Breaking News

Daily Archives: ನವೆಂಬರ್ 28, 2021

ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿ ಆಗಿರುವುದರಿಂದ ಕಾಂಗ್ರೆಸ್ ಗೆ ತೊಂದರೆ ಆಗುತ್ತಾ? ಡಿಕೆಶಿ ಹೇಳಿದ್ದೇನು

ಹುಬ್ಬಳ್ಳಿ –  ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ನರೇಗಾ ಯೋಜನೆಯಿಂದ ಪಂಚಾಯ್ತಿಗಳಿಗೆ ಕೋಟ್ಯಂತರ ರುಪಾಯಿ ಅನುದಾನ ಬಂದಿದೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ನರೇಗಾ ಇಲ್ಲದಿದ್ದರೆ ಪಂಚಾಯ್ತಿಗಳಿಗೆ ಜೀವವೇ ಇಲ್ಲ. ಅವುಗಳಿಗೆ ಶಕ್ತಿ ಬಂದಿದೆ ಎಂದರೆ ಕಾಂಗ್ರೆಸ್ ಸರಕಾರದ ನರೇಗಾ ಯೋಜನೆಯಿಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಿಂದೆ ಎಸ್.ಎಂ. ಕೃಷ್ಣ ಅವರ ಸರಕಾರವಿದ್ದಾಗ ಇದೇ ಧಾರವಾಡದಲ್ಲಿ ಬೇಲೂರು …

Read More »

ರಮೇಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಕಾಂಗ್ರೆಸ್ ಕೆಡವಲು ಫುಲ್ ಜೋರಾಗಿ ತಯಾರಿ ನಡೆಸಿದ ಸಾಹುಕಾರ

ನವದೆಹಲಿ –  ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಸಹೋದರ, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರ ಪ್ರಚಾರ ಮಾಡಲು ಬಿಜೆಪಿ ರಾಷ್ಟ್ರೀಯ ನಾಯಕರ ಅನುಮತಿ ಪಡೆಯಲು ಮಾಜಿ ಸಚಿವ ರಮೇಶ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ಭಾನುವಾರ ಸಂಜೆ ವಿಧಾನಪರಿಷತ್ ಹಾಲಿ ಸದಸ್ಯ ವಿವೇಕರಾವ್ ಪಾಟೀಲ ಅವರೊಂದಿಗೆ ದೆಹಲಿ ತಲುಪಿರುವ ರಮೇಶ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ನಳೀನ್ ಕುಮಾರ ಕಟೀಲ್ ಅವರಿಗೆ ವಿವೇಕರಾವ್ ಪಾಟೀಲ …

Read More »

ಅಧಿವೇಶನವನ , ಕಲಾಪ ಆರಂಭದ ದಿನವೇ ಕೃಷಿ ಕಾಯ್ದೆಯನ್ನು ವಾಪಾಸ್ ಪಡೆಯುವುದು ಸರ್ಕಾರದ ಪ್ರಮುಖ ಉದ್ದೇಶ:ಪ್ರಹ್ಲಾದ್ ಜೋಷಿ

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ(ನ.29)ಆರಂಭವಾಗಲಿದೆ. ಈ ಹೊತ್ತಿನಲ್ಲಿ ಇಂದು ಬೆಳಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿವಿಧ ಪಕ್ಷಗಳ ಲೋಕಸಭಾ ಸದಸ್ಯರ ಸಭೆ ನಡೆಸಲಿದ್ದಾರೆ.ಈ ಚಳಿಗಾಲ ಅಧಿವೇಶನವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರಮುಖವಾಗಿ ಪರಿಗಣಿಸಿದೆ.   ಕಲಾಪ ಆರಂಭದ ದಿನವೇ ಕೃಷಿ ಕಾಯ್ದೆಯನ್ನು ವಾಪಾಸ್ ಪಡೆಯುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಸಚಿವ ಸಂಪುಟವು ಮಸೂದೆಯನ್ನು ಅಂಗೀಕರಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ …

Read More »

ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ: ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ ಓಮಿಕ್ರಾನ್ ರೂಪಾಂತರ ಪತ್ತೆಯಾಗಿಲ್ಲ .ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ ಕೇಸ್‌ ಹೆಚ್ಚಳವಾಗಿದ್ದು, ಈ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಯಾ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಅವರು ಇದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆಮಾಹಿತಿ ನೀಡಿದರು.ಇದೇ ವೇಳೆ ಅವರು ಧಾರವಾಡದ ಎಸ್‌ಡಿಎಂ ಮೆಡಿಕಲ್‌ ಕಾಲೇಜಿನಲ್ಲಿ ಉಂಟಾಗಿರುವ ಕೋವಿಡ್ ಸ್ಪೋಟಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿ ಸದ್ಯ ಆಸ್ಪತ್ರೆಯ ಒಪಿಡಿಯನ್ನು ಬಂದ್‌ …

Read More »

ಶಾಲಾ ಮಕ್ಕಳು ನಿರ್ಮಿಸಿರುವ ಶಿವಾಜಿ ಮಹಾರಾಜರ ಕೋಟೆ

ಬೆಳಗಾವಿಯಟಳಕವಾಡಿಯ ಎಸ್‍ಕೆಇ ಸೊಸೈಟಿಯ ಹೈಸ್ಕೂಲ್ ವಿದ್ಯಾರ್ಥಿಗಳು ಅಖಂಡ ಹಿಂದೂ ಸಾಮ್ರಾಟ್ ಶಿವಾಜಿ ಮಹಾರಾಜರ ಜೀವನ ಹಾಗೂ ವೈಭವಯುತ ಆಡಳಿತವನ್ನು ಜನತೆಗೆ ತಿಳಿಸುವ ದೃಷ್ಟಿಯಿಂದ ಈ ಕಿಲ್ಲಾ ಮಾದರಿಗಳನ್ನು ತಮ್ಮದೇ ಆದ ಪರಿಕಲ್ಪನೆಯಲ್ಲಿ ನಿರ್ಮಾಣ ಮಾಡಿದ್ದಾರೆ. ವಿದ್ಯಾರ್ಥಿಗಳ ಪರಿಕಲ್ಪನೆಯಲ್ಲಿ ಮೂಡಿಬಂದ ಈ ಕಿಲ್ಲಾ ಮಾದರಿಗಳ ಉದ್ಘಾಟನೆಯನ್ನು ಲೋಕಮಾನ್ಯ ಸೊಸೈಟಿ ಹಾಗೂ ಭಗವೇವಾದಳ್ ಸಂಸ್ಥೆಯ ಪಧಾಧಿಕಾರಿಗಳು ನೆರವೇರಿಸಿ ವಿದ್ಯಾರ್ಥಿಗಳ ಕಾರ್ಯವನ್ನು ಪ್ರಶಂಶಿಸಿದರು. ಒಬ್ಬರಿಗಿಂತ ಒಬ್ಬರು ಶೂರ ಸೈನಿಕರು, ಒಂದಕ್ಕಿಂದ ಒಂದು ಅಭೇದ್ಯ ಕೋಟೆಗಳು, …

Read More »

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಹೇಳಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಫಿಂಗ್ ಮಾಲ್, ಜಿಮ್, ಬಾರ್ ಆಂಡ್ ರೆಸ್ಟೋರೆಂಟ್, ಮಲ್ಟಿಪ್ಲೆಕ್ಸ್, ಸಿನಿಮಾ ಮಂದಿರಗಳ ಮಾಲೀಕರು ಹಾಗೂ ಧಾರ್ಮಿಕ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಲ್ಲ ಸಮುದಾಯದ ಮುಖಂಡರ ಜೊತೆ ಕೋವಿಡ್ ಲಸಿಕೆ …

Read More »

ಪ್ರಥಮ ಪ್ರಾಶಸ್ತ್ಯದಿಂದ ಮತಗಳೊಂದಿಗೆ ಮಹಾಂತೇಶ ಕವಟಗಿಮಠ ಜಯಭೇರಿ: ಶ್ರೀಮಂತ ಪಾಟೀಲ್

ಭಾರತೀಯ ಜನತಾ ಪಕ್ಷದ ಪರಿಷತ್ ಅಭ್ಯರ್ಥಿಯಾದ ಮಹಾಂತೇಶ್ ಕವಟಗಿಮಠ ಪ್ರಥಮ ಮತಗಳಿಂದ ಜಯಭೇರಿ ಸಾಧಿಸಿಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಶ್ರೀಮಂತ ಪಾಟೀಲ್, ಬಿಜೆಪಿ ಪಕ್ಷದ ರಾಜ್ಯದ ಮುಖಂಡರು ಮಹಾಂತೇಶ್ ಕವಟಗಿಮಠ ಇವರಿಗೆ ಟಿಕೆಟ್ ನೀಡಿದ್ದು, ಪಕ್ಷದ ವತಿಯಿಂದ ಅವರ ಪರ ಮತಚಲಾಯಿಸಿ. ಪ್ರಥಮ ಪ್ರಾಶಸ್ತ್ಯದ ಮತಪಡೆದು ಆಯ್ಕೆಯಾಗಲಿದ್ದಾರೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಇದ್ದರೂ, ಮತ್ತೊಬ್ಬ …

Read More »

ಕೋವಿಡ್ ‘ರಿಪೋರ್ಟ್’ ಕೇಳಿದ ‘ಪೊಲೀಸ್’ ಮೇಲೆಯೇ ಹಲ್ಲೇ ಮಾಡಿದ ‘ಡಾಕ್ಟರ್’..!

