ಮಂಡ್ಯ: ರಾಜಸ್ಥಾನದಿಂದ ರಾಜ್ಯಕ್ಕೆ ಬಕ್ರೀದ್ ವೇಳೆ ಮಾಂಸಕ್ಕೆ ಬಳಸಲು ತರುತ್ತಿದ್ದ 11 ಒಂಟೆಗಳನ್ನು ರಕ್ಷಿಸಿ, ನ್ಯಾಯಾಲಯದ ಆದೇಶದಂತೆ ಮರಳಿ ರಾಜಸ್ತಾನಕ್ಕೆ ಕಳುಹಿಸಲು ಬುಧವಾರ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಚಾಲನೆ ನೀಡಿ ಬಿಗಿ ಭದ್ರತೆಯಲ್ಲಿ ಕಳುಹಿಸಲಾಯಿತು. ಬಕ್ರೀದ್ ಸಂದರ್ಭದಲ್ಲಿ ರಾಜ್ಯಕ್ಕೆ ಮಾಂಸಕ್ಕೆ ಬಳಸಲು ಒಂಟೆಗಳನ್ನು ತರಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿ ಬರುತ್ತಿದ್ದಾಗ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ದಯಾನಂದ ಸ್ವಾಮೀಜಿ ಹಾಗೂ …
Read More »Yearly Archives: 2021
ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ
ಹುಬ್ಬಳ್ಳಿ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನಗರದ ಜನತಾ ಬಜಾರದಲ್ಲಿರುವ ಭಾಸ್ಕರ ರಾವ್ ಅವರ ಎಲುಬು ಕೀಲು ಮತ್ತು ಅಪಘಾತ ಚಿಕಿತ್ಸಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಉಣಕಲ್ ಗ್ರಾಮದ ಶಾಂತಮ್ಮ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ನಂತರ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ ಕಾರಣ ಎಂದು ಆರೋಪಿಸಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಸಂಬಂಧಿಕರ ಆಕ್ರೋಶ …
Read More »ಸಿಎಂಗೆ ಒಂದು ಕಾನೂನ ಜನರಿಗೆ ಒಂದು ಕಾನೂನ ಎಂದು ಸವಾರರ ಅವಾಜ್,ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ B.S.Y.
ನೆಲಮಂಗಲ: ಖಾಸಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾಗಿಯಾಗುವ ಮೂಲಕ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಣಿಗಲ್ ರೋಡ್ ನಲ್ಲಿರುವ ರೆಸಾರ್ಟ್ ಗೆ ಭೇಟಿ ನೀಡಿ ಸಿಎಂ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಒಂದು ರೂಲ್ಸ್ ರಾಜಕೀಯ ಪ್ರಭಾವಿಗಳಿಗೆ ಒಂದು ರೂಲ್ಸ್ ಎನ್ನುವಂತಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಮದುವೆಗೆ ಕೇವಲ 40 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ 40 ಜನರಿಗೆ ಮಾತ್ರ …
Read More »ಒಂದು ಕೋಟಿ ರೂಪಾಯಿ ಮೌಲ್ಯದ ಹೈಡ್ರೋವೀಡ್ ಗಾಂಜಾ ಸಾಗಿಸುತ್ತಿದ್ದ ಮಹಿಳಾ ವೈದ್ಯೆಯ ಬಂಧನ
ಮಂಗಳೂರು, ಜೂನ್ 30; ಒಂದು ಕೋಟಿ ರೂಪಾಯಿ ಮೌಲ್ಯದ ಹೈಡ್ರೋವೀಡ್ ಗಾಂಜಾ ಸಾಗಿಸುತ್ತಿದ್ದ ಮಹಿಳಾ ವೈದ್ಯೆಯನ್ನು ಮಂಗಳೂರು ಹೊರವಲಯದ ದೇರಳಕಟ್ಟೆ ಬಳಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಂಞಗಾಡ್ನ ಹರಿಮಲ ಆಸ್ಪತ್ರೆ ವೈದ್ಯೆ ಮಿನು ರಶ್ಮಿ ಬಂಧಿತ ಮಹಿಳೆ. ವೈದ್ಯೆಯ ಜೊತೆಗಿದ್ದ ಇನ್ನೊರ್ವ ಆರೋಪಿ ಕಾಸರಗೋಡಿನ ಅಜ್ಮಲ್ನನ್ನೂ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ, ವಿದೇಶದಲ್ಲಿರುವ ಡಾ. ನದೀರ್ ಸೂಚನೆಯಂತೆ ವೈದ್ಯೆ ಮಿನು ರಶ್ಮಿ, ಕಾಂಞಗಾಡ್ನಿಂದ …
Read More »SDA ಪರೀಕ್ಷೆ’ಗೆ ಕೆಪಿಎಸ್ಸಿಯಿಂದ ಪರಿಷ್ಕೃತ ದಿನಾಂಕ ಪ್ರಕಟ : ಸೆ.18, 19ಕ್ಕೆ ಪರೀಕ್ಷೆ ನಿಗದಿ
