾಸ್ ನೀಡಲು ಮಾಹಿತಿ ಗೊತ್ತಾಗುತ್ತಿಲ್ಲ. ಹೀಗಾಗಿ ಕೆಲಸದ ಒತ್ತಡ ಜಾಸ್ತಿ ಆಗಿದೆ’ ಎಂದು ಪತ್ರ …

Read More »

ವಿಧಾನ ಪರಿಷತ್ ಚುನಾವಣೆ: ಲಿಂಗಾಯತ ಅಭ್ಯರ್ಥಿಗಳಿಗೆ ಕಾಂಗ್ರೆಸ್, ಬಿಜೆಪಿ ಮನ್ನಣೆ; ಇತರ ಸಮುದಾಯಗಳ ಕಡೆಗಣನೆ!

ಬೆಳಗಾವಿ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ವಿವಿಧ ಪ್ರಬಲ ಸಮುದಾಯಗಳಿಂದ ಬೆಂಬಲ ಸಿಗುತ್ತಿದ್ದರೂ, ಈ ಭಾಗದ ನಾಲ್ಕು ಪ್ರಮುಖ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎರಡೂ ಪಕ್ಷಗಳು ಪ್ರಭಾವಿ ಲಿಂಗಾಯತ ಮುಖಂಡರನ್ನು ಕಣಕ್ಕಿಳಿಸಲು ಮುಂದಾಗಿವೆ.   ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಬಹುತೇಕ ಹಾಲಿ ವಿಧಾನ ಪರಿಷತ್ ಸದಸ್ಯರು ಲಿಂಗಾಯತ ಸಮುದಾಯದವರಾಗಿದ್ದಾರೆ. ಬೆಳಗಾವಿ/ಚಿಕ್ಕೋಡಿ, ಹುಬ್ಬಳ್ಳಿ-ಧಾರವಾಡ-ಗದಗ-ಹಾವೇರಿ, ವಿಜಯಪುರ-ಬಾಗಲಕೋಟ ಮತ್ತು ಕಲಬುರ್ಗಿ ಮತ್ತು ಯಾದಗಿರಿಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ಬಹುತೇಕ ಹಾಲಿ ಎಂಎಲ್‌ಸಿಗಳು …

Read More »

₹1.92 ಕೋಟಿ ಮೌಲ್ಯದ ಹಳೆಯ ನೋಟುಗಳು ವಶಕ್ಕೆ, ಮೂವರ ಬಂಧನ

ಮಂಗಳೂರು: ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದ ಮೂವರನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, ಬಂಧಿತರಿಂದ ₹ 1.92 ಕೋಟಿ ಮೊತ್ತದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕಣ್ಣೂರಿನ ಜುಬೇರ್ ಹಮ್ಮಬ್ಬ (52), ಪಡೀಲ್‌ನ ದೀಪಕ್ ಕುಮಾರ್ (32) ಮತ್ತು ಬಜ್ಪೆ ನಿವಾಸಿ ಅಬ್ದುಲ್ ನಾಸೀರ್ (40) ಬಂಧಿತರು. ಜುಬೇರ್ ಮತ್ತು ನಾಸೀರ್ ಚಾಲಕರಾಗಿದ್ದು, ದೀಪಕ್ ವಿದ್ಯುತ್ ಗುತ್ತಿಗೆದಾರ. ಈ ಮೂವರು ಅಡ್ಯಾರ್‌ನಿಂದ ಲಾಲ್‌ಬಾಗ್‌ಗೆ ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದು, ಪೊಲೀಸರು ಕಾರು ನಿಲ್ಲಿಸಿ ತಪಾಸಣೆ ಮಾಡಿದಾಗ …

Read More »

ಸತೀಶ ಜಾರಕಿಹೊಳಿ ಜಾಣ: ಏನು ಮಾಡಬೇಕು ಅಂತಾ ಅವರಿಗೆ ಗೊತ್ತಿದೆ,ಮಹಾಂತೇಶ ಕವಟಗಿಮಠ ಗೆಲ್ಲಿಸುವುದು ನಮ್ಮ ಮೊದಲ ಆಧ್ಯತೆ.

