Breaking News

Yearly Archives: 2021

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ಕೆ.ಶಿವಕುಮಾರ್

ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಕ್ಷೇತ್ರದಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದು, ಅದು ಸಹಜ. ನಾನು ಕೂಡ ನನ್ನ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ. ನಮ್ಮ ಜನರ ಎದುರು ನಮ್ಮ ಅಧಿಕಾರ ತೋರಲು ಆಗುವುದಿಲ್ಲ. ಹೀಗಾಗಿ ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ಶಾಂತಿ ಕಾಪಾಡುವುದೇ ಕಾಂಗ್ರೆಸ್ ಸಂಕಲ್ಪ. ಈ ಕೃತ್ಯವನ್ನು ಏಕಾಏಕಿಯಾಗಿ ಎಂಇಎಸ್ …

Read More »

ಎಂಇಎಸ್ ವಿರುದ್ಧ ಕರವೇ ನಾರಾಯಣಗೌಡ ನೇತೃತ್ವದ ಬಣದ ಪ್ರತಿಭಟನೆ

ಬೆಳಗಾವಿ: ಎಂಇಎಸ್ ವಿರುದ್ಧ ಕರವೇ ನಾರಾಯಣಗೌಡ ನೇತೃತ್ವದ ಬಣದ ಪ್ರತಿಭಟನೆ ತೀವ್ರಗೊಂಡಿದ್ದು, ಬೆಳಗಾವಿಯಲ್ಲಿ ಲಾರಿ, ಬಸ್ ಗಳ ಮೇಲೆ ಹತ್ತಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಎಂಇಎಸ್, ಶಿವಸೇನೆ ಪುಂಡಾಟ ಪ್ರಕರಣದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ಬೃಹತ್ ಪ್ರತಿಭಟನೆ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಕರವೇ ನಾರಾಯಣಗೌಡ ನೇತೃತ್ವದ ಬಣವನ್ನು ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ತಡೆದಿದ್ದಾರೆ. ಪೊಲೀಸರ …

Read More »

ಬೆಳಗಾವಿಯ ಸೊಶಿಯಲ್ ಕ್ಲಬ್ ಮತ್ತು ಕ್ರೀಡಾ ಭವನದ ವಿವಿಧ ಕಟ್ಟಡಗಳ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿಯ ಸೊಶಿಯಲ್ ಕ್ಲಬ್ ಮತ್ತು ಕ್ರೀಡಾ ಭವನದ ನೂತನ ಅತಿಥಿ ಗೃಹ, ವ್ಯಾಯಾಮ ಶಾಲೆ, ಸೆಂಟನರಿ ಹಾಲ್ ನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು. ಬೆಳಗಾವಿಯ ಸೊಶಿಯಲ್ ಕ್ಲಬ್ ಮತ್ತು ಕ್ರೀಡಾ ಭವನ ವಂಟಮೂರಿಯ ರಾಜಾ ಲಖಮಗೌಡ ಅವರು ಸ್ಥಾಪಿಸಿದ್ದ 103 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಸೊಶಿಯಲ್ ಕ್ಲಬ್ ಮತ್ತು ಕ್ರೀಡಾ ಭವನದಲ್ಲಿ ನೂತನವಾಗಿ ನಿರ್ಮಿಸಿರುವ ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಅವರ ತಂದೆಯ ಹೆಸರಿನ ಅತಿಥಿ …

Read More »

