Breaking News

Yearly Archives: 2021

ನಿರಾಣಿ, ಬೆಲ್ಲದ್‍ಗೆ ಸಿಎಂ ಕುರ್ಚಿ ತಪ್ಪಿದ್ದು ಹೇಗೆ?

ಬೆಂಗಳೂರು: ಸಿಎಂ ರೇಸ್‍ನಲ್ಲಿದ್ದ ಬೆಲ್ಲದ್, ನಿರಾಣಿ ಪೈಕಿ ಒಬ್ಬರನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕ್ಲೈಮ್ಯಾಕ್ಸ್‍ನಲ್ಲಿ ಇವರಿಬ್ಬರಿಗೂ ಸಿಎಂ ಪಟ್ಟ ತಪ್ಪಿದ್ದು ಲಾಬಿ ಮಾಡದ ಬೊಮ್ಮಾಯಿ ಅವರಿಗೆ ಒಲಿದಿದೆ. ಮುಖ್ಯಮಂತ್ರಿ ರೇಸ್‍ನಲ್ಲಿದ್ದ ನಿರಾಣಿ ಮತ್ತು ಬೆಲ್ಲದ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಅಷ್ಟೇ ಅಲ್ಲದೇ ಇವರಿಬ್ಬರೂ ವಾರಣಾಸಿಗೆ ತೆರಳಿ ಗಂಗೆಯಲ್ಲಿ ಸ್ನಾನ ಮಾಡಿ ಕಾಶಿ ವಿಶ್ವನಾಥನ ದರ್ಶನ ಮಾಡಿದ್ದರು. ಹೀಗಾಗಿ ನಿರಾಣಿ ಮತ್ತು ಬೆಲ್ಲದ್ …

Read More »

ಆಗಸ್ಟ್ ತಿಂಗಳಲ್ಲಿ 12 ದಿನ ಬ್ಯಾಂಕ್ ಕಾರ್ಯ ನಿರ್ವಹಿಸಲ್ಲ ಏಕೆಂದ್ರೆ..

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ . ಭಾರತದಲ್ಲಿ ಬ್ಯಾಂಕ್ ರಜಾ ದಿನಗಳು ಆಯಾ ರಾಜ್ಯಗಳ ಮೇಲೂ ಅವಲಂಬನೆ ಆಗಿರುತ್ತದೆ . ಇನ್ನು ಭಾರತದ ವಿವಿಧ ಭಾಗಗಳಲ್ಲಿ ನಿರ್ಬಂಧಿತ ರಜಾಗಳು ಹಾಗೂ ಗೆಜೆಟೆಡ್ ರಜಾ ದಿನಗಳಿವೆ . ಗೆಜೆಟೆಡ್ ಅಥವಾ ಸಾರ್ವಜನಿಕ ರಜಾ ದಿನಗಳು ದೇಶದಾದ್ಯಂತ ಅನ್ವಯಿಸುತ್ತದೆ. ಬ್ಯಾಂಕ್ ಗಳು ಪ್ರತಿ ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ಹಾಗೂ …

Read More »

ರಿಯಾಲಿಟಿ ಶೋ ಜಡ್ಜ್ ಸ್ಥಾನದಿಂದ ಶಿಲ್ಪಾ ಔಟ್? ರಾಜ್ ಕುಂದ್ರ ಪತ್ನಿ ಜಾಗಕ್ಕೆ ಸ್ಟಾರ್ ದಂಪತಿ ಎಂಟ್ರಿ

ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಜುಲೈ 19ರಂದು ರಾಜ್ ಕುಂದ್ರ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪತಿಯ ಬಂಧನದಿಂದ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮುಜುಗರ ಅನುಭವಿಸಬೇಕಾಗಿದೆ. ಪತಿಯ ಬ್ಲೂ ಫಿಲ್ಮ್ ಪ್ರಕರಣ ಶಿಲ್ಪಾ ಶೆಟ್ಟಿ ಪರಿಣಾಮ ಬೀರಿದೆ. ಇತ್ತೀಚಿಗೆ ಮುಂಬೈ ಪೊಲೀಸರು ಶಿಲ್ಪಾ ಶೆಟ್ಟಿಯನ್ನು ವಿಚಾರಣೆ ನಡೆಸಿದ್ದರು. ಇದೆಲ್ಲದರ ನಡುವೆ …

Read More »

ಕಂಗನಾಗೆ ಮುಂಬೈ ಕೋರ್ಟ್ ಖಡಕ್ ಎಚ್ಚರಿಕೆ: ಹಾಜರಾಗಿಲ್ಲ ಅಂದ್ರೆ ವಾರೆಂಟ್ ಜಾರಿ

ಚಿತ್ರಕತೆ ರಚನೆಕಾರ, ಚಿತ್ರಸಾಹಿತಿ, ಮಾಜಿ ಸಂಸದ ಜಾವೇದ್ ಅಖ್ತರ್ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಕಂಗನಾ ರಣಾವತ್‌ಗೆ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕೊನೆಯ ಎಚ್ಚರಿಕೆ ನೀಡಿದೆ. ಮುಂದಿನ ವಿಚಾರಣೆಗೆ ನಟಿ ಹಾಜರಾಗಿಲ್ಲ ಅಂದ್ರೆ ವಾರೆಂಟ್ ಜಾರಿ ಮಾಡಬೇಕಾಗುತ್ತದೆ ಎಂದು ಕಟುವಾಗಿ ಪ್ರತಿಕ್ರಿಯಿಸಿದೆ. ಕಂಗನಾ ಪರ ವಕೀಲರು, ”ಕಂಗನಾ ದೇಶದಲ್ಲಿಲ್ಲ, ಹಾಗಾಗಿ, ಇಂದಿನ (ಜುಲೈ 27) ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಇಂದಿನ ವಿಚಾರಣೆಗೆ ವಿನಾಯಿತಿ ಕೊಡಿ” ಎಂದು ನ್ಯಾಯಾಲಯಕ್ಕೆ ಕೋರಿದ್ದರು. …

Read More »

ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಹೆಚ್ ಡಿ ಕುಮಾರಸ್ವಾಮಿ ನೀಡಿದ ಸಂದೇಶವೇನು?

