ಹಾವೇರಿ: ಹತ್ತು ತಿಂಗಳ ಮುದ್ದಾದ ಗಂಡು ಮಗುವನ್ನ ಪೋಷಕರು ಡಾಬಾ ಬಳಿ ಬಿಟ್ಟು ಹೋಗಿರೋ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ ಬಳಿ ನಡೆದಿದೆ. ಮುದ್ದಾಗಿರೋ ಗಂಡು ಮಗುವನ್ನ ಪೋಷಕರು ಬಿಟ್ಟು ಹೋಗಿದ್ದಾರೆ. ನಾಲ್ಕರ ಕ್ರಾಸ್ ಬಳಿಯ ಭೂತೇಶ್ವರ ದೇವಸ್ಥಾನದಲ್ಲಿ ಬಿಟ್ಟು ಹೋಗಿದ್ದು, ಪೋಷಕರು ಬಂದು ಮಗುವನ್ನು ಕೊಂಡೊಯ್ಯಬಹುದೆಂದು ಸ್ಥಳೀಯರು 5-6 ಗಂಟೆ ಮಗುವಿನ ಹಿಡಿದು ಕಾಯ್ದಿದ್ದಾರೆ. ಆದರೆ ಯಾರೂ ಬಾರದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. …
Read More »Yearly Archives: 2021
ಬೆಂಗಳೂರು, ಬೆಳಗಾವಿಗೆ ಮಾತ್ರ ಸಚಿವ ಸ್ಥಾನ ಸೀಮಿತನಾ? ರೇಣುಕಾಚಾರ್ಯ
ದಾವಣಗೆರೆ: ಮುಖ್ಯಮಂತ್ರಿಗಳಿಂದ ಈ ವರೆಗೆ ಯಾವುದೇ ಕರೆ ಬಂದಿಲ್ಲ. ಸಂಜೆ ವರೆಗೆ ಕಾದು ನೋಡುತ್ತೇನೆ. ಸಚಿವ ಸ್ಥಾನ ನೀಡದಿದ್ದರೆ ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ರೆಬೆಲ್ ಆಗುವ ಸುಳಿವು ನೀಡಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗಬೇಕು ಎಂಬುದು ಜನರ ಅಪೇಕ್ಷೆ. ಸಿಎಂ ಅವರಿಂದ ಈವರೆಗೆ ಯಾವುದೇ ಕರೆ ಬಂದಿಲ್ಲ. ದಾವಣಗೆರೆ ಜಿಲ್ಲೆ ಮಧ್ಯ ಕರ್ನಾಟಕ, ಅವಕಾಶ ಕೊಡಲೇ ಬೇಕು …
Read More »ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಪೊಲೀಸರು
ಬೆಂಗಳೂರು: ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಜಾಲವನ್ನು ಸೂರ್ಯಸಿಟಿ ಪೊಲೀಸರು ಬೇಧಿಸಿದ್ದಾರೆ. ನಕಲಿ ನೋಟು ಪ್ರಿಂಟ್ ಮಾಡುತ್ತಿದ್ದ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಮೂಲದ ಸುರೇಶ್ ಅಲಿಯಾಸ್ ನಂಜಪ್ಪ ಹಾಗೂ ನರೇಶ್ ಅಲಿಯಾಸ್ ಜೋಗರಾಂನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ನಕಲಿ ನೋಟ್ ಪ್ರಿಂಟ್ ಮಾಡುತ್ತಿದ್ದ ಮಷೀನ್ ಹಾಗೂ 6 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 100, 200 ಹಾಗೂ 500 ಮುಖಬೆಲೆಯ ನಕಲಿ ನೋಟುಗಳು ಇವೆ. ವಂಚಕರು ಕಲರ್ …
Read More »ಇಲ್ಲಿದೆ ಫೈನಲ್ ಆಗಿರುವ ಸಂಭವನೀಯ ಸಚಿವರ ಪಟ್ಟಿ ಕೋಟಾಶ್ರೀನಿವಾಸ್ ಪೂಜಾರಿ ಹಾಗೂ ಶಶಿಕಲಾ ಜೊಲ್ಲೆ ಕೋಕ್
ಬೆಂಗಳೂರು,ಜ.12- ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಾಳೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿದ್ದು, ಹೊಸದಾಗಿ 7 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಜಿ ಸಚಿವರಾದ ಉಮೇಶ್ ಕತ್ತಿ, ರಾಜುಗೌಡ ನಾಯಕ್, ಸಿ.ಪಿ.ಯೋಗೇಶ್ವರ್, ಆರ್. ಶಂಕರ್, ಎಂ.ಟಿ.ಬಿ.ನಾಗರಾಜ್, ಅರವಿಂದ ಲಿಂಬಾವಳಿ ಹಾಗೂ ಎಸ್. ಅಂಗಾರ ಮತ್ತು ಮುನಿರತ್ನ, ಹಾಲಪ್ಪ ಆಚಾರ್ ಸಚಿವರಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ.ನಾಳೆ ಸಂಜೆ 4 ಗಂಟೆಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ …
Read More »ಮೂರನೇ ಬಾರಿಗೆ ಕತ್ತಿ ಕೈ ಹಿಡಿದ ಸಿಎಂ ಬಿಎಸ್ವೈ; ಶಾಸಕ ಉಮೇಶ್ ಕತ್ತಿಗೆ ಮಂತ್ರಿಗಿರಿ ಪಕ್ಕಾ?
ಬೆಂಗಳೂರು; ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ನಾಳೆ ವಿಸ್ತರಣೆಯಾಗಲಿದೆ. ಈಗಾಗಲೇ ನೂತನ ಸಚಿವ ಪಟ್ಟಿಯನ್ನು ಸಿಎಂ ಬಿಎಸ್ವೈ ರಾಜ್ಯಪಾಲರಿಗೆ ಕಳುಹಿಸಿದ್ದು, ನಾಳೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಯಾರಿಗೆಲ್ಲಾ ಸಚಿವ ಸ್ಥಾನ ಸಿಕ್ಕಿದೆ ಎಂಬುದು ಈಗಲೂ ನಿಗೂಢವಾಗಿದೆ. ಏತನ್ಮಧ್ಯೆ, ಕಳೆದ ಎರಡು ಬಾರಿ ಸಂಪುಟ ವಿಸ್ತರಣೆಯಾದಾಗ ಅವಕಾಶ ವಂಚಿತರಾಗಿದ್ದ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರಿಗೆ ಈ ಬಾರಿ ಸಚಿವ ಸ್ಥಾನ ಪಕ್ಕಾ ಎಂದು …
Read More »ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭ
ಬೆಂಗಳೂರು: ಕೊರೊನಾ ಮಹಾಮಾರಿಗೆ ಬ್ರಹ್ಮಾಸ್ತ್ರವಾಗಿರುವ ಕೋವಿಶೀಲ್ಡ್ ಲಸಿಕೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದು ತಲುಪಿದೆ. ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಪೂರೈಕೆ ಆರಂಭವಾಗಿದೆ. ಪುಣೆಯ ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದಲ್ಲಿ ಎರಡು ಪ್ರಮುಖ ಸ್ಥಳಗಳಿಗೆ ರವಾನಿಸಲಾಗುತ್ತಿದ್ದು, ಈಗಾಗಲೇ ಪುಣೆಯಿಂದ ಸ್ಪೈಸ್ ಜೆಟ್ ವಿಶೇಷ ವಿಮಾನದಲ್ಲಿ Z+ ಭದ್ರತೆಯ ಮೂಲಕ ಕೋವಿಶೀಲ್ಡ್ ಲಸಿಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ …
Read More »ಅಮಿತ್ ಶಾ ರಾಜ್ಯ ಪ್ರವಾಸ ಪಟ್ಟಿ ಪ್ರಕಟ: ಬೆಳಗಾವಿಯಲ್ಲಿ 4 ಕಾರ್ಯಕ್ರಮದಲ್ಲಿ ಭಾಗಿ
ನವದೆಹಲಿ – ಇದೇ 16 ಮತ್ತು 17ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಯಲ್ಲಿ 4 ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಿಜೆಪಿಯ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ, ಕೆಎಲ್ಇ ಆಸ್ಪತ್ರೆ ಮತ್ತು ದಿವಂಗತ ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ ಪಕ್ಷದ ಪದಾಧಿಕಾರಿಗಳ ಸಭೆಯನ್ನೂ ನಡೆಸಲಿದ್ದಾರೆ. ಜ.16ರಂದು ಬೆಳಗ್ಗೆ 9 ಗಂಟೆಗೆ ನವದೆಹಲಿಯಿಂದ ಹೊರಡುವ ಅಮಿತ್ ಶಾ 11.30ಕ್ಕೆ ಬೆಂಗಳೂರು ವಿಮಾನ …
Read More »ಈ ಏಳು ಜನರು ಸಚಿವರಾಗುವುದು ಬಹುತೇಕ ಖಚಿತ ಆಗಿದೆ.
