Breaking News

Yearly Archives: 2021

ರಾಜ್ಯ ಶಿಕ್ಷಣ ಇಲಾಖೆಯಿಂದ ಬೆಳಗಾವಿ ಡಿಡಿಪಿಐ ತಂಡಕ್ಕೆ ಅಭಿನಂದನಾ ಸಂದೇಶ

ಬೆಳಗಾವಿ–   ಎಸ್ಎಸ್ಎಲ್ ಸಿ ಪರೀಕ್ಷೆಯ ಮೊದಲ ಹಂತದ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಬೆಳಗಾವಿ ಡಿಡಿಪಿಐ ಮತ್ತು ಅವರ ಸಂಪೂರ್ಣ ತಂಡಕ್ಕೆ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಎಸ್. ಕರಿಚಣ್ಣವರ ಸಂದೇಶ ಕಳಿಸಿದ್ದಾರೆ. ಅವರ ಸಂದೇಶ ಹೀಗಿದೆ – “ಬೆಳಗಾವಿ ಜಿಲ್ಲೆಯಾದ್ಯಂತ ಇಂದು ದಿ: ೧೯-೦೭-೨೦೨೧ ರಂದು ನಡೆದ SSLC ಪರೀಕ್ಷೆಯ ಯಶಸ್ಸಿಗೆ ಕಾರಣರಾದ ಉಪ ನಿರ್ದೇಶಕರು(ಆಡಳಿತ) ಹಾಗೂ ತಂಡ,  (ಅಭಿವೃದ್ಧಿ) …

Read More »

6 ಬ್ಯಾಗ್‌ ಕೊಂಡೊಯ್ದರು ಎಂದೆ, ಪ್ರಧಾನಿಗೆ ಹಣ ಕೊಂಡೊಯ್ದರು ಎಂದೆನೇ? ಎಚ್‌ಡಿಕೆ

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ತೆಗೆದುಕೊಂಡು ಹೋಗಿದ್ದು ಏನು ಎಂದು ನಾನು ಕೇಳಿದ್ದೆ. ಪ್ರಧಾನಿಗೆ ಹಣ ಕೊಂಡೊಯ್ದಿದ್ದಾರೆ ಎಂದು ನಾನು ಹೇಳಿದ್ದೇನೆಯೇ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಜೆಡಿಎಸ್‌ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತು …

Read More »

3 ದಿನಗಳಲ್ಲಿ ದೇವಸ್ಥಾನಗಳಲ್ಲಿ ಎಲ್ಲ ಸೇವೆಗೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ದೇವಸ್ಥಾನಗಳಲ್ಲಿ ಎಲ್ಲ ಸೇವೆಗಳು ಮತ್ತು ಅನ್ನಪ್ರಸಾದ ವಿತರಣೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಅನುಮತಿ ನೀಡಲಾಗು ವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಕೊರ್ಗಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ ಅವರು ಉದಯವಾಣಿ ಜತೆ ಮಾತನಾಡಿದರು. ಧ್ವನಿ ಸುರುಳಿ ಬಗ್ಗೆ ಶಂಕೆೆ ಬಿಜೆಪಿ ರಾಜಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಾಮಾನ್ಯ ಕಾರ್ಯ ಕರ್ತನಾಗಿ ಬಂದು ರಾಜ್ಯದ …

Read More »

ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‍ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …

Read More »

ಯಡಿಯೂರಪ್ಪ ಅವರೇ ನಿಮಗೆ ವಯಸ್ಸಾಗಿದೆ. ಯಾರಿಗಾದರು ಸಿಎಂ ಪಟ್ಟ ಕಟ್ಟಿ ನೀವು ಹಿಂದಕ್ಕೆ ಸರಿಯಿರಿ.: ನಾಗನ ಗೌಡ

