Breaking News

Yearly Archives: 2021

ನಮ್ಮ ರಕ್ಷಣೆಗಾಗಿ ತಲ್ವಾರ್, ಕತ್ತಿಯಂತಹ ಶಸ್ತ್ರಗಳನ್ನು ಇಡಬೇಕು : ಪ್ರಚೋದನಕಾರಿ ಹೇಳಿಕೆ ಪ್ರಮೋದ್ ಮುತಾಲಿಕ್

ಧಾರವಾಡ: ಮತ್ತೆ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಕ್ಕೆ ಕಾರಣರಾಗಿದ್ದಾರೆ. ಎಲ್ಲಾ ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ, ದೇವರಿಗೆ ನಮಸ್ಕರಿಸುವಾಗ ಪ್ರತಿದಿನ ಶಸ್ತ್ರಾಸ್ತ್ರಗಳನ್ನು ನೋಡುತ್ತೇವೆ. ಆದರೆ ನಮ್ಮ ಮನೆಗಳಲ್ಲಿ ಈಗ ಒಂದೇ ಒಂದು ಶಸ್ತ್ರಗಳು ಇಲ್ಲದಂತಾಗಿದೆ. ನಮ್ಮ ರಕ್ಷಣೆಗಾಗಿ ತಲ್ವಾರ್, ಕತ್ತಿಯಂತಹ ಶಸ್ತ್ರಗಳನ್ನು ಇಡಬೇಕು ಎಂದು ಹೆಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಮುತಾಲಿಕ್ ಹೇಳಿಕೆ ಇದೀಗ ಭಾರಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ನಾಳೆ ಬೀದಿ ಕಾಳಗಗಳು ನಡೆಯುತ್ತೆ. …

Read More »

ದೇವಾಲಯ ತೆರವು ಮುಂದುವರಿಸಿದರೆ ಅಧಿಕಾರಿಗಳ ಹೆಣ ಎತ್ತುತ್ತೇವೆ: ಸತೀಶ್‌ ಪೂಜಾರಿ

ದಾವಣಗೆರೆ: ‘ರಾಜ್ಯದಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆ ಮುಂದುವರಿಸಿದರೆ ನಡುಬೀದಿಯಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿ ಅಧಿಕಾರಿಗಳ ಹೆಣ ಎತ್ತುತ್ತೇವೆ’ ಎಂದು ಹಿಂದೂ ಜಾಗರಣ ವೇದಿಕೆಯ ಶಿವಮೊಗ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ಸತೀಶ್‌ ಪೂಜಾರಿ ಹೇಳಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುಚ್ಚಗಳ್ಳಿ ಮಹಾದೇವಮ್ಮ ಭೈರವೇಶ್ವರ ಮಂದಿರವನ್ನು ತೆರವುಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅವರ ಈ ಹೇಳಿಕೆಯ ವಿಡಿಯೊ ಶುಕ್ರವಾರ ಎಲ್ಲೆಡೆ ಹರಿದಾಡಿದೆ. ಈ ಕುರಿತು  ಪ್ರತಿಕ್ರಿಯಿಸದ ಸತೀಶ್‌ …

Read More »

ಧರ್ಮಗಳಿಗೆ ನೋವುಂಟು ಮಾಡಿದರೆ ಒಳ್ಳೆಯಾಗುವುದಿಲ್ಲ: ಶೋಭಾ ಕರಂದ್ಲಾಜೆ

ಉಡುಪಿ: ಯಾವುದೇ ಸಮುದಾಯ ಅಥವಾ ಧರ್ಮಗಳಿಗೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗುವುದಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ದೇವಸ್ಥಾನ ಧ್ವಂಸ ವಿಚಾರದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆಯ ವಿಚಾರವಾಗಿ ಉಡುಪಿಯಲ್ಲಿ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅಕ್ರಮ ಸ್ಥಳಗಳಲ್ಲಿ ಶ್ರದ್ಧಾ ಕೇಂದ್ರಗಳು ನಿರ್ಮಾಣವಾಗಿದ್ದರೆ ಪೂರ್ವ ಸೂಚನೆ ನೀಡಬೇಕು. ತೆರವುಗೊಳಿಸುವುದು …

Read More »