ಬೆಂಗಳೂರು; ಬಹುನಿರೀಕ್ಷೆಯ ಸಚಿವ ಸಂಪುಟ ವಿಸ್ತರಣೆ ಆಗಿದ್ದು, ನಾಳೆ ಮಧ್ಯಾಹ್ನ 3.55ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಏಳು ಮಂದಿ ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ಸೇರಲಿದ್ದಾರೆ. ಆದರೆ ಯಾರೆಲ್ಲಾ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಸಾರ್ವಜನಿಕರು ಸೇರಿದಂತೆ ಬಿಜೆಪಿ ನಾಯಕರಲ್ಲಿಯೂ ಮೂಡಿದೆ. ಕಾರಣ ನೂತನ ಸಚಿವರ ಪಟ್ಟಿಯ ಗೌಪತ್ಯೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಅವರು ಕಾಯ್ದುಕೊಂಡಿದ್ದಾರೆ. ಅಲ್ಲದೇ , ನೂತನ ಸಚಿವರಿಗೆ ತಾವೇ ಖುದ್ದು …
Read More »ಎಸಿಬಿ ಖೆಡ್ಡಾಗೆ ಬಿದ್ದ ಪಿಎಸ್ಐ, ಹೆಡ್ಕಾನ್ಸ್ಟೇಬಲ್..!
ಬೆಂಗಳೂರು, ಜ.12- ದೂರು ದಾಖಲಿಸಬಾರದು ಎಂದು ಮಹಿಳೆಯಿಂದ ಹಣದ ಬೇಡಿಕೆ ಇಟ್ಟಿದ್ದ ಪೊಲೀಸ್ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ದಾಖಲಿಸಬಾರದು ಎಂದು ಹೇಳಿದ ಮಹಿಳೆಯೊಬ್ಬಳಿಂದ ಪಿಎಸ್ಐ ಸೌಮ್ಯ ಮತ್ತು ಹೆಡ್ಕಾನ್ಸ್ಟೇಬಲ್ ಜೆ.ಪಿ.ರೆಡ್ಡಿ ಅವರು 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಬಂದ ನಿಖರ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅಧಿಕಾರಿಗಳನ್ನು ಬಲೆಗೆ ಬೀಳಿಸಿ ತನಿಖೆ …
Read More »ರಾಗಿಣಿಗೆ ಜೈಲಿನಲ್ಲೇ ಸಂಕ್ರಾಂತಿ
ಮುಂಬೈ,ಜ. 12- ಡ್ರಗ್ಸ್ ನಂಟಿನ ಸಂಬಂಧ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿಯ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿರುವುದರಿಂದ ತುಪ್ಪದ ಬೆಡಗಿ ಜೈಲಿನಲ್ಲೇ ಸಂಕ್ರಾಂತಿ ಅಚರಿಸಲಿದ್ದಾರೆ. ಜಾಮೀನು ಕೋರಿ ನಟಿ ರಾಗಿಣಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆಯನ್ನು ಜನವರಿ 19 ರಂದು ನಡೆಸುವುದಾಗಿ ಹೇಳಿರು ವುದರಿಂದ ಒಂದು ವಾರದ ಕಾಲ ರಾಗಿಣಿ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ. ಈ ಹಿಂದೆ ರಾಗಿಣಿ ಡ್ರಗ್ಸ್ ನಂಟಿನ ಸಂಬಂಧ ವಾಗಿಯೇ ಹೈಕೋರ್ಟ್ಗೆ …
Read More »