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೋಗನೊಳ್ಳಿ ಚಕ್ ಪೋಸ್ಟ್ ನಲ್ಲಿ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ ಹಿನ್ನಲೆ ವಾಹನ ತಡೆದು ತಪಾಸನೆಗೆ ಮುಂದಾದ ಪೊಲೀಸರ ಮೇಲೆ ಪ್ರಯಾಣಿಕನೋರ್ವ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸ್ ರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಕೊಲ್ಲಾಪುರ ಮೂಲದ ಡಾ. ಸ್ವಾಮಿ ನಂದಿಮಠ ಎಂದು ತಿಳಿದು ಬಂದಿದೆ. ತಪಾಸಣೆ ನಡೆಯುತ್ತಿದೆ ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ ಪೊಲೀಸ್ ಸಿಬ್ಬಂದಿಗೆ ಅವಾಚ್ಚವಾಗಿ ಬೈದಿರುವ ಕಿರೀಕ್ …

Read More »

ಅತೀ ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಮಹತ್ವದ ಬದಲಾವಣೆ ಉಂಟಾಗಲಿದೆ:ಠಾಕ್ರೆ ಸರ್ಕಾರದ ಪತನದ ಭವಿಷ್ಯ ನುಡಿದಿದ್ದಾರೆ.?

ಅತೀ ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಮಹತ್ವದ ಬದಲಾವಣೆ ಉಂಟಾಗಲಿದೆ ಎಂದು ಹೇಳುವ ಮೂಲಕ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಠಾಕ್ರೆ ಸರ್ಕಾರದ ಪತನದ ಭವಿಷ್ಯ ನುಡಿದಿದ್ದಾರೆ. ರಾಜಸ್ಥಾನದಲ್ಲಿ 2 ದಿನಗಳ ಪ್ರವಾಸದಲ್ಲಿರುವ ನಾರಾಯಣ ಠಾಕ್ರೆ, ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಬದಲಾವಣೆಯನ್ನು ಕಾಣಲಿದ್ದೀರಿ. ಮಾರ್ಚ್​ ತಿಂಗಳಲ್ಲಿ ಈ ಬದಲಾವಣೆ ಕಾಣಲಿದೆ. ಸರ್ಕಾರವನ್ನು ರಚಿಸುವುದು ಹಾಗೂ ಸರ್ಕಾರವನ್ನು ಪತನಗೊಳಿಸುವುದು, ಕೆಲವೊಂದು ವಿಚಾರಗಳನ್ನು ರಹಸ್ಯವಾಗಿಯೇ ಇಡಬೇಕು ಎಂದು ಹೇಳಿದ್ದಾರೆ. ಉದ್ಧವ್ …

Read More »

ಆಸ್ಪತ್ರೆಯಿಂದಲೇ ‘ಬಿಗ್ ​ಬಾಸ್’​ ಕಾರ್ಯಕ್ರಮ ನಡೆಸಿಕೊಟ್ಟ ಕಮಲ್​ಹಾಸನ್.​..! ರಮ್ಯಾ ಕೃಷ್ಣನ್​ ಸಾಥ್​​

ಕೋವಿಡ್​ 19 ಸೋಂಕಿನಿಂದಾಗಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಮಲ್​ ಹಾಸನ್​ ಅನುಪಸ್ಥಿತಿಯಿಂದಾಗಿ ತಮಿಳಿನ ಪ್ರಸಿದ್ಧ ರಿಯಾಲಿಟಿ ಶೋ ಬಿಗ್​ ಬಾಸ್​​​ ಸೀಸನ್​​ 5ರ ನಿರೂಪಣೆಯನ್ನು ರಮ್ಯಾ ಕೃಷ್ಣ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಆಯೋಜಕರು ಮುಂಬರುವ ಎಪಿಸೋಡ್​ನ ಪ್ರೋಮೋವನ್ನು ರಿಲೀಸ್​ ಮಾಡಿದ್ದು ಇದರಲ್ಲಿ ಕಮಲ್​ ಹಾಸನ್​​​ ಆಸ್ಪತ್ರೆಯಿಂದಲೇ ಮಾತನಾಡಿದ್ದಾರೆ. ನಟಿ ರಮ್ಯಾ ಕೃಷ್ಣನ್​​ರನ್ನು ಗೆಳತಿ ಎಂದು ಪರಿಚಯಿಸಿದ ಕಮಲ್​ ಹಾಸನ್​ ಕಾರ್ಯಕ್ರಮ ನಡೆಸಲು ತಮಗೆ ನೆರವಾಗುವಂತೆ ಕೇಳಿಕೊಂಡಿದ್ದಾರೆ. ರಮ್ಯಾ ಕೃಷ್ಣನ್​​ರನ್ನು …

Read More »