ಬೆಳಗಾವಿ : ವಿಧಾನಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಲಿರುವ ಅಂದರು/ದುರ್ಬಲ/ಅನಕ್ಷರಸ್ಥ ಮತದಾರರು ತಮ್ಮ ಮತಚಲಾವಣೆಗೆ ನೆರವಾಗಲು ಸಹಾಯಕರನ್ನು (Companion) ನೇಮಿಸಿಕೊಳ್ಳಬಹುದಾಗಿದ್ದು, ಈ ರೀತಿಯ ಸಹಾಯಕರು ಅವಶ್ಯವಿದ್ದಲ್ಲಿ ಡಿಸೆಂಬರ್ 6 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ. ಕುರುಡು /ದುರ್ಬಲ/ಅನಕ್ಷರಸ್ಥ ಮತದಾರರು ಮತದಾನ ಸಮಯದಲ್ಲಿ ಅವರ ಸಹಾಯಕ್ಕಾಗಿ ಯಾರಾದರೂ ಜೊತೆಗಾರ (Companion) ಅವಶ್ಯಕತೆ ಇದ್ದಲ್ಲಿ ಅಂತಹ ಮತದಾರರು, ಡಿಸೆಂಬರ್ 6 ರೊಳಗಾಗಿ ಸಂಬಂಧಪಟ್ಟ ಸ್ಥಳೀಯ ಸಂಘ ಸಂಸ್ಥೆಗಳ ಮುಖ್ಯಾಧಿಕಾರಿಗಳು/ …
Read More »Daily Archives: ಡಿಸೆಂಬರ್ 3, 2021
ಉಗಾರ್ ಶುಗರ್ಸ್ ಕಾರ್ಖಾನೆ ಕಾರ್ಮಿಕರು ಮುಷ್ಕರ ಹಿಂದಕ್ಕೆ
ಕಾಗವಾಡ ತಾಲೂಕಿನ ಉಗಾರ ಸಕ್ಕರೆ ಕಾರ್ಖಾನೆ ಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳಿಗಾಗಿ ಬುಧವಾರ ದಿನಾಂಕ 1 ರಂದು ಮುಷ್ಕರ ಪ್ರಾರಂಭಿಸಿದರು. ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಹೈಕೋರ್ಟ್ ಕ್ಕೆ ಮುಷ್ಕರ ಬಗ್ಗೆ ಅರ್ಜಿ ಸಲ್ಲಿಸಿದ್ದರು ಇದನ್ನು ವಿಚಾರಿಸಿದ ನ್ಯಾಯಾಧೀಶರು ಮಧ್ಯಾಂತರ ತಡೆಂiÀiಜ್ಞ ನೀಡಿದ್ದಾರೆ.ಸಕ್ಕರೆ ಕಾರ್ಖಾನೆಯ ಕಾರ್ಮಿಕ ಸಂಘಟನೆಯ ಖಜಾಂಚಿಗಳಾದ ಅನಿಲ್ ನಾವಿಲಗೆರ ಮಾಹಿತಿ ನೀಡುವಾಗ ಕಾರ್ಮಿಕರು ತಮ್ಮ ಹಲವಾರು ಬೇಡಿಕೆಗಳಿಗಾಗಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗಳಿಗೆ ತಮ್ಮ ಬೇಡಿಕೆ ಅರ್ಜಿಗಳು …
Read More »ಎಸ್ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಪತ್ತೆಯಾದ ಕೊರೊನಾ ಪ್ರಕರಣಗಳಲ್ಲಿ ಹೊಸ ಪ್ರಭೇದದ ವೈರಾಣು ಇಲ್ಲ: ಡಿಸಿ ಸ್ಪಷ್ಟನೆ
ಧಾರವಾಡ: ಇಲ್ಲಿನ ಸತ್ತೂರಿನಲ್ಲಿರುವ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಬಾಕಿ ಇದ್ದ 140 ಜಿನೋಮ್ ಸಿಕ್ವೆನ್ಸಿಂಗ್ ವರದಿಗಳು ಲಭ್ಯವಾಗಿವೆ. ಇವುಗಳಲ್ಲಿ ಯಾವುದೇ ಹೊಸ ಪ್ರಭೇದದ ವೈರಾಣು ಕಂಡುಬಂದಿಲ್ಲ. ಹೀಗಾಗಿ, ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ್ ಹೇಳಿದ್ದಾರೆ. ಎಸ್ಡಿಎಂ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದ ಕೋವಿಡ್ ಪ್ರಕರಣಗಳ ಪ್ರಯೋಗಾಲಯ ಸ್ಯಾಂಪಲ್ಗಳನ್ನು ಜಿನೋಮ್ ಸಿಕ್ವೆನ್ಸಿಂಗ್ ಪತ್ತೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ನಿನ್ನೆ …