ಲಸಿಕೆ​ ಸೆಂಟರ್​ ಕ್ಲೋಸ್​ ಮಾಡ್ಬೇಡಿ ಅಂದಿದ್ಕೆ ನಗರಸಭೆ ಆಯುಕ್ತರ ಮೇಲೆ ಹಲ್ಲೆ ಆರೋಪ

ಹಾಸನ: ಕೋವಿಡ್​ ಲಸಿಕೆ ವಿತರಣೆ ಕೇಂದ್ರವನ್ನ ಕ್ಲೋಸ್​ ಮಾಡದಂತೆ ಹೇಳಿದ ನಗರಸಭೆ ಆಯುಕ್ತರ ಮೇಲೆ ಕಾಲೇಜು ಮಾಲೀಕರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಇಂದು ದೇಶಾದ್ಯಂತ ಬೃಹತ್​ ಲಸಿಕಾ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಅದರ ನಿಮಿತ್ತ ಹೇಮಾವತಿನಗರದಲ್ಲಿನ ಯತೀಂದ್ರ ಪ್ಯಾರಾಮೆಡಿಕಲ್‌ ಸೈನ್ಸ್ ಕಾಲೇಜಿನಲ್ಲಿ ಲಸಿಕಾ ಕೇಂದ್ರವನ್ನು ತೆರೆಯಲಾಗಿತ್ತು. ಈ ವೇಳೆ ಸಂಜೆ ಐದು ಗಂಟೆಯವರೆಗೆ ಕಾಲೇಜು ಕ್ಲೋಸ್ ಮಾಡದಂತೆ ಆಯುಕ್ತರು ಕಾಲೇಜು ಮಾಲೀಕ ಯತೀಶ್ ಎಂಬುವವರಿಗೆ ಮನವಿ ಮಾಡಿದ್ದರು ಎನ್ನಲಾಗಿದೆ. …

Read More »

ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ಕಾಡುತ್ತಿದೆ ನ್ಯುಮೋನಿಯಾ; ಒಂದೇ ವಾರದಲ್ಲಿ 7 ಮಕ್ಕಳು ಬಲಿ

ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ನ್ಯುಮೋನಿಯಾ ಕಾಡುತ್ತಿದ್ದು, ಒಂದೇ ವಾರದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 7 ಮಕ್ಕಳು ಸಾವನ್ನಪ್ಪಿದ್ದಾರೆ. ನ್ಯಮೋನಿಯಾದಿಂದ ಬಳಲುತ್ತಿರುವ 163 ಮಕ್ಕಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿಲಾಗುತ್ತಿದೆ. ಸದ್ಯ ಕಿಮ್ಸ್‌ನ ಮಕ್ಕಳ ವಿಭಾಗದ ಬೆಡ್‌ಗಳು ಸಂಪೂರ್ಣ ಭರ್ತಿಯಾಗಿದ್ದು, 1 ವರ್ಷದ 95 ಮಕ್ಕಳಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 23 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಚಿಕ್ಕಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೆಮ್ಮು, ನೆಗಡಿ, …

Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮೃತದೇಹಗಳ ನಡುವೆ 3 ವರ್ಷದ ಹೆಣ್ಣು ಮಗು

ಬೆಂಗಳೂರು: ನಗರದ ಬ್ಯಾಡರಹಳ್ಳಿ ಹಳ್ಳಿ ಠಾಣಾ ವ್ಯಾಪ್ತಿಯ ತಿಗರಪಾಳ್ಯದಲ್ಲಿ ನೆಲೆಸಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆಯಲ್ಲಿ ಮೂರು ವರ್ಷದ ಮಗು ಮಾತ್ರ ಜೀವಂತವಾಗಿ ಪತ್ತೆಯಾಗಿದೆ. ಕಳೆದ ಐದು ದಿನಗಳ ಹಿಂದೆ ಕುಟುಂಬಸ್ಥರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಈ ವೇಳೆ ಮನೆಯಲ್ಲಿ 3 ವರ್ಷದ ಹೆಣ್ಣು ಮಗು ಮೃತದೇಹಗಳ ನಡುವೆಯೇ ಕಳೆದ ಐದು ದಿನಗಳಿಂದ ಕಾಲ ಕಳೆದಿರುವುದು ತಿಳಿದು ಬಂದಿದೆ. ಕೌಟುಂಬಿಕ ಸಮಸ್ಯೆಯಿಂದಲೇ ಒಂದೇ ಮನೆಯ ಐವರು ಬಲಿಯಾದರ …

