Breaking News

Yearly Archives: 2021

ರಾಜೀನಾಮೆ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ..!

ಚಿಕ್ಕಮಗಳೂರು(ಜ.02): 10 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆಮೇಲೆ ಡಿಐಜಿ, ಐಜಿ ಆಗಿ ಎಸಿ ರೂಮಲ್ಲಿ ಕೂತು ಕೆಲಸ ಮಾಡಲು ಆಸಕ್ತಿ ಇಲ್ಲ ಎಂದಾಗ, ಸಿದ್ಧಾರ್ಥ್ ಅಣ್ಣ(ಕೆಫೆ ಕಾಫಿ ಡೇ ಮಾಲೀಕ) ಮಾತ್ರ ಧೈರ್ಯವಾಗಿ ರಾಜೀನಾಮೆ ಕೊಡಿ, ನಾನಿದ್ದೇನೆ ಎಂದಿದ್ದರು. ನನ್ನ ರಾಜೀನಾಮೆಯನ್ನ ನಾವಿಬ್ಬರೂ ಸೇರಿ ನಿರ್ಧಾರ ಮಾಡಿದ್ದು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ. ಅಣ್ಣಾಮಲೈ ಅವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ …

Read More »

ರೈತ-ಕಾರ್ಮಿಕ ವಿರೋಧಿ ಹೊಸ ಕಾಯ್ದೆಗಳ ಪ್ರತಿಗಳನ್ನ ದಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನು ಜಾರಿಗೆ ತಂದಿದೆ‌ ಎಂದು ಆರೋಪಿಸಿ ಹುಬ್ಬಳ್ಳಿಯ ಅಮರಗೋಳ ಎಪಿಎಂಎಸಿಯಲ್ಲಿ ಹಮಾಲಿ ಕಾರ್ಮಿಕರು ಪ್ರತಿಭಟನೆ ಮಾಡಿದರು.‌ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೂತನ ಕೃಷಿ, ಎಪಿಎಮ್‌ಸಿ, ವಿದ್ಯುತ್ ಕಾಯ್ದೆಗಳು ರೈತರು ಮತ್ತು ಕಾರ್ಮಿಕರ ಹಿತಾಸಕ್ತಿಗೆ ವಿರೋಧಿಯಾಗಿವೆ. ಸರ್ಕಾರ ಅನ್ನದಾತರ ಹೋರಾಟಕ್ಕೆ ಸ್ಪಂದಿಸಬೇಕು‌. ಅನ್ನದಾತರು ಮತ್ತು ಕೂಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ರು. ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದ …

Read More »

ಬೆಳಗಾವಿಯಲ್ಲಿ ಕೊರೊನಾ ಲಸಿಕೆಯ ಡ್ರೈ ರನ್ ಆರಂಭ..ಆಶಾ ಕಾರ್ಯಕರ್ತೆಗೆ ಮೊದಲ ಡೆಮೊ

ದೇಶಾಧ್ಯಂತ ಇಂದು ಕೊರೊನಾ ವ್ಯಾಕ್ಸಿನ್ ಡ್ರೈರನ್ ಆರಂಭಿಸಲಾಗಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯ 3 ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಯ ಡ್ರೈ ರನ್ ಆರಂಭವಾಗಿದೆ. ಮೊದಲು ಹತ್ತು ಜನರ ಮೇಲೆ ಲಸಿಕೆ ಡೆಮೊ ಮಾಡಲು ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದು. ವಂಟಮೂರಿ ನಗರ ಪ್ರಾಥಮಿಕ ಶಾಲೆಯಲ್ಲಿ ಮೊದಲಿಗೆ ಆಶಾ ಕಾರ್ಯರ್ತೆ ಮೇಲೆ ಡೆಮೊ ಮಾಡಲಾಯಿತು. ಹೌದು ಬೆಳಗಾವಿಯ ವಂಟಮುರಿಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಿತ್ತೂರು ಸಮುದಾಯ ಆರೋಗ್ಯ ಕೇಂದ್ರ, ಹುಕ್ಕೇರಿ …

Read More »

ಜನೆವರಿ 15ರಿಂದ ರಾಷ್ಟ್ರಾದ್ಯಂತ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ

ಬೆಳಗಾವಿ – ಜನೆವರಿ 15ರಿಂದ ರಾಷ್ಟ್ರಾದ್ಯಂತ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದ್ದು, 5 ಲಕ್ಷ ಗ್ರಾಮ ಮತ್ತು 12 ಕೋಟಿ ಜನರನ್ನು ತಲುಪುವ ಉದ್ದೇಶ ಹೊಂದಲಾಗಿದೆ ಎಂದು ವಿಶ್ವ ಹಿಂದು ಪರಿಷತ್ ನ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ತಿಳಿಸಿದರು. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮನ ಆದರ್ಶ ಮತ್ತು ಜೀವನ ಮೌಲ್ಯಗಳನ್ನು ಪುನರ್ ಸ್ಥಾಪಿಸುವುದು ಅಭಿಯಾನದ ಮುಖ್ಯ ಉದ್ದೇಶ. ಯಾರಿಂದಲೂ ನಿಧಿಯನ್ನು ಒತ್ತಾಯ ಪೂರ್ವಕ ಸಂಗ್ರಹಿಸುವುದಿಲ್ಲ. …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ

ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …

Read More »