Read More »ಕನಿಷ್ಠ ಪಕ್ಷ ಗ್ರಾ.ಪಂಚಾಯಿತಿಗೆ ಏನು ಬೇಕು, ಬೇಡ ಎಂಬ ಅರಿವೇ ಇಲ್ಲದವರು ಪರಿಷತ್ಗೆ ಆಯ್ಕೆಯಾಗ್ತಿದ್ದಾರೆ’
ಚಿಕ್ಕೋಡಿ: ಪ್ರಜ್ಞಾವಂತ ಬುದ್ಧಿಜೀವಿಗಳು, ಕಾನೂನನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿರುವ ವ್ಯಕ್ತಿಗಳು ಇರಬೇಕಾದ ವಿಧಾನ ಪರಿಷತ್ನಲ್ಲಿ ಎಂಎಲ್ಎ, ಎಂಎಲ್ಸಿ ಪದದ ಅರ್ಥವೇ ಗೊತ್ತಿಲ್ಲದವರು ಆಯ್ಕೆ ಆಗುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೇಸರ ವ್ಯಕ್ತಪಡಿಸಿದ್ದಾರೆ. ಈಗ ತಮ್ಮ ತಮ್ಮ ಉದ್ಯೋಗದಲ್ಲಿ ಮಗ್ನರಾಗಿದ್ದವರನ್ನು ಪರಿಷತ್ಗೆ ಆಯ್ಕೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿ ಸದಸ್ಯರಿಂದ ಮತ ಪಡೆದ ಈ ವ್ಯಕ್ತಿಗಳಿಗೆ ಕನಿಷ್ಠ ಪಕ್ಷ ಗ್ರಾಮ ಪಂಚಾಯಿತಿಗೆ ಏನು ಬೇಕು, ಏನು ಬೇಡ ಎಂಬ ಪರಿಕಲ್ಪನೆಯೂ ಇಲ್ಲ …
Read More »ದಿಢೀರ್ ಕುಸಿತಗೊಂಡ ಟ್ವಿಟರ್ ಬಳಕೆದಾರರ ಫಾಲೋವರ್ಸ್ ಸಂಖ್ಯೆ: ಕಾರಣವೇನು ಗೊತ್ತಾ.?
ನವದೆಹಲಿ: ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನ ( Micro-blogging site Twitter ) ಹಲವು ಬಳಕೆದಾರರು ( Twitter ) ಗುರುವಾರ ತಡವಾಗಿ ಫಾಲೋವರ್ಸ್ ಸಂಖ್ಯೆಯಲ್ಲಿ ಕುಸಿತಗೊಂಡಿದೆ ಎಂದು ದೂರಿದ್ದಾರೆ. ಟ್ವಿಟರ್ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲವಾದರೂ, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಮಸ್ಯೆಯನ್ನು ಸೃಷ್ಟಿಸುವ ಬಾಟ್ ಗಳನ್ನು ತೊಡೆದುಹಾಕಲು ಈ ಸ್ವಚ್ಛಗೊಳಿಸುವ ಕಾರ್ಯವನ್ನು ಆಗಾಗ್ಗೆ ನಡೆಸಿದೆ ಎನ್ನಲಾಗುತ್ತಿದೆ. ಟ್ವಿಟರ್ ಬಳಕೆದಾರರು ( …
Read More »ಜವಾದ್ ಚಂಡಮಾರುತದ ಎಫೆಕ್ಟ್ : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ
ಬೆಂಗಳೂರು : ಜವಾದ್ ಚಂಡಮಾರುತದ (Cyclone Jawad) ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಶನಿವಾರ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಪರಿಣಾಮ ಕರ್ನಾಟಕದಲ್ಲಿ ಡಿಸೆಂಬರ್ 6 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ …
Read More »ಸ್ಮಾರ್ಟ್ ಸಿಟೀಸ್ ಮಿಷನ್ ಅನುಷ್ಠಾನದ ಸಮಯವನ್ನು ಜೂನ್ 2023 ಕ್ಕೆ ವಿಸ್ತರಿಸಲಾಗಿದೆ.
