ಬೆಳಗಾವಿ : ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಜಲಸಂಪನ್ಮೂಲ (ಬೃಹತ್ ಮತ್ತು ಮಧ್ಯಮ) ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು ರಾಷ್ಟ್ರಧ್ವಜಾರೊಃಣ ನೆರವೇರಿಸಿದರು. ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. …
Read More »