Breaking News

Yearly Archives: 2021

ಕದ್ದ ನಾಯಿ ಮಾರಲು ವಾಟ್ಸ್‌ ಅಪ್‌ ಗೆ ಫೋಟೋ ಹಾಕಿ ಸಿಕ್ಕಿ ಬಿದ್ದ ಕಳ್ಳ

ಹಾಸನ: ಹಾಸನ ಹೊರವಲಯದ ಹೊನ್ನೇನಹಳ್ಳಿ ರಸ್ತೆಯಲ್ಲಿರುವ GRR ಕೆನಲ್ಸ್ ನಾಯಿ ಫಾರಂನಿಂದ ದುಬಾರಿ ಬೆಲೆಯ ನಾಯಿಗಳನ್ನು ಕಳ್ಳತನ ಮಾಡಿದ್ದ ಕಳ್ಳರು ಅಂದರ್ ಆಗಿದ್ದಾರೆ. ಕಳ್ಳನ ಪತ್ತೆಗೆ ಸಹಕಾರಿಯಾಗಿದ್ದು ವಾಟ್ಸಾಪ್ ಗ್ರೂಪ್. ಹಾಸನ ನಗರದ ಹೊರವಲಯದ ಗೆಂಡೆಕಟ್ಟೆ ಫಾರೆಸ್ಟ್ ಬಳಿ ದಿವಾಕರ್ ಎಂಬವರಿಗೆ ಸೇರಿದ GRR ಕೆನಲ್ಸ್ ನಾಯಿ ಫಾರಂನಲ್ಲಿ ಜೂ.18ರ ರಾತ್ರಿ ಒಂದೂವರೆ ಲಕ್ಷ ರೂ. ಮೌಲ್ಯದ ನಾಲ್ಕು ನಾಯಿಗಳನ್ನು ನಾಲ್ವರು ಸೇರಿ ಕದ್ದೊಯ್ದಿದ್ದರು. ರಾಟ್ ವೀಲರ್, ಲ್ಯಾಬ್ರಡಾರ್, ಡ್ಯಾಶೌಂಡ್ …

Read More »

ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ

ಬೆಳಗಾವಿ: ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸೋಮವಾರ 32 ಕಡೆ 10,500 ಜನರಿಗೆ ಲಸಿಕಾ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಬೆಳಗಾವಿ ಹುಕ್ಕೇರಿ ಹಿರೇಮಠದ‌ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಜಿಲ್ಲಾಡಳಿತದೊಂದಿಗೆ ವಿಶೇಷವಾಗಿ ಇರುವ ಸ್ಪಂದನೆ ಮತ್ತು ಇಡೀ ರಾಜ್ಯದಲ್ಲಿ ಮಠಾಧೀಶರೊಬ್ಬರು ಪ್ರಪ್ರಥಮಬಾರಿಗೆ …

Read More »

ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.: ‌ಪಾಲಿಕೆ‌ ಆಯುಕ್ತ ಜಗದೀಶ್ ಕೆ.ಎಚ್

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.   ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್‌ವಾರು ಕರಡು ಮತದರಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಾನಗರ ‌ಪಾಲಿಕೆ‌ ಆಯುಕ್ತ ಜಗದೀಶ್ ಕೆ.ಎಚ್.ತಿಳಿಸಿದ್ದಾರೆ. ಮಹಾನಗರ ಪಾಲಿಕೆಗೆ 2011 ರ ಸಾಲಿನ ಜನಗಣತಿಯನ್ನು ಆಧರಿಸಿ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ, ಅಂತಿಮ ಅಧಿಸೂಚನೆಯನ್ನು ಏಪ್ರಿಲ್‌ 19 ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಡಿ ಪ್ರಕಟಿಸಿ, ಅಧಿಸೂಚನೆ ಹೊರಡಿಸಲಾಗಿತ್ತು. ಈ ಅಧಿಸೂಚನೆ ಹಾಗೂ …

Read More »

ಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮಾಡಬಾರದು: ವಾಟಾಳ್ ನಾಗರಾಜ್

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ ಎರಡನೇ ವಾರ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಇದನ್ನು ನಾನು ಸ್ಪಷ್ಟವಾಗಿ ವಿರೋಧ ಮಾಡುವೆ, ಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ಮಾಡಬಾರದು. ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 10 ಲಕ್ಷ ವಿದ್ಯಾರ್ಥಿಗಳು ,ಪೋಷಕರು, ಸಿಬ್ಬಂದಿ ಸೇರಿ 25 ಲಕ್ಷ ಪರೀಕ್ಷೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ರಾಜ್ಯದಲ್ಲಿ ಕೋವಿಡ್ …

Read More »

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಂತ್ರಾಲಯ.. ಮದ್ವೆಗೆ ಬಂದು ಫಜೀತಿಗೆ ಸಿಲುಕಿದ ಜನ

