Breaking News

Daily Archives: ನವೆಂಬರ್ 22, 2021

“ಕನಕದಾಸರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಕೊಡುವ ನಿಜವಾದ ಗೌರವ”

ಬೆಂಗಳೂರು,ನ.22-ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು. ನವಸಮಾಜ , ಸಮಸಮಾಜ ನಿರ್ಮಾಣವಾಗಬೇಕೆಂದು ಕನಸು ಕಂಡಿದ್ದ ಕನಕದಾಸರು ಪರಿವರ್ತನೆಯ …

Read More »

ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ; ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮಳೆಯಿಂದ ಮನೆ ಸಂಪೂರ್ಣ ಹಾನಿಯಾಗಿದ್ದರೆ ತಕ್ಷಣವೇ 1 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆಹಾನಿ ಸಂಭವಿಸಿದ್ದು, 500 ಕೋಟಿ ರೂ.ಗಳನ್ನು ರಸ್ತೆ ದುರಸ್ತಿಪಡಿಸಲು ಬಿಡುಗಡೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಇಂದಿನಿಂದ ಆರಂಭವಾಗಲಿದ್ದು, …

Read More »

ಡಾ.ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಯ: ಶೋಕಸಾಗರದಲ್ಲಿ ಭಕ್ತರು

ನರೇಗಲ್: ಗದಗ ಜಿಲ್ಲೆಯ ನರೇಗಲ್ ಹೋಬಳಿಯ ಹಾಲಕೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಅಭಿನವ ಅನ್ನದಾನ ಸ್ವಾಮೀಜಿ (85) ಸೋಮವಾರ ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ. ಹಾಲಕೆರೆ, ನರೇಗಲ್, ಜಕ್ಕಲಿ, ಇಟಗಿ, ರೋಣ, ಗಜೇಂದ್ರಗಡ, ನಿಡಗುಂದಿ, ಮಾರನಬಸರಿ, ಬೂದಿಹಾಳ, ಅಬ್ಬಿಗೇರಿ, ನಿಡಗುಂದಿಕೊಪ್ಪ, ಸೂಡಿ, ಕಳಕಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ 28 ಶಾಖಾ ಮಠಗಳ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.   ಹಾಲಕೆರೆಯ ಶ್ರೀಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ವಿವಿಧ ಹಳ್ಳಿಗಳಲ್ಲಿ …

Read More »

ನಿಜಕ್ಕೂ ನಿಮಗೆ ತಾಕತ್ತಿದ್ರೆ, ಪ್ರತಾಪ ಸಿಂಹಗೆ ಹೊಡೀರಿ: ಶ್ರೀ ಸಿದ್ದಲಿಂಗ ಸ್ವಾಮೀಜಿ

ಕಲಬುರಗಿ: ರಾಜಕೀಯ ನಾಯಕರಿಬ್ಬರ ವಿಚಾರದಲ್ಲಿ ಸ್ವಾಮೀಜಿಗಳಿಬ್ಬರ ನಡುವೆ ವಾಕ್ಸಮರ ಏರ್ಪಟ್ಟಿದೆ. ಬಿಟ್​ಕಾಯಿನ್ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ನಡೆದ ಮಾತಿನ ಜಟಾಪಟಿ ಈಗ ಕಲಬುರಗಿಯ ಸುಲಫಲ ಮಠದ ಶ್ರೀ ಮಹಾಂತ ಸ್ವಾಮೀಜಿ ಮತ್ತು ಆಂದೋಲಾ ಮಠದ ಸಿದ್ದಲಿಂಗ ಸ್ವಾಮಿಗಳ ನಡುವೆ ನಡೆದಿದೆ.   ಪ್ರಿಯಾಂಕ್ ಖರ್ಗೆ ಗಂಡಸೋ, ಹೆಂಗಸೋ ಎಂದಿರುವ ಪ್ರತಾಪ ಸಿಂಹಗೆ ಮೈಸೂರಿಗೆ ತೆರಳಿ ಚಡ್ಡಿ ಬಿಚ್ಚಿ ಹೊಡಿತೀವಿ ಎಂದು ಸುಲಫಲ ಮಠದ ಶ್ರೀ …

Read More »

ನಾಳೆ ಮಂಗಳವಾರ,ಲಖನ್, ಚನ್ನರಾಜ್ ಕವಟಗಿಮಠ ಅವರಿಂದ ನಾಮಪತ್ರ…!!!

