Breaking News

Yearly Archives: 2021

ನಿಮಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವೀಡಿಯೋ ಸಂಕಲನ, ಅಭಿನಯ ತರಬೇತಿ ಬೇಕಾ.? ಹಾಗಿದ್ದರೇ ಇಲ್ಲಿದೆ ಸುವರ್ಣ ಅವಕಾಶ.!

ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 30 ವರ್ಷ ವಯೋಮಿತಿಯೊಳಗಿನ ಯುವತಿ/ಯುವಕರಿಗೆ ಚಲನಚಿತ್ರ ನಿರ್ದೇಶನ, ಛಾಯಾಗ್ರಹಣ, ವಿಡಿಯೋ ಸಂಕಲನ, ಸ್ಕ್ರಿಪ್ಟ್ ತಯಾರಿಕೆ, ಅಭಿನಯ ಇತ್ಯಾದಿಗಳ ಕುರಿತು ವಸತಿ ಸಹಿತ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಚಲನಚಿತ್ರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ 30 ವರ್ಷ ವಯೋಮಿತಿಯೊಳಗಿನ ಯಾವುದೇ ಪದವೀಧರ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ …

Read More »

CD’ ಇಟ್ಟುಕೊಂಡು ಸಿಎಂ ಬಿಎಸ್‌ವೈಗೆ ಬ್ಲ್ಯಾಕ್ ಮೇಲ್ : ಹೊಸ ಬಾಂಬ್‌ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಚಿವ ಸ್ಥಾನದಿಂದ ವಂಚಿತರಾದ ಶಾಸಕರು ಬಿಜೆಪಿ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ನೀಡದಂತೆ ವರಿಷ್ಠರು ವಾರ್ನಿಂಗ್ ನೀಡಿದರೂ ಜಗ್ಗದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ವಿರುದ್ಧ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಸೇರಿ ಕಾಂಗ್ರೆಸ್ ನಾಯಕರನ್ನು ಕೂಡ ಖರೀದಿ …

Read More »

ಪಂಚಮಸಾಲಿ ಲಿಂಗಾಯಿತರ ʼಪಾದಯಾತ್ರೆ ರದ್ಧಾಗಿಲ್ಲʼ: ʼ2 ಲಕ್ಷʼ ಜನ ಬೆಂಗಳೂರಿಗೆ ಬರೋದು ನಿಶ್ಚಿತ

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ಎ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ನಾಳೆ (ಜನವರಿ 14) ನಡೆಯಲಿರುವ ಪಾದಯಾತ್ರೆ ರದ್ದಾಗಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಮುರಿಗೇಶ್‌ ನಿರಾಣಿಯವ್ರಿಗೆ ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆ, ಪಂಚಮಸಾಲಿ ಪೀಠದಿಂದ ನಡೆಯುವ ಪಾದಯಾತ್ರೆ ರದ್ಧಾಗಿದೆ ಎನ್ನಲಾಯ್ತು. ಅದ್ರಂತೆ, ಮುರುಗೇಶ್‌ ನಿರಾಣಿಯವ್ರು ಕೂಡ ಶ್ರೀಗಳು ತನ್ನ ಪಾದಯಾತ್ರೆ ನಿರ್ಣಯವನ್ನ ಹಿಂಪಡೆದಿದ್ದಾರೆ ಎಂದು ಹೇಳಿದ್ರು. ಆದ್ರೆ, ಈ ಹೇಳಿಕೆಗೆ ಕೂಡಲಸಂಗಮದಿಂದ ಬೆಂಗಳೂರಿಗೆ …

Read More »