ನವದೆಹಲಿ:Covid -19 ಸಾಂಕ್ರಾಮಿಕ ರೋಗದಿಂದಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ಮಾರ್ಟ್ ಸಿಟಿ ಮಿಷನ್ (smart city mission) ಅನುಷ್ಠಾನದ ಸಮಯವನ್ನು ಜೂನ್ 2023 ಕ್ಕೆ ವಿಸ್ತರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಹಿಂದಿನ ಗಡುವಿನ ಪ್ರಕಾರ, ನಗರಗಳು ಸ್ಮಾರ್ಟ್ ಸಿಟೀಸ್ ಮಿಷನ್ (smart cities mission) ಅಡಿಯಲ್ಲಿ ಆಯ್ಕೆಯಾದ ಐದು ವರ್ಷಗಳಲ್ಲಿ ತಮ್ಮ ಯೋಜನೆಗಳನ್ನು ಪೂರ್ಣಗೊಳಿಸಲು ನಿರೀಕ್ಷಿಸಲಾಗಿತ್ತು. ಮಿಷನ್ ಅಡಿಯಲ್ಲಿ ಆಯ್ಕೆಯಾದ ಎಲ್ಲಾ …
Read More »2022ನೇ ಸಾಲಿನ ‘ಸಾರ್ವತ್ರಿಕ ರಜಾ’ ದಿನಗಳ ಪಟ್ಟಿ ಬಿಡುಗಡೆ ಮಾಡಿದ ‘ರಾಜ್ಯ ಸರ್ಕಾರ’: ಹೀಗಿದೆ ರಜೆಗಳ ಪಟ್ಟಿ
ಬೆಂಗಳೂರು: ರಾಜ್ಯ ಸರ್ಕಾರದಿಂದ 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಳ ಪಟ್ಟಿಯನ್ನು ( Karnataka Government Holiday List 2022 ) ಬಿಡುಗಡೆ ಮಾಡಿದೆ. ಈ ಪಟ್ಟಿಯಂತೆ 2022ನೇ ಸಾಲಿನಲ್ಲಿ 16 ದಿನಗಳ ಸಾರ್ವತ್ರಿಕ ರಜೆಗಳನ್ನು ನೀಡಲಾಗಿದೆ. ಇನ್ನುಳಿದಂತೆ ಪರಿಮಿತ ರಜೆಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿಗೆ ಮಂಜೂರು ಮಾಡಿರುವಂತ ಸಾರ್ವತ್ರಿಕ …
Read More »ಒಮಿಕ್ರಾನ್ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್..?
ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್ಪೋರ್ಟ್ ಗೇಟ್ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …
Read More »ಮನೆ ಕಟ್ಟೋರಿಗೆ ಬಿಗ್ ಶಾಕ್
ನವದೆಹಲಿ : ಮನೆ ಕಟ್ಟೋರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಸಿಮೆಂಟ್ ಬೆಲೆ 15 ರಿಂದ 20 ರೂ. ಹೆಚ್ಚಳವಾಗುವ(Cement price hike) ಸಾಧ್ಯತೆ ಇದೆ ರೇಟಿಂಗ್ ಏಜೆನ್ಸಿ ತಿಳಿಸಿದೆ. ಸಿಮೆಂಟ್ ತಯಾರಿಕೆಗೆ ಅಗತ್ಯದ ಕಚ್ಚಾವಸ್ತುಗಳ ಬೆಲೆಯಲ್ಲಿ ಏರಿಕೆಯಿಂದಾಗಿ ಸಿಮೆಂಟ್ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ 50 ಕೆಜಿ ಇರುವ ಪ್ರತಿ ಚೀಲದ ಸಿಮೆಂಟ್ ಬೆಲೆ400 ರೂ. ಮುಟ್ಟಲಿದೆ ಎನ್ನಲಾಗಿದೆ. ಕೊರೊನಾ ಕಾರಣಕ್ಕೆ 2020 ರಲ್ಲಿ ಸಿಮೆಂಟ್ ಬೇಡಿಕೆಯಲ್ಲಿ …
Read More »