ರಾಯಚೂರು: ಮಳೆಯ ಅಬ್ಬರ ಜೋರಾಗಿರೋ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಇಂದು ಅವಾಂತರ ಸೃಷ್ಟಿಯಾಗಿತ್ತು. ಮಂತ್ರಾಲಯದ ಮದುವೆ ಮಂಟಪಕ್ಕೆ ಮಳೆ ನೀರು ನುಗ್ಗಿದ್ದರಿಂದ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿದ್ದರಿಂದ ಮದುವೆಗೆ ಬಂದಿದ್ದ ಜನರು ಫಜಿತಿಗೆ ಸಿಲುಕಿದ್ರು. ಇನ್ನು ಮಂತ್ರಾಲಯದಲ್ಲಿನ ಕರ್ನಾಟಕ ಭವನಕ್ಕೂ ಮಳೆ ನೀರು ನುಗ್ಗಿತ್ತು. ರಸ್ತೆ ತುಂಬಾ ನೀರು ನಿಂತಿದ್ದರಿಂದ ವಾಹನ ಸವಾರರೂ ಪರದಾಟ ನಡೆಸಿದ್ರು. ಅಲ್ಲದೇ ಕೆಲವು ವಾಹನ ಸವಾರರು ನೀರಿನಲ್ಲಿ ಗಾಡಿ ಚಲಾಯಿಸುವ ದುಸ್ಸಾಹಸ …

Read More »

ಜೀವಂತ ಪುಟ ಎನಿಸಿದ ಹಂಪಿ

ಚರಿತ್ರೆಯ ಜೀವಂತ ಪುಟ ಎನಿಸಿದ ಹಂಪಿಯನ್ನು ನೀವು ಹೀಗೆ ನೋಡಿರುವುದು ಸಾಧ್ಯವೇ ಇಲ್ಲಬಿಡಿ. ಮುಂಗಾರಿನ ಮೊದಲ ಮಳೆ ಸುರಿದ ಕೆಲವು ದಿನಗಳ ಬಳಿಕ ಸೆರೆಸಿಕ್ಕ ಚಿತ್ರಗಳಿವು. ಆಗತಾನೆ ತಲೆಸ್ನಾನ ಮಾಡಿ, ಎಳೆ ಬಿಸಿಲಿಗೆ ಮೈಯೊಡ್ಡಿದ ಯುವತಿಯಂತೆ ಸ್ಮಾರಕಗಳೆಲ್ಲ ಫಳ ಫಳ ಹೊಳೆಯುತ್ತಿದ್ದವು. ಅವುಗಳ ಆವರಣದಲ್ಲಿ ಬೆಳೆಸಲಾದ ಗಿಡ-ಬಳ್ಳಿಗಳು ಗಾಢ ಹಸಿರುಬಣ್ಣದ ಎಲೆಗಳನ್ನು ತೊಟ್ಟು, ಮೊಗ್ಗುಗಳನ್ನು ಮೈತುಂಬಾ ಧರಿಸಿಕೊಂಡು ನಿಂತಿದ್ದವು. ಸ್ಮಾರಕಗಳ ಲ್ಯಾಂಡ್‌ಸ್ಕೇಪ್‌ ಚಿತ್ರಗಳನ್ನು, ಆ ಸ್ಮಾರಕಗಳ ಜತೆಯಲ್ಲೇ ಬಾಳಿ ಬದುಕುವ …

Read More »

ಅತ್ಯುತ್ತಮ ಪ್ರವಾಸಿ ತಾಣ ಕರ್ನಾಟಕದ ಯಾಣ.!

ಉತ್ತರ ಕನ್ನಡ ಜಿಲ್ಲೆಯ ಪುಟ್ಟ ಹಳ್ಳಿ ಯಾಣ. ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗಲು ಹೇಳಿ ಮಾಡಿಸಿದ ತಾಣವಿದು. ನಗರದ ಜಂಜಾಟವನ್ನೆಲ್ಲಾ ಮರೆತು ಶುದ್ಧವಾದ ಗಾಳಿ ಸೇವಿಸುತ್ತಾ, ದಟ್ಟವಾದ ಕಾಡಲ್ಲಿ ವಿಹರಿಸುತ್ತಾ, ಹಕ್ಕಿಗಳ ಚಿಲಿಪಿಲಿ, ನೀರಿನ ಜುಳುಜುಳು ನಾದವನ್ನು ಸವಿಯುತ್ತಾ ದಿನ ಕಳೆಯಬಹುದು. ಇಲ್ಲಿ ಕಾಣಿಸುವ ಎರಡು ಎತ್ತರವಾದ ಬಂಡೆಗಳೇ ಇಲ್ಲಿನ ವಿಶೇಷತೆ. ಒಂದು ಬಂಡೆಯನ್ನು ಮೋಹಿನಿ ಶಿಖರ ಮತ್ತೊಂದನ್ನು ಭೈರವೇಶ್ವರ ಶಿಖರ ಎಂದು ಕರೆಯುತ್ತಾರೆ. ಭೈರವೇಶ್ವರ ಬಂಡೆಯಲ್ಲಿ ಒಂದು ಸಣ್ಣ …