ಯಾದಗಿರಿ: ಬಿಎಸ್ ಯಡಿಯೂರಪ್ಪ ಅವರೇ ನಿಮಗೆ ವಯಸ್ಸಾಗಿದೆ. ಯಾರಿಗಾದರು ಸಿಎಂ ಪಟ್ಟ ಕಟ್ಟಿ ನೀವು ಹಿಂದಕ್ಕೆ ಸರಿಯಿರಿ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಸೂಕ್ತವಾಗಿ ಅಧಿಕಾರ ಬಿಟ್ಟರೆ ಚೆನ್ನಾಗಿರುತ್ತದೆ. ನೀವು ರಾಜೀನಾಮೆ ನೀಡದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಅಂತ ಜೆಡಿಎಸ್ ಶಾಸಕ ನಾಗನಗೌಡ ಹೇಳಿದ್ದಾರೆ. ಈ ಬಗ್ಗೆ ಯಾದಗಿರಿಯಲ್ಲಿನ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಯಾರಿಗಾದರೂ ಸಲಹೆಗಾರರಾಗಿ, ಬಿಎಸ್ ವೈ ಸಿಎಂ ಸ್ಥಾನ …

Read More »

ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಉಮೇಶ್ ಕತ್ತಿ

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ವದಂತಿ ಬೆನ್ನಲ್ಲೇ ಆಹಾರ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಹುದ್ದೆ ಖಾಲಿ ಇದ್ರೆ ನೆಕ್ಸ್ಟ್ ನಾನೇ ಇದ್ದೇನೆ ಎಂದು ಹೇಳುವ ಮೂಲಕ ಸಿಎಂ ಸ್ಥಾನದ ಆಸೆಯನ್ನು ತೇಲಿಬಿಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಕತ್ತಿ, ಸಿಎಂ ಹುದ್ದೆ ಖಾಲಿಯಾದರೆ ನಂತರ ನಾನೇ ಇದ್ದೇನೆ. ಮುಖ್ಯಮಂತ್ರಿಯಾಗಲು ನನಗೆ ಎಲ್ಲಾ ಅರ್ಹತೆಗಳಿವೆ. ನನ್ನ ಮೇಲೆ ಯಾವುದೇ ಕಳಂಕದ ಆರೋಪಗಳು ಇಲ್ಲ, 8 ಬಾರಿ ಶಾಸಕನಾಗಿ ಕೂದ …

Read More »

ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ ಎಂ.ಜೆ. ನೇಮಕ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇಲ್ಲಿನ ಸದಾಶಿವ ನಗರದ ಪ್ರದೀಪ ಎಂ.ಜೆ. ಇವರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ (ಆಡಳಿತ) ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ಆದೇಶ ಹೊರಡಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸತೀಶ ಜಾರಕಿಹೊಳಿ ಅವರು ಪ್ರದೀಪ ಎಂ.ಜೆ. ಅವರಿಗೆ ಆದೇಶ ಪ್ರತಿ ವಿತರಿಸಿದರು. ನಂತರ ಮಾತನಾಡಿದ ಸತೀಶ ಜಾರಕಿಹೊಳಿ ಅವರು, …

Read More »

ವಿದ್ಯಾಕಾಶಿ ಧಾರವಾಡದಲ್ಲಿ SSLC ಪರೀಕ್ಷೆ : ವಿದ್ಯಾರ್ಥಿಗಳಿಗೆ ಚಾಕೊಲೇಟ್ ‌ಸ್ವಾಗತ

ಧಾರವಾಡ : ಜಿಲ್ಲೆಯಲ್ಲಿ ಎಸ್‌ಎಸ್‌ಎಲಸಿ‌ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ರೆಡ್ ಕಾರ್ಪೆಟ್ ಹಾಸಿ, ಚಾಕೊಲೇಟ್ ನೀಡಿ ಸ್ವಾಗತಿಸಿ ಗಮನ ಸೆಳೆದಿವೆ. ಇಲ್ಲಿನ.ಮಾಳಮಡ್ಡಿಯಲ್ಲಿರುವ ಕೆ.ಇ.ಬೋರ್ಡ್ ಶಾಲೆಯ ಆಡಳಿತ ಮಂಡಳಿಯ ಸದಸ್ಯರೆಲ್ಲಾ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿಗಳಿಗೆ ಚಾಕೊಲೇಟ್ ನೀಡಿ ಅವರಿಗೆ ಸ್ವಾಗತಿಸಿದರು. ಶಾಲೆಯ ದ್ವಾರ ಬಾಗಿಲಿಗೆ ಬಲೂನಿನಿಂದ ಅಲಂಕಾರ ಮಾಡಿ, ತಳಿರು ಕಟ್ಟಿಸಿಂಗರಿಸಲಾಗಿತ್ತು. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು‌ಅಂಜಿಕೊಳ್ಳುವ ಅಗತ್ಯವಿಲ್ಲ. …

Read More »

ಬಾಗಲಕೋಟೆ: ಶಾಲೆಯಲ್ಲಿ ಕಳ್ಳತನ; ಕಂಪ್ಯೂಟರ್ ಕದ್ದೋಯ್ದ ಖದೀಮರು

ಬಾಗಲಕೋಟೆ: ತಾಲೂಕಿನ ತುಳಸಿಗೇರಿ ಗ್ರಾಮದ ಸರ್ಕಾರಿ ಮಾದರಿ ಕುವೆಂಪು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನವಾಗಿದೆ. ಶಾಲೆಯಲ್ಲಿನ ಒಟ್ಟು ನಾಲ್ಕು ಕಂಪ್ಯೂಟರ್ ಮತ್ತು ಒಂದು ಪ್ರಿಂಟರ್​ನ ಕದ್ದೊಯ್ದಿದ್ದಾರೆ. ಕಂಪ್ಯೂಟರ್ ಎಜ್ಯುಕೇಶನ್ ಕೊಠಡಿಯಲ್ಲಿದ್ದ ಒಟ್ಟು 11 ಕಂಪ್ಯೂಟರ್​ಗಳ ಪೈಕಿ ಮೂರು ಕಂಪ್ಯೂಟರ್, ಶಾಲೆ ಕಾರ್ಯಾಲಯದಲ್ಲಿದ್ದ ಒಂದು ಕಂಪ್ಯೂಟರ್, ಒಂದು ಪ್ರಿಂಟರ್​ನ ಕಳ್ಳತನ ಮಾಡಿದ್ದಾರೆ. ಶಾಲೆಯಲ್ಲಿ ಇಂದು (ಜುಲೈ 19) ಬೆಳಿಗ್ಗೆ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆದಿದೆ. ಎಲ್ಲ ಪರೀಕ್ಷಾ ಕೊಠಡಿಗಳನ್ನು ಓಪನ್ ಮಾಡಿದ್ದಾರೆ. ಕಚೇರಿ ಕೊಠಡಿಯಲ್ಲಿದ್ದ …

Read More »

ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್​ಆಯಪ್​ ಸ್ಟೇಟಸ್​!

ಬೆಳಗಾವಿ: ವಿವಾಹಿತೆಯೊಬ್ಬಳನ್ನು ಪ್ರೀತಿಸುವುದಾಗಿ ತನ್ನ ಸ್ಟೇಟಸ್​ನಲ್ಲಿ ಯುವಕನೊಬ್ಬ ಬರೆದುಕೊಂಡಿದ್ದು, ಇದರಿಂದ ಹೆದರಿದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ನಡೆದಿದೆ. ಸುತಗಟ್ಟಿ ಗ್ರಾಮದ ಅಕ್ಷತಾ ಪೂಜಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುತಗಟ್ಟಿ ಗ್ರಾಮದ ಸಂತೋಷ ತನ್ನ ವಾಟ್ಸ್​ಆಯಪ್​ ಸ್ಟೇಟಸ್​ಗೆ ಅಕ್ಷತಾರ ಫೋಟೋ ಹಾಕಿಕೊಂಡು ಅದರಲ್ಲಿ ಮೆಸೇಜ್​ ಬರೆದಿದ್ದ. ಇದನ್ನು ನೋಡಿ ಗಾಬರಿಯಿಂದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಳು ತಿಂಗಳ …

Read More »