ಧಾರವಾಡ: ತಂಗಿಯ ಮೇಲೆ ಮೆಣಸಿನ ಪುಡಿ ಎರಚಿ ಕೊಲೆ ಮಾಡಿ ಪರಾರಿಯಾಗಿದ್ದ ಅಣ್ಣ ಪತ್ತೆಯಾಗಿದ್ದಾನೆ. ಮಾತ್ರವಲ್ಲ ತಂಗಿಯನ್ನು ಕೊಂದ ಬಳಿಕ ಖಡ್ಗ ಹಿಡಿದು ರಸ್ತೆಯಲ್ಲಿ ರಾಜಾರೋಷವಾಗಿ ಓಡಾಡಿ, ಪೊಲೀಸ್ ಠಾಣೆಗೂ ತಲುಪಿದ್ದಾನೆ. ಧಾರವಾಡದ ನವಲಗುಂದ ಪಟ್ಟಣದ ಕಲ್ಮೇಶ್ವರ ಗುಡಿ ಬಳಿ ಮಹಾಂತೇಶ ಶರಣಪ್ಪನವರ ತನ್ನ ತಂಗಿ ಶಶಿಕಲಾ ಸುಣಗಾರ ಎಂಬಾಕೆಯೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿಕೊಂಡು ಬಳಿಕ ಮೆಣಸಿನ ಪುಡಿ ಎರಚಿದ್ದಲ್ಲದೆ ಖಡ್ಗದಿಂದ ಕೊಲೆಗೈದು ಪರಾರಿಯಾಗಿದ್ದ. ನಂತರ ಆತ ಖಡ್ಗ ಹಿಡಿದುಕೊಂಡು ರಸ್ತೆಯಲ್ಲಿ …
Read More »Yearly Archives: 2021
ಸಿಂಧನೂರಿನಲ್ಲಿ ಸಂತೋಷ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ವೃದ್ಧಾ ಶ್ರಮದಲ್ಲಿ ಸರಳ ಹುಟ್ಟುಹಬ್ಬ ಆಚರಣೆ
ಸಿಂಧನೂರು :ನಗರದ ಕುಷ್ಟಗಿ ರಸ್ತೆಯಲ್ಲಿರುವ ಶ್ರೀ ಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂಧ್ಯ ಆಶ್ರಮದಲ್ಲಿ ರಾಯಚೂರು ಜಿಲ್ಲಾ ಜಾರಕಿಹೊಳಿ ಅಭಿಮಾನ ಬಳಗದ ವತಿಯಿಂದ ಕರುನಾಡಿನ ಕಾರುಣ್ಯ ಕಣ್ಮಣಿಗಳು ಕಾರುಣ್ಯ ಕುಟುಂಬದ ನಿರಂತರ ಮಾರ್ಗದರ್ಶಕರು ಕಾರುಣ್ಯ ಕರುಣಾಮಯಿಗಳು ಕಾರುಣ್ಯ ಕುಟುಂಬದ ಯಜಮಾನರಾದಂತಹ ಕರುನಾಡಿನ ಕಾರುಣ್ಯ ಕುಟುಂಬದ ಅಧಿಕಾರಿಗಳಾದ ಸನ್ಮಾನ್ಯ ಶ್ರೀ ರಮೇಶ ಜಾರಕಿಹೊಳಿ ಮಾಜಿ ಸಚಿವರು ಹಾಗೂ ಜನಪ್ರಿಯ ಶಾಸಕರು ಗೋಕಾಕ ವಿಧಾನಸಭಾ ಕ್ಷೇತ್ರ …
Read More »ಮಾಜಿ ಸಿಎಂ ಯಡಿಯೂರಪ್ಪರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಕೋಟ್ಯಂತರ ಹಣ?
ಬೆಂಗಳೂರು, ಅ. 26: ಬಹಿರಂಗ ಪ್ರಚಾರಕ್ಕೆ ಇನ್ನೆರಡು ದಿನಗಳಿರುವಾಗ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಜೊತೆಗೆ ಹಲವು ರಹಸ್ಯಗಳೂ ಚುನಾವಣೆ ಸಂದರ್ಭದಲ್ಲಿ ಬಯಲಾಗುತ್ತಿವೆ. ಮತ್ತೊಂದು ಸೂಟ್ಕೇಸ್ ರಹಸ್ಯವನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಜಯಪುರದಲ್ಲಿ ಬಹಿರಂಗಗೊಳಿಸಿದ್ದಾರೆ. ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಣಕ್ಕಿಳಿಸಿದ್ದಾರೆ. ಆದರೆ ಅವರಿಬ್ಬರೂ ಸಿಂದಗಿ ಉಪ ಚುನಾವಣೆಗೆ ಮಾತ್ರ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಅದಕ್ಕೆ ಕಾರಣ …
Read More »ಮತ ಹಾಕುವ ಮುನ್ನ ಗ್ಯಾಸ್ ಸಿಲಿಂಡರ್, ಟ್ರಾಕ್ಟರ್ಗೆ ನಮಸ್ಕರಿಸಿ: ಡಿಕೆಶಿ
ವಿಜಯಪುರ: ಸಿಂದಗಿ, ಹಾನಗಲ್ ಮತದಾರರು ಮತ ಹಾಕುವ ಮುನ್ನ ಗ್ಯಾಸ್ ಸಿಲಿಂಡರ್, ಬೈಕ್, ಕಾರು, ಆಟೋ, ಟ್ರಾಕ್ಟರ್ಗೆ ನಮಸ್ಕರಿಸಿ ಮತ ಹಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಸಿಂದಗಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಈಗ ನಾನು ಅದನ್ನು ಮತದಾರರಿಗೆ ನೆನಪಿಸಲು ಬಯಸುತ್ತೇನೆ ಎಂದು ಬಿಜೆಪಿಗೆ ತಿರುಗೇಟು …
Read More »ವರುಣನ ಆರ್ಭಟ ಹೆಚ್ಚಳ: ರಾಜ್ಯದಲ್ಲಿ ನಾಳೆಯೂ ಮಳೆ ಅಬ್ಬರ
ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.27ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ,ಹಾಸನ,ಕೊಡಗು,ಮಂಡ್ಯ,ಮೈಸೂರು, ರಾಮನಗರ,ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆಯಾಗಲಿದೆ. ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತು ಮುಂಗಾರು ಮಾರುತದ ಹಿನ್ನೆಲೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Read More »ಚರ್ಚ್ಗಳ ಸಮೀಕ್ಷೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್ಗಳ ಸಮೀಕ್ಷೆ ನಡೆಸಲು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕರ್ನಾಟಕದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತು ರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಚರ್ಚ್ಗಳು ಇರುವ ವಿಳಾಸ, ಪ್ರಾರ್ಥನಾ ಮಂದಿರ ಇರುವ ಸರ್ವೆ ನಂಬರ್, ಖಾತೆ ಸಂಖ್ಯೆ, ಅಲ್ಲಿರುವ ಪಾದ್ರಿ ಸೇರಿ …
Read More »ಪಾಕ್-ಟೀಂ ಇಂಡಿಯಾ ಮ್ಯಾಚ್ ವೀಕ್ಷಣೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು
ಕೊಡಗು: ನಿನ್ನೆ ನಡೆದ ಐಸಿಸಿ ಮೆನ್ಸ್ ಟಿ 20 ವರ್ಲ್ಡ್ಕಪ್ನಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ನಡೆಯಿತು. ಈ ಮ್ಯಾಚ್ನಲ್ಲಿ ಟೀಂ ಇಂಡಿಯಾ ಪಾಕ್ ಟೀಂ ಎದುರು ಸೋಲನುಭವಿಸಿತು. ದುರಂತವೆಂದರೆ ಈ ಮ್ಯಾಚ್ ವೀಕ್ಷಣೆ ವೇಳೆ 55 ವರ್ಷದ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಇಂಡಿಯಾ-ಪಾಕಿಸ್ತಾನ್ ಟಿ-20 ಪಂದ್ಯದ ವೇಳೆ ಉದಯ್ ಎಂಬ 55 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉದಯ್ ಅವರು …
Read More »ಪ್ರಭಾಶುಗರ್ಸ್ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ.
ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು ಪಾವತಿಸಲಾಗುವುದು ಎಂದು ಹೇಳಿದರು. ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ …
Read More »ವಿಮಾನ ನಿಲ್ದಾಣದಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಶಾಹಿದ್ ಕಪೂರ್ ಪತ್ನಿ
ಶಾಹಿದ್ ಕಪೂರ್ ಮತ್ತು ಮೀರಾ ರಜಪೂತ್ ಅವರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿದ್ದರು. ವಾಪಸ್ ಬರುವಾಗ ಮುಂಬೈ ಏರ್ಪೋರ್ಟ್ನಲ್ಲಿ ಮೀರಾ ಧರಿಸಿದ್ದ ಡ್ರೆಸ್ ಎಲ್ಲರ ಕಣ್ಣು ಕುಕ್ಕಿದೆ. ಅದು ಟ್ರೋಲ್ಗೆ ಕಾರಣ ಆಗಿದೆ. ಬಾಲಿವುಡ್ನ ಖ್ಯಾತ ನಟ ಶಾಹಿದ್ ಕಪೂರ್ ಅವರ ಪತ್ನಿ ಮೀರಾ ರಜಪೂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಅದಕ್ಕೆಲ್ಲ ಕಾರಣ ಅವರು ಧರಿಸಿರುವ ಬಟ್ಟೆ. ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. …
Read More »ಖತಲ್ ರಾತ್ರಿ ಮಾಡುವವರೇ ಕಾಂಗ್ರೆಸ್ಸಿಗರು: ಬಸವರಾಜ ಬೊಮ್ಮಾಯಿ
ವಿಜಯಪುರ : ‘ಖತಲ್ ರಾತ್ರಿ’ ಮಾಡುವವರೇ ಕಾಂಗ್ರೆಸ್ ಪಕ್ಷದವರು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸಿಂದಗಿ ಮತಕ್ಷೇತ್ರದ ಕನ್ನೂಳ್ಳಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ವಾರ್ಥ ರಾಜಕಾರಣ ಮಾಡಿ, ಗಳಿಸಿದ್ದ ಹಣವನ್ನು ಹಂಚುತ್ತಾರೆ ಎಂದು ದೂರಿದರು. ‘ಡಿಕೆಶಿ ವಿವಿಧ ಉಪ ಚುನಾವಣೆಗಳಲ್ಲಿ ಗೋಣಿ ಚೀಲದಲ್ಲಿ ಹಣ ಹಂಚಿದ್ದಾರೆ. ಅವರ ಅನುಭವವನ್ನು ಹೇಳುವ …
Read More »