ಚಿಕ್ಕೋಡಿ: ಆರೋಗ್ಯ ವ್ಯವಸ್ಥೆ ಎಲ್ಲಕ್ಕಿಂತ ದೊಡ್ಡ ಸವಾಲು. ದುಡ್ಡಿರುವವರಿಗೂ ಆರೋಗ್ಯದ ಅರಿವಾಗಿದೆ. ಹೀಗಾಗಿ ಮುಖ್ಯಮಂತ್ರಿ ಅವರು ಪ್ರಾರ್ಥಮಿಕ ಚಿಕಿತ್ಸಾ ಕೇಂದ್ರ ಮೆಲ್ದರ್ಜೆಗೆ ಎರುಸುತ್ತಿದ್ದಾರೆ. ರಾಜ್ಯದಲ್ಲು ಮೋದಲ, ಎರಡನೆ, ಹಾಗೂ ಮೂರನೆಯ ಹಂತದ ಚಿಕಿತ್ಸೆಯ 25 ವರುಷದ ದೂರದೃಷ್ಟಿ ಇಟ್ಟು ಕೊಂಡು ವಿಶೇಷ ತಂಡನಿರ್ಮಿಸಿ ರಚಿಸಿ ಕಾರ್ಯ ನಿರ್ವಹಿಸುತ್ತಿದೆ. ಬಡವರಿಗೂ ಉಚಿತ, ಮುಕ್ತ ಆರೋಗ್ಯ ಸೇವೆ ಕಲ್ಪಿಸುವ ಸದುದ್ದೇಶ ರಾಜ್ಯ ಸರಕಾರದ್ದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ …
Read More »Yearly Archives: 2021
ರಾಜ್ಯದ 25 DYSP ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು – ರಾಜ್ಯದ 25 ಡವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಹೊರಡಿಸಿದೆ. ರಾಜ್ಯದಲ್ಲಿ ಖಾತೆಗಳ ಮರುಹಂಚಿಕೆಯಾಗಲಿದೆ ಎನ್ನು ವ ಸುದ್ದಿಯ ಮಧ್ಯೆಯೇ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – DySP TRF 18.01.21
Read More »ಕೊರೊನಾದಿಂದ ಪತ್ನಿಗೆ ಕಿಸ್ ಕೊಡಲಾಗ್ತಿಲ್ಲ: ಫಾರೂಖ್ ಅಬ್ದುಲ್ಲಾ
ಶ್ರೀನಗರ: ಕೊರೊನಾ ವೈರಸ್ ಬಂದಾಗಿನಿಂದ ಪತ್ನಿಗೆ ಕಿಸ್ ಕೊಡಲು ಆಗುತ್ತಿಲ್ಲ. ಮನಸ್ಸು ಬಯಸಿದರೂ ಅಪ್ಪಿಕೊಳ್ಳಲು ಸಹ ಆಗುತ್ತಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬುಲ್ಲಾ ಹೇಳಿದ್ದಾರೆ. ಭಾನುವಾರ ಶ್ರೀನಗರದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿದ್ದ ಫಾರೂಖ್ ಅಬ್ದುಲ್ಲಾ ನೆರೆದಿದ್ದ ಜನರನ್ನ ಉದ್ದೇಶಿಸಿ ಸುಮಾರು 35 ನಿಮಿಷ ಮಾತನಾಡಿದರು. ಈ ವೇಳೆ ಕೊರೊನಾದಿಂದ ಜೀವನದಲ್ಲಾದ ಅನಿರೀಕ್ಷಿತ ಬದಲಾವಣೆಗಳ ಬಗ್ಗೆ ಹೇಳುತ್ತಿದ್ದರು. ಪತ್ನಿಗೆ ಮುತ್ತು ಕೊಡಲು ಮತ್ತು …
Read More »ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಬಹಳ ಆಪ್ತರು.: ಯತ್ನಾಳ್
ಹಾವೇರಿ: ಬಿಎಸ್ ವೈ ಅವರ ಸಿಡಿ ಬಗ್ಗೆ ನಾನು ಹೇಳಿಲ್ಲ. ಆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದನ್ನು ನಾನು ಹೇಳಿದ್ದೇನೆ. ನಾನು ಶರಣರ ವಚನಗಳ ಸಿಡಿ ನೋಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಡಿಯೂರಪ್ಪ ಸಿಎಂ ಆಗಿರುವರೆಗೂ ನಾನು ಮಂತ್ರಿ ಆಗುವುದಿಲ್ಲ ಎಂದರು. ನಾನು ಸಚಿವ ಸ್ಥಾನ ಕೇಳಿಲ್ಲ. ಯಾವ್ಯಾವ ಜಿಲ್ಲೆಗೆ …
Read More »ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!
ಚೆನ್ನೈ: ನಟ ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು ಇತರ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳಲು ಮುಕ್ತರಾಗಿದ್ದಾರೆ ಎಂದು ರಜನಿಕಾಂತ್ ಅಭಿಮಾನಿಗಳ ಸಂಘ ಸೋಮವಾರ(ಜನವರಿ 18, 2021) ತಿಳಿಸಿದೆ. ರಜಿನಿ ಮಕ್ಕಳ್ ಮಂಡ್ರಮ್(ಆರ್ ಎಂಎಂ) ಗೆ ತಮ್ಮ ರಾಜೀನಾಮೆ ಸಲ್ಲಿಸಿದ ನಂತರ ಸದಸ್ಯರು ತಮ್ಮ ಆಯ್ಕೆಯಂತೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ. ಇತ್ತೀಚೆಗೆ ರಜಿನಿ ಮಕ್ಕಳ್ ಮಂಡ್ರಮ್ ನ ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ …
Read More »ಕರೊನಾ ಲಸಿಕೆ ಪಡೆದಿದ್ದ ಆಸ್ಪತ್ರೆ ಸಿಬ್ಬಂದಿ 3 ದಿನದ ಬಳಿಕ ಸಾವು!