ಸಂಪುಟ ವಿಸ್ತರಣೆ ಬಳಿಕ ಸಚಿವರ ಖಾತೆ ಬದಲಾವಣೆ

ಬೆಂಗಳೂರು,ಜ.13- ಸಂಪುಟ ವಿಸ್ತರಣೆ ಮಾತ್ರವೆಂದು ನಿಟ್ಟುಸಿರು ಬಿಟ್ಟಿದ್ದ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಬಿಜೆಪಿ ಹೈಕಮಾಂಡ್ ಅಘಾತ ನೀಡಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಳಿಕ ಸಚಿವರ ಖಾತೆ ಬದಲಾವಣೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಬಳಿಕ ತಮ್ಮ ಬಳಿ ಇರುವ ಖಾತೆಗಳನ್ನು ಹಂಚುವುದರೊಂದಿಗೆ ಹಲವು ಸಚಿವರ ಖಾತೆ ಬದಲಾವಣೆಗೂ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದು, ಪ್ರಮುಖವಾಗಿ ಹಿರಿಯ ಸಚಿವರ …

Read More »

ಸಂಪುಟ ಸೇರುತ್ತಿರುವ ಸಪ್ತ ಸಚಿವರು

ಬೆಂಗಳೂರು,ಜ.13- ಇಂದು ಸಂಪುಟಕ್ಕೆ 7 ಮಂದಿ ಸಚಿವರು ಸೇರ್ಪಡೆಯಾಗಲಿದ್ದು, ಈಗಾಗಲೇ ರಾಜಭವನಕ್ಕೆ ಪಟ್ಟಿಯನ್ನು ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಅಂಗಾರ, ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಸಿ.ಪಿ.ಯೋಗೀಶ್ವರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಿಸಿದರು.ಈಗಾಗಲೇ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿದ್ದು, ಸಂಜೆ 3.50ಕ್ಕೆ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ …

Read More »

ಗಣರಾಜ್ಯೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು: ಎಂ.ಜಿ.ಹಿರೇಮಠ

ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಜನವರಿ 26 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜ.13) ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದು ರಾಷ್ಟ್ರೀಯ ಹಬ್ಬವಾಗಿರುವುದರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಪರೇಡ್ ಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು …

Read More »

ಲಕ್ಷ್ಮೀ ಹೆಬಾಳ್ಕರ್ ದರ್ಬಾರ್, ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್.

  ಹುಬ್ಬಳ್ಳಿ ಬೆಳಗಾವಿ ಗ್ರಾಮೀಣ ಶಾಸಕಿ‌ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ. ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.     ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್ ಕೈಯಲ್ಲಿ ಮಹಿಳೆಯಾಗಿ …

Read More »

ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದು

ಬೆಂಗಳೂರು: ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಪಂಚಮಸಾಲಿ ಲಿಂಗಾಯಿತ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಾಳೆ ಬಸವಕಲ್ಯಾಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗುತ್ತಿದ್ದಂತೆಯೇ ಪಾದಪಾತ್ರೆ ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ …

Read More »

ಮುನಿರತ್ನ ಅವರಿಗೆ ಕೊನೆಗೂ ಕೈತಪ್ಪಿದ ಸಚಿವ ಸ್ಥಾನ

ಬೆಂಗಳೂರು: ಶಾಸಕ ಮುನಿರತ್ನ ಅವರಿಗೆ ಕೊನೆಗೂ ಸಚಿವ ಸ್ಥಾನ ಕೈತಪ್ಪಿದ್ದು, 7 ಶಾಸಕರಿಗೆ ಮಾತ್ರ ನೂತನ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, 7 ನೂತನ ಸಚಿವರ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿದೆ. ಅವರಲ್ಲಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್, ಮುರುಗೇಶ್ ನಿರಾಣಿ, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಹಾಗೂ ಅಂಗಾರ ಅವರು ಇದ್ದಾರೆ ಎಂದರು.   ಇನ್ನು ಒಂದು ಸ್ಥಾನವನ್ನು ಖಾಲಿ ಬಿಡಲಾಗಿದೆ. ಹೈಕಮಾಂಡ್ ಇಂದು …

Read More »

ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ‌. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ. 1- ಉಮೇಶ ಕತ್ತಿ 2- ಎಂಟಿಬಿ ನಾಗರಾಜ 3- ಆರ್.ಶಂಕರ 4- ಎಸ್.ಅಂಗಾರ 5- …

Read More »