Read More »

ಸ್ನೇಹಿತರೊಂದಿಗೆ ಕೂಡಿ ಪ್ರೇಯಸಿ ಮೇಲೆ ಅತ್ಯಾಚಾರ: ಊರ ಹೊರಗೆ ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾದ ಸಂತ್ರಸ್ತೆ

ಉತ್ತರ ಪ್ರದೇಶ: ಗರ್ಲ್ ಪ್ರೇಂಡ್ ಮೇಲೆ ಸ್ನೇಹಿತರೊಂದಿಗೆ ಸೇರಿ ಬಾಯ್ಫ್ರೆಂಡ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್ ನಲ್ಲಿ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಗ್ರಾಮದ ಹೊರಗೆ ಬಂದು ತನ್ನನ್ನು ಭೇಟಿ ಮಾಡುವಂತೆ ಸ್ನೇಹಿತ ಫೋನ್ ಮಾಡಿದ್ದಾನೆ. ಆಕೆ ಬರುತ್ತಿದ್ದಂತೆ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಾನೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದೀಗ ಸಂತ್ರಸ್ತೆ ನೀಡಿರುವ ದೂರಿನ ಆಧಾರದ …

Read More »

ಹಳ್ಳಿಯ ಹುಡುಗನಿಗೆ ದೇಶದ ಅತ್ಯುನ್ನತ ಹುದ್ದೆ- ಪ್ರಜಾಪ್ರಭುತ್ವದ ಸೊಬಗು: ಕೋವಿಂದ್‌ ಬಣ್ಣನೆ

ಲಖನೌ: ಹಳ್ಳಿಯೊಂದರ ಹುಡುಗ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಗೌರವ ಸಿಗುತ್ತದೆ ಎಂದು ನಾನು ಊಹಿಸಿರಲಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೊಬಗು ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಹೇಳಿದ್ದಾರೆ. ರಾಮ್‌ನಾಥ್ ಕೋವಿಂದ್ ಅವರ ಹುಟ್ಟೂರಾದ ಕಾನ್ಪುರದ ದೇಹತ್ ಜಿಲ್ಲೆಯ ಪರೌಂಖ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಇಂದು ನಾನು ಯಾವುದೇ ಸ್ಥಾನಕ್ಕೇರಿದ್ದರೂ ಕೂಡ ಅದರ ಶ್ರೇಯಸ್ಸು ಈ ಹಳ್ಳಿಯ ಮಣ್ಣು, ಈ ಪ್ರದೇಶ ಮತ್ತು ನಿಮ್ಮ ಪ್ರೀತಿ ಮತ್ತು …

Read More »

ಸಾವು ಸಂಭವಿಸಿದ 20 ನಿಮಿಷಗಳ ಬಳಿಕ ಮತ್ತೆ ಜೀವ ಪಡೆದ ವ್ಯಕ್ತಿ,ಪುನಃ ಜೀವ ಬಂದಿದ್ದಾದರೂ ಹೇಗೆ?

ಸಾವಿನ ನಂತರ ಜನರು ಎಲ್ಲಿಗೆ ಹೋಗುತ್ತಾರೆ ಮತ್ತು ಅಲ್ಲಿ ಏನಾಗುತ್ತದೆ? ಎರಡನೇ ಜನ್ಮ (Second Life) ಸಿಗುತ್ತದೆಯೇ? ಮರಣದ ನಂತರದ ಪ್ರಯಾಣವನ್ನು ಜನ್ಮ ಕರ್ಮದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆಯೇ? ಇಂತಹ ಎಲ್ಲಾ ಪ್ರಶ್ನೆಗಳು ಜನರ ಮನಸ್ಸಿನಲ್ಲಿ ಸುತ್ತುತ್ತಿರುತ್ತವೆ.. ಆದರೆ ಸಾವಿನ ನಂತರ ಏನಾಗುತ್ತದೆ ಎಂಬ ಪ್ರಶ್ನೆಗೆ ಇಲ್ಲಿಯವರೆಗೆ ಯಾರೂ ಉತ್ತರಿಸಲು ಸಾಧ್ಯವಾಗಿಲ್ಲ. ಈ ಪ್ರಶ್ನೆಗಳಿಗೆ ಉತ್ತರವನ್ನು ಸಾವಿನ ನಂತರ ನಮ್ಮ ನಡುವೆ ಜೀವಂತವಾಗಿ ಬರುವವನು ವ್ಯಕ್ತಿ ಮಾತ್ರ ನೀಡಬಹುದು (Life …

Read More »