ಕೋಲಾರ: ದೇಶಕ್ಕೆ ಸಂಕ್ರಾಂತಿಯೊಳಗೆ ದೊಡ್ಡ ಗಂಡಾಂತರವಿದೆ ಎಂದು ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದವರೆಗೆ ಜಲ ಗಂಡಾಂತರವಿದೆ. ದೇಶದಲ್ಲಿ ದೊಡ್ಡ ಅವಘಡ ಉಂಟಾಗಲಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಲಿದ್ದು ಕೆರೆ ಕಟ್ಟೆಗಳೆಲ್ಲ ತುಂಬಲಿವೆ ಎಂದು ಅವರು ತಿಳಿಸಿದ್ದಾರೆ. ರಾಜಕಾರಣದ ಬಗ್ಗೆ ಆಷಾಢದಲ್ಲಿ ಅಶುಭ ಹೇಳುವುದು ಬೇಡ. ಪೂರ್ಣ ಪ್ರಮಾಣದ ಮಂತ್ರಿಮಂಡಲ ರಚನೆಯಾದ ನಂತರ, ಕಾರ್ತಿಕಮಾಸ ಕಳೆದ ನಂತರ ಹೇಳುತ್ತೇನೆ. ಕೊರೋನಾ …
Read More »Yearly Archives: 2021
ಬಿ ಎಸ್ ವೈ ಬಿಜೆಪಿಯಲ್ಲಿಯೇ ಇದ್ದವರು. ಅವರ ಮಾತನ್ನೇ ಕೇಳಿಲ್ಲ, ಇನ್ನು ಜನತಾದಳದಿಂದ ಬಿಜೆಪಿಗೆ ಹೋದ ಬೊಮ್ಮಾಯಿ ಮಾತು ಕೇಳ್ತಾರಾ?
ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯದ ಮೇಲೆ ಅನ್ಯಾಯವಾದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಏನೂ ಮಾಡಲು ಸಾಧ್ಯವಾಗಿಲ್ಲ. ಇನ್ನು ಹೊಸ ಸಿಎಂ ಬಸವರಾಜ ಬೊಮ್ಮಾಯಿ ಏನು ಮಾಡುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರುವ ವಿಚಾರವಾಗಿ ಮಾತನಾಡುತ್ತಾ, ಕೇಂದ್ರದಿಂದ ಜಿ ಎಸ್ ಟಿ ಪಾಲು ತರಲಾಗಿಲ್ಲ. ಜನರಿಗೆ ಈವರೆಗೆ ಪರಿಹಾರದ ಹಣವೂ ಸಿಕ್ಕಿಲ್ಲ. ಮಾಜಿ ಸಿಎಂ ಯಡಿಯೂರಪ್ಪನವರಿಂದಲೇ ಏನೂ ಸಾಧ್ಯವಾಗಿಲ್ಲ …
Read More »ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್
ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ …
Read More »ಅಂಕೋಲಾ : ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಓರ್ವ ಸಾವು, ಇನ್ನೋರ್ವ ಗಂಭೀರ
ಅಂಕೋಲಾ : ಬೈಕ್ ಮತ್ತು ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಹಾರವಾಡ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ತಾಲೂಕಿನ ಹೊನ್ನಳ್ಳಿ ನಿವಾಸಿ ರವಿ ಲೋಕು ಗೌಡ( 29) ಮೃತಪಟ್ಟ ವ್ಯಕ್ತಿ. ಬೇಲೇಕೇರಿ ಸಿಬರ್ಡ್ ಕಾಲೊನಿ ನಿವಾಸಿ ಹರೀಶ ಒಮು ಗೌಡ (28) ಗಂಭೀರ ಗಾಯಗೊಂಡು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಟಿಪ್ಪರ್ ಚಾಲಕ ಅನಿಸ್ ಅಲಿ …
Read More »ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.
ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ …
Read More »ಸಚಿವ ಸಂಪುಟ ಪುನರಚನೆ ವರಿಷ್ಠರ ಸೂಚನೆಯಂತೆ ಮಾಡಲಾಗುವುದು: ಬೊಮ್ಮಾಯಿ
ದೆಹಲಿ: ಸಚಿವ ಸಂಪುಟ ಪುನರಚನೆ ಬಗ್ಗೆ ಹೈಕಮಾಂಡ್ ಭೇಟಿ ವೇಳೆ ಯಾವುದೇ ಚರ್ಚೆಯಾಗಿಲ್ಲ. ವರಿಷ್ಠರ ಸೂಚನೆಯಂತೆ ಸಂಪುಟ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸಂಪುಟ ರಚನೆ ವಿಚಾರವಾಗಿ ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ. ಮಧ್ಯಾಹ್ನದೊಳಗೆ ಲಿಸ್ಟ್ ಬರುತ್ತೋ ಇಲ್ವೋ ಗೊತ್ತಿಲ್ಲ. ಈ ಬಗ್ಗೆ ನನಗಿನ್ನೂ ಯಾವುದೇ ಕರೆ ಬಂದಿಲ್ಲ. ಸೂಚನೆ ಬಂದ ಕೂಡಲೇ ಸಚಿವರ ಪಟ್ಟಿ ಬಗ್ಗೆ ಚರ್ಚಿಸುತ್ತೇನೆ ಎಂದರು. ಇಂದು ಬೆಂಗಳೂರಿಗೆ …
Read More »ಅಳ್ತಾರೆ, ಗಂಡನ ಜತೆ ಜಗಳವಾಡ್ತಾರೆ ಅನ್ನೋ ಸುದ್ದಿ ಮಾನಹಾನಿ ಆಗತ್ತೇನ್ರಿ? ಶಿಲ್ಪಾ ವಿರುದ್ಧ ಕೋರ್ಟ್ ಗರಂ
ಮುಂಬೈ: ಬ್ಲೂ ಫಿಲ್ಮ್ಂ ಪ್ರಕಣದಲ್ಲಿ ಸಿಲುಕಿರುವ ಉದ್ಯಮಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದರೆ, ಇತ್ತ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರು ಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ಮಾಧ್ಯಮಗಳ ವಿರುದ್ಧ. ಪತಿ ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಜತೆಗೆ ಶಿಲ್ಪಾ ಅಳುತ್ತಿದ್ದಾರೆ, ಗಂಡನ ಜತೆ ಜಗಳವಾಡುತ್ತಿದ್ದಾರೆ ಇತ್ಯಾದಿಯಾಗಿ ಮಾನಹಾನಿಯಾಗುವಂಥ ಸುದ್ದಿಗಳನ್ನು …
Read More »ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭೀತಿ ಶುರು?
ಬೆಂಗಳೂರು: ಇದೀಗ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭೀತಿ ಶುರುವಾಗಿದೆ. ಆದ್ದರಿಂದ ತಮ್ಮ ವಿರುದ್ಧ ಯಾವುದಾದರೂ ಸಿಡಿಗಳು ಇದ್ದರೆ ಅದು ಎಲ್ಲಿಯೂ ಪ್ರಸಾರವಾಗಬಾರದು ಎಂದು ಕೋರಿ ಬೆಂಗಳೂರಿನ ಸಿವಿಲ್ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಇದರ ವಿಚಾರಣೆ ನಡೆಸಿರುವ ಕೋರ್ಟ್, ಸಿಡಿಯನ್ನು ಎಲ್ಲಿಯೂ ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ನೀಡಿದೆ. ಸಿಡಿಯ ಕುರಿತಂತೆ ಮಾತನಾಡಿರುವ ರೇಣುಕಾಚಾರ್ಯ ಅವರು, ಈಗೀಗ ತಂತ್ರಜ್ಞಾನ ಹೇಗಿದೆ ಎಂದರೆ, ಯಾರದ್ದೋ ತಲೆ, ಯಾರದ್ದೋ ಮುಖ, ಯಾರದ್ದೋ …
Read More »ಸಚಿವ ಸಂಪುಟ ರಚನೆ: ‘ವಿಜಯಪುರ ಕಡೆಗಣಿಸಿದರೆ ದೊಡ್ಡ ಶಾಕ್ ಕೊಡುವೆ’-ಯತ್ನಾಳ
ವಿಜಯಪುರ: ವಿಜಯಪುರ ಜಿಲ್ಲೆಗೆ ಗೌರವಯುತವಾಗಿ ಸಚಿವ ಸ್ಥಾನ ಕೊಡಲೇಬೇಕು. ಒಂದು ವೇಳೆ ಜಿಲ್ಲೆಯನ್ನು ಕಡೆಗಣಿಸಿದರೆ ಸಚಿವ ಸಂಪುಟ ವಿಸ್ತರಣೆ ಬಳಿಕ ದೊಡ್ಡ ಶಾಕ್ ಕೊಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಚ್ಚರಿಕೆ ನೀಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ್ಳೆಯವರನ್ನು, ಪ್ರಾಮಾಣಿಕರನ್ನು, ಹಿಂದುತ್ವ ಉಳ್ಳವರನ್ನು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಶಕ್ತಿಯುಳ್ಳವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ನನಗೆ ಹೈಕಮಾಂಡ್ ಮೇಲೆ ವಿಶ್ವಾಸವಿದೆ. ಯಡಿಯೂರಪ್ಪನವರು ಹೇಳಿದ್ದೇ …
Read More »ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
ನವದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದರು. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು. ಬಳಿಕ ಸಂಜೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಲಿದ್ದು, ರಾತ್ರಿ ಅಥವಾ ನಾಳೆ ಬೆಳಿಗ್ಗೆ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ. ಬಿ.ಎಲ್ ಸಂತೋಷ್ ಹಾಗೂ ನಡ್ಡಾ ಭೇಟಿ ವೇಳೆ ಸಚಿವ …
Read More »