ಇದರ ಜೊತೆಗೆ ರಾಜ್ಯದ ಮುಖ್ಯಮಂತ್ರಿ ಗಳಾದ ಬಿ ಎಸ್ ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ,ಡಿಸಿಎಂ ಅಶ್ವಥ್ ನಾರಾಯಣ್, ಸಚಿವ ಸುಧಾಕರ್, ಆರ್ ಶಂಕರ್, ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ರಾಮ್ ದಾಸ್ ಅಠವಾಳೆ, ಸಂಸದೆ ಸುಮಲತಾ ಅಂಬರೀಶ್, ಸೇರಿದಂತೆ ಸಂಪುಟ ಸಚಿವರುಗಳು ನೂತನ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ …
Read More »Yearly Archives: 2021
ಮಂಡ್ಯ ಗಣಿ ವಿವಾದ: ಅಖಾಡಕ್ಕೆ ಬರಲು ಸಿದ್ದರಾಮಯ್ಯಗೆ ಆಹ್ವಾನ ಕೊಟ್ಟ ಸುಮಲತಾ ಅಂಬರೀಶ್
ಬೆಂಗಳೂರು (ಜುಲೈ 11): ರಾಜ್ಯ ರಾಜಕೀಯದಲ್ಲೀಗ ಮಂಡ್ಯ ರಾಜಕಾರಣದ್ದೇ ಸುದ್ದಿ. ಕೆ ಆರ್ ಸ್ ಡ್ಯಾಮ್ ಬಿರುಕಿನ ವಿಷಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವೆ ಉಂಟಾಗಿರುವ ಸಮರ ಇನ್ನಷ್ಟು ತಾರಕಕ್ಕೇರಿದೆ. ಮಾಜಿ ಸಿಎಂ ಕುಮಾರಸ್ವಾಮಿ ಆರೋಪಗಳಿಗೆ ತಕ್ಕ ತಿರುಗೇಟು ನೀಡಿರುವ ಸುಮಲತಾ ಅಂಬರೀಶ್, ಜಿಲ್ಲೆಯ ಅಕ್ರಮ ಗಣಿಗಾರಿಕೆ ವಿರುದ್ದದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಪಣ ತೊಟ್ಟಿರುವಂತಿದೆ. ಈ ನಡುವೆ ತಮ್ಮ ಹೋರಾಟಕ್ಕೆ ವಿಧಾನಸಭೆ …
Read More »2023ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ಯಾವುದೇ ಕಾರಣಕ್ಕೂ ಪಕ್ಷ ಬಿಡಬೇಡಿ :H.D.D.
ಮೈಸೂರು: ಹಲವು ದಿನಗಳ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನನ್ನ ಜತೆ ಫೋನ್ನಲ್ಲಿ ಚರ್ಚೆ ಮಾಡಿದ್ದಾರೆ. 2023ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಪಕ್ಷ ಬಿಡಬೇಡಿ ಎಂದು ದೂರವಾಣಿಯ ಮೂಲಕ ಅವರು ನನಗೆ ತಿಳಿಸಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ನಾನು ಜಿಲ್ಲಾಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳಿಗೆ ಪಕ್ಷದಿಂದ ಬೆಂಬಲಿಗರನ್ನು ನಿಲ್ಲಿಸಬೇಕೋ, ಅಥವಾ ಪಕ್ಷೇತರವಾಗಿ ನಿಲ್ಲಿಸಬೇಕೋ ಎಂಬುದನ್ನು ಕಾರ್ಯಕರ್ತರ ಅಭಿಪ್ರಾಯ ಪಡೆದು ತೀರ್ಮಾನ …
Read More »ರಾಜ್ಕುಮಾರ್ ಸ್ಮಾರಕದ ಎದುರೇ ಹಾರ ಬದಲಿಸಿಕೊಂಡ ಐದು ಜೋಡಿಗಳು
ಡಾ. ರಾಜ್ಕುಮಾರ್ ಅವರು ನಿಧನರಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ, ಅವರ ಅಭಿಮಾನಿ ಬಳಗ ಮಾತ್ರ ಕಡಿಮೆ ಆಗಿಲ್ಲ. ಅವರನ್ನು ಆರಾಧಿಸುವ ಲಕ್ಷಾಂತರ ಅಭಿಮಾನಿಗಳು ಇಂದಿಗೂ ಇದ್ದಾರೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ಐದು ಯುವ ಜೋಡಿಗಳು ರಾಜ್ಕುಮಾರ್ ಸಮಾಧಿ ಎದುರೇ ಹಾರ ಬದಲಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮದುವೆ ವಿಚಾರದಲ್ಲಿ ಎಲ್ಲರೂ ನಾನಾ ರೀತಿಯ ಕನಸು ಕಂಡಿರುತ್ತಾರೆ. ಕೆಲವರಿಗೆ ಅದ್ದೂರಿಯಾಗಿ ಮದುವೆ ಆಗಬೇಕು ಎನ್ನುವ ಆಸೆ ಇರುತ್ತದೆ. ಇನ್ನೂ ಕೆಲವರಿಗೆ …
Read More »ತಂಗಿ ಮದುವೆ ನಿರಾಕರಿಸಿದ್ಲು ಅಂತ, ಅಣ್ಣ ಹೀಗ್ ಮಾಡೋದಾ.?!