ಸಂದಿಗ್ಧದಲ್ಲಿ ಕಾಂಗ್ರೆಸ್: ಕೈಪಡೆಗೆ ಬಿಸಿತುಪ್ಪವಾದ ಹೋರಾಟದ ಅಸ್ತ್ರ

ಬೆಳಗಾವಿ: ಭೂಹಗರಣದ ಅಸ್ತ್ರ ಪ್ರಯೋಗಿಸಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ರಾಜೀನಾಮೆ ಪಡೆದುಕೊಳ್ಳಲು ಅಣಿಯಾಗಿದ್ದ ಕಾಂಗ್ರೆಸ್​ಗೀಗ ಸಂದಿಗ್ಧ ಎದುರಾಗಿದೆ. ಸೋಮವಾರ ಆರಂಭವಾ ಗಲಿರುವ ಚಳಿಗಾಲದ ಅಧಿವೇಶನದ ಉತ್ತರಾರ್ಧದಲ್ಲಿ ಯಾವ ಅಸ್ತ್ರ ಹಿಡಿಯಬೇಕೆಂಬ ಚಿಂತೆ ಶುರುವಾಗಿದೆ. ಈ ಸಂಬಂಧ ಸೋಮವಾರ ಬೆಳಗ್ಗೆ ಸುರ್ವಣಸೌಧದಲ್ಲಿ ಹಿರಿಯ ನಾಯಕರ ಸಭೆ ಕರೆಯಲಾಗಿದೆ. ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆಂಬ ಕಾರಣಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಪ್ರಕರಣ ಮುಂದಿಟ್ಟು ಕೊಂಡು ಧರಣಿ ನಡೆಸಿದ್ದ ಕಾಂಗ್ರೆಸ್, ರಾಜಿನಾಮೆಗೆ ಆಗ್ರಹಿಸಿತ್ತು. ಧರಣಿಯೊಂದಿಗೇ …

Read More »

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ‘ದೊಡ್ಡ ಹುದ್ದೆ’ಯ ಮುನ್ಸೂಚನೆ ಕೊಟ್ಟ ಹೈಕಮಾಂಡ್!

ಬೆಂಗಳೂರು, ಡಿ.20: ಕರ್ನಾಟಕ ಬಜೆಪಿಯ ಪ್ರಮುಖ ಮಹಿಳಾ ನಾಯಕಿ, ಪ್ರಸ್ತುತ ಕೇಂದ್ರದಲ್ಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ವಿವಾದಗಳಿಂದ ದೂರ ಉಳಿಯುತ್ತಿರುವುದು ಹಾಗೂ ಎಲ್ಲದ್ದಕ್ಕೂ ಪ್ರತಿಕ್ರಿಯಿಸದಿರುವುದರ ಹಿಂದೆ ಬಿಜೆಪಿ ಹೈಕಮಾಂಡ್‌ನ ವಿಶೇಷ ಸೂಚನೆಯಿಂದ ಎಂಬ ಮಾತುಗಳು ಕೇಳಿಬರುತ್ತಿವೆ.   ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರು ಕೆಲವು ತಿಂಗಳಿಂದ ತಾವಾಯಿತು, ತಮ್ಮ ಕೆಲಸವಾಯಿತು ಎಂಬಂತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು, …

Read More »

ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೌಜಲಗಿ ಮತ್ತು ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ಹರಿಸುವ ಮೂಲಕ ಈ ಭಾಗವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡುವ …

Read More »

ವಾಟ್ಸ್‌ಆಯಪ್‌ ಗ್ರೂಪ್‌ಗಳಿಗೆ ಪೋರ್ನ್‌ ವಿಡಿಯೋ ಕಳುಹಿಸಿದ ಶಿಕ್ಷಕ: ಮೊಬೈಲ್‌ ನೋಡಿದ ವಿದ್ಯಾರ್ಥಿಗಳು ಶಾಕ್‌

ಚೆನ್ನೈ: ಕುಡಿದ ಮತ್ತಿನಲ್ಲಿ ಗಣಿತ ಶಿಕ್ಷಕನೊಬ್ಬ ರಾತ್ರಿ ವೇಳೆ ಪೋರ್ನ್‌ ವಿಡಿಯೋ ಒಂದನ್ನು ವಾಟ್ಸ್‌ಆಯಪ್‌ ಗ್ರೂಪ್‌ಗಳಿಗೆ ಕಳುಹಿಸಿದ್ದಾರೆ. ಈ ವಿಡಿಯೋ ಆನ್‌ಲೈನ್‌ ಕ್ಲಾಸ್‌ಗಾಗಿ ವಿದ್ಯಾರ್ಥಿಗಳು ಇರುವ ಗ್ರೂಪ್‌ಗಳಿಗೂ ಹೋಗಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ದಂಗಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.   ಅಂಬತ್ತೂರಿನ ಮತ್ತಿವನನ್ ಎಂಬಾತ ಅಶ್ಲೀಲ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಗ್ರೂಪ್‌ನಲ್ಲಿ ಕೆಲವು ಇವರ ಕ್ಲಾಸ್‌ನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು. ಬೆಳಗ್ಗೆ ಆನ್‌ಲೈನ್‌ ಕ್ಲಾಸ್‌ಗಾಗಿ ಮೊಬೈಲ್‌ ನೋಡಿದಾಗ ವಿದ್ಯಾರ್ಥಿಗಳು ದಂಗಾಗಿ …