ಬೆಳಗಾವಿ-ನಾಳೆ ಮಂಗಳವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಈ ದಿನ ಬೆಳಗಾವಿ ಜಿಲ್ಲೆಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಲಖನ್ ಜಾರಕಿಹೊಳಿ ಅವರು ಸಾವಿರಾರು ಪಂಚಾಯತಿ ಸದಸ್ಯರನ್ನು ಬೆಳಗಾವಿಯಲ್ಲಿ ಸಮಾವೇಶಗೊಳಿಸಲಿದ್ದು ಸರ್ದಾರ್ ಮೈದಾನದಿಂದ ಸಾವಿರಾರು ಸಪೋಟರ್ಸ್ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮತ್ತು ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ನಾಳೆ ಮಂಗಳವಾರವೇ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಗಳವಾರ ಕೊನೆಯ ದಿನ ಈ ದಿನವೇ …

Read More »

ಉಡುಪಿ – ಬಾಲಕಿ ಮೇಲೆ ನಿರಂತರ ಅತ್ಯಾಚಾರ

ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳುಗಳಿಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಪೊಕ್ಸೊ ಕಾಯಿದೆಯಡಿ ಬಂಧಿಸಿದ್ದಾರೆ. ಸಂದೀಪ್ ನಾಯ್ಕ ಹಾಗೂ ವಿಘ್ನೇಶ್ ನಾಯ್ಕ ಬಂಧಿತ ಆರೋಪಿಗಳು.   ಬಾಲಕಿಯ ತಂದೆ ಹಾಗೂ ತಾಯಿ ಕೆಲಸಕ್ಕೆಂದು ಹೊರ ಹೋದ ಸಂದರ್ಭ ಆಕೆ ಮನೆಯಲ್ಲಿ ಒಬ್ಬಳೇ ಇರುತ್ತಿದ್ದಳು. ಈ ವೇಳೆ ಸಮೀಪದ ಮನೆಯಲ್ಲಿರುವ ಬಾಲಕಿಯ ಸಂಬಂಧಿಕರಾದ ಆರೋಪಿಗಳು, …

Read More »

ವಾಹನ ಸವಾರರಿಗೆ ರಿಲೀಫ್ ಪೆಟ್ರೋಲ್, ಡಿಸೇಲ್ ದರ ಇಳಿಕೆ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಬಕಾರಿ ತೆರಿಗೆಯ ಜೊತೆಯಲ್ಲಿ ರಾಜ್ಯ ಸರ್ಕಾರವು ಮಾರಾಟ ತೆರಿಗೆಯನ್ನು ಶೇಕಡಾ 35 ರಿಂದ ಶೇಕಡಾ 25.9ಕ್ಕೆ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 24 ರಿಂದ ಶೇಕಡಾ 14.34ಕ್ಕೆ ಇಳಿಸಿವೆ. ಇದರಿಂದ ನ.3ರಂದು ಇದ್ದ ಪೆಟ್ರೋಲಿನ ಚಿಲ್ಲರೆ ಮಾರಾಟ ದರವು 113.93 ರೂಪಾಯಿಯಿಂದ 100.63 ರೂಪಾಯಿಗೆ ಬಂದಿದ್ದು, ಒಟ್ಟಾರೆ ದರ ಕಡಿತ 13.30 ರೂಪಾಯಿ ಆಗಲಿದೆ. ಇನ್ನು ನ.3 ರಂದು ಇದ್ದ ಡೀಸೆಲ್​​​ …

Read More »

ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ:ಕಾಂಗ್ರೆಸ್‌

ತುಮಕೂರು: ‘ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮನ್ನು 10 ಪರ್ಸೆಂಟ್ ಸರ್ಕಾರ ಎನ್ನುತ್ತಿದ್ದರು. ಈಗ ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನೇತೃತ್ವದ ಸರ್ಕಾರ ಈವರೆಗೆ ದೇಶದಲ್ಲಿ ಜಾರಿಗೊಳಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವ ಸಲುವಾಗಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನಕ್ಕೆ ತುಮಕೂರಿನಲ್ಲಿ ಭಾನುವಾರ ಚಾಲನೆ ನೀಡಲಾಯಿತು.   ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ …

Read More »

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ

ಬೆಂಗಳೂರು : ರಾಜ್ಯ ಸರ್ಕಾರವು (State Government) ಸರ್ಕಾರಿ ನೌಕರರಿಗೆ (Government Employees) ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ.     ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, …

Read More »

ಪರಿಷತ್ ಚುನಾವಣೆ: ಮತದಾರರ ಅಂತಿಮ‌ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್

ಬೆಳಗಾವಿ  : 04-ಬೆಳಗಾವಿ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 511 ಮತಗಟ್ಟೆಗಳ ಅಂತಿಮ ಮತದಾರರ ಪಟ್ಟಿಗಳನ್ನು ಭಾನುವಾರ(ನ.21) ಪ್ರಸಿದ್ದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ. ಮತದಾರರ ಕರಡು ಪಟ್ಟಿಯನ್ನು 11-11-2021 ರಂದು ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಧರಿಸಿ ಸರಿಪಡಿಸಲಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಮತದಾರರ ಪಟ್ಟಿಗಳು ಸಂಬಂಧಿಸಿದ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ, …

Read More »