ರಾಯಚೂರು: ನಿಶ್ಚಿತಾರ್ಥವಾಗಿದ್ದ ಹುಡುಗ ಕಪ್ಪು ಎಂಬ ಕಾರಣಕ್ಕೆ ಮದುವೆ ನಿರಾಕರಣೆ ಮಾಡಿದ್ದ ಯುವತಿಯನ್ನು ಅಣ್ಣನೇ ಕೊಲೆಗೈದ ಘಟನೆ ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಚಂದ್ರಕಲಾ (22) ಕೊಲೆಯಾದ ಯುವತಿ. ಶ್ಯಾಮಸುಂದರ ಸಹೋದರಿಯನ್ನೇ ಕೊಲೆಗೈದ ಅಣ್ಣ. ಕುಟುಂಬಸ್ಥರು ಜುಲೈ 13ರಂದು ಮದುವೆಗೆ ದಿನಾಂಕ ನಿಗದಿ ಮಾಡಿ, ಲಗ್ನ ಪತ್ರಿಕೆಯನ್ನು ಹಂಚಿಕೆ ಮಾಡಿದ್ದರು. ಆದರೆ ಏಕಾಏಕಿ ತಂಗಿ ಮದುವೆಗೆ ನಿರಾಕರಿಸಿದ್ದಳು ಎನ್ನಲಾಗಿದೆ. ಸಹೋದರಿ ಮದುವೆಗೆ ನಿರಾಕರಿಸಿದ್ದ ವಿಚಾರ …
Read More »ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ
ಮಂಡ್ಯ : ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಹಳ್ಳಿಯಲ್ಲಿ ನಡೆದಿದೆ. 30 ವರ್ಷದ ಕುಮಾರ್ ಮೃತ ಯುವಕನಾಗಿದ್ದು, ಮಹದೇವು ಎಂಬ ಸ್ನೇಹಿತ ಕುಮಾರ್ನನ್ನು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಈ ಇಬ್ಬರು ನಿನ್ನೆ ರಾತ್ರಿ ಮಹದೇವು ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾವುದೋ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ಇಬ್ಬರ ನಡುವಿನ ಜಗಳ …
Read More »ಹಳ್ಳಕ್ಕೆ ಜಾರಿದ ಬಸ್: ಅಪಾಯದಿಂದ ಪಾರಾದ ಪ್ರಯಾಣಿಕರು
ಚಾಮರಾಜನಗರ): ಜೀಪ್ ಅಡ್ಡಲಾಗಿ ಬಂದು ಬಸ್ ಗೆ ಗುದ್ದಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಹಳ್ಳಕ್ಕೆ ಜಾರಿದ ಘಟನೆ ತಾಲೂಕಿನ ಹಿಮವದ್ ಗೋಪಾಲ ಸ್ವಾಮಿ ಬೆಟ್ಟದ ಮಾರ್ಗ ಮಧ್ಯೆದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ. ಗೋಪಾಲ ಸ್ವಾಮಿ ಬೆಟ್ಟದಲ್ಲಿ ದೇವರ ದರ್ಶನ ಮುಗಿಸಿದ ನಂತರ ಬಸ್ ಕೆಳಗೆ ಇಳಿಯುತ್ತಿದ್ದ ವೇಳೆ ಬೆಟ್ಟದ ಮೇಲೆ ತೆರಳುತ್ತಿದ್ದ ಜೀಪ್ ವೊಂದು ಚಾಲಕ ನಿಯಂತ್ರಣ ತಪ್ಪಿ ಬಸ್ ನ ಬಲ ಭಾಗಕ್ಕೆ …
Read More »ಉತ್ತರಕನ್ನಡದಲ್ಲಿ ಭಾರಿ Heavy rain ವರ್ಷಧಾರೆ : ಜನರಲ್ಲಿ ಆತಂಕ
ಕಾರವಾರ : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಕಾರವಾರ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ನಿನ್ನೆ ಮಧ್ಯಾಹ್ನದಿಂದ ಜಿಲ್ಲೆಯಲ್ಲಿ ವರ್ಷಧಾರೆ ಆರಂಭವಾಗಿದ್ದು, ಇಂದು ಕೂಡ ಮುಂದುವರೆದಿದೆ. ಕಾರವಾರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನು ಅರಬ್ಬೀ ಸಮುದ್ರದಲ್ಲಿ …
Read More »ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಮುನ್ಸೂಚನೆ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರು
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ. ಜುಲೈ 9ರಿಂದ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ …
Read More »ವ್ಯಕ್ತಿಯೊಬ್ಬರ ತಲೆಗೆ ಡಿಕೆಎಸ್ ಬಾರಿಸಿದ ಬೆನ್ನಲ್ಲೇ ವೈರಲ್ ಆಯ್ತು ಸಿದ್ದರಾಮಯ್ಯ ಫೋಟೋ
ಬೆಂಗಳೂರು: ಕಳೆದ ಎರಡು ದಿನಗಳಿಂದ ಸೋಶಿಯಲ್ ಮಿಡಿಯಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವ್ಯಕ್ತಿಯೊಬ್ಬರ ತಲೆಗೆ ಹೊಡೆಯುವ ದೃಶ್ಯವೊಂದು ವೈರಲ್ ಆಗುತ್ತಿದೆ. ಡಿ.ಕೆ ಶಿವಕುಮಾರ್ ಕೈ ಮಾಡಿರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಿದ್ದರಾಮಯ್ಯಯ ಹೆಗಲ ಮೇಲ ಕೈಹಾಕಿ ಸೆಲ್ಫಿ ತೆಗೆದುಕೊಳ್ಳುತ್ತಿರುವ ಫೋಟೋ ಒಂದು ಸಖತ್ ವೈರಲ್ ಆಗಿದೆ. ‘ಮುಂದಿನ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್’ ಅನ್ನೋ ಚರ್ಚೆ ಮುನ್ನೆಲೆಯಲ್ಲಿರುವಾಗಲೇ ಈ …
Read More »