Read More »

ಮತದಾರರಿಗೆ ಮುಖ್ಯ ಮಾಹಿತಿ: ವೋಟರ್ ಐಡಿಗೆ ಆಧಾರ್ ಜೋಡಣೆಗೆ ಇಂದು ವಿಧೇಯಕ ಮಂಡನೆ

ನವದೆಹಲಿ: ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವ ವಿಧೇಯಕವನ್ನು ಸಂಸತ್ ಅಧಿವೇಶನದಲ್ಲಿ ಮಂಡಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಚುನಾವಣಾ ಕಾನೂನು ತಿದ್ದುಪಡಿ ವಿಧೇಯಕ -2021 ಮಂಡನೆ ಮಾಡಲು ಮುಂದಾಗಿದೆ. ಒಬ್ಬನೇ ಮತದಾರ ಹಲವು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದನ್ನು ಪತ್ತೆ ಹಚ್ಚಿ ಅದನ್ನು ಪಟ್ಟಿಯಿಂದ ತೆಗೆದು ಹಾಕಲು ಇದರಿಂದ ಅನುಕೂಲವಾಗುತ್ತದೆ. ಹೊಸ ಮತದಾರರಿಗೆ ವರ್ಷಕ್ಕೆ ನಾಲ್ಕು ಸಲ ಮತದಾರರ ಪಟ್ಟಿಗೆ ಹೆಸರು …

Read More »

ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿ ಅಶೋಕ್‌ ಹಾರನಹಳ್ಳಿ ಆಯ್ಕೆ

ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ಅಧ್ಯಕ್ಷರಾಗಿ ಅಶೋಕ್‌ ಹಾರನಹಳ್ಳಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಶೋಕ್‌ ಹಾರನಹಳ್ಳಿ, ಎಸ್‌. ರಘುನಾಥ್ ಮತ್ತು ಆರ್‌. ಲಕ್ಷ್ಮೀಕಾಂತ್ ಸ್ಪರ್ಧಿಸಿದ್ದರು. ಅಶೋಕ್‌ ಹಾರನಹಳ್ಳಿ ಮತ್ತು ರಘುನಾಥ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಹಾರನಹಳ್ಳಿ ಅವರು 455 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಅಶೋಕ್‌ ಹಾರನಹಳ್ಳಿ 4,424 ಮತಗಳನ್ನು ಪಡೆದರು. ಪ್ರತಿಸ್ಪರ್ಧಿಗಳಾದ ಎಸ್‌. ರಘುನಾಥ್ 3,969 ಮತಗಳು ಮತ್ತು ಆರ್‌.ಲಕ್ಷ್ಮೀಕಾಂತ್ 2,239 ಮತಗಳನ್ನು ಪಡೆದರು. …

Read More »

ದೇಶಾದ್ಯಂತ ಇಂದು ಕೈಗಾರಿಕೆಗಳು ಬಂದ್, 35 ಸಾವಿರ ಕೋಟಿ ರೂ. ನಷ್ಟ ಸಾಧ್ಯತೆ

ನವದೆಹಲಿ: ಕಚ್ಚಾ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ದೇಶಾದ್ಯಂತ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ದೇಶವ್ಯಾಪಿ ಮುಷ್ಕರ ಕೈಗೊಂಡಿದ್ದು, ಇಂದು ದೇಶಾದ್ಯಂತ ಸಣ್ಣ ಕೈಗಾರಿಕೆಗಳು ಬಂದ್ ಆಗಲಿವೆ. ಎಂಎಸ್‌ಎಂಇ ಬಂದ್ ನಿಂದಾಗಿ ಸುಮಾರು 35 ಸಾವಿರ ಕೋಟಿ ರೂ. ನಷ್ಟು ಉತ್ಪಾದನೆ ನಷ್ಟವಾಗಲಿದೆ. 10 ಲಕ್ಷ ಕೈಗಾರಿಕೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಇಷ್ಟೊಂದು ಪ್ರಮಾಣದ ಉತ್ಪಾದನೆ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಅಖಿಲ ಭಾರತ ಎಂಎಸ್‌ಎಂಇ ಸಂಘಟನೆಯ ಸದಸ್ಯ …

Read More »