Read More »

ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ ಗುರಿ ತಲುಪಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ಹೇಳಿದರು. ಅರಭಾವಿ ಕ್ಷೇತ್ರದಾದ್ಯಂತ 2.95 ಲಕ್ಷ ಜನರಿಗೆ ಲಸಿಕೆ ಗುರಿಯನ್ನು ಹೊಂದಿದ್ದು, ಇಲ್ಲಿಯವರಿಗೆ ಸುಮಾರು 1.60 ಲಕ್ಷ ಜನರಿಗೆ ಲಸಿಕೆಗಳನ್ನು ಹಾಕಲಾಗಿದ್ದು, ಕೊವೀಡ್ …

Read More »

14ನೇ ವಯಸ್ಸಿನೊಳಗೇ ಶುರುವಾಗುತ್ತವೆ ಶೇಕಡಾ 50ರಷ್ಟು ಮಾನಸಿಕ ಸಮಸ್ಯೆಗಳು; ಮಕ್ಕಳಿಗೆ ಉತ್ತಮ ಬಾಲ್ಯ ರೂಪಿಸಲು ಸಲಹೆ

ಮನುಷ್ಯನ ಅನುಭವಿಸಬಹುದಾದ ಅರ್ಧಕ್ಕಿಂತ ಹೆಚ್ಚು ಮಾನಸಿಕ ಸಮಸ್ಯೆಗಳು 14 ವರ್ಷಕ್ಕಿಂತ ಮುನ್ನವೇ ಆರಂಭವಾಗಿರುತ್ತದೆ ಎಂದು ಚಂಡೀಗಡದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಮಾನಸಿಕ ವಿಭಾಗದ ಮುಖ್ಯಸ್ಥೆ ಡಾ.ಸವಿತಾ ಮಲ್ಹೋತ್ರಾ ತಿಳಿಸಿದ್ದಾರೆ. ಪ್ರತಿಯೊಬ್ಬನ ಬಾಲ್ಯದ ಜೀವನ ಜೀವನದ ಉದ್ದಕ್ಖೂ ಪ್ರಭಾವ ಬೀರುತ್ತದೆ. ಹೀಗಾಗಿ ಬಾಲ್ಯದ ಜೀವನ ಅತ್ಯಂತ ಉತ್ತಮವಾಗಿರುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ. ‘ಮಕ್ಕಳ ಮಾನಸಿಕ ಆರೋಗ್ಯ- ಮಾನಸಿಕ ಆರೋಗ್ಯದ ವಿಶ್ವ’ ಎಂಬ ವಿಷಯದ ಅಡಿ ಉಪನ್ಯಾಸ …

Read More »

ಇದು ನಿಸ್ವಾರ್ಥದ ನಿರ್ಧಾರ! ಕೊಹ್ಲಿಯನ್ನು ಹೊಗಳಿದ ಇಂಗ್ಲೆಂಡ್​ನ ಮಾಜಿ ನಾಯಕ ಮೈಕಲ್ ವಾನ್

ವಿರಾಟ್ ಕೊಹ್ಲಿ ಗುರುವಾರ ಭಾರತದ ಟಿ 20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದರು. ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಒಮಾನ್‌ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ 2021 ರ ನಂತರ ಟೀಮ್ ಇಂಡಿಯಾದ ನಾಯಕನ ಸ್ಥಾನವನ್ನು ತ್ಯಜಿಸುವುದಾಗಿ ಅವರು ಹೇಳಿದರು. ಈ ನಿರ್ಧಾರ ಬಂದ ತಕ್ಷಣ ವಿರಾಟ್ ಕೊಹ್ಲಿಯ ಬಗ್ಗೆ ಚರ್ಚೆ ಎಲ್ಲೆಡೆ ಆರಂಭವಾಯಿತು. ಕೊಹ್ಲಿ ತನ್ನ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ …

Read More »

ಕರ್ನಾಟಕದಲ್ಲಿ ಹೊಸದಾಗಿ 1,003 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 17) ಹೊಸದಾಗಿ 1,003 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,12,633 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 18 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,573 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »