Breaking News

Yearly Archives: 2021

ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕವರ್ ಕಾಣಿಕೆಯನ್ನ ತಿರಸ್ಕರಿಸಿದ್ದೆ: ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಮುಖ್ಯಮಂತ್ರಿ ನಿವಾಸದಲ್ಲಿ ಮಠಾಧೀಶರು ಕವರ್ ಪಡೆದ ವಿಚಾರಕ್ಕೆ ಸಂಬಂಧಿಸಿ ಕವರ್ನಲ್ಲಿ ಏನಿತ್ತೆಂದು ಗೊತ್ತಿಲ್ಲ ಅಂತ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪುರಾಣ ಪುಸ್ತಕವಿತ್ತೋ, ವಚನ ಪುಸ್ತಕವಿತ್ತೋ ಗೊತ್ತಿಲ್ಲವೆಂದು ಹೇಳಿಕೆ ನೀಡಿದ ಸ್ವಾಮೀಜಿ, ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕಾಣಿಕೆ ತಿರಸ್ಕರಿಸಿದ್ದೆ. ಈಗ ಸ್ವಾಮೀಜಿಗಳಿಗೆ ಕೊಟ್ಟಿದ್ದ ಕವರ್ ಬಗ್ಗೆ ನನಗೆ ಗೊತ್ತಿಲ್ಲವೆಂದು ಹೇಳಿದ್ದಾರೆ. ಒಬ್ಬರ ಪರವಾಗಿ ಸ್ವಾಮೀಜಿಗಳು ಬ್ಯಾಟ್ ಬೀಸಿದ್ದು ಪ್ರಜಾಪ್ರಭುತ್ವದಲ್ಲಿ ಮಾರಕ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ …

Read More »

ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಮೊಟ್ಟೆ ಪ್ರೊಟೆಸ್ಟ್..!

ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಇಂದು ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಜೊಲ್ಲೆ ಪ್ರತಿಭಟನೆ ನೀಡಬೇಕೆಂದು ಬೀದಿಯಲ್ಲಿ ನಿಂತು ಒತ್ತಾಯ ಹಾಕಿದ್ರು. ಆ ಬಳಿಕ ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಘಟನೆ ಏನು..? ಅಂಗನವಾಡಿಗಳಲ್ಲಿ ಉಚಿತವಾಗಿ‌ ಮೊಟ್ಟೆ ಹಾಗೂ ಆಹಾರ ಪದಾರ್ಥಗಳನ್ನ ನೀಡಲಾಗುತ್ತದೆ. ಅದು ಮಕ್ಕಳು ಹಾಗೂ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ. ಆದ್ರೆ ಈ ಆಹಾರವೂ ಸಚಿವರ ಮಡಿಲಿಗೆ ಸೇರ್ತಾ ಇದೆ ಅನ್ನೋದೆ …

Read More »

ಮಳೆ ನಿಂತರೂ ಪ್ರವಾಹ ಭೀತಿ ಹೆಚ್ಚಳ

ಬೆಳಗಾವಿ: ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದೆ. ನದಿಗಳಿಗೆ ಹೆಚ್ಚಿನ ನೀರು ಹರಿದುಬರುತ್ತಿರುವುದರಿಂದ ಮತ್ತು ಜಲಾಶಯಗಳಿಗೆ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವ ಪರಿಣಾಮ ನದಿ ತೀರದ ಪ್ರವೇಶಗಳಲ್ಲಿ ಪ್ರವಾಹದ ಭೀತಿ ಜಾಸ್ತಿಯಾಗುತ್ತಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 2,24,435 ಕ್ಯುಸೆಕ್‌ ಹಾಗೂ ದೂಧ್‌ಗಂಗಾ ನದಿಯಿಂದ 51,920 ಕ್ಯುಸೆಕ್‌ ಸೇರಿ 2,72,295 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ದೂಧ್‌ಗಂಗಾ, ವೇದಗಂಗಾ ಮತ್ತು …

Read More »

ಬೆಳಗಾವಿಯಲ್ಲಿ ತಗ್ಗಿದ ಮಳೆ ಆರ್ಭಟ : ಕೊಂಚ ನಿಟ್ಟುಸಿರು ಬಿಟ್ಟ ನಿರಾಶ್ರಿತರು

ಬೆಳಗಾವಿ :ನೆರೆಯ ಮಹಾರಾಷ್ಟ್ರದ ಸಹ್ಯಾದ್ರಿ ಘಟ್ಟ ಪ್ರದೇಶಗಳನ್ನು ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅರ್ಭಟ ಅಲ್ಪಮಟ್ಟದಲ್ಲಿ ಕಡಿಯಾಗಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ 2 ಅಡಿ ಇಳಿಮುಖವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ವಸ್ತುಗಳನ್ನು ಕಳೆಕೊಂಡಿದ್ದ ನಿರಾಶ್ರಿತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಒಂದು ವಾರದಿಂದ ನೆರೆಯ ಮಹಾರಾಷ್ಟ್ರದಲ್ಲಿ ಹಾಗೂ ಜಿಲ್ಲೆಯ ಗಡಿ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಿರಣ್ಯಕೇಶಿ‌ …

Read More »

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲಘಿ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ: ನಿರಾಣಿ

ಕಲಬುರಗಿ,ಜು.24: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲಘಿ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ನಗರದ ಐವಾನ್-ಈ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ವರಿಷ್ಠರ ಆದೇಶವನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಇಲ್ಲಿ …

Read More »

ಸಿಎಂ ರೇಸ್‌ನಲ್ಲಿ ನನ್ನ ಹೆಸರಿರುವುದು ಕೇವಲ ಮಾಧ್ಯಮಗಳ ಸೃಷ್ಟಿ : ಕೇಂದ್ರ ಸಚಿವ ಜೋಶಿ

ಧಾರವಾಡ: ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಮತ್ತು ಹೈಕಮಾಂಡ ನಾಯಕರ ಮಧ್ಯೆ ಯಾವುದೊ ಮಾತುಕತೆ ನಡೆದಿರಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಿಚಾರಗಳನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆ ಆದರಿಸಿ ನಾನು ಹೇಳುವುದಾದರೆ, ಬಿಎಸ್ವೈ ಮತ್ತು ಬಿಜೆಪಿ ಹೈಕಮಾಂಡ ಮಧ್ಯ ಏನೋ ಮಾತುಕತೆ ನಡೆದಿರಬಹುದು. ಆದರೆ ಅದು ಏನು ಎಂಬುದು ನನಗೂ ಸಹ ಗೊತ್ತಿಲ್ಲ. …

Read More »

ನಮ್ಮ ಸಮುದಾಯದಲ್ಲೂ ಮೂರು ಹುಲಿಗಳಿವೆ-ಜಯಮೃತ್ಯುಂಜಯ ಶ್ರೀ

ಬೆಂಗಳೂರು: ನಾವು ಯಡಿಯೂರಪ್ಪ ಇಳಿಸೋಕೆ ಪ್ರಯತ್ನ ಮಾಡ್ತಿಲ್ಲ. ನಮ್ಮ ಸಮುದಾಯದಲ್ಲೂ ಮೂರು ಹುಲಿಗಳಿವೆ. ಆ . ಈ ಮೆಸೇಜ್ ರಾಷ್ಟ್ರೀಯ ನಾಯಕರಿಗೆ ತಲುಪಬೇಕು ಎಂದು ಪಂಚಮಸಾಲಿ ಪೀಠಾಧಿಪತಿ ಜಯಮೃತ್ಯುಂಜಯ ಶ್ರೀಗಳು ರಾಜ್ಯ ರಾಜಕರಣದ ಬಗ್ಗೆ ಮಾತನಾಡಿದ್ದಾರೆ. ಟಿವಿ5 ಜೊತೆ ಮಾತನಾಡಿದ ಅವರು, ನಾವು ಯಡಿಯೂರಪ್ಪನವರ ವಿರೋಧಿಗಳಲ್ಲ. ಅವರು ಇಲ್ಲಿಯವರೆಗೆ ಎಲ್ಲವನ್ನೂ ಆಳಿದ್ದಾರೆ. ಹಾಗಾಗಿ ನಮ್ಮವರಿಗೆ ಕೊಡಿ ಎನ್ನುವುದಷ್ಟೇ ನಮ್ಮ ವಾದ. ನಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ಕೊಡಬೇಕು. ಯಾರು ಸಚ್ಛಾರಿತ್ರವಂತರಿದ್ದಾರೆ …