ಭಾರತೀಯ ಸೇನೆಯಲ್ಲಿ ಭಾರೀ ಬದಲಾವಣೆ

ನವದೆಹಲಿ: ಭಾರತೀಯ ಸೇನೆಯ ಉನ್ನತ ಮಟ್ಟದ ಅಧಿಕಾರಿಗಳ ವಲಯದಲ್ಲಿ ಪ್ರಮುಖ ಪುನರ್ರಚನೆಯಾಗಿದೆ. ಹೊಸ ವರ್ಷದ ಆರಂಭ ದಿನವಾದ ನಿನ್ನೆ ನೂತನ ಸೇನಾ ಉಪ ಮುಖ್ಯಸ್ಥ(ಡಿಸಿಒಎಎಸ್)ಅಧಿಕಾರ ವಹಿಸಿಕೊಂಡಿದ್ದಾರೆ. ಕಾರ್ಪ್ಸ್ ಕಮಾಂಡರ್ಸ್, ಆಡಳಿತಾತ್ಮಕ ಮತ್ತು ತರಬೇತಿ ಸಂಸ್ಥೆಗಳಲ್ಲಿ ಪ್ರಮುಖ ಬದಲಾವಣೆಯಾಗಿದೆ. ಜನವರಿ 1, 2021ರಂದು ನೂತನ ಡಿಸಿಒಎಎಸ್ ಆಗಿ ಲೆಫ್ಟಿನೆಂಟ್ ಜನರಲ್ ಶಂತನು ದಯಾಳ್ ಅಧಿಕಾರ ವಹಿಸಿಕೊಂಡಿದ್ದಾರೆ. ತೇಜ್ ಪುರ್ ಮೂಲದ 4 ಕಾರ್ಪ್ಸ್ ನ ಕಾರ್ಪ್ಸ್ ಕಮಾಂಡರ್ ಆಗಿದ್ದರು ಲೆಫ್ಟಿನೆಂಟ್ ಜನರಲ್ ದಯಾಳ್, …

Read More »

ಇಂದಿನಿಂದ ದೇಶಾದ್ಯಂತ ಕೊರೋನಾ ವೈರಸ್ ಲಸಿಕೆ ವಿತರಣೆಗೆ ‘ಡ್ರೈ ರನ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಶನಿವಾರ ದೇಶಾದ್ಯಂತ ‘ಡ್ರೈ ರನ್‌’ಗೆ ಭಾರತ ಸಜ್ಜುಗೊಂಡಿದೆ. ಉದ್ದೇಶಿತ ಲಸಿಕೆ ನೀಡುವಿಕೆ ಕಾರ್ಯಕ್ರಮವನ್ನು ಎಲೆಕ್ಷನ್‌ ಪ್ರಕ್ರಿಯೆಯಂತೆಯೇ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ‘ಡ್ರೈರನ್‌’ ಇದಕ್ಕೆ ಆರಂಭಿಕ ಹೆಜ್ಜೆಯಾಗಿದೆ ಎಂದು ತಿಳಿಸಿದೆ. ‘ಲಸಿಕೆ ನೀಡುವಿಕೆ ಕಾರ್ಯಕ್ರಮವನ್ನು ಒಂದು ಸೂತ್ರದಲ್ಲಿ ಪರಿಶೀಲಿಸಲು ಡ್ರೈರನ್‌ ಅನುಕೂಲ ಕಲ್ಪಿಸಲಿದೆ. ಚುನಾವಣೆ ಮಾದರಿಯಲ್ಲಿ ಈ ಸಿದ್ಧತೆಗಳನ್ನು ನಡೆಸಿದ್ದೇವೆ. ಅಲ್ಲೂ ಪ್ರತಿ ಸಿಬ್ಬಂದಿಗೆ …

Read More »

ಸಿಎಂ B.S.Y.ಗೆ ಸ್ವತಃ ತಮ್ಮ ಕುರ್ಚಿ ಮೇಲೆ ಅನುಮಾನ – ಡಿಕೆಶಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಮುಂದುವರೆಯುವೆ ಎಂದು ಪದೇಪದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುತ್ತಲೇ ಇದ್ದು, ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದ್ದು, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ. ಸಿಎಂ ಆದವರು ನಾನೇ ಇನ್ನೂ ೨ …

Read More »

ಎಲ್ಲೋ ಏನೋ ಎಡವಟ್ಟಾಗಿದೆ, ಅಪಾಯ ಎದುರಾಗಿದೆ. ಸಿಎಂ ಕುರ್ಚಿ ಮೇಲೆ ಅನುಮಾನ ಮೂಡಿದೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಇರುವೆ ಎಂದು ಪದೇಪದೆ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ. ಆದರೆ ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಡಿಕೆಶಿ, ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದೆ, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ …

Read More »

ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ.

ರಾಯಚೂರು: ಕೊಯ್ಲಿಗೆ ಬಂದಿದ್ದ ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ದೇವದುರ್ಗ ತಾಲೂಕಿನ ಹೊನ್ನಕಾಟಮಳ್ಳಿ ಗ್ರಾಮದಲ್ಲಿ ರೈತ ಕಾಸಿಂಸಾಬ್ ಪಿಲಿಗುಂದ ಎಂಬುವವರು ಎರಡು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದಿದ್ದರು. ಮೆಣಸಿನಕಾಯಿಗೆ ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ದರ ಇದೆ. ಲಾಭದ ನಿರೀಕ್ಷೆಯಲ್ಲಿ ರಾತ್ರಿ ಮಲಗಿದ್ದ ರೈತ ಬೆಳಗ್ಗೆ ಎದ್ದೇಳುವಷ್ಟರಲ್ಲಿ ಬೆಳೆ ನೆಲಸಮವಾಗಿತ್ತು! ಇಷ್ಟೆಲ್ಲ ಅವಾಂತರಕ್ಕೆ ಕಾರಣ ಗ್ರಾಪಂ ಚುನಾವಣೆ. ಕಾಸಿಂಸಾಬ್ ಅವರ ಮಾವ ಬಾಬು ಸೈಯದ್ ಖಾನ್ …

Read More »