ಬಿಜೆಪಿ ಪಕ್ಷದ ಮೊದಲ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲ್ಲಿಸುವುದು ನಮ್ಮ ಮೊದಲ ಆಧ್ಯತೆ. ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಪುನರುಚ್ಚರಿಸಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ರಮೇಶ ಜಾರಕಿಹೊಳಿ ಬಿಜೆಪಿ ಪಕ್ಷದಿಂದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸುತ್ತಿದ್ದೇವೆ. ಎರಡನೇ ಅಭ್ಯರ್ಥಿ ಬೇಡ ಎಂದು ನಾನು ಮನವಿ ಮಾಡಿಕೊಂಡಿದ್ದೇನೆ. ಒಂದನೇ ಮತ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ …

Read More »

ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ:B.S.Y

ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು..ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 7502ಚುನಾಯಿತರು ಇಲ್ಲಿದ್ದೀರಿ. ಕನಿಷ್ಟ 5000ಸಾವಿರ ಜನ ನಮ್ಮ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದರು. ಮಹಿಳಾ ಸಬಲೀಕರಣ ಪ್ರಧಾನಿಗಳ ಅಪೇಕ್ಷೆ ಇದೆ.ಅದನ್ನ ಮಹಿಳೆಯರು ಸದುಪಯೋಗ ಮಾಡಿಕೊಡಬೇಕು. ಹಣ, ಹೆಂಡ, ತೋಳ ಬಲ್ ಹಾಗೀ‌ಜಾತಿ ವಿಷಬೀಜ ಬಿತ್ತಿದ ಕಾಂಗ್ರೆದ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಲೋಕಸಭೆಯಲ್ಲಿ ಕೇವಲ 20ಜನ ಇದ್ದಾರೆ.ಮುಂದಿನ …

Read More »

ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೊನೆಗೂ ಕೇಂದ್ರ ಸರ್ಕಾರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ ಮತ್ತು ಐತಿಹಾಸಿಕ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ದತಿ ಅನೇಕ …

Read More »

ಸಂಸತ್ ನಲ್ಲಿ ಘೋಷಣೆ ಮಾಡಿದ ಮೇಲೆ ಪ್ರತಿಭಟನೆ ಹಿಂದಕ್ಕೆ : ರಾಕೇಶ್ ಟಿಕಾಯತ

ನವದೆಹಲಿ: ಭಾರಿ ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು, ರೈತರು ಪ್ರತಿಭಟನೆಯನ್ನು ವಾಪಸ್‌ ಪಡೆಯುವಂತೆ ಕೋರಿಕೊಂಡಿದ್ದಾರೆ. ಈ ಬಗ್ಗೆ ಹಲವೆಡೆಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾದರೂ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತ್ರ ಸದ್ಯ ಪ್ರಧಾನಿಯ ಮನವಿಗೆ ಸ್ಪಂದಿಸಲ್ಲ ಎಂದಿದ್ದಾರೆ.   ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಇದೀಗ ಮಾಡಿರುವುದು ಘೋಷಣೆಯಷ್ಟೇ. ಆದ್ದರಿಂದ ಪ್ರತಿಭಟನೆ …

Read More »

ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್

ನವದೆಹಲಿ, ನವೆಂಬರ್ 19: ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್ ಪಡೆಯುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಬಗ್ಗೆ ಹೇಳಿದರು.   ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ …

Read More »

ಪರಿಷತ್ ಚುನಾವಣೆ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿದೆ, ಈ ರೀತಿ ಕಾಂಗ್ರೆಸ್ ಗೆಲ್ಲಲು ಬಿಡಲ್ಲ, ಸೋಲಿಸುತ್ತೇವೆ,: ರಮೇಶ ಜಾರಕಿಹೊಳಿ

ಗೋಕಾಕ್ ನಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ, ಎರಡು ಪರಿಷತ್ ಸ್ಥಾನಗಳಿಗೆ ಚುನಾವಣೆ ವಿಚಾರ, ಮೊದಲು ಆದ್ಯತೆ ಮಹಾಂತೇಶ ಕವಟಗಿಮಠ ಗೆಲ್ಲಿಸಲು, ಎರಡನೇ ಅಭ್ಯರ್ಥಿ ಗೆಲುವಿಗೆ ವರಿಷ್ಠ ಒಪ್ಪಿಗೆ ಬೇಕಿದೆ, ಲಖನ್ ಜಾರಕಿಹೊಳಿ ಪಕ್ಷೇತರವಾಗಿ ಸ್ಪರ್ಧೆ ಬಗ್ಗೆ ಗೊತ್ತಿಲ್ಲ, ಲಖನ್ ಜಾರಕಿಹೊಳಿ ಸ್ಪರ್ಧೆ ಅವರ ಸ್ವತಃ ನಿರ್ಯಣ, ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಯಾರಿಗೆ ಬೆಂಬಲಿಸಬೇಕು ಎನ್ನುವ ತೀರ್ಮಾನ ಮಾಡಿಲ್ಲ, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವಿಗೆ ಪ್ರಯತ್ನ, ಒಂದನೇ …

Read More »