Read More »

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

ತುಮಕೂರು: ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಇನ್ನೊಬ್ಬ ಭಷ್ಟ ಮುಖ್ಯಮಂತ್ರಿ ಬರಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ತುಮಕೂರಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ವಿಭಾಗೀಯ ಮಟ್ಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾಗಿ ಇನ್ನೊಬ್ಬ ಭ್ರಷ್ಟ ಸಿಎಂ ಬರಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ನೆರೆ ನಡುವೆಯೂ ಅಧಿಕಾರಕ್ಕಾಗಿ ಬಿಜೆಪಿ ಮುಖಂಡರು ಕಿತ್ತಾಡುತ್ತಿದ್ದಾರೆ. ಅವರು ನೆರೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅವರಿಗೆ ಅಧಿಕಾರ …

Read More »

ಪ್ರವಾಹ ಭೀತಿಗೆ  ಗದಗದ ಮಲಪ್ರಭಾ ನದಿ ತೀರ ಪ್ರದೇಶದಲ್ಲಿರುವ  ಜನರು ಊರು ತೊರೆಯುತ್ತಿದ್ದಾರೆ.

ಗದಗ: ಪ್ರವಾಹ ಭೀತಿಗೆ  ಗದಗದ ಮಲಪ್ರಭಾ ನದಿ ತೀರ ಪ್ರದೇಶದಲ್ಲಿರುವ  ಜನರು ಊರು ತೊರೆಯುತ್ತಿದ್ದಾರೆ. ನವಿಲು ತೀರ್ಥ(ರೇಣುಕಾ) ಜಲಾಶಯದಿಂದ ಮಲಪ್ರಭಾ ನದಿಗೆ ನೀರು ರಿಲೀಸ್ ಹಿನ್ನಲೆ ಜಿಲ್ಲೆಯ ನದಿ ಪಾತ್ರ ಗ್ರಾಮಗಳಿಗೆ ಹೈ-ಅಲರ್ಟ್ ಘೋಷಣೆ ಮಾಡಲಾಗಿದೆ. ಜನರು, ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಜಿಲ್ಲಾಡಳಿತದಿಂದ ಡಂಗೂರ ಸಾರುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆಯ ಡಂಗೂರ ಸಾರಲಾಯಿತು. ಗಂಟೆ ಗಂಟೆಗೂ …

Read More »

ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿ; ಹೊಸದಾಗಿ ಕಟ್ಟಿಕೊಂಡಿದ್ದ ಮನೆಗಳು ಸಂಪೂರ್ಣ ಜಲಾವೃತ

ಬೆಳಗಾವಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದ ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ ಗ್ರಾಮ ನದಿ ನೀರು ನುಗ್ಗಿ ಸಂಪೂರ್ಣ ಜಲಾವೃತವಾಗಿದೆ. ಚಿಕ್ಕಾಲಗುಡ್ಡ ಗ್ರಾಮದಲ್ಲಿ ಹೊಸದಾಗಿ ಕಟ್ಟಿಕೊಂಡಿದ್ದ ಮನೆಗಳು ಸಂಪೂರ್ಣ ಜಲಾವೃತವಾಗಿವೆ. 2019ರಲ್ಲಿ ಬಂದ ಪ್ರವಾಹದಲ್ಲಿ ಗ್ರಾಮಸ್ಥರು ಮನೆ ಕಳೆದುಕೊಂಡಿದ್ದರು. ಹೊಸದಾಗಿ ಕಟ್ಟಿಸಿಕೊಂಡಿದ್ದ ಸುಮಾರು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಗ್ರಾಮಸ್ಥರಿಗೆ ಮನೆಗಳನ್ನು ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಇನ್ನು ಚಿಕ್ಕಮಗಳೂರಿನಲ್ಲೂ ಮಳೆ ಮುಂದುವರಿದಿದೆ. …

Read More »