ಬೆಂಗಳೂರು, ಜುಲೈ 27: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ. “ಪ್ರಸ್ತುತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ,” ಎಂದು ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಭಾರತೀಯ …

Read More »

ದುರಾಡಳಿತದಿಂದ ದಿಕ್ಕು ತಪ್ಪಿದ ರಾಜ್ಯಕ್ಕೆ ಸ್ನೇಹಿತ ಬೊಮ್ಮಾಯಿ ಸಿಎಂ ಆಗಿದ್ದಾರೆ, ಅವರಿಗೆ ಅಗತ್ಯ ಸಹಕಾರ ನೀಡುತ್ತೇನೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಎಸ್​ ಬೊಮ್ಮಾಯಿ (Basavaraj S Bommai) ಆಯ್ಕೆಯಾಗಿದ್ದಾರೆ. ಜನತಾದಳದಿಂದ ಬಂದು ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಂಡ ಅವರಿಗೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಶುಭಕೋರಿದ್ದು, ನನ್ನ ಸ್ನೇಹಿತ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗುತ್ತಿದ್ದಾರೆ (Chief Minister of Karnataka), ಅವರಿಗೆ ಶುಭವಾಗಲಿ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಹಕಾರದ ಭರವಸೆ ನೀಡುತ್ತೇನೆ ಎಂದು ಅಧಿಕೃತ ಟ್ವಿಟರ್​ ಖಾತೆಯಿಂದ ಟ್ವೀಟ್ ಮಾಡುವ ಮೂಲಕ ಅಭಿನಂದನೆ …

Read More »

ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳ ಬಂಧನ

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ಕಿಡ್ನ್ಯಾಪ್, ಕೊಲೆ ಆರೋಪಿಗಳನ್ನು ಸೆರೆ ಹಿಡಿದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಂಬರೀಶ್, ಕವಿರಾಜ್‌ ಬಂಧಿತ ಆರೋಪಿಗಳು. ಇಂದಿರಾನಗರ ಫೈನಾನ್ಸಿಯರ್ ವಿಜಯ್‌ಕುಮಾರ್ ಎಂಬುವವರನ್ನು ಅಪಹರಿಸಿ ಹತ್ಯೆಗೈದಿದ್ದರು. ಕೇಸ್ ಸಂಬಂಧ ಆರೋಪಿಗಳ ಬಂಧನಕ್ಕೆ ಎಸಿಪಿ ಕುಮಾರ್, ಇನ್ಸ್‌ಪೆಕ್ಟರ್ ಹರೀಶ್ ತಂಡ ತೆರಳಿತ್ತು. ಈ ವೇಳೆ ಬೆಳಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಅಂಬರೀಶ್, …

Read More »

ಕರ್ನಾಟಕದ 20ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬಳಿಕ ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಐವರು ನಾಯಕರ ಜೊತೆ ನಿಯೋಜಿತ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಆಗಮಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. …

Read More »

ಕರ್ನಾಟಕಕ್ಕೆ ಮತ್ತೆ ಮೂವರು ಉಪ-ಮುಖ್ಯಮಂತ್ರಿಗಳು

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ, ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆನೀಡಿದ ನಂತ್ರ, ಕರ್ನಾಟಕ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ

Read More »

ಬಿಎಸ್​ವೈ ನಿರ್ಗಮನದ ಬೆನ್ನಲ್ಲೇ ಕೇಂದ್ರದಿಂದ ರಾಜ್ಯಕ್ಕೆ ₹629.3 ಕೋಟಿ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಇಂದು ಬರೋಬ್ಬರಿ 629.03 ಕೋಟಿ ಹಣವನ್ನ ಪ್ರಕೃತಿ ವಿಕೋಪದ ಪರಿಹಾರವಾಗಿ ಬಿಡುಗಡೆ ಮಾಡಿದೆ. ಕಳೆದ ಬಾರಿಯ ಮುಂಗಾರು ಮಳೆ ಸಂದರ್ಭದಲ್ಲಿ ಭಾರೀ ಪ್ರವಾಹ ಉಂಟಾಗಿತ್ತು. ಉತ್ತರ ಕರ್ನಾಟಕವು ಮಹಾಮಳೆಗೆ ನಲುಗಿ ಹೋಗಿತ್ತು. ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ಅಪಾರ ಹಾನಿಯುಂಟಾಗಿತ್ತು. ಮಾತ್ರವಲ್ಲ ಮಹಾರಾಷ್ಟದಲ್ಲೂ ತೀವ್ರ ಹಾನಿಯಾಗಿತ್ತು. ಇದೀಗ ಕೇಂದ್ರ ಸರ್ಕಾರ 2020ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಪರಿಹಾರವನ್ನ ನೀಡಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ …

Read More »