ಬಳ್ಳಾರಿ: ಕರೊನಾ ಲಸಿಕೆ ತೆಗೆದುಕೊಂಡ ಮೂರು ದಿನಗಳ ಬಳಿಕ ಡಿ ಗ್ರೂಪ್ ನೌಕರರೊಬ್ಬರು ಸಂಡೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ್ (43) ಮೃತ. ಲಸಿಕೆ ಪಡೆದ ಬಳಿಕ ಆರಾಮಾಗಿದ್ದ ನಾಗರಾಜ್ ನಿನ್ನೆ(ಭಾನುವಾರ) ಮತ್ತು ಇಂದು(ಸೋಮವಾರ) ಕೆಲಸಕ್ಕೆ ಹಾಜರಾಗಿದ್ದರು. ಆದರೆ, ಇಂದು ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾರೆ. ನಾಗರಾಜ್ ಸಾವಿಗೆ ಕರೊನಾ ಲಸಿಕೆ ಕಾರಣ ಅಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ನಾಗರಾಜ್ ಮೃತದೇಹವನ್ನು ಪರೀಕ್ಷೆ ಮಾಡಲಾಗುತ್ತಿದ್ದು, ವರದಿ …
Read More »ಸಿಆರ್ಪಿಎಫ್ಗೆ ಡಿಅರ್ಡಿಒ ಅಭಿವೃದ್ಧಿಪಡಿಸಿದ 21 ಬೈಕ್ ಆಯಂಬುಲೆನ್ಸ್
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಅಭಿವೃದ್ಧಿಪಡಿಸಿದ 21 ಬೈಕ್ ಆಂಬುಲೆನ್ಸ್ಗಳನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ (ಸಿಆರ್ಪಿಎಫ್) ಸೋಮವಾರ ಹಸ್ತಾಂತರಿಸಲಾಯಿತು. ನಕ್ಸಲ್ ಪೀಡಿತ ಮತ್ತು ಹಿಂಸಾಚಾರ ಪ್ರದೇಶಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸಲು ಮತ್ತು ಆಸ್ಪತ್ರೆಗೆ ದಾಖಲಿಸಲು ಈ ಬೈಕ್ ಆಂಬುಲೆನ್ಸ್ಗಳನ್ನು ಬಳಸಲು ಉದ್ದೇಶಿಸಲಾಗಿದೆ. ‘ರಕ್ಷಿತಾ’ ಹೆಸರಿನಲ್ಲಿ 350 ಸಿಸಿ ರಾಯಲ್ ಎನ್ಫಿಲ್ಡ್ ಕ್ಲಾಸಿಕ್ ಬೈಕ್ನಲ್ಲಿ ಡಿಆರ್ಡಿಒದ ವೈಜ್ಞಾನಿಕ ಸಂಶೋಧಗೆ ಸಂಬಂಧಿಸಿದ ‘ಅಣು ವೈದ್ಯಕೀಯ ಮತ್ತು …
Read More »ಮಹಾನಗರಪಾಲಿಕೆ: ಮೀಸಲಾತಿ ಪ್ರಕಟ
ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ವಾರ್ಡ್ವಾರು ಮೀಸಲಾತಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ. 2018ರ ಆ.10ರಂದು ಹೊರಡಿಸಲಾಗಿದ್ದ ಅಧಿಸೂಚನೆ ರದ್ದುಪಡಿಸಲಾಗಿದೆ. ಈಗ ಕರಡು ಮೀಸಲಾತಿಯನ್ನು ಸಾರ್ವಜನಿಕರ ಗಮನಕ್ಕೆ ತರಲಾಗಿದೆ. ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ ಲಿಖಿತವಾಗಿ ಕಾರಣಸಹಿತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನಗರಪಾಲಿಕೆಗೆ ಚುನಾವಣೆ ನಡೆಸಲು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್ಇಸಿ) ಹೈಕೋರ್ಟ್ ಈಚೆಗೆ ನಿರ್ದೇಶನ …
Read More »ಡಬಲ್ ಎಂಜಿನ್ ಸರ್ಕಾರಕ್ಕೆ ಡಿಕೆಶಿ ಸವಾಲು
ಕಲಬುರಗಿ,ಜ.18- ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಎಂಜಿನ್ ಸರ್ಕಾರ ಮಹದಾಯಿ ಯೋಜನೆಯನ್ನು ಜಾರಿಗೊಳಿಸಲಿ. ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಕಲಬುರಗಿ ವಿಭಾಗೀಯ ಮಟ್ಟದ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು ನಿನ್ನೆ ಬೆಳಗಾವಿಯ ಜನಸೇವಕ್ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಡಬ್ಬಲ್ ಎಂಜಿನ್ …
Read More »ಇಂದಿನಿಂದ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ
ಬೆಂಗಳೂರು,ಜ.18- ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು, ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಣಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಪಶುಸಂಗೋಪನಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಈ ಆದೇಶ ಹೊರಡಿಸಿದ್ದು, ರಾಜ್ಯಪತ್ರ ಪ್ರಕಟಿಸಲಾಗಿದೆ. ಕೂಡಲೇ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಯಾವುದೇ ಕಾರಣಕ್ಕೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆಒಂದು ಕಡೆಯಿಂದ ಮತ್ತೊಂದು ಕಡೆಗೆ …
Read More »