ಬೆಂಗಳೂರು : ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮೂಲಕ ನಡೆಸಲಾಗುತ್ತಿದ್ದಂತ ಎಸ್ ಡಿ ಎ ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಇಂತಹ ಪರೀಕ್ಷೆಯನ್ನು ನಡೆಸಲು ಇದೀಗ ಕೆಪಿಎಸ್ಸಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. ಸೆಪ್ಟೆಂಬರ್ 18 ಹಾಗೂ 19ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿ ಪಡಿಸಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ದಿನಾಂಕ 29-02-2020ರ ಅಧಿಸೂಚನೆಯಲ್ಲಿ 2019ನೇ ಸಾಲಿನ ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕ ಮೂಲ …
Read More »ಬೆಸ್ಕಾಂನಲ್ಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾ) ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ: ಕಂಪನಿ ಸೆಕ್ರೆಟರಿ ಸ್ಥಳ: ಬೆಂಗಳೂರು ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ವಯೋಮಿತಿ: ಗರಿಷ್ಠ 40 ವರ್ಷ. ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜನರಲ್ ಮ್ಯಾನೇಜರ್, ಬೆಸ್ಕಾಂ ಕಾರ್ಪೊರೇಟ್ ಆಫೀಸ್, ಕೆಆರ್ ಸರ್ಕಲ್, ಬೆಂಗಳೂರು …
Read More »ಇಂದಿನಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ
ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 2019-20ನೇ ಸಾಲಿನ ಸಾಮಾನ್ಯ ವರ್ಗಾವಣೆಗಳಲ್ಲಿನ ಕಡ್ಡಾಯ ವರ್ಗಾವಣೆ, ವಲಯ ವರ್ಗಾವಣೆಯ ಮೇಲೆ ಅಥವಾ ಸಮರ್ಪಕ ಮರು ಹಂಚಿಕೆಯ ಮೇರೆಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ ತಾಲೂಕಿನ ಹೊರಗೆ …
Read More »ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು: ಸತೀಶ್ ಜಾರಕಿಹೊಳಿ
ಬೆಳಗಾವಿ: ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದು ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು ಎಂದಿದ್ದಾರೆ. ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುವುದನ್ನು ರಮೇಶ್ ಜಾರಕಿಹೊಳಿ ಅವರಿಗೆ ನೀವೇ ಕೇಳಬೇಕು ಎಂದರು. …
Read More »ಬಟ್ಟೆ ತೊಳೆಯಲು ಹೋದ ನಾಲ್ವರು ಸಹೋದರರು ನೀರು ಪಾಲು
ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಬಳಿ ಬಟ್ಟೆ, ಹೊದಿಕೆ ಮೊದಲಾದವುಗಳನ್ನು ತೊಳೆಯಲು ಕೃಷ್ಣಾ ನದಿಗೆ ಇಳಿದಿದ್ದಾಗ ಕೊಚ್ಚಿ ಹೋಗಿದ್ದ ನಾಲ್ವರು ಸಹೋದರರು ಶವವಾಗಿ ಪತ್ತೆಯಾಗಿದ್ದಾರೆ. ಸೋಮವಾರ ಘಟನೆ ನಡೆದಿತ್ತು. ಪರಶುರಾಮ ಗೋಪಾಲ ಬನಸೋಡೆ (36) ಶವ ಮಂಗಳವಾರ ಪತ್ತೆಯಾಗಿತ್ತು. ಧರೆಪ್ಪ ಗೋಪಾಲ ಬನಸೋಡೆ (24), ಸದಾಶಿವ ಬನಸೋಡೆ (29) ಹಗೂ ಶಂಕರ ಬನಸೋಡೆ (20) ಮೃಹದೇಹವನ್ನು ಬುಧವಾರ ಹೊರತೆಗೆಯಲಾಗಿದೆ. ಎನ್ಡಿಆರ್ಎಫ್, ಅಗ್ನಿಶಾಮಕ ದಳದವರು ಸ್ಥಳೀಯರು ಸಹಕಾರದೊಂದಿಗೆ ಸತತ …
Read More »ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ವಿಜಯೇಂದ್ರ ಕಣ್ಣು?
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ರಾಜಕೀಯ ಬದುಕಿಗೆ ಕ್ಷೇತ್ರದ ಸಮಸ್ಯೆ ಎದುರಾಗಿದೆ. ಅವರ ಮುಂದಿನ ರಾಜಕೀಯ ಜೀವನ ಯಾವ ಕ್ಷೇತ್ರದಿಂದ ಆರಂಭವಾಗಲಿದೆ ಎಂಬ ಗೊಂದಲ ಮೊದಲಿನಿಂದಲೂ ಇದೆ. ಇದೀಗ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ಬಿ ವೈ ವಿಜಯೇಂದ್ರ ಕಣ್ಣು ಹಾಕಿದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಪಕ್ಕಾ ಲಿಂಗಾಯತ ಕ್ಷೇತ್ರವಾಗಿರುವ ಹಾನಗಲ್ …
Read More »